ಧಾರವಾಡ: ಬಿಜೆಪಿಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕೋರ್ಟ್ ನೀಡಿರುವಂತ ಆದೇಶಕ್ಕೆ ತಲೆಬಾಗುತ್ತೇನೆ. ಕೋರ್ಟ್ ಆದೇಶದ ಕಾರಣದಿಂದ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಮುಂದೆ ಶರಣಾಗುವುದಾಗಿ ಮಾಜಿ ಸಚಿವ ವಿನಯ್ ಕುಲಕರ್ಣಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನನ್ನ ವಿರುದ್ಧ ಹುನ್ನಾರ ನಡೆದಿದೆ. ನಾನು ಈಗ ಅಸಹಾಯಕ ಸ್ಥಿತಿಯಲ್ಲಿ ಇದ್ದೇನೆ. ಆದರೇ ಸತ್ಯಕ್ಕೆ ಎಂದಿಗೂ ಜಯವಿದೆ. ಸತ್ಯಕ್ಕೆ ಜಯ ಸಿಗುತ್ತದೆ ಎನ್ನುವ ನಂಬಿಕೆ ನನಗಿದೆ ಎಂದರು.
ನನ್ನ ಕ್ಷೇತ್ರದಲ್ಲಿ ನಾನು ಇಲ್ಲದೇ ಇದ್ದರೂ ನನ್ನ ಪತ್ನಿ, ಪಕ್ಷದ ಮುಖಂಡರು ಜನರ ಸಂಕಷ್ಟಗಳಿಗೆ ಸ್ಪಂದಿಸುವಂತ ಕೆಲಸ ಮಾಡುತ್ತಿದ್ದಾರೆ. ನಾನು ಕ್ಷೇತ್ರದ ಜನರ ಸಂಕಷ್ಟ ಪರಿಹಾರಕ್ಕಾಗಿ ಅಧಿಕಾರಿಗಳ ಸಭೆ ನಡೆಸಿದ್ದೇನೆ. ಅಭಿವೃದ್ಧಿ ಕಾರ್ಯಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸೂಚಿಸಿರುವುದಾಗಿ ಹೇಳಿದರು.
ಅಂದಹಾಗೇ ಶಾಸಕ ವಿನಯ್ ಕುಲಕರ್ಣಿಗೆ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ನೀಡಿದ್ದಂತ ಜಾಮೀನನ್ನು ಸುಪ್ರೀಂ ಕೋರ್ಟ್ ಜೂನ್.6ರಂದು ರದ್ದುಪಡಿಸಲಾಗಿತ್ತು. ಅಲ್ಲದೇ ಒಂದು ವಾರದಲ್ಲಿ ವಿಚಾರಣಾ ಕೋರ್ಟ್ ಮುಂದೆ ಶರಣಾಗುವಂತೆಯೂ ಆದೇಶ ಮಾಡಿತ್ತು. ಹೀಗಾಗಿ ಶಾಸಕ ವಿನಯ್ ಕುಲಕರ್ಣಿ ಕೋರ್ಟ್ ಆದೇಶಕ್ಕೆ ತಲೆಬಾಗಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಗೆ ಶರಣಾಗುವುದಾಗಿ ತಿಳಿಸಿದ್ದಾರೆ.
ಪತಿ ರಾಜಾ ರಘುವಂಶಿ ಹತ್ಯೆಯಲ್ಲಿ ಭಾಗಿಯಾಗಿರುವುದಾಗಿ ಸೋನಂ ಒಪ್ಪಿಕೊಂಡಿದ್ದಾರೆ: ಮೂಲಗಳು
ಕೋವಿಡ್-19 ಉಲ್ಬಣ: ಪ್ರಧಾನಿ ಮೋದಿ ಭೇಟಿ ಮಾಡುವ ಮೊದಲು ಸಚಿವರಿಗೆ RT-PCR ಪರೀಕ್ಷೆ ಕಡ್ಡಾಯ: