Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ಮತಾಂತರ, ಮದುವೆಗೆ ನಿರಾಕರಿಸಿದ್ದಕ್ಕೆ ಮಹಿಳೆಯನ್ನು ಕತ್ತು ಸೀಳಿ ಕೊಲೆ ಮಾಡಿದ ವ್ಯಕ್ತಿ

05/08/2025 6:42 AM

ಬಿಹಾರ ಮತದಾರರ ಪಟ್ಟಿ ಕುರಿತು ಸಂಸತ್ತಿನಲ್ಲಿ ಕೋಲಾಹಲ: ರಾಷ್ಟ್ರಪತಿ ಭೇಟಿಯಾದ ಮೋದಿ, ಶಾ

05/08/2025 6:36 AM

BREAKING : ಸಾರಿಗೆ ನೌಕರರ ಮುಷ್ಕರ ಆರಂಭ : ಬೆಂಗಳೂರು, ಸೇರಿದಂತೆ ರಾಜ್ಯಾದ್ಯಂತ ಪ್ರಯಾಣಿಕರ ಪರದಾಟ!

05/08/2025 6:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ನರ್ಸಿಂಗ್ ಕಾಲೇಜು’ ಕಟ್ಟಡದಲ್ಲಿ ‘ಮತ್ತೊಂದು ಕೋರ್ಸ್’ ನಡೆಸುತ್ತಿದ್ದರೇ ‘ಮಾನ್ಯತೆ ರದ್ದು’
KARNATAKA

BIG NEWS: ‘ನರ್ಸಿಂಗ್ ಕಾಲೇಜು’ ಕಟ್ಟಡದಲ್ಲಿ ‘ಮತ್ತೊಂದು ಕೋರ್ಸ್’ ನಡೆಸುತ್ತಿದ್ದರೇ ‘ಮಾನ್ಯತೆ ರದ್ದು’

By kannadanewsnow0903/09/2024 8:34 PM

ಬೆಂಗಳೂರು: ನರ್ಸಿಂಗ್‌ ಕಾಲೇಜುಗಳನ್ನು ನಡೆಸಲು ಅನುಮತಿ ಪಡೆದಿರುವ ಕಟ್ಟಡಗಳಲ್ಲಿ ನರ್ಸಿಂಗ್‌ ಕೋರ್ಸುಗಳನ್ನು ಮಾತ್ರ ನಡೆಸಬೇಕು. ಬೇರೆ ಯಾವುದೇ ಕೋರ್ಸುಗಳನ್ನು ನಡೆಸುತ್ತಿದ್ದರೆ ಅಂತಹ ಕಾಲೇಜುಗಳ ಅನುಮತಿಯನ್ನು ಹಿಂಪಡೆಯಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದ ನರ್ಸಿಂಗ್‌ ಕಾಲೇಜುಗಳಲ್ಲಿ ಅಧಿಕ ಶುಲ್ಕ ವಸೂಲು ಮಾಡುತ್ತಿರುವ ಬಗ್ಗೆ ನಮ್ಮ ಕಚೇರಿಗೆ ಹಲವಾರು ದೂರುಗಳು ಸಲ್ಲಿಕೆಯಾಗಿವೆ. ಇದರಿಂದ ವಿದ್ಯಾರ್ಥಿಗಳ ಹಣಕಾಸಿನ ಹೊರೆಯನ್ನು ಹೊರಬೇಕಾಗಿದೆ. ಇದನ್ನ ತಪ್ಪಿಸುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಜಂಟಿ ಕಾರ್ಯದರ್ಶಿಗಳ ನೇತೃತ್ವದಲ್ಲಿ 5 ಜನ ಸದಸ್ಯರುಗಳ “ಶುಲ್ಕ ನಿಯಂತ್ರಣ ಪ್ರಾಧಿಕಾರವನ್ನು” ರಚಿಸಲಾಗುವುದು. ನರ್ಸಿಂಗ್‌ ಕಾಲೇಜುಗಳ ಶುಲ್ಕಗಳನ್ನ ಪರಿಶೀಲಿಸುವ ಕಾರ್ಯವನ್ನು ಈ ಪ್ರಾಧಿಕಾರಕ್ಕೆ ವಹಿಸಲಾಗಿದೆ. ಸರಕಾರ ನಿಗದಿಪಡಿಸಿರುವ ಶುಲ್ಕಕ್ಕೂ ಹೆಚ್ಚು ಶುಲ್ಕವನ್ನು ವಸೂಲು ಮಾಡುತ್ತಿರುವ ಸಂಸ್ಥೆಗಳ ಎಸೆನ್ಶಿಯಲ್‌ ಸರ್ಟಿಫಿಕೇಟ್‌ ಹಾಗೂ ಫೀಸಿಬಲಿಟಿ ಸರ್ಟಿಫಿಕೇಟ್‌ ನ್ನ ರದ್ದುಗೊಳಿಸುವಂತೆಯೂ ಅಧಿಕಾರಿಗಳಿಗೆ ಸಚಿವ ಡಾ. ಶರಣ ಪ್ರಕಾಶ್‌ ಪಾಟೀಲ್‌ ಸೂಚನೆ ನೀಡಿದರು .

ಪ್ರಸ್ತುತ ಸರಕಾರಿ ಕೋಟಾದ ಅಡಿಯಲ್ಲಿ ಭರ್ತಿಯಾಗುವ ವಿದ್ಯಾರ್ಥಿಗಳಿಗೆ 10,000. ಮ್ಯಾನೇಜ್‌ ಮೆಂಟ್‌ ಕೋಟಾದ ಅಡಿಯಲ್ಲಿ ಭರ್ತಿಯಾಗುವ ವಿದ್ಯಾರ್ಥಿಗಳಿಗೆ 1 ಲಕ್ಷ ಮತ್ತು ನಾನ್‌-ಕರ್ನಾಟಕ ವಿದ್ಯಾರ್ಥಿಗಳಿಗೆ 1.40 ಲಕ್ಷ ರೂಪಾಯಿಗಳ ಶುಲ್ಕವನ್ನು ನಿಗದಿಪಡಿಸಲಾಗಿದೆ. ರಾಜ್ಯದಲ್ಲಿ 611 ನರ್ಸಿಂಗ್‌ ಕಾಲೇಜುಗಳಿದ್ದು 35,000 ಸೀಟ್‌ ಗಳು ಲಭ್ಯವಿವೆ. ಅಲ್ಲದೇ, ಈ ಶುಲ್ಕವನ್ನು ಶೇಕಡಾ 20 ರಷ್ಟು ಹೆಚ್ಚಿಸುವಂತೆ ನರ್ಸಿಂಗ್‌ ಕಾಲೇಜುಗಳ ಆಡಳಿತ ಮಂಡಳಿಯ ಪ್ರತಿನೀಧಿಗಳು ಇತ್ತೀಚೆಗೆ ಮಾಡಿದ ಮನವಿಯನ್ನು ಸಚಿವ ಶರಣ ಪ್ರಕಾಶ್‌ ಪಾಟೀಲ್‌ ತಿರಸ್ಕರಿಸಿದ್ದಾರೆ.

ಈ ಸಮಿತಿಯು ಬಿಎಸ್ಸಿ, ನರ್ಸಿಂಗ್‌ ಹಾಗೂ ಜನರಲ್‌ ನರ್ಸಿಂಗ್‌ ಮತ್ತು ಮಿಡ್‌ವೈಪ್ರೀ (ಜಿಎನ್‌ಎಂ) ಡಿಪ್ಲಮೋ ಪ್ರೋಗ್ರಾಂ ಗಳ ಶುಲ್ಕದ ಬಗ್ಗೆಯೂ ನಿಗಾವಹಿಸಲಿದೆ.

ಹಾಗೆಯೇ, ಜಿಲ್ಲಾಧಿಕಾರಿಗಳ ಸಭೆಯನ್ನು ಆಯೋಜಿಸಿ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿರುವ ಜಿಎನ್‌ಎಂ ನರ್ಸಿಂಗ್‌ ಕಾಲೇಜುಗಳಲ್ಲಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಒಂದು ತಿಂಗಳ ಒಳಗಾಗಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಲು ವೈದ್ಯಕೀಯ ಶಿಕ್ಷಣ ಕಾರ್ಯದರ್ಶಿಗಳಾದ ಮೊಹಮ್ಮದ್‌ ಮೋಶಿನ್‌ ಅವರಿಗೆ ಸೂಚನೆ ನೀಡಿದರು.

ಬಿಎಸ್‌ಸಿ ನರ್ಸಿಂಗ್‌ ಕಾಲೇಜುಗಳಿಗೆ ಸಂಬಂಧಿಸಿದಂತೆ ಒಂದು ಪರಿಶೀಲನಾ ತಂಡವನ್ನು ರಚಿಸಿ ವರದಿ ನೀಡುವಂತೆ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರಾದ ಡಾ. ಬಿ.ಎಲ್‌ ಸುಜಾತಾ ಅವರಿಗೆ ಸೂಚನೆ ನೀಡಿದರು.

ನರ್ಸಿಂಗ್‌ ಕಾಲೇಜುಗಳಲ್ಲಿ ಅಗತ್ಯ ಸೌಲಭ್ಯಗಳು, ಭೋಧಕ ಮತ್ತು ಭೋಧಕೇತರ ಸಿಬ್ಬಂದಿಗಳು, ಲ್ಯಾಬೋರೋಟರಿಗಳು, ಗ್ರಂಥಾಲಯಗಳು ಹಾಗೂ ಹೈಜೀನ್‌ ಸ್ಟಾಂರ್ಡ್‌ಡ್‌ ಇಲ್ಲದೇ ಇರುವ ಬಗ್ಗೆ ಹಲವು ದೂರುಗಳು ನಮ್ಮ ಕಚೇರಿಗೆ ಸಲ್ಲಿಕೆಯಾಗಿವೆ. ಹೆಚ್ಚು ಶುಲ್ಕವನ್ನು ತಗೆದುಕೊಳ್ಳುವುದರ ಹೊರತಾಗಿಯೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಸಂಸ್ಥೆಗಳು ವಿಫಲವಾಗಿವೆ. ಅಗತ್ಯ ಸೌಲಭ್ಯಗಳನ್ನು ಹೊಂದಿರದೇ ಇರುವ ನರ್ಸಿಂಗ್‌ ಕಾಲೇಜುಗಳ ಅನುಮತಿಯನ್ನ ಹಿಂದಕ್ಕೆ ಪಡೆಯಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.

267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ ಹಸ್ತಾಂತರ: 50 ಅರಣ್ಯ ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ

ಲಘು, ಭಾರಿ ‘ವಾಹನ ಚಾಲನಾ ತರಬೇತಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ‘BMTC’ಯಿಂದ ಅರ್ಜಿ ಆಹ್ವಾನ | Vehicle Driving Training

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಭುವನೇಶ್ವರ-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ

Share. Facebook Twitter LinkedIn WhatsApp Email

Related Posts

BREAKING : ಸಾರಿಗೆ ನೌಕರರ ಮುಷ್ಕರ ಆರಂಭ : ಬೆಂಗಳೂರು, ಸೇರಿದಂತೆ ರಾಜ್ಯಾದ್ಯಂತ ಪ್ರಯಾಣಿಕರ ಪರದಾಟ!

05/08/2025 6:23 AM1 Min Read

BIG NEWS : ಎಸ್ಮಾ ಜಾರಿ, ಅಮಾನತಿನ ಆತಂಕ : ಇಂದಿನ ಮುಷ್ಕರದಲ್ಲಿ ಭಾಗಿಯಾಗಲು ಕೆಲವು ನೌಕರರು ಹಿಂದೇಟು!

05/08/2025 6:12 AM1 Min Read

BREAKING : ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಕೇಸ್ ನಿಂದ ಹಿಂದೆ ಸರಿದ ನ್ಯಾಯಾಧೀಶರು!

05/08/2025 6:09 AM1 Min Read
Recent News

Shocking: ಮತಾಂತರ, ಮದುವೆಗೆ ನಿರಾಕರಿಸಿದ್ದಕ್ಕೆ ಮಹಿಳೆಯನ್ನು ಕತ್ತು ಸೀಳಿ ಕೊಲೆ ಮಾಡಿದ ವ್ಯಕ್ತಿ

05/08/2025 6:42 AM

ಬಿಹಾರ ಮತದಾರರ ಪಟ್ಟಿ ಕುರಿತು ಸಂಸತ್ತಿನಲ್ಲಿ ಕೋಲಾಹಲ: ರಾಷ್ಟ್ರಪತಿ ಭೇಟಿಯಾದ ಮೋದಿ, ಶಾ

05/08/2025 6:36 AM

BREAKING : ಸಾರಿಗೆ ನೌಕರರ ಮುಷ್ಕರ ಆರಂಭ : ಬೆಂಗಳೂರು, ಸೇರಿದಂತೆ ರಾಜ್ಯಾದ್ಯಂತ ಪ್ರಯಾಣಿಕರ ಪರದಾಟ!

05/08/2025 6:23 AM

BIG NEWS : ಎಸ್ಮಾ ಜಾರಿ, ಅಮಾನತಿನ ಆತಂಕ : ಇಂದಿನ ಮುಷ್ಕರದಲ್ಲಿ ಭಾಗಿಯಾಗಲು ಕೆಲವು ನೌಕರರು ಹಿಂದೇಟು!

05/08/2025 6:12 AM
State News
KARNATAKA

BREAKING : ಸಾರಿಗೆ ನೌಕರರ ಮುಷ್ಕರ ಆರಂಭ : ಬೆಂಗಳೂರು, ಸೇರಿದಂತೆ ರಾಜ್ಯಾದ್ಯಂತ ಪ್ರಯಾಣಿಕರ ಪರದಾಟ!

By kannadanewsnow0505/08/2025 6:23 AM KARNATAKA 1 Min Read

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಇದೀಗ ಮುಷ್ಕರ ಆರಂಭಿಸಿದ್ದಾರೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ…

BIG NEWS : ಎಸ್ಮಾ ಜಾರಿ, ಅಮಾನತಿನ ಆತಂಕ : ಇಂದಿನ ಮುಷ್ಕರದಲ್ಲಿ ಭಾಗಿಯಾಗಲು ಕೆಲವು ನೌಕರರು ಹಿಂದೇಟು!

05/08/2025 6:12 AM

BREAKING : ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಕೇಸ್ ನಿಂದ ಹಿಂದೆ ಸರಿದ ನ್ಯಾಯಾಧೀಶರು!

05/08/2025 6:09 AM

ಎರಡು ದಿನಗಳಲ್ಲಿ ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ವಾಪಸ್ : ಸಚಿವ ದಿನೇಶ್ ಗುಂಡೂರಾವ್

05/08/2025 5:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.