Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ದೆಹಲಿಯ ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ | Bomb threat

14/07/2025 11:23 AM

BREAKING : ಶಿರಾಡಿಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು : ತಪ್ಪಿದ ಭಾರೀ ದುರಂತ.!

14/07/2025 11:16 AM

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ನಿಮಗೆ ಸಿಗಲಿರುವ `ವಿದ್ಯಾರ್ಥಿ ವೇತನ’ದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

14/07/2025 11:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅರ್ಹರ ‘BPL ಕಾರ್ಡ್’ ರದ್ದಾಗಿದ್ದರೇ ಮತ್ತೆ ನೀಡುತ್ತೇವೆ, ಯಾರೂ ಆತಂಕ ಪಡಬೇಡಿ: ಡಿಸಿಎಂ ಡಿ.ಕೆ ಶಿವಕುಮಾರ್
KARNATAKA

ಅರ್ಹರ ‘BPL ಕಾರ್ಡ್’ ರದ್ದಾಗಿದ್ದರೇ ಮತ್ತೆ ನೀಡುತ್ತೇವೆ, ಯಾರೂ ಆತಂಕ ಪಡಬೇಡಿ: ಡಿಸಿಎಂ ಡಿ.ಕೆ ಶಿವಕುಮಾರ್

By kannadanewsnow0920/11/2024 2:32 PM

ಬೆಂಗಳೂರು : “ನಮ್ಮ ಸರ್ಕಾರ ಇರುವುದೇ ಬಡವರಿಗಾಗಿ. ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅವರಿಗೆ ಮತ್ತೆ ನೀಡುತ್ತೇವೆ. ಅರ್ಹರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಯ ನೀಡಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.

ಆರ್ಹರ ಬಿಪಿಎಲ್ ಕಾರ್ಡ್ ಗಳು ಕೂಡ ರದ್ದಾಗುತ್ತಿವೆ ಎಂದು ಮಾಧ್ಯಮಗಳು ಕೇಳಿದಾಗ, “ಬಿಪಿಎಲ್ ಕಾರ್ಡ್ ವಿತರಣೆಗೆ ಕೇಂದ್ರ ಸರ್ಕಾರ ಕೆಲವು ಮಾನದಂಡ ನಿಗದಿಪಡಿಸಿದೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಅರ್ಹರ ಕಾರ್ಡ್ ರದ್ದಾಗಿದ್ದರೆ ಅವರಿಂದ ಮತ್ತೆ ಅರ್ಜಿ ಪಡೆದು ಮತ್ತೆ ಬಿಪಿಎಲ್ ಕಾರ್ಡ್ ನೀಡಲಾಗುವುದು. ಯಾರೂ ಗಾಬರಿಯಾಗುವ ಅಗತ್ಯವಿಲ್ಲ. ಕೆಲವು ಕಡೆ ಹೆಚ್ಚುಕಮ್ಮಿಯಾಗಿದ್ದು, ಎಲ್ಲವನ್ನು ಬಗೆಹರಿಸುತ್ತೇವೆ. ದಯಮಾಡಿ ಸಹಕಾರ ನೀಡಿ. ಸರ್ಕಾರಿ ನೌಕರರು, ಸಹಕಾರಿ ಸಂಘಗಳ ಅಧಿಕಾರಿಗಳು, ಆದಾಯ ತೆರಿಗೆ ಪಾವತಿದಾರರು ಬಿಪಿಎಲ್ ಕಾರ್ಡ್ ಹೊಂದಿರುವ ಹಿನ್ನೆಲೆಯಲ್ಲಿ ಈ ಪರಿಷ್ಕರಣೆ ಮಾಡಲಾಗುತ್ತಿದೆ” ಎಂದರು.

ಕಾರ್ಡ್ ನೀಡುವಾಗ ಮನೆಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಾರೆ, ಅದೇ ರೀತಿ ಕಾರ್ಡ್ ರದ್ದು ಮಾಡುವಾಗ ಮಾಡಬಹುದಲ್ಲವೇ ಎಂದು ಕೇಳಿದಾಗ, “ಈ ವಿಚಾರವಾಗಿ ಮುಖ್ಯಮಂತ್ರಿಗಳು ಸಂಬಂಧಪಟ್ಟ ಸಚಿವರ ಜತೆ ಚರ್ಚೆ ಮಾಡಿ ನಿರ್ದೇಶನ ನೀಡಿದ್ದಾರೆ. ಯಾರ ಬಿಪಿಎಲ್ ಕಾರ್ಡ್ ರದ್ದಾಗಿದೆ ಎಂದು ಆಯಾ ಕ್ಷೇತ್ರಗಳ ಶಾಸಕರಿಗೆ ಪಟ್ಟಿ ರವಾನಿಸುತ್ತೇವೆ. ಅವರು ಒಂದು ತಂಡ ರಚಿಸಿ ಯಾವ ಅರ್ಹರಿಗೆ ಕಾರ್ಡ್ ರದ್ದಾಗಿದೆ ಎಂದು ಪರಿಶೀಲನೆ ಮಾಡುತ್ತಾರೆ. ಇನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ತಂಡದವರಿಗೂ ಮನೆ ಮನೆಗೆ ಹೋಗಿ, ಯಾರಿಗಾದರೂ ಅನ್ಯಾಯ ಆಗಿದ್ದರೆ ಅದನ್ನು ಸರಿಪಡಿಸುವಂತೆ ಜವಾಬ್ದಾರಿ ನೀಡಲಾಗುವುದು” ಎಂದು ತಿಳಿಸಿದರು.

ಕೆಲವು ಶಾಸಕರು ಸಚಿವ ಸ್ಥಾನಕ್ಕೆ ಬೇಡಿಕೆ ಇಡುತ್ತಿರುವ ಬಗ್ಗೆ ಕೇಳಿದಾಗ, “ಈ ವಿಚಾರವನ್ನು ಮುಖ್ಯಮಂತ್ರಿಗಳು ಮಾತನಾಡಲಿದ್ದಾರೆ” ಎಂದು ತಿಳಿಸಿದರು.

ನಂದಿನಿ ಹಾಲಿನ ಮಾರುಕಟ್ಟೆ ವಿಸ್ತರಣೆಯಿಂದ ರೈತರಿಗೆ ನೆರವು:

ಮುಖ್ಯಮಂತ್ರಿಗಳು ದೆಹಲಿಗೆ ತೆರಳುತ್ತಿರುವ ಬಗ್ಗೆ ಕೇಳಿದಾಗ, “ಮುಖ್ಯಮಂತ್ರಿಗಳು ಹಾಲಿನ ವಿಚಾರವಾಗಿ ದೆಹಲಿ ಪ್ರವಾಸ ಮಾಡುತ್ತಿದ್ದಾರೆ. ನಮ್ಮ ನಂದಿನಿ ಹಾಲಿನ ಮಾರುಕಟ್ಟೆ ವಿಸ್ತರಿಸಲು ತೆರಳುತ್ತಿದ್ದಾರೆ. ನಾನು ಕೂಡ ಇದಕ್ಕೆ ತೆರಳಬೇಕಾಗಿತ್ತು. ಆದರೆ ನಾಳೆ ಮೀನುಗಾರರ ದಿನ ಕಾರ್ಯಕ್ರಮ ಇರುವುದರಿಂದ ನಾನು ಮುರುಡೇಶ್ವರಕ್ಕೆ ತೆರಳುತ್ತಿದ್ದೇನೆ. ನಂದಿನಿ ಹಾಲಿಗೆ ಮಾರುಕಟ್ಟೆ ವಿಸ್ತರಣೆ ಮಾಡಿದರೆ ನಮ್ಮ ರೈತರಿಗೆ ನೆರವಾಗುತ್ತದೆ. ಹೀಗಾಗಿ ಈ ಭೇಟಿಗೂ ರಾಜಕೀಯಕ್ಕೂ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು.

ನಕ್ಸಲ್ ನಾಯಕ ವಿಕ್ರಂ ಗೌಡ ಅವರ ಎನ್ ಕೌಂಟರ್ ಖಂಡಿಸಿ ಎಡಪಂಥೀಯರು ಸರ್ಕಾರದ ವಿರುದ್ಧ ನಿಂತಿರುವ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಗೃಹಮಂತ್ರಿಗಳು ಪ್ರತಿಕ್ರಿಯೆ ನೀಡಲಿದ್ದಾರೆ” ಎಂದು ತಿಳಿಸಿದರು.

ರಾಜ್ಯಕ್ಕೆ ಸಮೃದ್ಧ ಬಂಡವಾಳ ಹರಿವು, ಸದ್ಯದಲ್ಲೇ ದೇಶದಲ್ಲಿ 2ನೇ ಸ್ಥಾನಕ್ಕೆ: ಸಿಎಂ ಸಿದ್ದರಾಮಯ್ಯ

BREAKING : ಭಾರತವನ್ನು ‘ಹಿಂದೂ ರಾಷ್ಟ್ರ’ ವನ್ನಾಗಿ ಮಾಡಲು ನಾವು ಬಿಡಲ್ಲ : ಯತೀಂದ್ರ ಸಿದ್ದರಾಮಯ್ಯ ವಿವಾದ!

Share. Facebook Twitter LinkedIn WhatsApp Email

Related Posts

BREAKING : ಶಿರಾಡಿಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು : ತಪ್ಪಿದ ಭಾರೀ ದುರಂತ.!

14/07/2025 11:16 AM1 Min Read

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ನಿಮಗೆ ಸಿಗಲಿರುವ `ವಿದ್ಯಾರ್ಥಿ ವೇತನ’ದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

14/07/2025 11:08 AM1 Min Read

BREAKING : ಹಿರಿಯ ನಟಿ ಬಿ.ಸರೋಜಾದೇವಿ ನಿಧನ : ಸಿಎಂ ಸಿದ್ದರಾಮಯ್ಯ ಸೇರಿ ಅನೇಕ ಗಣ್ಯರಿಂದ ಸಂತಾಪ

14/07/2025 11:01 AM1 Min Read
Recent News

BREAKING: ದೆಹಲಿಯ ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ | Bomb threat

14/07/2025 11:23 AM

BREAKING : ಶಿರಾಡಿಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು : ತಪ್ಪಿದ ಭಾರೀ ದುರಂತ.!

14/07/2025 11:16 AM

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ನಿಮಗೆ ಸಿಗಲಿರುವ `ವಿದ್ಯಾರ್ಥಿ ವೇತನ’ದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

14/07/2025 11:08 AM

Breaking: ಪೊಲೀಸ್ ಎನ್ಕೌಂಟರ್ನಲ್ಲಿ ಮುಖ್ತಾರ್ ಅನ್ಸಾರಿ ಗ್ಯಾಂಗ್ ಹಿಟ್ಮ್ಯಾನ್ ಹತ್ಯೆ

14/07/2025 11:05 AM
State News
KARNATAKA

BREAKING : ಶಿರಾಡಿಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು : ತಪ್ಪಿದ ಭಾರೀ ದುರಂತ.!

By kannadanewsnow5714/07/2025 11:16 AM KARNATAKA 1 Min Read

ಹಾಸನ: ಹಾಸನ ಜಿಲ್ಲೆಯ ಶಿರಾಡಿಘಾಟ್ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಜಲಪಾತಕ್ಕೆ ಬಿದ್ದಿದೆ. ಬೆಂಗಳೂರು…

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ನಿಮಗೆ ಸಿಗಲಿರುವ `ವಿದ್ಯಾರ್ಥಿ ವೇತನ’ದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

14/07/2025 11:08 AM

BREAKING : ಹಿರಿಯ ನಟಿ ಬಿ.ಸರೋಜಾದೇವಿ ನಿಧನ : ಸಿಎಂ ಸಿದ್ದರಾಮಯ್ಯ ಸೇರಿ ಅನೇಕ ಗಣ್ಯರಿಂದ ಸಂತಾಪ

14/07/2025 11:01 AM

BIG NEWS : `ಭ್ರೂಣ ಲಿಂಗ ಪತ್ತೆ’ ಶಿಕ್ಷಾರ್ಹ ಅಪರಾಧ : 5 ವರ್ಷ ಜೈಲು, 1 ಲಕ್ಷ ರೂ. ದಂಡ ಫಿಕ್ಸ್.!

14/07/2025 10:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.