Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನಾನು, ಸಿಎಂ ಸಿದ್ದರಾಮಯ್ಯ ಒಟ್ಟಿಗೆ ಸಹೋದರರಂತೆ ಕೆಲಸ ಮಾಡುತ್ತಿದ್ದೇವೆ : ಡಿಸಿಎಂ ಡಿಕೆ ಶಿವಕುಮಾರ್

21/12/2025 4:45 PM

ಇಷ್ಟು ದಿನ ತಾಳ್ಮೆಯಿಂದ ಇದ್ದಿದ್ದು ಸಾಕು, ಕೆಣಕಿದ್ರೆ ಅವರದ್ದೇ ಭಾಷೆಯಲ್ಲಿ ಉತ್ತರ ಕೊಡಿ ಎಂದ ನಟ ಕಿಚ್ಚ ಸುದೀಪ್

21/12/2025 4:39 PM

GOOD NEWS: ನಾಳೆಯಿಂದ ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣ ಸಂದಾಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

21/12/2025 4:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ನಿಜವಾಗಲೂ 1,600 ಕೋಟಿ ಕಾಮಗಾರಿ ನಡೆದಿದ್ದರೇ ಈ ಸ್ಥಿತಿ ಬರುತ್ತಿರಲ್ಲಿ: ಆರ್.ಅಶೋಕ್
KARNATAKA

ಬೆಂಗಳೂರಲ್ಲಿ ನಿಜವಾಗಲೂ 1,600 ಕೋಟಿ ಕಾಮಗಾರಿ ನಡೆದಿದ್ದರೇ ಈ ಸ್ಥಿತಿ ಬರುತ್ತಿರಲ್ಲಿ: ಆರ್.ಅಶೋಕ್

By kannadanewsnow0920/05/2025 4:37 PM

ಬೆಂಗಳೂರು: ಬಿಜೆಪಿ ಅವಧಿಯಲ್ಲಿ 1,600 ಕೋಟಿ ರೂ. ಹಣವನ್ನು ಬೆಂಗಳೂರಿನ ಅಭಿವೃದ್ಧಿಗೆ ನೀಡಿದ್ದು, ಆ ಕಾಮಗಾರಿಗಳನ್ನು ಕಾಂಗ್ರೆಸ್‌ ಸರ್ಕಾರ ರದ್ದು ಮಾಡಿದೆ. ಆ ಕಾಮಗಾರಿಗಳು ನಡೆದಿದ್ದರೆ ಇಂತಹ ಪ್ರವಾಹದ ಸ್ಥಿತಿ ಬರುತ್ತಿರಲಿಲ್ಲ. ಬೆಂಗಳೂರಿಗೆ ಕಳೆದ 2 ವರ್ಷಗಳಲ್ಲಿ ಏನು ಮಾಡಿದ್ದೀರಿ ಎಂದು ತಿಳಿಸಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಸಿಲ್ಕ್‌ ಬೋರ್ಡ್‌ ಜಂಕ್ಷನ್‌ನಲ್ಲಿ ಪ್ರವಾಹ ಪರಿಶೀಲನೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಇಡೀ ಬೆಂಗಳೂರು ಮಳೆಯಿಂದಾಗಿ ಮುಳುಗುತ್ತಿದ್ದು, ಜನರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ಐದು ಜನರು ಸತ್ತಿದ್ದಾರೆ. ಇಂಥವರ ಸಾವಿನ ಮೇಲೆ ಕಾಂಗ್ರೆಸ್‌ ಸಾಧನೆಯ ಸಮಾವೇಶ ಮಾಡುತ್ತಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸಮಾವೇಶವನ್ನು ರದ್ದು ಮಾಡಬೇಕಿತ್ತು. ಕಾಂಗ್ರೆಸ್‌ನ ತಪ್ಪಿನಿಂದಲೇ ಜನರು ಸತ್ತಿದ್ದಾರೆ. ಇಂತಹ ಸಮಾವೇಶ ಮಾಡುವ ನೈತಿಕ ಅರ್ಹತೆ ಸರ್ಕಾರಕ್ಕೆ ಇಲ್ಲ ಎಂದು ಟೀಕಿಸಿದರು.

ಬೆಂಗಳೂರಿನ ಸಾಯಿ ಬಡಾವಣೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ ನೀಡಿ, ಅಭಿವೃದ್ಧಿ ಮಾಡುತ್ತೇನೆಂದು ಹೇಳಿದ್ದರು. ಸಿಲ್ಕ್‌ ಬೋರ್ಡ್‌ ಬಳಿ ಕಳೆದ ಸಲವೂ ಪ್ರವಾಹವಾಗಿತ್ತು. ಇಷ್ಟಾದರೂ ಅಭಿವೃದ್ಧಿಗೆ ನಯಾಪೈಸೆ ಬಿಡುಗಡೆಯಾಗಿಲ್ಲ. ಬಿಜೆಪಿ ಅವಧಿಯಲ್ಲಿ ರಾಜಕಾಲುವೆ, ರಸ್ತೆ ಅಭಿವೃದ್ಧಿಗೆ 1,600 ಕೋಟಿ ರೂ. ನೀಡಲಾಗಿತ್ತು. ಅದನ್ನು ಕಾಂಗ್ರೆಸ್‌ ರದ್ದು ಮಾಡಿದೆ. ಆ ಅಭಿವೃದ್ಧಿ ಕಾರ್ಯ ನಡೆದಿದ್ದರೆ, ಈ ರೀತಿ ಪ್ರವಾಹ ಆಗುತ್ತಿರಲಿಲ್ಲ. ಬೆಂಗಳೂರಿಗೆ ಪ್ರಗತಿಗೆ ಹಣ ನೀಡದೆ ಲೂಟಿ ಮಾಡಲು ಆ ಹಣವನ್ನು ಬಳಸಲಾಗಿದೆ. ಎಲ್ಲ ಹಣವನ್ನು ಸುರಂಗ ಮಾರ್ಗ ಯೋಜನೆಗೆ ಮೀಸಲಿಟ್ಟಿದ್ದಾರೆ. ಈಗ ಎಲ್ಲ ರಸ್ತೆಗಳಲ್ಲಿ ಸುರಂಗ ಆಗಿದೆ ಎಂದು ದೂರಿದರು.

ಪ್ರವಾಹದ ಸ್ಥಳಗಳಲ್ಲಿ ಸೆನ್ಸರ್‌ ಅಳವಡಿಸಲಾಗುವುದು ಎಂದು ಸರ್ಕಾರ ಹೇಳಿತ್ತು. ಆದರೆ ಯಾವ ಕೆಲಸವೂ ಆಗಿಲ್ಲ. ಏಪ್ರಿಲ್‌ 15 ರಂದೇ ಹವಾಮಾನ ಇಲಾಖೆ ಮಳೆ ಜೋರಾಗಲಿದೆ ಎಂದು ಸೂಚನೆ ನೀಡಿತ್ತು. ಒಂದು ತಿಂಗಳ ಸಮಯದಲ್ಲಿ ಬಿಬಿಎಂಪಿಯಿಂದ ಮುಂಜಾಗ್ರತಾ ಸಭೆ ನಡೆಸಿಲ್ಲ. ಸಮಾವೇಶಕ್ಕೆ ಮಾತ್ರ ತರಾತುರಿಯಲ್ಲಿ ಸಿದ್ಧತೆ ಮಾಡಿಕೊಂಡರು. 14 ಸಾವಿರ ಗುಂಡಿ ಮುಚ್ಚಿದ್ದೇವೆ ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ. ಈಗ ಕಾಂಗ್ರೆಸ್‌ ಪಕ್ಷವನ್ನು ಮುಚ್ಚಿಹಾಕಲು ಜನರೇ ಗುಂಡಿ ತೆಗೆಯುತ್ತಿದ್ದಾರೆ ಎಂದರು.

ಯುದ್ಧಕ್ಕೆ ಸಾಕ್ಷಿ ಕೇಳುವ ಇವರು, ಜನರು ಸಾಯುತ್ತಿರುವುದನ್ನು ಬಂದು ನೋಡಲಿ. ಇದಕ್ಕೆ ಯಾವುದೇ ಸಾಕ್ಷಿ ಬೇಕಿಲ್ಲ. ಬಿಜೆಪಿ ಅವಧಿಯಲ್ಲಿ ಪ್ರತಿ ವರ್ಷ ಏಳೆಂಟು ಸಾವಿರ ಕೋಟಿ ರೂ. ನೀಡಲಾಗುತ್ತಿತ್ತು. ಕಾಂಗ್ರೆಸ್‌ ಸರ್ಕಾರ ಬೆಂಗಳೂರಿಗೆ ನೀಡಿರುವ ಹಣವೆಲ್ಲವನ್ನೂ ಸುರಂಗ ನಿರ್ಮಿಸಲು ಬಳಸಲಾಗುತ್ತಿದೆ. ಬೆಂಗಳೂರು ಮುಳುಗುತ್ತಿರುವ ಬಗ್ಗೆ ಸರ್ಕಾರಕ್ಕೆ ಯಾವುದೇ ಕಾಳಜಿ ಇಲ್ಲ. ಗ್ರೇಟರ್‌ ಬೆಂಗಳೂರು ಹೋಗಿ ವಾಟರ್‌ ಬೆಂಗಳೂರು ಆಗಿದೆ. ಮನೆ ಬಾಗಿಲಿಗೆ ಅವಾಂತರ, ಸಾವುಗಳನ್ನು ಸರ್ಕಾರ ತರುತ್ತಿದೆ ಎಂದು ದೂರಿದರು.

ಮೋದಿ ಸರ್ಕಾರ ಭದ್ರತೆ ನೀಡದ ಕಾರಣಕ್ಕೆ ಪೆಹಲ್ಗಾಮ್ ನಲ್ಲಿ 26 ಅಮಾಯಕ ಹತ್ಯೆ: ಮಲ್ಲಿಕಾರ್ಜುನ ಖರ್ಗೆ

ನಾಳೆ ಮದ್ದೂರಿನಲ್ಲಿ ತಿರಂಗಾ ಯಾತ್ರೆ: ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ

Share. Facebook Twitter LinkedIn WhatsApp Email

Related Posts

BREAKING : ನಾನು, ಸಿಎಂ ಸಿದ್ದರಾಮಯ್ಯ ಒಟ್ಟಿಗೆ ಸಹೋದರರಂತೆ ಕೆಲಸ ಮಾಡುತ್ತಿದ್ದೇವೆ : ಡಿಸಿಎಂ ಡಿಕೆ ಶಿವಕುಮಾರ್

21/12/2025 4:45 PM1 Min Read

ಇಷ್ಟು ದಿನ ತಾಳ್ಮೆಯಿಂದ ಇದ್ದಿದ್ದು ಸಾಕು, ಕೆಣಕಿದ್ರೆ ಅವರದ್ದೇ ಭಾಷೆಯಲ್ಲಿ ಉತ್ತರ ಕೊಡಿ ಎಂದ ನಟ ಕಿಚ್ಚ ಸುದೀಪ್

21/12/2025 4:39 PM1 Min Read

GOOD NEWS: ನಾಳೆಯಿಂದ ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣ ಸಂದಾಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

21/12/2025 4:28 PM2 Mins Read
Recent News

BREAKING : ನಾನು, ಸಿಎಂ ಸಿದ್ದರಾಮಯ್ಯ ಒಟ್ಟಿಗೆ ಸಹೋದರರಂತೆ ಕೆಲಸ ಮಾಡುತ್ತಿದ್ದೇವೆ : ಡಿಸಿಎಂ ಡಿಕೆ ಶಿವಕುಮಾರ್

21/12/2025 4:45 PM

ಇಷ್ಟು ದಿನ ತಾಳ್ಮೆಯಿಂದ ಇದ್ದಿದ್ದು ಸಾಕು, ಕೆಣಕಿದ್ರೆ ಅವರದ್ದೇ ಭಾಷೆಯಲ್ಲಿ ಉತ್ತರ ಕೊಡಿ ಎಂದ ನಟ ಕಿಚ್ಚ ಸುದೀಪ್

21/12/2025 4:39 PM

GOOD NEWS: ನಾಳೆಯಿಂದ ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣ ಸಂದಾಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

21/12/2025 4:28 PM

ರಾಜಣ್ಣ ನನಗೂ ಆಪ್ತರು, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದೇ ನಾನು: ಡಿಸಿಎಂ ಡಿ.ಕೆ ಶಿವಕುಮಾರ್

21/12/2025 4:26 PM
State News
KARNATAKA

BREAKING : ನಾನು, ಸಿಎಂ ಸಿದ್ದರಾಮಯ್ಯ ಒಟ್ಟಿಗೆ ಸಹೋದರರಂತೆ ಕೆಲಸ ಮಾಡುತ್ತಿದ್ದೇವೆ : ಡಿಸಿಎಂ ಡಿಕೆ ಶಿವಕುಮಾರ್

By kannadanewsnow0521/12/2025 4:45 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಸಿಎಂ ಸ್ಥಾನದ ಕುರಿತು ಈಗಾಗಲೇ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ತೀವ್ರ ಜಟಾಪಟಿ…

ಇಷ್ಟು ದಿನ ತಾಳ್ಮೆಯಿಂದ ಇದ್ದಿದ್ದು ಸಾಕು, ಕೆಣಕಿದ್ರೆ ಅವರದ್ದೇ ಭಾಷೆಯಲ್ಲಿ ಉತ್ತರ ಕೊಡಿ ಎಂದ ನಟ ಕಿಚ್ಚ ಸುದೀಪ್

21/12/2025 4:39 PM

GOOD NEWS: ನಾಳೆಯಿಂದ ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣ ಸಂದಾಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

21/12/2025 4:28 PM

ರಾಜಣ್ಣ ನನಗೂ ಆಪ್ತರು, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದೇ ನಾನು: ಡಿಸಿಎಂ ಡಿ.ಕೆ ಶಿವಕುಮಾರ್

21/12/2025 4:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.