Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ನಾಳೆ ಸಾಗರದ ‘ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನ’ದ ಸರ್ವ ಸದಸ್ಯರ ಸಭೆ

19/09/2025 6:09 PM

ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಬದುಕಿ, ಇಲ್ಲಿಯೇ ಸಾಯುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್

19/09/2025 5:59 PM

ಸೌದಿ ಅರೇಬಿಯಾದಲ್ಲಿ ಭಾರತದ 1 ಲಕ್ಷ ರೂಪಾಯಿಗಳ ಬೆಲೆ ಎಷ್ಟು ಗೊತ್ತಾ? 99% ಜನರಿಗೆ ತಿಳಿದಿಲ್ಲ

19/09/2025 5:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಬದುಕಿ, ಇಲ್ಲಿಯೇ ಸಾಯುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್
KARNATAKA

ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಬದುಕಿ, ಇಲ್ಲಿಯೇ ಸಾಯುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0919/09/2025 5:59 PM

ರಾಮನಗರ : “ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಬದುಕಿದ್ದೇನೆ, ಇಲ್ಲಿಯೇ ಸಾಯುತ್ತೇನೆ. ಈ ಅಂಶ ನಿಮ್ಮ ತಲೆಯಲ್ಲಿರಲಿ. ಇದು ನಮ್ಮ ಜಿಲ್ಲೆ. ಇಲ್ಲಿಂದ ನಾನು ತೆಗೆದುಕೊಂಡು ಹೋಗುವುದು ಏನೂ ಇಲ್ಲ. ಇಲ್ಲಿನ ಜನರಿಗೆ ಶಕ್ತಿ ನೀಡುವುದೇ ನನ್ನ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಶುಕ್ರವಾರ ನಡೆದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ನಾನು ರಿಯಲ್ ಎಸ್ಟೇಟ್ ವ್ಯವಹಾರ ಮಾಡುವುದಕ್ಕೆ ಜಿಲ್ಲೆಯ ಹೆಸರು ಬದಲಾವಣೆ ಮಾಡಿದ್ದೇನೆ ಎಂದು ಕೆಲವರು ಟೀಕೆ ಮಾಡುತ್ತಿದ್ದಾರೆ. ನಾನು ಜಾತಿ ಮೇಲೆ ನಂಬಿಕೆಯಿಟ್ಟಿರುವವನಲ್ಲ. ನೀತಿ ಮೇಲೆ ನಂಬಿಕೆಯಿಟ್ಟಿರುವವನು. ಬಡವರ ಬಗ್ಗೆ ಕಾಳಜಿಯನ್ನಿಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ. ಎಲ್ಲಾ ವರ್ಗದ ಜನರ ಏಳಿಗೆಗೆ ಶ್ರಮಿಸುತ್ತಿದ್ದೇನೆ” ಎಂದರು.

“ರಾಮನಗರ ಕ್ಷೇತ್ರದ ಜನತೆಗೆ 100 ಎಕರೆ ಪ್ರದೇಶದಲ್ಲಿ ನಿವೇಶನ ಹಂಚಬೇಕು ಎಂದು ಜಿಲ್ಲೆಯ ಪ್ರತಿಧಿಗಳ ಸಭೆ ಕರೆದು ಈಗಾಗಲೇ ತೀರ್ಮಾನ ಮಾಡಲಾಗಿದೆ. “ಬಗರ್ ಹುಕುಂ ಸೇರಿದಂತೆ, ಭೂ ಸುಧಾರಣಾ ಕಾಯ್ದೆಯಡಿ ಮಂಜೂರಾತಿಗೆ ಬಾಕಿ ಇರುವ ಭೂಮಿಗಳನ್ನು ಆದಷ್ಟು ಬೇಗ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದರು.

“ದೇವರು ಅವಕಾಶ ಮಾತ್ರ ಕೊಡುತ್ತಾನೆ. ಸಿಕ್ಕಂತಹ ಅವಕಾಶವನ್ನು ಬಳಸಿಕೊಂಡು ಬಡ ಜನರ ಏಳಿಗೆ ಮಾಡದಿದ್ದರೆ ಅಧಿಕಾರವಿದ್ದು ಏನು ಲಾಭ? ಕನಕಪುರದಲ್ಲಿ ಸುಮಾರು 100 ಎಕರೆ ಪ್ರದೇಶದಲ್ಲಿ ಜನರಿಗೆ ನಿವೇಶನ ಹಂಚಿಕೆ ಮಾಡಲಾಗಿದೆ. ಮಹಿಳೆಯರ ಹೆಸರಿಗೆ ಈ ನಿವೇಶನಗಳನ್ನು ಮಂಜೂರು ಮಾಡಲಾಗಿದೆ. ನಾನು ಸುಮಾರು 8 ಸಾವಿರ ಮಂದಿಗೆ ಬಗರ್ ಹುಕುಂ ಜಮೀನು ನೀಡಿದ್ದೇನೆ. ಈಗ ಡಿ.ಕೆ.ಸುರೇಶ್ ಅವರಿಗೆ ಈ ಸಮಿತಿಯ ಜವಾಬ್ದಾರಿ ನೀಡಲಾಗಿದೆ.” ಎಂದರು.

“ಕುಮಾರಸ್ವಾಮಿ ಅವರು ಜಿಲ್ಲೆಯಿಂದ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು, ಬಡವರಿಗೆ ನಿವೇಶನ ಹಂಚಲು ಆಗಲಿಲ್ಲ. ಹೀಗಿದ್ದ ಮೇಲೆ ರಾಜಕಾರಣ ಏಕೆ ಮಾಡಬೇಕು? ರಾಜಕೀಯ ಮಾಡುವ ಅವಕಾಶವನ್ನೇ ಜನತಾದಳದವರು ಕಳೆದುಕೊಂಡಿದ್ದಾರೆ” ಎಂದರು.

“ಮಾಜಿ ಸಚಿವ ಅಶ್ವಥ ನಾರಾಯಣ ಅವರು ಜಿಲ್ಲೆಗೆ ಬಂದಿದ್ದರು. ವೀರಾಧಿವೀರ ಗಂಡು. ಯಾರಾದರೂ ಗಂಡಸರು ಇದ್ದೀರಾ? ಎಂದು ಪ್ರಶ್ನಿಸಿದ್ದರು. ಅವರಿಗೂ ಸಹ ಒಂದೇ ಒಂದು ನಿವೇಶನ ಹಂಚಲು ಆಗಲಿಲ್ಲ. ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೂ ಒಬ್ಬರಿಗೂ ಸಹಾಯ ಮಾಡಲು ಆಗಲಿಲ್ಲ.

“ಬಿಜೆಪಿ ಅಧಿಕಾರಕ್ಕೆ ಬಂದರೆ ಜಿಬಿಎ ತೆಗೆದು ಹಾಕುವುದಾಗಿ ಯಾರೋ ಬಿಜೆಪಿ ನಾಯಕರು ಇತ್ತೀಚೆಗೆ ಹೇಳಿದ್ದಾರಂತೆ. ಮಿಸ್ಟರ್ ಅಶೋಕ್, ಅಶ್ವಥ ನಾರಾಯಣ, ಜನತಾ ದಳದ ನಾಯಕರೇ ನಿಮ್ಮ ಯಾರ ಹಣೆಯಲ್ಲೂ ಬದಲಾವಣೆ ಮಾಡುವ ಬಗ್ಗೆ ಬರೆದಿಲ್ಲ. ಅಶೋಕಣ್ಣಾ ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಬದಲಾವಣೆ ಮಾಡಲು 2028 ಕ್ಕೆ ನಿಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತದೆಯೇ? ಈ ಕಾಂಗ್ರೆಸ್ ಪಕ್ಷವೇ ಮತ್ತೆ ಅಧಿಕಾರಕ್ಕೆ ಬರುತ್ತದೆ. ನೀವು ಇನ್ನು ಅಧಿಕಾರ ಮರೆತುಬಿಡಿ” ಎಂದರು ವ್ಯಂಗ್ಯವಾಡಿದರು.

ಬಸವಣ್ಣನವರ ಕಾಲದಲ್ಲಿ ವಚಮ ಚಳುವಳಿಯ ನೇತೃತ್ವ ವಹಿಸಿದ್ದ ಹಿಂದುಳಿದ ವರ್ಗಕ್ಕೆ ಸೇರಿದ ಅಲ್ಲಮ ಪ್ರಭು ಅವರು ʼಕೊಟ್ಟ ಕುದುರೆಯನ್ನು ಏರಲಾರದವನು ವೀರನೂ ಅಲ್ಲ, ಶೂರನೂ ಅಲ್ಲ. ಅಧಿಕಾರ ಇದ್ದಾಗ ಏನನ್ನೂ ಮಾಡದವರು ಇನ್ನೆಂದೂ ಕೆಲಸ ಮಾಡಲೂ ಸಾಧ್ಯವಿಲ್ಲ” ಎಂದು ಕುಟುಕಿದರು.

“ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ ಅವರು ಸರ್ಕಾರ ನೀಡಿದ ಯೋಜನೆಗಳನ್ನು ಹಾಗೂ ಜನರಿಗೆ ಬಗರ್ ಹುಕುಂ ಸಾಗುವಳಿ ಜಮೀನು ನೀಡಿದ ದಾಖಲೆಯಿದ್ದರೆ ನೀಡಬೇಕು. ಫಲಾನುಭವಿಗಳು ಯಾರಾದರೂ ಇದ್ದರೆ, ಕೈ ಎತ್ತಿ ತಿಳಿಸಿ” ಎಂದರು.

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

ರಾಜ್ಯದ ಜನತೆಗೆ ಗುಡ್ ನ್ಯೂಸ್: 10 ತಾಲ್ಲೂಕಲ್ಲಿ ಯೋಗ, ಪ್ರಕೃತಿ ಚಿಕಿತ್ಸಾ ಕೇಂದ್ರ ತೆರೆಯಲು ಸರ್ಕಾರ ಆದೇಶ

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ನಾಳೆ ಸಾಗರದ ‘ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನ’ದ ಸರ್ವ ಸದಸ್ಯರ ಸಭೆ

19/09/2025 6:09 PM1 Min Read

ಅಶೋಕಣ್ಣಾ, ಸಮೀಕ್ಷೆ, ಗ್ಯಾರಂಟಿ ಯೋಜನೆ ಬದಲಿಸಲು ನಿಮ್ಮ ಹಣೆಯಲ್ಲೂ ಬರೆದಿಲ್ಲ: ಡಿಸಿಎಂ ಡಿಕೆಶಿ ಟಾಂಗ್

19/09/2025 5:49 PM4 Mins Read

ಎಲ್ಲಾ ಗೊಂದಲ ಸರಿಪಡಿಸಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

19/09/2025 5:46 PM1 Min Read
Recent News

ಶಿವಮೊಗ್ಗ: ನಾಳೆ ಸಾಗರದ ‘ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನ’ದ ಸರ್ವ ಸದಸ್ಯರ ಸಭೆ

19/09/2025 6:09 PM

ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಬದುಕಿ, ಇಲ್ಲಿಯೇ ಸಾಯುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್

19/09/2025 5:59 PM

ಸೌದಿ ಅರೇಬಿಯಾದಲ್ಲಿ ಭಾರತದ 1 ಲಕ್ಷ ರೂಪಾಯಿಗಳ ಬೆಲೆ ಎಷ್ಟು ಗೊತ್ತಾ? 99% ಜನರಿಗೆ ತಿಳಿದಿಲ್ಲ

19/09/2025 5:59 PM

ಅಶೋಕಣ್ಣಾ, ಸಮೀಕ್ಷೆ, ಗ್ಯಾರಂಟಿ ಯೋಜನೆ ಬದಲಿಸಲು ನಿಮ್ಮ ಹಣೆಯಲ್ಲೂ ಬರೆದಿಲ್ಲ: ಡಿಸಿಎಂ ಡಿಕೆಶಿ ಟಾಂಗ್

19/09/2025 5:49 PM
State News
KARNATAKA

ಶಿವಮೊಗ್ಗ: ನಾಳೆ ಸಾಗರದ ‘ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನ’ದ ಸರ್ವ ಸದಸ್ಯರ ಸಭೆ

By kannadanewsnow0919/09/2025 6:09 PM KARNATAKA 1 Min Read

ಶಿವಮೊಗ್ಗ: ನಾಳೆ ಸಾಗರದ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಸರ್ವ ಸದಸ್ಯರ ಸಭೆಯನ್ನು ಕರೆಯಲಾಗಿದೆ. ಶ್ರೀ ಮಾರಿಕಾಂಬಾ ದೇವಿ…

ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಬದುಕಿ, ಇಲ್ಲಿಯೇ ಸಾಯುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್

19/09/2025 5:59 PM

ಅಶೋಕಣ್ಣಾ, ಸಮೀಕ್ಷೆ, ಗ್ಯಾರಂಟಿ ಯೋಜನೆ ಬದಲಿಸಲು ನಿಮ್ಮ ಹಣೆಯಲ್ಲೂ ಬರೆದಿಲ್ಲ: ಡಿಸಿಎಂ ಡಿಕೆಶಿ ಟಾಂಗ್

19/09/2025 5:49 PM

ಎಲ್ಲಾ ಗೊಂದಲ ಸರಿಪಡಿಸಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

19/09/2025 5:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.