ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಇಲಾಖೆಯ ಅಭಿಯಂತರರನ್ನು ಜಲಸಂಪನ್ಮೂಲ ಇಲಾಖೆಗೆ ಅವರ ಅನುಮತಿ ಪಡೆಯದೇ ವರ್ಗಾವಣೆ ಮಾಡಿದಂತ ಸಿಎಂ ಸಿದ್ಧರಾಮಯ್ಯ ಕ್ರಮವನ್ನು ಆಕ್ಷೇಪಿಸಿದ್ದಾರೆ. ಅಲ್ಲದೇ ನನ್ನ ಸೂಚನೆಯನ್ನ ಕಡೆಗಣಿಸಿ ಆದೇಶ ಹೊರಡಿಸಿರುವುದು ನಾನು ಆಕ್ಷೇಪಿಸುತ್ತಿದ್ದೇನೆ ಅಂತ ಕಿಡಿಕಾರಿದ್ದಾರೆ.
ಈ ಬಗ್ಗೆ ದಿನಾಂಕ 13-05-2025ರಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಟಿಪ್ಪಣಿ ಹೊರಡಿಸಿರುವಂತ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ನನ್ನ ಇಲಾಖೆಗೆ ಒಳಪಡುವ ಇಲಾಖೆಗಳಿಗೆ ಸಂಬಂಧಿಸಿದಂತೆ ವರ್ಗಾವಣೆ, ನೇಮಕಾತಿ ಮುಂತಾದ ವಿಚಾರಗಳ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಆದೇಶ ಹೊರಡಿಸಬೇಕಾದರೇ ನನ್ನ ಪೂರ್ವಾನುಮತಿಯನ್ನು ಪಡೆದ ನಂತ್ರ ಆದೇಶವನ್ನು ಹೊರಡಿಸುವುದಾಗಿ ಈ ಸರ್ಕಾರ ಅಸ್ಥಿತ್ವಕ್ಕೆ ಬಂದ ಪ್ರಾರಂಭದಲ್ಲಿಯೇ ಟಿಪ್ಪಣಿ ಮೂಲಕ ನಿಮಗೆ ತಿಳಿಸಲಾಗಿರುತ್ತದೆ ಎಂದಿದ್ದಾರೆ.
ಮುಖ್ಯ ಅಭಿಯಂತರರು ಸೇವೆಗೆ ಸಂಬಂಧಿಸಿದ ಕಾರ್ಯವ್ಯಾಪ್ತಿಯನ್ನು ಜಲಸಂಪನ್ಮೂಲ ಇಲಾಖೆಯಿಂದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ವಹಿಸುವ ಕಡತದಲ್ಲಿಯೂ ಸಹ ಮೇಲ್ಕಂಡ ಸೂಚನೆಯನ್ನು ಪುನರ್ ಉಚ್ಚರಿಸಿ ಅಂತ ವಿಚಾರಗಳ ಬಗ್ಗೆ ನನ್ನ ಗಮನಕ್ಕೆ ತಂದು ನನ್ನ ನಮೂದನೆಯನ್ನು ಪಡೆದ ನಂತರವೇ ಹೊರಡಿಸಬಹುದೆಂದು ಸ್ಪಷ್ಟವಾಗಿ ಸೂಚನೆ ನೀಡಿರುತ್ತೇನೆ ಎಂದು ಹೇಳಿದ್ದಾರೆ.
ಆದರೇ ಇತ್ತೀಚೆಗೆ ಅಧಿಸೂಚನೆ ಸಂಖ್ಯೆ ಸಿಆಸುಇ 28 ಎಸ್ ಸಿ ಇ 2024, ದಿನಾಂಕ 09-05-2025ರಲ್ಲಿ ನನ್ನ ಅನುಮೋದನೆ ಪಡೆಯದೇ ಕೆಲವು ಮುಖ್ಯ ಅಭಿಯಂತರರನ್ನು ಜಲ ಸಂಪನ್ಮೂಲ ಇಲಾಖೆಗೆ ವರ್ಗಾವಣೆ ಮಾಡಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ನನ್ನ ಸೂಚನೆಯನ್ನು ಕಡೆಗಣಿಸಿ ಆದೇಶ ಹೊರಡಿಸಿರುವುದು ನಾನು ಆಕ್ಷೇಪಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಆದುದ್ದರಿಂದ ಸದರಿ ಆದೇಶವನ್ನು ಕೂಡಲೇ ವಾಪಾಸ್ಸು ಪಡೆದು, ಇಂತಹ ವಿಚಾರಗಳ ಬಗ್ಗೆ ಯಾವುದೇ ಆದೇಶ ಹೊರಡಿಸಬೇಕಾದರೇ ನನ್ನ ಪೂರ್ವಾನುಮತಿಯನ್ನು ಪಡೆಯಬೇಕೆಂದು ಸೂಚಿಸಿದ್ದಾರೆ.
ಸಿಎಂ ಸಿದ್ಧರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಗುದ್ದಾಟ- ಆರ್.ಅಶೋಕ್
ಸಿಎಂ ಸಿದ್ಧರಾಮಯ್ಯ ಹಾಗು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನಡುವೆ ನಡೆಯುತ್ತಿರುವ ಮುಸುಕಿನ ಗುದ್ದಾಟ ಅಧಿಕಾರ ಹಸ್ತಾಂತರದ ಘಳಿಗೆ ಹತ್ತಿರ ಬರುತ್ತಿದ್ದಂತೆ ವಿಸ್ಪೋಟವಾಗುವ ಎಲ್ಲ ಲಕ್ಷಣಗಳೂ ಸ್ಪಷ್ಟವಾಗಿ ಕಾಣುತ್ತಿದ್ದು, ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿಗಳ ಆದೇಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರ ಕಾಂಗ್ರೆಸ್ ಸರ್ಕಾರದ ಆಂತರಿಕ ಸಂಘರ್ಷಕ್ಕೆ ಪುಷ್ಟಿ ನೀಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ, ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟದಿಂದ ಕರ್ನಾಟಕದ ಅಭಿವೃದ್ಧಿ ಸೊರಗುತ್ತಿದೆ ಎಂಬುದಾಗಿ ವ್ಯಂಗ್ಯವಾಡಿದ್ದಾರೆ.
ಸಿಎಂ @siddaramaiah ಹಾಗು ಡಿಸಿಎಂ @DKShivakumar ಅವರ ನಡುವೆ ನಡೆಯುತ್ತಿರುವ ಮುಸುಕಿನ ಗುದ್ದಾಟ ಅಧಿಕಾರ ಹಸ್ತಾಂತರದ ಘಳಿಗೆ ಹತ್ತಿರ ಬರುತ್ತಿದ್ದಂತೆ ವಿಸ್ಪೋಟವಾಗುವ ಎಲ್ಲ ಲಕ್ಷಣಗಳೂ ಸ್ಪಷ್ಟವಾಗಿ ಕಾಣುತ್ತಿದ್ದು, ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿಗಳ ಆದೇಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಡಿಸಿಎಂ… pic.twitter.com/vnxZFxNWEa
— R. Ashoka (@RAshokaBJP) May 29, 2025
GOOD NEWS: ಈಗ ಒಳ ಮೀಸಲಾತಿ ಸಮೀಕ್ಷೆ ಆನ್ ಲೈನ್ ನಲ್ಲೂ ವಿವರ ನಮೂದಿಸಲು ಅವಕಾಶ
BREAKING : 43 ಕ್ರಿಮಿನಲ್ ಕೇಸ್ ಹಿಂಪಡೆಯುವ ರಾಜ್ಯ ಸರ್ಕಾರದ ಕ್ರಮಕ್ಕೆ ಹಿನ್ನಡೆ: ಹೈಕೋರ್ಟ್ ನಿಂದ ಆದೇಶವೇ ರದ್ದು.!