Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : 25 ವರ್ಷಗಳ ನಂತರ ಭಾರತದಲ್ಲಿ `ಮೆದುಳಿನ ಕ್ಯಾನ್ಸರ್’ ಚಿಕಿತ್ಸೆಗೆ ಹೊಸ ಔಷಧ ಲಭ್ಯ.!

11/12/2025 11:52 AM

ಇಂದಿನಿಂದ ಮಣಿಪುರಕ್ಕೆ ರಾಷ್ಟ್ರಪತಿ ಮುರ್ಮು ಎರಡು ದಿನಗಳ ಭೇಟಿ | Manipur

11/12/2025 11:45 AM

BREAKING : ಉತ್ತರ ಪ್ರದೇಶದಲ್ಲಿ ಕಾರು ಹೊತ್ತಿ ಉರಿದು 5 ಮಂದಿ ಸಜೀವ ದಹನ : ಭಯಾನಕ ವಿಡಿಯೋ ವೈರಲ್ | WATCH VIDEO

11/12/2025 11:38 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲೋಕಾಯುಕ್ತ ವಿಚಾರಣೆ ವೇಳೆ ಸುಳ್ಳು ಆರೋಪಕ್ಕೆ ಸತ್ಯವನ್ನು ತಿಳಿಸಿದ್ದೇನೆ: ಸಿಎಂ ಸಿದ್ಧರಾಮಯ್ಯ
KARNATAKA

ಲೋಕಾಯುಕ್ತ ವಿಚಾರಣೆ ವೇಳೆ ಸುಳ್ಳು ಆರೋಪಕ್ಕೆ ಸತ್ಯವನ್ನು ತಿಳಿಸಿದ್ದೇನೆ: ಸಿಎಂ ಸಿದ್ಧರಾಮಯ್ಯ

By kannadanewsnow0906/11/2024 3:05 PM

ಮೈಸೂರು : ಮುಡಾಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು, ಲೋಕಾಯುಕ್ತ ವಿಚಾರಣೆಯಲ್ಲಿ ಸತ್ಯವನ್ನು ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿಗಳು ಲೋಕಾಯುಕ್ತ ವಿಚಾರಣೆಯನ್ನು ಎದುರಿಸಿದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಲೋಕಾಯುಕ್ತ ವಿಚಾರಣೆಗೆ ಇಂದು ಹಾಜರಾಗಿದ್ದು, ಅವರ ಪ್ರಶ್ನೆಗಳಿಗೆ ಸೂಕ್ತ ಉತ್ತರವನ್ನು ನೀಡಿದ್ದೇನೆ. ಬಿಜೆಪಿಯವರು ಗೋಬ್ಯಾಕ್ ಸಿಎಂ ಎಂಬ ಪ್ರತಿಭಟನೆ ನಡೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸ್ನೇಹಮಯಿ ಕೃಷ್ಣ ಅವರು ಕೋರಿದಂತೆ,ರಾಜ್ಯಪಾಲರು ಆದೇಶದಂತೆ ಲೋಕಾಯುಕ್ತ ವಿಚಾರಣೆಯನ್ನು ನಡೆಸಲಾಗಿದೆ. ಬಿಜೆಪಿಯವರು ವಿಚಾರಣೆಯ ವಿರುದ್ಧವಾಗಿದ್ದಾರೆ ಎಂಬ ಅರ್ಥವಲ್ಲವೇ? ಇದರಿಂದ ಈ ಆರೋಪ ಸುಳ್ಳು ಎಂದು ಸ್ಪಷ್ಟವಾಗುತ್ತದೆ ಎಂದರು.

ವಿಚಾರಣೆ ನಡೆಸುವ ಲೋಕಾಯುಕ್ತ ನಂಬಿಕೆಯಿಲ್ಲ, ತನಿಖೆಯನ್ನು ಸಿಬಿಐ ನವರು ನಡೆಸಬೇಕೆಂಬ ಬಿಜೆಪಿಯವರ ಬೇಡಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರದಲ್ಲಿ ಸಿಬಿಐ ಇದೆ. ಬಿಜೆಪಿಯವರು ಇದುವರೆಗೆ ಯಾವುದಾದರೂ ಹಗರಣವನ್ನು ಸಿಬಿಐ ಗೆ ವಹಿಸಿದ್ದಾರೆಯೇ? ಎಂದರು.

ಬಿಜೆಪಿಯವರಿಗೆ ಕಾನೂನಿನ ಬಗ್ಗೆ ಗೌರವವಿಲ್ಲ

ಲೋಕಾಯುಕ್ತ ವಿಚಾರಣೆ ಪೂರ್ವನಿಯೋಜಿತವಾಗಿ, ನಿಷ್ಪಕ್ಷವಾಗುತ್ತದೆ ಎಂಬ ಬಿಜೆಪಿಯವರ ಆರೋಪ ಮಾಡುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಸಿಬಿಐ ಯಂತೆ , ಲೋಕಾಯುಕ್ತ ಒಂದು ಸ್ವತಂತ್ರ ತನಿಖಾ ಸಂಸ್ಥೆ. ಲೋಕಾಯುಕ್ತದ ನಂಬಿಕೆಯಿಲ್ಲದ ಬಿಜೆಪಿಯವರಿಗೆ ಕಾನೂನಿನ ಬಗ್ಗೆ ಗೌರವವಿಲ್ಲ. ಬಿಜೆಪಿಯವರು ಯಾವುದೇ ಪ್ರಕರಣವನ್ನು ಇದುವರೆಗೆ ಸಿಬಿಐ ಗೆ ನೀಡಿಲ್ಲ. ರಾಜ್ಯಪಾಲರು ಕೂಡ ಲೋಕಾಯುಕ್ತದಲ್ಲಿಯೇ ತನಿಖೆಯಾಗಬೇಕೆಂದು ಸೂಚಿಸಿದ್ದು, ಅದರಂತೆ ವಿಚಾರಣೆ ನಡೆಯುತ್ತಿದೆ ಎಂದರು.

ಸುಳ್ಳು ಆರೋಪಗಳಿಗೆ ನ್ಯಾಯಾಲಯದಲ್ಲಿ ತಕ್ಕ ಉತ್ತರ

ಮುಡಾದಿಂದ ಹಂಚಿಕೆಯಾದ 14 ನಿವೇಶನಗಳು ಕಾನೂನುಬದ್ಧವಾಗಿತ್ತೇ, ಅವುಗಳನ್ನು ವಾಪಸ್ಸು ನೀಡಲಾಯಿತೇಕೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ನಿವೇಶನ ಹಂಚಿಕೆ ಕಾನೂನೂ ಬದ್ಧವಾಗಿಯೇ ಆಗಿದೆ. ಬಿಜೆಪಿ ಜೆಡಿಎಸ್ ನವರು ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಈ ಸಂಬಂಧ ಲೋಕಾಯುಕ್ತ ವಿಚಾರಣೆಯಲ್ಲಿ ಇಂದು ಉತ್ತರವನ್ನು ನೀಡಿದ್ದು, ತನಿಖೆಯನ್ನು ಕಾನೂನುರೀತ್ಯ ಮುಂದುವರೆಸಲಿದ್ದಾರೆ. ನನ್ನ ಮೇಲೆ ಬಂದ ಸುಳ್ಳು ಆರೋಪಗಳ ಮಾಡಲಾಗಿದ್ದರಿಂದ ನನ್ನ ಪತ್ನಿ ನಿವೇಶನಗಳನ್ನು ವಾಪಸ್ಸು ನೀಡಿದರೆ ಹೊರತು, ತಪ್ಪು ಮಾಡಿದ್ದಕ್ಕಾಗಿ ನಿವೇಶನಗಳನ್ನು ವಾಪಸ್ಸು ನೀಡಲಾಗಿಲ್ಲ. ಈ ಮುಡಾ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆ ನನ್ನ ಬಳಿಯಿಲ್ಲ ಹಾಗೂ ನನ್ನಿಂದ ಯಾವುದೇ ದಾಖಲೆ ಕೇಳಲಾಗಿಲ್ಲ. ನ್ಯಾಯಾಲಯದಲ್ಲಿ ತೀರ್ಮಾನವಾಗುವವರೆಗೆ ನನ್ನ ರಾಜಕೀಯ ಜೀವನಕ್ಕೆ ಯಾವುದೇ ಕಪ್ಪು ಮಸಿ ಇಲ್ಲ. ನನ್ನ ಮೇಲೆ ಮಾಡಲಾಗಿರುವ ಸುಳ್ಳು ಆರೋಪಗಳಿಗೆ ನ್ಯಾಯಾಲಯದಲ್ಲಿ ತಕ್ಕ ಉತ್ತರವನ್ನು ನೀಡಲಿದ್ದೇವೆ ಎಂದರು.

ಯುಕೆಯಲ್ಲಿ ಉಳಿಯಲು ನಾನು ‘ಉಚಿತವಾಗಿ ಕೆಲಸ’ ಮಾಡುತ್ತೇನೆಂದ ಭಾರತೀಯ ವಿದ್ಯಾರ್ಥಿನಿ: ಪೋಸ್ಟ್ ವೈರಲ್

ಬೆಳಗಾವಿಯಲ್ಲಿ ‘SDA ರುದ್ರಣ್ಣ’ ಆತ್ಮಹತ್ಯೆ ಕೇಸ್: ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಹೇಳಿದ್ದೇನು ಗೊತ್ತಾ.?

ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಹಗರಣ, ಸಿಬಿಐ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ

Share. Facebook Twitter LinkedIn WhatsApp Email

Related Posts

BREAKING : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಜನೌಷಧಿ ಕೇಂದ್ರ’ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ.!

11/12/2025 11:31 AM1 Min Read

BIG NEWS : ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ : ಯತೀಂದ್ರ ಸಿದ್ದರಾಮಯ್ಯ ಪುನರುಚ್ಚಾರಣೆ

11/12/2025 11:27 AM1 Min Read

‘RCB’ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ‘IPL’ ಪಂದ್ಯ ಅನುಮತಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ

11/12/2025 11:20 AM1 Min Read
Recent News

GOOD NEWS : 25 ವರ್ಷಗಳ ನಂತರ ಭಾರತದಲ್ಲಿ `ಮೆದುಳಿನ ಕ್ಯಾನ್ಸರ್’ ಚಿಕಿತ್ಸೆಗೆ ಹೊಸ ಔಷಧ ಲಭ್ಯ.!

11/12/2025 11:52 AM

ಇಂದಿನಿಂದ ಮಣಿಪುರಕ್ಕೆ ರಾಷ್ಟ್ರಪತಿ ಮುರ್ಮು ಎರಡು ದಿನಗಳ ಭೇಟಿ | Manipur

11/12/2025 11:45 AM

BREAKING : ಉತ್ತರ ಪ್ರದೇಶದಲ್ಲಿ ಕಾರು ಹೊತ್ತಿ ಉರಿದು 5 ಮಂದಿ ಸಜೀವ ದಹನ : ಭಯಾನಕ ವಿಡಿಯೋ ವೈರಲ್ | WATCH VIDEO

11/12/2025 11:38 AM

ತಿರುಪತಿ ದೇವಸ್ಥಾನದಲ್ಲಿ ಮತ್ತೊಂದು ಹಗರಣ ಬಯಲು: ಭಕ್ತರಿಗೆ ‘ರೇಷ್ಮೆ’ ಹೆಸರಿನಲ್ಲಿ ಪಾಲಿಯೆಸ್ಟರ್ ಶಾಲು ಮಾರಾಟ

11/12/2025 11:32 AM
State News
KARNATAKA

BREAKING : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಜನೌಷಧಿ ಕೇಂದ್ರ’ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ.!

By kannadanewsnow5711/12/2025 11:31 AM KARNATAKA 1 Min Read

ಧಾರವಾಡ : ಕಳೆದ ಕೆಲವು ತಿಂಗಳುಗಳ ಹಿಂದೆ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಜನೌಷಧಿ ಕೇಂದ್ರವನ್ನು ಬಂದ್‌ ಮಾಡುವ ನಿರ್ಧಾರ ಕೈಗೊಂಡಿದ್ದ…

BIG NEWS : ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ : ಯತೀಂದ್ರ ಸಿದ್ದರಾಮಯ್ಯ ಪುನರುಚ್ಚಾರಣೆ

11/12/2025 11:27 AM

‘RCB’ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ‘IPL’ ಪಂದ್ಯ ಅನುಮತಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ

11/12/2025 11:20 AM

ಗಮನಿಸಿ : ನಿಮಗೂ 127000 ಸಂಖ್ಯೆಯಿಂದ `SMS’ ಬಂದಿದೆಯೇ? ಹಾಗಿದ್ರೆ ಇದನ್ನೊಮ್ಮೆ ಓದಿ.!

11/12/2025 11:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.