ಮೈಸೂರು : ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ. ನನ್ನಂತೆ ಯತಿಂದ್ರನನ್ನು ಬೆಳೆಸಿ ಎಂದು ಮೈಸೂರು ಜಿಲ್ಲೆಯ ವರುಣ ಕ್ಷೇತ್ರ ವ್ಯಾಪ್ತಿಯ ವರಕೋಡು ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ. ಜನರ ಸೇವೆಯನ್ನು ಮಾಡುತ್ತೇನೆ. ನನ್ನ ರಾಜಕೀಯದಲ್ಲಿ ಹಲವಾರು ಬಾರಿ ಸೋಲು ಗೆಲುವು ಕಂಡಿದ್ದೇನೆ. ಚುನಾವಣೆಯಲ್ಲಿ ಸೋತಾಗಲು, ನಾನು ಜನಸೇವೆ ಬಿಟ್ಟಿಲ್ಲ. ಹಾಗಾಗಿ ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನು ರಾಜಕೀಯವಾಗಿ ಬೆಳೆಸಿ ಎಂದು ವರಕೊಡು ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.








