Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಬಾಲಕೃಷ್ಣ ಸರ್ಕಾರಿ ಸೇವೆಯಿಂದ ವಜಾ

09/05/2025 9:51 PM
DRONES, SHELLING ATTACKS ON SEVERAL CITIES IN Jammu, Punjab, Rajasthan

BREAKING: ಪಾಕಿಸ್ತಾನ ಹಾರಿಸಿದ್ದ ಎಲ್ಲಾ ಡ್ರೋನ್ ಧ್ವಂಸಗೊಳಿಸಿದ ಭಾರತೀಯ ಸೇನೆ

09/05/2025 9:50 PM

BREAKING: ಭಾರತ-ಪಾಕ್ ನಡುವೆ ಉದ್ವಿಗ್ನತೆ: ಪಿಎಸ್ಎಲ್ 2025ರ ಉಳಿದ ಪಂದ್ಯಗಳನ್ನು ಮುಂದೂಡಿಕೆ

09/05/2025 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಲ್ಮೀಕಿ ಸಮಾಜಕ್ಕೆ ಕೈ ಮುಗಿದು ಕೇಳ್ತೀನಿ ರಾಜಣ್ಣ ಮಾತನ್ನ ಕೇಳ್ಬೇಡಿ- H.D ದೇವೇಗೌಡ ಮನವಿ
KARNATAKA

ವಾಲ್ಮೀಕಿ ಸಮಾಜಕ್ಕೆ ಕೈ ಮುಗಿದು ಕೇಳ್ತೀನಿ ರಾಜಣ್ಣ ಮಾತನ್ನ ಕೇಳ್ಬೇಡಿ- H.D ದೇವೇಗೌಡ ಮನವಿ

By kannadanewsnow0930/03/2024 6:13 PM

ತುಮಕೂರು: ವಾಲ್ಮೀಕಿ ರಾಮಾಯಣಕ್ಕೆ ಸಮಾನವಾದ ಮತ್ತೊಂದು ಗ್ರಂಥವಿಲ್ಲ. ಇಂದಿನ ಪ್ರಧಾನ ಮಂತ್ರಿ ಅಯೋಧ್ಯೇಯಲ್ಲಿ ಆ ಶ್ರೀರಾಮನ ಮೂರ್ತಿಯನ್ನ ನಿಲ್ಲಿಸ್ತಾರೆ. ನಾನು ರಾಜಣ್ಣರನ್ನ ಗೆಲ್ಲಿಸೋದಕ್ಕೆ ನಾನು ಜ್ವರ ಬಂದು ಮನೆಯಲ್ಲಿ ಮಲಗಿದ್ದೆ. ಕೊನೆಯ 10 ನಿಮಿಷ ಅಲ್ಲಿ ಹೋಗಿ ಮಾತನಾಡಿ ಬಂದಿದ್ದೆ. ನನ್ನ ಮನೆಗೇ ಬಂದು ಊಟ ಮಾಡಿದ್ರೆ ನಾನ್ ಗೆಲ್ಲಿಸ್ತಾ ಇದ್ದೆ. ಆಯ್ತು ನನಗೆ ಗೊತ್ತಾಗಲಿಲ್ಲ. ಆದ್ರೆ ಒಂದು ಮಾತನ್ನ ಹೇಳ್ತಿನಿ, ವಾಲ್ಮೀಕಿ ಸಮಾಜಕ್ಕೆ, ಪವಿತ್ರವಾದ, ಶ್ರೇಷ್ಠವಾದ ಸಮಾಜ. ಆ ಮಹಾನುಭಾವರ ಸಮುದಾಯಕ್ಕೆ ಸೇರಿದವರು ನೀವು. ವಾಲ್ಮೀಕಿ ಸಮಾಜಕ್ಕೆ ಕೈ ಮುಗಿದು ಕೇಳ್ತೀನಿ ರಾಜಣ್ಣ ಮಾತನ್ನ ಕೇಳ್ಬೇಡಿ. ಇದೊಂದು ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯಾದ ಸೋಮಣ್ಣನವರಿಗೇ ಬೆಂಬಲ ನೀಡಿ. ನಾನು ಕೈಮುಗಿದು ನಿಮ್ಮಲ್ಲಿ ಕೇಳ್ತೀನಿ ನಮ್ಮ ಅಭ್ಯರ್ಥಿಯಾದ ಸೋಮಣ್ಣರನ್ನ ಗೆಲ್ಲಿಸಿ ಎಂಬುದಾಗಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮನವಿ ಮಾಡಿದ್ದಾರೆ.

ತುಮಕೂರು ಜಿಲ್ಲಾ ಮಟ್ಟದ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದಂತ ಅವರು, ನಮ್ಮೆಲ್ಲಾ ಅಭ್ಯರ್ಥಿಯಾಗಿ ಸೋಮಣ್ಣ ನಿಂತಿದ್ದಾರೆ. ಚುನಾವಣೆ ಮುಗಿದ ಮೇಲೇಯೂ ಬಿಜೆಪಿ-ಜೆಡಿಎಸ್ ಸಂಬಂಧ ಮುಂದುವರೆಯುತ್ತೆ. ಈ ಸಂಬಂಧ ಕಾಪಾಡುಕೊಂಡು‌ ಹೋಗ್ತಿವಿ. ನಮ್ಮ ಬಾಂಧವ್ಯ ತಾತ್ಕಾಲಿಕವಲ್ಲ. ಈ ಬಾಂಧವ್ಯವನ್ನ ಮುಂದುವರೆಸಿಕೊಂಡು ಹೋಗುವ ಪ್ರಾಮಾಣಿಕ ಕೆಲಸ ಮಾಡಬೇಕು ಎಂದರು.

ಯಾಕೆ ಕಾಂಗ್ರೆಸ್ ಈ ಹೀನಾಯ ಸ್ಥಿತಿ ತಲುಪಿದೆ, ಎಲ್ಲಿದೆ ಕಾಂಗ್ರೆಸ್? ಇಡೀ ಹಿಂದೂಸ್ತಾನದಲ್ಲಿ ಕಾಂಗ್ರೆಸ್ ನಾಲ್ಕು ಕಡೆ ಇದೆ. ಇಡೀ ದೇಶದಲ್ಲಿ ರಾಜಸ್ತಾನ್, ಮಧ್ಯ ಪ್ರದೇಶ, ತೆಲಂಗಾಣ, ಕರ್ನಾಟಕದಲ್ಲಿ ಮಾತ್ರ ಇದೆ ಎಂದರು.

ಈ ಕರ್ನಾಟಕ ಸಮನ್ವಯ ಸಮಿತಿಯಲ್ಲಿ ನಾನು ಒಂದು ಶಬ್ಧ ಬಳಕೆ ಮಾಡಿದೆ. ನಾನು ಯಾವತ್ತೂ ಕಟುವಾದ ಶಬ್ಧ ಬಳಕೆ ಮಾಡಲ್ಲ. ಮೈಸೂರಿನಲ್ಲಿ ಗೌರವಾನ್ವಿತ ಮುಖ್ಯಮಂತ್ರಿ ಹೇಳ್ತಾರೆ ಜೆಡಿಎಸ್ ಎಲ್ಲಿದೆ ಅಂತಾ ಪ್ರಶ್ನೆ ಮಾಡ್ತಾರೆ. ಕುಮಾರಸ್ವಾಮಿಗೆ ಅವರ ಮಗನನ್ನ ಗೆಲ್ಲಿಸೋಕೆ ಆಗಲ್ಲ. ಕುಮಾರಸ್ವಾಮಿ ತಂದೆ ತುಮಕೂರಿನಲ್ಲಿ ನಿಂತಾಗ ಗೆಲ್ಲಿಸೋಕೆ ಆಗಿಲ್ಲ. ಕುಮಾರಸ್ವಾಮಿ ತಂದೆ ತುಮಕೂರಿನಲ್ಲಿ ನಿಂತಾಗ ಗೆಲ್ಲಿಸಲಿಕ್ಕೆ ಆಗಲಿಲ್ಲ ಎಂದರು.

2019ರ ಸೋಲಿಗೆ ಕಾರಣ ಯಾರು ಅಂತ ಸೋಲಿನ ಪರಾಮರ್ಶೆ ಮಾಡಿದ ಎಚ್.ಡಿ ದೇವೇಗೌಡ ಅವರು, ನಾನು ತುಮಕೂರಿನಲ್ಲಿ ನಿಂತಾಗ ಏನೇನು ಆಟ ಆಡಿದ್ರು. ನಾನು ತುಮಕೂರಿನಲ್ಲಿ ಅರ್ಜಿ ಹಾಕ್ಬೇಕು ಅಂತಿ ಇದ್ದನ್ನ, ಇಲ್ಲ. ನಾನು ಮುಂದಕ್ಕೆ ಪಾರ್ಲಿಮೆಂಟ್ ಗೆ ನಿಲ್ಲೋದಿಲ್ಲ ಅಂತ ಖಂಡತುಂಡವಾಗಿ ಹೇಳಿದ್ದೆ. ನನ್ನ ಮಂಡಿನೋವು ಇತ್ತು. ರಾಹುಲ್ ಗಾಂಧಿ, ಸೋನಿಯಾಗಾಂಧಿ, ಫಾರೂಕ್ ಅಬ್ದುಲ್ಲಾ, ಮಲ್ಲಿಕಾರ್ಜುನ್ ಖರ್ಗೆ ಇದ್ದರು. ಅವರೆಲ್ಲಾರ ಮುಂದೆ ಇನ್ಮುಂದೆ ಪಾರ್ಲಿಮೆಂಟ್ ನಲ್ಲಿ ನಿಲ್ಲಲ್ಲ ಅಂತ‌ ಹೇಳಿದ್ದೆ. ನನ್ನನ್ನ ನಿಲ್ಲಿಸೋದಕ್ಕೆ ಏನೇನು ಆಟ ಆಡಿದ್ರು, ನಾನೇನು ಸೀಟು ಕೇಳಿದ್ನಾ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ನವ್ರು ಮೈಸೂರಿನಲ್ಲಿ ಅವರ ಹಳೇ ಶಿಷ್ಯನಿಗೆ ಸೀಟ್ ಬೇಕು ಅಂತಾ ಅವರು ಕೋಲಾರದಲ್ಲಿ ನಡೀತಲ್ಲ ಸೇಮ್ ಇವರನ್ನ ಬಲಿ ಕೊಟ್ರು. ನನ್ನ ಸ್ನೇಹಿತ, ನಾವು ಅಣ್ಣ ತಮ್ಮ ಇದ್ದಾಗೆ ಇದ್ದೀವಿ. ಸಿದ್ದರಾಮಯ್ಯ ನವರು ದೇವಲೋಕದಿಂದ ಇಳಿದುಬಂದಿದ್ದಾರೆ ಅನ್ನೋ ಭಾವನೆಯಿತ್ತು. ಮಧುಗಿರಿಯಲ್ಲಿ ಪರಮೇಶ್ವರ್ ಭಾಷಣ ನಡೀತಾ ಇತ್ತು. ರಾಜಣ್ಣ ಅವ್ರು ಹೇಳ್ತಾರೆ, ರೀ ದೇವೇಗೌಡರೇ ನೀವು ತುಮಕೂರಿಗೆ ಬಂದ ಕಾರಣವೇನು? ಎಂದು ಕೇಳಿದರು.

ನಾನು ತುಮಕೂರಿಗೆ ಬರಬೇಕು ಅಂತಾ ನಾನು ಹೇಳೇ ಇಲ್ಲಾ. ರಾಜಕೀಯ ಚದುರಂಗದ ಆಟ. ನೀವು ಮುದ್ದಹನುಮೇಗೌಡರಿಗೆ ಅನ್ಯಾಯ ಮಾಡಿದ್ದೀರಿ. ಅವನಿಗೆ ನೀವು ಸ್ಥಾನ ಕಲ್ಪಿಸಿಕೊಡಬೇಕಿತ್ತು. ನನಗೆ ಏನು ಮಾತನಾಡಬೇಕು ಗೊತ್ತಾಗಲಿಲ್ಲ. ನನಗೆ ಮನಸಿಗೆ ಬಹಳ ನೋವಾಯ್ತು. ಸಿದ್ದರಾಮಯ್ಯ ಅವರಿಗೆ ಅವರ ಸಮಾಜದ ಸಭೆಯಿತ್ತು. ಅಲ್ಲಿಗೆ ನಾನು ಸುರೇಶ್ ಬಾಬು ಹೋದ್ವಿ. ಹೋದ ತಕ್ಷಣ ಸಭೆ ನಿಲ್ಲಿಸಿ ಬಿಟ್ರು. ನನಗೆ ಬೇಜಾರ್ ಆಯ್ತು ವಾಪಸ್ ಬಂದೆ. ಪಾಪ ಪರಮೇಶ್ವರ್ ಅವರ ಗೆಸ್ಟ್ ಹೌಸ್ ಕೊಟಿದ್ರು. ರಾತ್ರಿ ಒಂದು ಗಂಟೆವರೆಗೂ ಚರ್ಚೆ ಆಯ್ತು. ದೇವೇಗೌಡನನ್ನ ತೆಗೆಯೋದು ಹೇಗೆ ಅಂತ. ಸಿದ್ರಾಮಣ್ಣ, ರಾಜಣ್ಣ, ಅವತ್ತು ಏನ್ ಮಾಡಿದ್ರಿ ನೀವು ಎಂದರು.

ನಾನು ರಾಜಕೀಯದಿಂದ ನಿವೃತ್ತಿ ಆಗೋ ಹೊತ್ತಿಗೆ ಈ ಚುನಾವಣೆಯಲ್ಲಿ ಕಿಂಚಿತ್ತೂ ಸೇವೆ ಮಾಡಿದ್ದೀನಿ. ವಾಲ್ಮೀಕಿ ಸಮಾಜಕ್ಕೆ ಕಿಂಚಿತ್ತೂ ಸೇವೆ ಮಾಡಿದ್ದೀನಿ. ಆ ಮಹಾನುಭಾವರು ರಾಮಾಯಣ ಬರೆದಿದ್ದಾರೆ. ವಾಲ್ಮೀಕಿ ಬ್ರಹ್ಮ ಬೇಡ ಬೇಟೆ ಮಾಡಿ ಊಟ ಮಾಡೋರು. ಅದನ್ನೆಲ್ಲ ಹೇಳೋಕೆ ಹೋಗಲ್ಲ. ವಾಲ್ಮೀಕಿ ರಾಮಾಯಣಕ್ಕೆ ಸಮಾನವಾದ ಮತ್ತೊಂದು ಗ್ರಂಥವಿಲ್ಲ. ಇಂದಿನ ಪ್ರಧಾನ ಮಂತ್ರಿ ಅಯೋಧ್ಯೇಯಲ್ಲಿ ಆ ಶ್ರೀರಾಮನ ಮೂರ್ತಿಯನ್ನ ನಿಲ್ಲಿಸ್ತಾರೆ. ನಾನು ರಾಜಣ್ಣರನ್ನ ಗೆಲ್ಲಿಸೋದಕ್ಕೆ ನಾನು ಜ್ವರ ಬಂದು ಮನೆಯಲ್ಲಿ ಮಲಗಿದ್ದೆ. ಕೊನೆಯ 10 ನಿಮಿಷ ಅಲ್ಲಿ ಹೋಗಿ ಮಾತನಾಡಿ ಬಂದಿದ್ದೆ. ನನ್ನ ಮನೆಗೇ ಬಂದು ಊಟ ಮಾಡಿದ್ರೆ ನಾನ್ ಗೆಲ್ಲಿಸ್ತಾ ಇದ್ದೆ ಎಂದರು.

ಆಯ್ತು ನನಗೆ ಗೊತ್ತಾಗಲಿಲ್ಲ. ಆದ್ರೆ ಒಂದು ಮಾತನ್ನ ಹೇಳ್ತಿನಿ, ವಾಲ್ಮೀಕಿ ಸಮಾಜಕ್ಕೆ, ಪವಿತ್ರವಾದ, ಶ್ರೇಷ್ಠವಾದ ಸಮಾಜ. ಆ ಮಹಾನುಭಾವರ ಸಮುದಾಯಕ್ಕೆ ಸೇರಿದವರು ನೀವು. ವಾಲ್ಮೀಕಿ ಸಮಾಜಕ್ಕೆ ಕೈ ಮುಗಿದು ಕೇಳ್ತೀನಿ ರಾಜಣ್ಣ ಮಾತನ್ನ ಕೇಳ್ಬೇಡಿ ಇದೊಂದು ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯಾದ ಸೋಮಣ್ಣನವರಿಗೇ ಬೆಂಬಲ ನೀಡಿ. ನಾನು ಕೈಮುಗಿದು ನಿಮ್ಮಲ್ಲಿ ಕೇಳ್ತೀನಿ. ನಮ್ಮ ಅಭ್ಯರ್ಥಿಯಾದ ಸೋಮಣ್ಣರನ್ನ ಗೆಲ್ಲಿಸಿ. ಕಾಂಗ್ರೆಸ್ ನಲ್ಲಿ ನಿಲ್ಲೋದಕ್ಕೆ ಅಭ್ಯರ್ಥಿಗಳಿಲ್ಲ, ಯಾರು ನಿಲ್ಲೋಕ್ಕೆ ತಯಾರಿಲ್ಲ ಎಂದರು.

ಅವತ್ತು ನನ್ನನ್ನ ಸೋಲಿಸೋದಕ್ಕೆ ಕಾರಣನಾದ ವ್ಯಕ್ತಿಯನ್ನ ಕಾಂಗ್ರೆಸ್ ಗೆ ಸೇರಿಸಿಕೊಂಡು ಅವನಿಗೆ ಟಿಕೆಟ್ ಕೊಟ್ಟು ನನಗೆ ಮುಖಭಂಗ ಮಾಡ್ತೀರಾ.? ಈ ಚುನಾವಣೆಯಲ್ಲಿ ನನ್ನ ವಾಲ್ಮೀಕಿ ಸಮಾಜದವರು ನನ್ನ ಕೈಬಿಡಲ್ಲ ಅನ್ನೋ ನಂಬಿಕೆಯಿದೆ. ನಿಮಗೆ ಮೀಸಲಾತಿ ಕೊಟ್ಟೆ ನಾನು, ಒಕ್ಕಲಿಗರಿಗೆ ಕೊಡಲಿಲ್ಲ. ನಾನೊಬ್ಬ ಹಳ್ಳಿಯ ರೈತನ ಮಗ. ಕಾಂಗ್ರೆಸ್ ರಾಜ್ಯದಲ್ಲಿ 3-4 ಸೀಟ್ ಗೆ ಬಂದು ನಿಂತಿದೆ ಅಂದ್ರೆ. ನಾನು ಮಲಗೋದಿಲ್ಲ, ಮೇ.2ನೇ ತಾರೀಖಿನ ವರೆಗೂ ಇಡೀ ರಾಜ್ಯದಲ್ಲಿ ಒಡಾಡುತ್ತೇನೆ ಎಂಬುದಾಗಿ ತುಮಕೂರಿನಲ್ಲಿ ಎಚ್.ಡಿ ದೇವೇಗೌಡ ಹೇಳಿದರು.

BREAKING: ಚಿತ್ರದುರ್ಗದಲ್ಲಿ ‘SSLC ಪರೀಕ್ಷೆ’ಯಲ್ಲಿ ನಕಲಿಗೆ ಅವಕಾಶ ನೀಡಿದ ‘ನಾಲ್ವರು ಶಿಕ್ಷಕ’ರು ಅಮಾನತು

BREAKING: ಏ.3ರಂದು ‘ಮಂಡ್ಯ’ದಲ್ಲೇ ಸಭೆ ಮಾಡಿ ‘ನನ್ನ ನಿರ್ಧಾರ’ ಪ್ರಕಟ – ಸುಮಲತಾ ಅಂಬರೀಶ್

ವಾಲ್ಮೀಕಿ ಸಮಾಜಕ್ಕೆ ಕೈ ಮುಗಿದು ಕೇಳ್ತೀನಿ ರಾಜಣ್ಣ ಮಾತನ್ನ ಕೇಳ್ಬೇಡಿ - HD ದೇವೇಗೌಡ ಮನವಿ I will listen to Valmiki Samaj with folded hands. don't listen to Rajanna: HD Deve Gowda
Share. Facebook Twitter LinkedIn WhatsApp Email

Related Posts

ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಬಾಲಕೃಷ್ಣ ಸರ್ಕಾರಿ ಸೇವೆಯಿಂದ ವಜಾ

09/05/2025 9:51 PM1 Min Read

BIG NEWS: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ

09/05/2025 9:28 PM1 Min Read

ಅಂಗವಿಕಲರಿಗೆ ಗುಡ್ ನ್ಯೂಸ್: ಮುಂಬಡ್ತಿಯಲ್ಲಿ ಶೇ.4ರಷ್ಟು ಮೀಸಲಾತಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ

09/05/2025 9:26 PM1 Min Read
Recent News

ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಬಾಲಕೃಷ್ಣ ಸರ್ಕಾರಿ ಸೇವೆಯಿಂದ ವಜಾ

09/05/2025 9:51 PM
DRONES, SHELLING ATTACKS ON SEVERAL CITIES IN Jammu, Punjab, Rajasthan

BREAKING: ಪಾಕಿಸ್ತಾನ ಹಾರಿಸಿದ್ದ ಎಲ್ಲಾ ಡ್ರೋನ್ ಧ್ವಂಸಗೊಳಿಸಿದ ಭಾರತೀಯ ಸೇನೆ

09/05/2025 9:50 PM

BREAKING: ಭಾರತ-ಪಾಕ್ ನಡುವೆ ಉದ್ವಿಗ್ನತೆ: ಪಿಎಸ್ಎಲ್ 2025ರ ಉಳಿದ ಪಂದ್ಯಗಳನ್ನು ಮುಂದೂಡಿಕೆ

09/05/2025 9:33 PM

BIG NEWS: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ

09/05/2025 9:28 PM
State News
KARNATAKA

ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಬಾಲಕೃಷ್ಣ ಸರ್ಕಾರಿ ಸೇವೆಯಿಂದ ವಜಾ

By kannadanewsnow0909/05/2025 9:51 PM KARNATAKA 1 Min Read

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿದಂತ ಮಗುವನ್ನು ಮತ್ತೊಬ್ಬರಿಗೆ ಮಾರಾಟ ಮಾಡಿದ ಪ್ರಕರಣದಲ್ಲಿ ಸಿಕ್ಕಿಬಿದ್ದಂತ ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ…

BIG NEWS: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ

09/05/2025 9:28 PM

ಅಂಗವಿಕಲರಿಗೆ ಗುಡ್ ನ್ಯೂಸ್: ಮುಂಬಡ್ತಿಯಲ್ಲಿ ಶೇ.4ರಷ್ಟು ಮೀಸಲಾತಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ

09/05/2025 9:26 PM

ಮಂಡ್ಯದಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿ ಜಾವೀದ್ ಬಂಧನ

09/05/2025 9:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.