Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೀವು ಯಾವಾಗ ನಡೆಯಬೇಕು.? ಊಟಕ್ಕೆ ಮೊದ್ಲಾ ಅಥವಾ ನಂತರವೇ.? ತಜ್ಞರು ಹೇಳುವುದೇನು ಗೊತ್ತಾ?

12/07/2025 10:07 PM

ಅಮಂಡಾ ಅನಿಸಿಮೋವಾ ಅವರನ್ನು ಸೋಲಿಸಿ ಇಗಾ ಸ್ವಿಯಾಟೆಕ್ ವಿಂಬಲ್ಡನ್ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿ ಗೆಲುವು

12/07/2025 10:04 PM

ಸೆ.1ರಿಂದ ಅ.1ರವರೆಗೆ ರಾಜ್ಯಾದ್ಯಂತ `ಬಸವ ಸಂಸ್ಕೃತಿ ಅಭಿಯಾನ’: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ

12/07/2025 9:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದಲ್ಲಿ ‘ಆದಾಯ ಸಂಗ್ರಹಣೆ’ಗಾಗಿ ಅಧಿಕಾರಿಗಳಿಗೆ ಈ ಸೂಚನೆ ಕೊಟ್ಟ ‘ಸಿಎಂ ಸಿದ್ಧರಾಮಯ್ಯ’
KARNATAKA

BIG NEWS: ರಾಜ್ಯದಲ್ಲಿ ‘ಆದಾಯ ಸಂಗ್ರಹಣೆ’ಗಾಗಿ ಅಧಿಕಾರಿಗಳಿಗೆ ಈ ಸೂಚನೆ ಕೊಟ್ಟ ‘ಸಿಎಂ ಸಿದ್ಧರಾಮಯ್ಯ’

By kannadanewsnow0903/12/2024 6:26 PM

ಬೆಂಗಳೂರು: ರಾಜ್ಯದಲ್ಲಿ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಎಲ್ಲಾ ಆಸ್ತಿಗಳನ್ನು ಗುರುತಿಸಿ ತೆರಿಗೆ ವ್ಯಾಪ್ತಿಗೆ ತರಲು ಕ್ರಮ ಕೈಗೊಳ್ಳಬೇಕು ಎಂಬುದಾಗಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಮುದ್ರಾಂಕ ಮತ್ತು ನೋಂದಣಿ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದರು. ಆ ಸಭೆಯ ಪ್ರಮುಖ ಹೈಲೈಟ್ಸ್ ಈ ಕೆಳಗಿನಂತಿದೆ.

ವಾಣಿಜ್ಯ ತೆರಿಗೆ ಇಲಾಖೆ

• 2024 ನವೆಂಬರ್‌ ಅಂತ್ಯದವರೆಗಿನ ಒಟ್ಟು ವಾಣಿಜ್ಯ ತೆರಿಗೆ ಸಂಗ್ರಹಣೆ ಗುರಿ 56,317 ಕೋಟಿ ರೂ.ಇದ್ದು ಇದುವರೆಗೆ ರೂ.53,103 ಕೋಟಿ ತೆರಿಗೆ ಸಂಗ್ರಹ ಮಾಡಲಾಗಿದ್ದು, ಶೇ.94 ರಷ್ಟು ಸಾಧನೆ ಮಾಡಲಾಗಿದೆ.
• 2024-25 ಹಣಕಾಸು ಸಾಲಿನ ಒಟ್ಟು ವಾಣಿಜ್ಯ ತೆರಿಗೆ ಸಂಗ್ರಹ ಗುರಿ ರೂ. 84475 ಕೋಟಿ ಇದೆ.
• ಮಲೆನಾಡು ಮತ್ತು ಮೈಸೂರು ವಿಭಾಗದಲ್ಲಿ ತೆರಿಗೆ ಸಂಗ್ರಹ ನಿಗದಿತ ಗುರಿಗಿಂತ ಕಡಿಮೆಯಿದೆ. ಎಲ್ಲಾ ವಿಭಾಗಗಳು ಮುಂದಿನ ನಾಲ್ಕು ತಿಂಗಳಲ್ಲಿ ಗುರಿಯನ್ನು ಕಡ್ಡಾಯವಾಗಿ ಸಾಧಿಸಬೇಕು.
• 2023-24 ರ ಒಟ್ಟು ತೆರಿಗೆ ಸಂಗ್ರಹಣೆ 70,575 ಕೋಟಿ ರೂ. ಇತ್ತು.
• ವಿಜಿಲೆನ್ಸ್‌ ಹೆಚ್ಚಿಸಿ, ತೆರಿಗೆ ಸೋರಿಕೆಯನ್ನು ಪತ್ತೆ ಹಚ್ಚಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಬೇಕು. ಬೆಂಗಳೂರು ವಿಭಾಗದಲ್ಲಿ ಹೆಚ್ಚಿನ ನಿಗಾ ವಹಿಸಬೇಕು.
• ವಿಶೇಷ ಅಭಿಯಾನ ಕೈಗೊಂಡು ಮುಂದಿನ ನಾಲ್ಕು ತಿಂಗಳ ಅವಧಿಯಲ್ಲಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಿ ಶೇ.100ರಷ್ಟು ಬಜೆಟ್‌ ಗುರಿಯನ್ನು ಸಾಧಿಸಬೇಕು.
• ಜಿಎಸ್‌ಟಿ ಸಂಗ್ರಹವನ್ನು ಹೆಚ್ಚಿಸಬೇಕು. ಲೆಕ್ಕಪರಿಶೋಧನೆ ಮತ್ತು ನ್ಯಾಯನಿರ್ಣಯದಿಂದ ಪ್ರಸ್ತುತ ಹಣಕಾಸು ಸಾಲಿನಲ್ಲಿ ರೂ.4671 ಕೋಟಿ ತೆರಿಗೆ ಸಂಗ್ರಹ ಗುರಿಯಿದ್ದು, ನವೆಂಬರ್‌ ಅಂತ್ಯದವರೆಗೆ ರೂ.3,076.86 ಕೋಟಿ ತೆರಿಗೆ ಸಂಗ್ರಹಿಸಲಾಗಿದೆ.
• ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯಡಿಯಲ್ಲಿ ಸ್ವೀಕರಿಸಿದ ಮನವಿಗಳನ್ನು ವಿಲೇವಾರಿ ಮಾಡಿ ತೆರಿಗೆ ಸಂಗ್ರಹ ಕೈಗೊಳ್ಳಬೇಕು.
• ರಾಜ್ಯ ಜಿಎಸ್‌ಟಿ ಸಂಗ್ರಹದಲ್ಲಿ ಶೇಕಡಾ 15ರ ಬೆಳವಣಿಗೆ ದರ ಸಾಧಿಸಿದೆ. ರಾಜ್ಯದಲ್ಲಿ ನವೆಂಬರ್‌ ಅಂತ್ಯದವರೆಗೆ ರೂ.13,722 ಕೋಟಿ ಜಿಎಸ್‌ಟಿ ಸಂಗ್ರಹಿಸಲಾಗಿದ್ದು, ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ.

ಅಬಕಾರಿ ಇಲಾಖೆ

• 2024-25 ನೇ ಸಾಲಿನಲ್ಲಿ ರೂ. 38,525 ಕೋಟಿ ಅಬಕಾರಿ ರಾಜಸ್ವ ಸಂಗ್ರಹ ಗುರಿಯಿದ್ದು, ನವೆಂಬರ್‌ ಅಂತ್ಯದವರೆಗೆ ರೂ.23,600 ಕೋಟಿ ಸಂಗ್ರಹಿಸಲಾಗಿದ್ದು, ಶೇ.61.26 ಗುರಿ ಸಾಧಿಸಲಾಗಿದೆ.
• ಕಳೆದ ವರ್ಷಕ್ಕೆ ಹೋಲಿಸಿದರೆ ಈ ಅವಧಿಯಲ್ಲಿ ರೂ.1432.23 ಕೋಟಿ ರಾಜಸ್ವ ಸಂಗ್ರಹದಲ್ಲಿ ಹೆಚ್ಚಳವಾಗಿದ್ದು, ಶೇ.6.46 ಬೆಳವಣಿಗೆ ದರ ಸಾಧಿಸಲಾಗಿದೆ.
• ರಾಜ್ಯದಲ್ಲಿ 2023-24ರಲ್ಲಿ ರೂ. 34,628 ಕೋಟಿ ಅಬಕಾರಿ ರಾಜಸ್ವ ಸಂಗ್ರಹಿಸಲಾಗಿತ್ತು.
• ರಾಜಸ್ವ ಸಂಗ್ರಹ ಹೆಚ್ಚಿಸಲು ಜಾಗೃತ ದಳ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು.
• ಅಬಕಾರಿ ಇಲಾಖೆಯಲ್ಲಿ ಖಾಲಿಯಿರುವ ಗ್ರೂಪ್‌ ಸಿ ಹುದ್ದೆಗಳನ್ನು ತುಂಬಲು ಕ್ರಮ.

ನೋಂದಣಿ ಮತ್ತು ಮುದ್ರಾಂಕ ಇಲಾಖೆ

• 2024-25 ನೇ ಸಾಲಿನಲ್ಲಿ ರೂ.26 ಸಾವಿರ ಕೋಟಿ ಗುರಿ ನಿಗದಿಪಡಿಸಿದ್ದು, ನವೆಂಬರ್‌ ಕೊನೆಯವರೆಗೆ ರೂ.15,160.97 ಕೋಟಿ ರಾಜಸ್ವ ಸಂಗ್ರಹಿಸಲಾಗಿದ್ದು, ಶೇ.58ರಷ್ಟು ಪ್ರಗತಿ ಸಾಧಿಸಲಾಗಿದೆ.
• ರಾಜಸ್ವ ಸೋರಿಕೆಯನ್ನು ತಡೆಗಟ್ಟಿ, ರಾಜಸ್ವ ಸಂಗ್ರಹವನ್ನು ಹೆಚ್ಚಿಸಬೇಕು. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.21ರಷ್ಟು ಬೆಳವಣಿಗೆ ದರ ಸಾಧಿಸಲಾಗಿದೆ.
• ಕಾನೂನು ಬಾಹಿರ ನೋಂದಣಿಗಳಿಗೆ ಕಡಿವಾಣ ಹಾಕಿ, ರಾಜಸ್ವ ಸಂಗ್ರಹವನ್ನು ವ್ಯವಸ್ಥಿತಗೊಳಿಸಬೇಕು.
• ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಎಲ್ಲಾ ಆಸ್ತಿಗಳನ್ನು ಗುರುತಿಸಿ ತೆರಿಗೆ ವ್ಯಾಪ್ತಿಗೆ ತರಲು ಕ್ರಮ ಕೈಗೊಳ್ಳಬೇಕು.
• ಇ-ಖಾತಾ ನೀಡುವ ಪ್ರಕ್ರಿಯೆಯಲ್ಲಿನ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುವುದು

ಗಣಿ ಮತ್ತು ಭೂವಿಜ್ಞಾನ ಇಲಾಖೆ

• ಕಳೆದ ವರ್ಷಕ್ಕಿಂತ ಶೇ.10ರಷ್ಟು ಹೆಚ್ಚಿನ ಬೆಳವಣಿಗೆ ದರ ಸಾಧಿಸಲಾಗಿದೆ.
• ಈ ವರ್ಷದ ಒಟ್ಟು ರಾಜಸ್ವ ಗುರಿ ರೂ.9ಸಾವಿರ ಕೋಟಿ ಇದ್ದು, ನವೆಂಬರ್‌ ಅಂತ್ಯದವರೆಗೆ ರೂ.4862 ಕೋಟಿ ರಾಜಸ್ವ ಸಂಗ್ರಹಿಸಲಾಗಿದೆ.
• ಖನಿಜ ಹಕ್ಕು ತೆರಿಗೆ ಅಧಿನಿಯಮ ಜಾರಿಗೆ ಕ್ರಮ.
• 2025-26 ನೇ ಸಾಲಿನಲ್ಲಿ ಉಪ ಖನಿಜದಿಂದ ಹೆಚ್ಚುವರಿಯಾಗಿ ರಾಜಸ್ವ ಸಂಗ್ರಹಿಸಲು ಕ್ರಮ.
• ಅರಣ್ಯ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.

ಜಲಜೀವನ್‌ ಮಿಷಿನ್‌ ಕಾಮಗಾರಿಗಳಲ್ಲಿ ಲೋಪವಾಗದಂತೆ ಎಚ್ಚರಿಕೆವಹಿಸಿ: ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

BREAKING: ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಗೆ ಬಿಗ್ ರಿಲೀಫ್: ಚುನಾವಣಾ ಬಾಂಡ್ ಕೇಸ್ ರದ್ದುಪಡಿಸಿ ಹೈಕೋರ್ಟ್ ಆದೇಶ

Share. Facebook Twitter LinkedIn WhatsApp Email

Related Posts

ಸೆ.1ರಿಂದ ಅ.1ರವರೆಗೆ ರಾಜ್ಯಾದ್ಯಂತ `ಬಸವ ಸಂಸ್ಕೃತಿ ಅಭಿಯಾನ’: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ

12/07/2025 9:55 PM2 Mins Read

BIG NEWS: ಮಹಾರಾಷ್ಟ್ರದಲ್ಲಿ ಕೂಲಿ ಸಿಗುವುದಿಲ್ಲ ಎಂಬ ಕಾರಣಕ್ಕೆ 843 ಮಹಿಳೆಯರು ಗರ್ಭಕೋಶ ತೆಗೆಸಿದ್ದಾರೆ: ಸಚಿವ ಸಂತೋಷ್ ಲಾಡ್

12/07/2025 9:10 PM1 Min Read

ನವೆಂಬರ್ ನಲ್ಲಿ ಕ್ರಾಂತಿ- ಮಹಾಕ್ರಾಂತಿ ಏನೇನು ಆಗಲಿದೆಯೋ ಕಾದುನೋಡಿ: ಬಿವೈ ವಿಜಯೇಂದ್ರ

12/07/2025 9:04 PM2 Mins Read
Recent News

ನೀವು ಯಾವಾಗ ನಡೆಯಬೇಕು.? ಊಟಕ್ಕೆ ಮೊದ್ಲಾ ಅಥವಾ ನಂತರವೇ.? ತಜ್ಞರು ಹೇಳುವುದೇನು ಗೊತ್ತಾ?

12/07/2025 10:07 PM

ಅಮಂಡಾ ಅನಿಸಿಮೋವಾ ಅವರನ್ನು ಸೋಲಿಸಿ ಇಗಾ ಸ್ವಿಯಾಟೆಕ್ ವಿಂಬಲ್ಡನ್ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿ ಗೆಲುವು

12/07/2025 10:04 PM

ಸೆ.1ರಿಂದ ಅ.1ರವರೆಗೆ ರಾಜ್ಯಾದ್ಯಂತ `ಬಸವ ಸಂಸ್ಕೃತಿ ಅಭಿಯಾನ’: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ

12/07/2025 9:55 PM

ನೀವು ಈ ಲಕ್ಷಣಗಳನ್ನ ಅನುಭವಿಸುತ್ತಿದ್ದೀರಾ.? ಇವು ‘ಬ್ರೈನ್ ಸ್ಟ್ರೋಕ್’ನ ಚಿಹ್ನೆಗಳು.. ಹುಷಾರಾಗಿರಿ!

12/07/2025 9:42 PM
State News
KARNATAKA

ಸೆ.1ರಿಂದ ಅ.1ರವರೆಗೆ ರಾಜ್ಯಾದ್ಯಂತ `ಬಸವ ಸಂಸ್ಕೃತಿ ಅಭಿಯಾನ’: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ

By kannadanewsnow0912/07/2025 9:55 PM KARNATAKA 2 Mins Read

ಬೆಂಗಳೂರು: ರಾಜ್ಯ ಸರಕಾರವು ಬಸವಣ್ಣನನ್ನು `ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಲಿಂಗಾಯತ ಮಠಾಧಿಪತಿಗಳ…

BIG NEWS: ಮಹಾರಾಷ್ಟ್ರದಲ್ಲಿ ಕೂಲಿ ಸಿಗುವುದಿಲ್ಲ ಎಂಬ ಕಾರಣಕ್ಕೆ 843 ಮಹಿಳೆಯರು ಗರ್ಭಕೋಶ ತೆಗೆಸಿದ್ದಾರೆ: ಸಚಿವ ಸಂತೋಷ್ ಲಾಡ್

12/07/2025 9:10 PM

ನವೆಂಬರ್ ನಲ್ಲಿ ಕ್ರಾಂತಿ- ಮಹಾಕ್ರಾಂತಿ ಏನೇನು ಆಗಲಿದೆಯೋ ಕಾದುನೋಡಿ: ಬಿವೈ ವಿಜಯೇಂದ್ರ

12/07/2025 9:04 PM

BREAKING: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಚಾಕೊಲೇಟ್ ಆಸೆ ತೋರಿಸಿ ಬಾಲಕಿ ಮೇಲೆ ಕಾಮುಕ ಅತ್ಯಾಚಾರ

12/07/2025 8:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.