Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದೆಹಲಿ ಸ್ಪೋಟ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ : ಸ್ಫೋಟಕ್ಕೆ ಬಳಸಿದ್ದು, 2 ಅಲ್ಲ 3 ಕಾರು!

13/11/2025 11:57 AM

4 ನಗರ, IED ಬಾಂಬ್‌ಗಳು, 32 ಕಾರುಗಳು: ದೆಹಲಿಯ ‘ಸರಣಿ ಸ್ಫೋಟ’ದ ಹಿಂದಿನ ಭಯಾನಕ ಪ್ಲಾನ್ ಬಿಚ್ಚಿಟ್ಟ ಪೊಲೀಸರು!

13/11/2025 11:52 AM

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ನಿಮ್ಮ ಬಳಿ `APAAR CARD’ ಇದ್ರೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

13/11/2025 11:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನನಗೂ ಸಿಗರೇಟ್‌ ಸೇದುವ ಅಭ್ಯಾಸವಿತ್ತು : ಸಿಎಂ ಸಿದ್ದರಾಮಯ್ಯ
KARNATAKA

ನನಗೂ ಸಿಗರೇಟ್‌ ಸೇದುವ ಅಭ್ಯಾಸವಿತ್ತು : ಸಿಎಂ ಸಿದ್ದರಾಮಯ್ಯ

By kannadanewsnow5702/07/2024 5:12 AM

ಬೆಂಗಳೂರು : ಹಿಂದೆ ನನಗೂ ಸಿಗರೇಟ್ ಸೇದುವ ಅಭ್ಯಾಸವಿತ್ತು. ಸಿಗರೇಟ್ ಸೇವನೆ ಬಿಟ್ಟು ದಶಕಗಳು ಕಳೆದರೂ ಹಿಂದೆ ಸೇದಿದ್ದರ ಪರಿಣಾಮದಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಆಂಜಿಯೋಪ್ಲಾಸ್ಟಿ ಮಾಡಿಸಿಕೊಳ್ಳಬೇಕಾಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ‘ರಾಷ್ಟ್ರೀಯ ವೈದ್ಯರ ದಿನಾಚರಣೆ’ಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಿಗರೇಟ್ ಆರೋಗ್ಯಕ್ಕೆ ಮಾರಕ ಎಂದರೂ ಕೂಡ ಸಿಗರೇಟ್ ಸೇದುತ್ತಾರೆ. ಜನರು ಕೂಡ ಜಾಗೃತರಾಗಬೇಕು. ದುಶ್ಚಟಗಳಿಂದ ದೂರವಿರಬೇಕು. ಹಿಂದೆ ನನಗೂ ಸಿಗರೇಟ್ ಸೇದುವ ಅಭ್ಯಾಸವಿತ್ತು. ಸಿಗರೇಟ್ ಸೇವನೆ ಬಿಟ್ಟು ದಶಕಗಳು ಕಳೆದರೂ ಹಿಂದೆ ಸೇದಿದ್ದರ ಪರಿಣಾಮದಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಆಂಜಿಯೋಪ್ಲಾಸ್ಟಿ ಮಾಡಿಸಿಕೊಳ್ಳಬೇಕಾಯಿತು. ನಮ್ಮ ಆಹಾರ ಪದ್ಧತಿ ಹಾಗೂ ಜೀವನಶೈಲಿ ಬದಲಾಯಿಸಿಕೊಂಡರೆ ಅನೇಕ ರೋಗಗಳನ್ನು ತಡೆಗಟ್ಟಬಹುದಾಗಿದೆ ಎಂದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಹೆಚ್ಚು ಸಮಾಜಮುಖಿಯಾಗಿ ಕೆಲಸ ಮಾಡಬೇಕು. ವೈದ್ಯರು ತಮ್ಮ ವೃತ್ತಿ ಧರ್ಮವನ್ನು ಪಾಲಿಸುವುದು ಅತ್ಯಂತ ಅವಶ್ಯಕ. ರೋಗಿಯ ಪ್ರಾಣ ಉಳಿಸಿದರೆ ವೈದ್ಯರೇ ದೇವರಾಗುತ್ತಾರೆ. ತಮ್ಮ ವೃತ್ತಿಯಲ್ಲಿ ಯಾವುದೇ ಕಾರಣಕ್ಕೂ ವೈದ್ಯರು ನಿರ್ಲಕ್ಷ್ಯ ತೋರಬಾರದು. ಸ್ವಲ್ಪ ನಿರ್ಲಕ್ಷ್ಯ ತೋರಿದರೂ ಅನಾಹುತವಾಗುತ್ತದೆ ಎಂಬ ಎಚ್ಚರವಿರಬೇಕು.

ರೋಗಿಗಳ ಸೇವೆಯನ್ನು ದೇವರ ಕೆಲಸ ಎಂದು ಮಾಡಿದರೆ ಸಮಾಜದಲ್ಲಿ ರೋಗಗಳನ್ನು ತಡೆಗಟ್ಟುವ ಜೊತೆಗೆ ರೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡಬಹುದು. ರೋಗಗಳನ್ನು ತಡೆಗಟ್ಟುವುದನ್ನು ಕೂಡ ಆರೋಗ್ಯ ಇಲಾಖೆ ಗಮನದಲ್ಲಿರಿಸಿಕೊಂಡು ಕಾರ್ಯನಿರ್ವಹಿಸಬೇಕು. ವೈದ್ಯರ ಭವನ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ನಮ್ಮ ಸರ್ಕಾರ ನೀಡಲಿದೆ. ವೈದ್ಯ ವೃತ್ತಿ ಅತ್ಯಂತ ಪವಿತ್ರವಾದ ವೃತ್ತಿ. ವೈದ್ಯೋ ನಾರಾಯಣೋ ಹರಿಃ ಎಂದು ಭಾವಿಸಲಾಗುತ್ತದೆ. ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವವರು ಹಾಗೂ ಆರೋಗ್ಯ ರಕ್ಷಣೆ ಮಾಡುವವರು ವೈದ್ಯರು. ಕೊರೊನಾ ಸಂದರ್ಭದಲ್ಲಿ ವೈದ್ಯರ ಸೇವೆಯನ್ನು ಮರೆಯಲು ಸಾಧ್ಯವಿಲ್ಲ. ತಮ್ಮ ಜೀವದ ಹಂಗನ್ನು ತೊರೆದು ವೈದ್ಯರು ದುಡಿದಿದ್ದಾರೆ ಎಂದರು.

ಸಮಾಜದ ಆರೋಗ್ಯ ಕಾಪಾಡಲು ಸರ್ಕಾರವೂ ಪ್ರಯತ್ನ ಪಡುತ್ತಿದೆ. ಅನೇಕ ಕಾರ್ಯಕ್ರಮಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿ ಮಾಡುತ್ತಿವೆ. ಸರ್ಕಾರಿ ಆಸ್ಪತ್ರೆಗಳಿಗೆ ಬಡವರೇ ಹೆಚ್ಚು ಬರುತ್ತಾರೆ. ತಾವು ಹಸನ್ಮುಖಿಗಳಾಗಿ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಪ್ರತಿ ವೈದ್ಯರೂ ಮಾಡಬೇಕು. ಸಿಡುಬು, ಪ್ಲೇಗು, ಪೋಲಿಯೋ ಮುಂತಾದ ಕಾಯಿಲೆಗಳು ನಿರ್ಮೂಲನೆಯಾಗಿವೆ, ಕೆಲವು ನಿಯಂತ್ರಣಕ್ಕೆ ಬಂದಿವೆ. ಇವನ್ನೂ ನಿರ್ಮೂಲನೆ ಮಾಡಲು ಸಾಧ್ಯವಿದೆ. ವಿಜ್ಞಾನ – ತಂತ್ರಜ್ಞಾನ ಬೆಳೆದಂತೆಲ್ಲಾ ಕಾಯಿಲೆಗಳ ನಿರ್ಮೂಲನೆ ಹೆಚ್ಚು ಸಾಧ್ಯವಾಗುತ್ತಿದೆ. ಡೆಂಗ್ಯೂ ಜ್ವರ ಹೆಚ್ಚಾಗುತ್ತಿದ್ದು, ಇದರ ಮೂಲೋಚ್ಚಾಟನೆ ಮಾಡಬೇಕು. ಈ ಬಗ್ಗೆ ಪರಿಶೀಲನಾ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಬಗ್ಗೆ ಸಾರ್ವಜನಿಕರೂ ಸಹ ಸರ್ಕಾರದೊಂದಿಗೆ ಕೈಜೋಡಿಸಬೇಕು. ಆಗ ಮಾತ್ರ ಇದರ ನಿವಾರಣೆ ಸಾಧ್ಯ ಎಂದು ಹೇಳಿದರು.

I too used to smoke cigarettes: Siddaramaiah ನನಗೂ ಸಿಗರೇಟ್‌ ಸೇದುವ ಅಭ್ಯಾಸವಿತ್ತು : ಸಿಎಂ ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ನಿಮ್ಮ ಬಳಿ `APAAR CARD’ ಇದ್ರೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

13/11/2025 11:51 AM2 Mins Read

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಅರಿವು ಯೋಜನೆಯಡಿ ಶೈಕ್ಷಣಿಕ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ

13/11/2025 11:46 AM1 Min Read

BREAKING : ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳಿಗೆ ಇಟ್ಟಿದ್ದ ಸಿಡಿಮದ್ದು ಸ್ಪೋಟ : ಮಹಿಳೆಯ ಕೈ ಬೆರಳು ಛಿದ್ರ!

13/11/2025 11:36 AM1 Min Read
Recent News

BREAKING : ದೆಹಲಿ ಸ್ಪೋಟ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ : ಸ್ಫೋಟಕ್ಕೆ ಬಳಸಿದ್ದು, 2 ಅಲ್ಲ 3 ಕಾರು!

13/11/2025 11:57 AM

4 ನಗರ, IED ಬಾಂಬ್‌ಗಳು, 32 ಕಾರುಗಳು: ದೆಹಲಿಯ ‘ಸರಣಿ ಸ್ಫೋಟ’ದ ಹಿಂದಿನ ಭಯಾನಕ ಪ್ಲಾನ್ ಬಿಚ್ಚಿಟ್ಟ ಪೊಲೀಸರು!

13/11/2025 11:52 AM

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ನಿಮ್ಮ ಬಳಿ `APAAR CARD’ ಇದ್ರೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

13/11/2025 11:51 AM

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಅರಿವು ಯೋಜನೆಯಡಿ ಶೈಕ್ಷಣಿಕ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ

13/11/2025 11:46 AM
State News
KARNATAKA

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ನಿಮ್ಮ ಬಳಿ `APAAR CARD’ ಇದ್ರೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

By kannadanewsnow5713/11/2025 11:51 AM KARNATAKA 2 Mins Read

ನವದೆಹಲಿ : ಭಾರತದ ಪ್ರತಿಯೊಬ್ಬ ವಿದ್ಯಾರ್ಥಿಗೂ ವಿಶೇಷ ವಿಶಿಷ್ಟ ಗುರುತಿನ ಸಂಖ್ಯೆಯನ್ನು ರಚಿಸುವ ಯೋಜನೆಯನ್ನು ಕೇಂದ್ರ ಶಿಕ್ಷಣ ಸಚಿವಾಲಯ ಬಹಳ…

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಅರಿವು ಯೋಜನೆಯಡಿ ಶೈಕ್ಷಣಿಕ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ

13/11/2025 11:46 AM

BREAKING : ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳಿಗೆ ಇಟ್ಟಿದ್ದ ಸಿಡಿಮದ್ದು ಸ್ಪೋಟ : ಮಹಿಳೆಯ ಕೈ ಬೆರಳು ಛಿದ್ರ!

13/11/2025 11:36 AM

‘EPFO’ ಸೊಸೈಟಿಯಲ್ಲಿ 70 ಕೋಟಿ ರೂಪಾಯಿ ವಂಚನೆ : ಅಕೌಂಟೆಂಟ್ ಜಗದೀಶ್ ಮನೆ ಮೇಲೆ ಪೊಲೀಸರು ದಾಳಿ

13/11/2025 11:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.