Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬಂಗಾಳ ಚುನಾವಣೆಗೂ ಮುನ್ನ ಬಾಂಬ್ ಭೀತಿ: ಟಿಎಂಸಿ ಕಾರ್ಯಕರ್ತನ ಮನೆಯಲ್ಲಿ 100 ಕಚ್ಚಾ ಬಾಂಬ್‌ಗಳ ಪತ್ತೆ!

27/04/2026 6:56 AM

​ದೋರಹಾದಲ್ಲಿ ಭೀಕರ ಅಗ್ನಿ ಅನಾಹುತ: 24 ಗಂಟೆ ಕಳೆದರೂ ನಂದದ ಜ್ವಾಲೆ, 7 ಕಾರ್ಮಿಕರಿಗೆ ಗಂಭೀರ ಗಾಯ

27/04/2026 6:40 AM

​ಫೋನ್ ಸ್ಟೋರೇಜ್ ಫುಲ್ ಆಗಿದೆಯೇ? ಚಿಂತೆ ಬಿಡಿ! ಜಾಗ ಖಾಲಿ ಮಾಡಲು ಇಲ್ಲಿವೆ 5 ಸುಲಭ ಮಾರ್ಗಗಳು

27/04/2026 6:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರನ್ನು ಒಕ್ಕಲೆಬ್ಬಿಸಿದರೆ ಸುಮ್ಮನಿರುವುದಿಲ್ಲ: ಸಾಗರದ ಅರಣ್ಯಾಧಿಕಾರಿಗಳಿಗೆ ಶಾಸಕ ಬೇಳೂರು ಖಡಕ್ ಎಚ್ಚರಿಕೆ
KARNATAKA

ರೈತರನ್ನು ಒಕ್ಕಲೆಬ್ಬಿಸಿದರೆ ಸುಮ್ಮನಿರುವುದಿಲ್ಲ: ಸಾಗರದ ಅರಣ್ಯಾಧಿಕಾರಿಗಳಿಗೆ ಶಾಸಕ ಬೇಳೂರು ಖಡಕ್ ಎಚ್ಚರಿಕೆ

By kannadanewsnow0906/04/2026 2:15 PM

ಶಿವಮೊಗ್ಗ: ರೈತರ ಪರವಾಗಿ ಕೆಲಸ ಮಾಡೋದು ಬಿಟ್ಟು, ರೈತರನ್ನೇ ಒಕ್ಕಲೆಬ್ಬಿಸೋದನ್ನು ನಾನು ಸಹಿಸುವುದಿಲ್ಲ. ರೈತರನ್ನು ಒಕ್ಕಲೆಬ್ಬಿಸಿದರೇ ಸುಮ್ಮನಿರುವುದಿಲ್ಲ ಎಂಬುದಾಗಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಅರಣ್ಯಾಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಇಂದು ಸಾಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರೈತರು ಎದುರಿಸುತ್ತಿರುವ ಅರಣ್ಯ ಮತ್ತು ಕಂದಾಯ ಭೂಮಿ ಸಮಸ್ಯೆಗಳ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ (IB) ಮಹತ್ವದ ಸಭೆ ನಡೆಸಿದರು.

ಘಟನೆಯ ಹಿನ್ನೆಲೆ: ಮುರಕ್ಕಿ ಗ್ರಾಮದ ರೈತನ ಜಮೀನು ತೆರವು

ಸಾಗರ ತಾಲ್ಲೂಕಿನ ಅಂಬಾರಗೋಡ್ಲು ಸಮೀಪದ ಮುರಕ್ಕಿ ಗ್ರಾಮದ ರೈತ ಯೋಗರಾಜ್ ಎಂಬುವವರ ಜಮೀನಿನ ಬೇಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಇತ್ತೀಚೆಗೆ ತೆರವುಗೊಳಿಸಿದ್ದರು. ಈ ವಿಚಾರ ಶಾಸಕರ ಗಮನಕ್ಕೆ ಬರದೇ ನಡೆದಿರುವುದು ಬೇಳೂರು ಅವರ ಕೆಂಗಣ್ಣಿಗೆ ಗುರಿಯಾಗಿದೆ. “ಜನಪ್ರತಿನಿಧಿಗಳ ಗಮನಕ್ಕೆ ತಾರದೇ ಏಕಾಏಕಿ ರೈತರ ಜಮೀನಿನ ಬೇಲಿ ಕಿತ್ತು ಹಾಕಿರುವುದು ಎಷ್ಟು ಸರಿ?” ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಅರಣ್ಯಾಧಿಕಾರಿಗಳಿಗೆ ಶಾಸಕರ ಪ್ರಮುಖ ಸೂಚನೆಗಳು:

ಸಭೆಯಲ್ಲಿ ಅರಣ್ಯ ಇಲಾಖೆಯ ಡಿ.ಎಫ್.ಒ (DFO), ಆರ್.ಎಫ್.ಒ (RFO) ಹಾಗೂ ವೈಲ್ಡ್ ಲೈಫ್ ಅಧಿಕಾರಿಗಳ ಸಮ್ಮುಖದಲ್ಲಿ ಶಾಸಕರು ಈ ಕೆಳಗಿನ ಸೂಚನೆಗಳನ್ನು ನೀಡಿದರು:

  • ಒಕ್ಕಲೆಬ್ಬಿಸುವಂತಿಲ್ಲ: ಯಾವುದೇ ಕಾರಣಕ್ಕೂ ಸಾಗುವಳಿ ಮಾಡುತ್ತಿರುವ ರೈತರನ್ನು ಜಮೀನಿನಿಂದ ಒಕ್ಕಲೆಬ್ಬಿಸಬಾರದು. ಒಂದು ವೇಳೆ ಅಂತಹ ಪ್ರಯತ್ನ ನಡೆದರೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದರು.

  • ಪೂರ್ವಾನುಮತಿ ಕಡ್ಡಾಯ: ಇನ್ಮುಂದೆ ನನ್ನ ಗಮನಕ್ಕೆ ತಾರದೇ ಯಾವುದೇ ರೈತರ ಜಮೀನು ತೆರವು ಕಾರ್ಯಾಚರಣೆ ಅಥವಾ ಕಿರುಕುಳ ನೀಡುವ ಕೆಲಸ ಮಾಡಬಾರದು.

  • ಬಗರ್ ಹುಕುಂ ವಿಲೇವಾರಿ: ದಶಕಗಳಿಂದ ಜಮೀನು ನಂಬಿ ಬದುಕುತ್ತಿರುವ ರೈತರ ಬಗರ್ ಹುಕುಂ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು.

ಜಂಟಿ ಸರ್ವೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ

ಸಾಗರ ಕ್ಷೇತ್ರದಲ್ಲಿ ಕಂದಾಯ ಮತ್ತು ಅರಣ್ಯ ಭೂಮಿಯ ಗೊಂದಲ ದಶಕಗಳಿಂದಲೂ ಇದ್ದು, ಇದನ್ನು ಬಗೆಹರಿಸಲು ಕಂದಾಯ ಮತ್ತು ಅರಣ್ಯ ಇಲಾಖೆಗಳು ಸಮನ್ವಯದೊಂದಿಗೆ ಜಂಟಿ ಸರ್ವೆ ಕಾರ್ಯವನ್ನು ಅತ್ಯಂತ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಶಾಸಕರು ಸೂಚಿಸಿದರು. ಇತ್ತೀಚಿನ ದಿನಗಳಲ್ಲಿ ಅರಣ್ಯ ಇಲಾಖೆಯು ರೈತರ ಜಮೀನುಗಳನ್ನು ಏಕಾಏಕಿ ತೆರವುಗೊಳಿಸುತ್ತಿರುವ ಬಗ್ಗೆ ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಇಂತಹ ಕಾರ್ಯಾಚರಣೆಗಳನ್ನು ಕೂಡಲೇ ಸ್ಥಗಿತಗೊಳಿಸಬೇಕು ಎಂದು ಅರಣ್ಯಾಧಿಕಾರಿಗಳಿಗೆ ಆದೇಶಿಸಿದರು.

ರೈತರ ಸಮಸ್ಯೆಗಳ ಜೊತೆಗೆ ಸಾರ್ವಜನಿಕ ಸುರಕ್ಷತೆಗೂ ಆದ್ಯತೆ ನೀಡಿದ ಶಾಸಕರು, ಗಾಳಿ-ಮಳೆಗೆ ಶಾಲಾ-ಕಾಲೇಜುಗಳ ಬಳಿ ಹಾಗೂ ಮನೆಗಳ ಪಕ್ಕದಲ್ಲಿ ಅಪಾಯಕಾರಿಯಾಗಿರುವ ಮರಗಳನ್ನು ಗುರುತಿಸಿ, ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಅವುಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

ಕ್ಷೇತ್ರದ ಶೈಕ್ಷಣಿಕ ಮತ್ತು ಮೂಲಸೌಕರ್ಯ ಅಭಿವೃದ್ಧಿಯ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಮಂಜೂರಾಗಿರುವ ಕಾರ್ಮಿಕ ವಸತಿ ಶಾಲೆಗಾಗಿ ಕಂದಾಯ ಇಲಾಖೆಯ ಜಾಗವನ್ನು ಕೂಡಲೇ ಗುರುತಿಸಿ ಮಂಜೂರಾತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಅದೇ ರೀತಿ, ಕ್ಷೇತ್ರದ ವಿದ್ಯುತ್ ಸಮಸ್ಯೆ ನಿವಾರಣೆಗೆ ಪೂರಕವಾಗಿ 110/11 ಕೆವಿ ವಿದ್ಯುತ್ ಉಪಕೇಂದ್ರಗಳನ್ನು (ಗ್ರಿಡ್) ಸ್ಥಾಪಿಸಲು ಅಗತ್ಯವಿರುವ ಸರ್ಕಾರಿ ಜಮೀನನ್ನು ತಕ್ಷಣವೇ ಮಂಜೂರು ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಧಿಕಾರಿಗಳ ಭಾಗಿ

ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಶಿವಮೊಗ್ಗ ಮತ್ತು ಸಾಗರ ವಿಭಾಗದ ಡಿ.ಎಫ್.ಒಗಳು, ಸಾಗರ ಉಪವಿಭಾಗಾಧಿಕಾರಿಗಳು, ಹೊಸನಗರ ತಹಶೀಲ್ದಾರರು, ಮೈನ್ಸ್ ಡಿ.ಡಿ ಹಾಗೂ ಅರಣ್ಯ ಇಲಾಖೆಯ ಆರ್.ಎಫ್.ಒ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ರೈತರ ಹಿತರಕ್ಷಣೆ ಮತ್ತು ಅರಣ್ಯ ಸಂರಕ್ಷಣೆಯ ನಡುವೆ ಸಮನ್ವಯ ಸಾಧಿಸುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಇದೇ ಸಂದರ್ಭದಲ್ಲಿ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು…

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸೊರಬದ ಉಳವಿಯಲ್ಲಿ ಬಿರುಗಾಳಿ ಸಹಿತ ಮಳೆಗೆ 20ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಮುರಿದು ಬಿದ್ದ ವಿದ್ಯುತ್ ಕಂಬಗಳು

26/04/2026 7:26 PM4 Mins Read

SHOCKING : ಮಡಿಕೇರಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು, ಸರ್ಕಾರಿ ಶಿಕ್ಷಕಿ ಆತ್ಮಹತ್ಯೆಗೆ ಶರಣು!

26/04/2026 1:34 PM1 Min Read

ಬೆಂಗಳೂರಲ್ಲಿ ನಡೆದುಕೊಂಡು ಹೋಗುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ, ಸ್ಥಳದಲ್ಲೇ ಸಾವು!

26/04/2026 1:20 PM1 Min Read
Recent News

BREAKING: ಬಂಗಾಳ ಚುನಾವಣೆಗೂ ಮುನ್ನ ಬಾಂಬ್ ಭೀತಿ: ಟಿಎಂಸಿ ಕಾರ್ಯಕರ್ತನ ಮನೆಯಲ್ಲಿ 100 ಕಚ್ಚಾ ಬಾಂಬ್‌ಗಳ ಪತ್ತೆ!

27/04/2026 6:56 AM

​ದೋರಹಾದಲ್ಲಿ ಭೀಕರ ಅಗ್ನಿ ಅನಾಹುತ: 24 ಗಂಟೆ ಕಳೆದರೂ ನಂದದ ಜ್ವಾಲೆ, 7 ಕಾರ್ಮಿಕರಿಗೆ ಗಂಭೀರ ಗಾಯ

27/04/2026 6:40 AM

​ಫೋನ್ ಸ್ಟೋರೇಜ್ ಫುಲ್ ಆಗಿದೆಯೇ? ಚಿಂತೆ ಬಿಡಿ! ಜಾಗ ಖಾಲಿ ಮಾಡಲು ಇಲ್ಲಿವೆ 5 ಸುಲಭ ಮಾರ್ಗಗಳು

27/04/2026 6:30 AM

ಇಂದು ಭಾರತ-ನ್ಯೂಜಿಲೆಂಡ್ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ದ್ವಿಪಕ್ಷೀಯ ವಹಿವಾಟು ದುಪ್ಪಟ್ಟುಗೊಳಿಸುವ ಗುರಿ!

27/04/2026 6:20 AM
State News
KARNATAKA

ಶಿವಮೊಗ್ಗ: ಸೊರಬದ ಉಳವಿಯಲ್ಲಿ ಬಿರುಗಾಳಿ ಸಹಿತ ಮಳೆಗೆ 20ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಮುರಿದು ಬಿದ್ದ ವಿದ್ಯುತ್ ಕಂಬಗಳು

By kannadanewsnow0926/04/2026 7:26 PM KARNATAKA 4 Mins Read

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯಲ್ಲಿ ಕಳೆದ ರಾತ್ರಿ ಸುರಿದಂತ ಭಾರೀ ಮಳೆಯಿಂದಾಗಿ ತೀವ್ರ ತರಹದ ಹಾನಿ ಉಂಟಾಗಿದೆ. ಉಳವಿಯ…

SHOCKING : ಮಡಿಕೇರಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು, ಸರ್ಕಾರಿ ಶಿಕ್ಷಕಿ ಆತ್ಮಹತ್ಯೆಗೆ ಶರಣು!

26/04/2026 1:34 PM

ಬೆಂಗಳೂರಲ್ಲಿ ನಡೆದುಕೊಂಡು ಹೋಗುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ, ಸ್ಥಳದಲ್ಲೇ ಸಾವು!

26/04/2026 1:20 PM

SHOCKING : ಬೆಂಗಳೂರಲ್ಲಿ ಅಮಾನವೀಯ ಕೃತ್ಯ : ಮಚ್ಚಿನಿಂದ ಬೀದಿ ನಾಯಿಯ ಮೇಲೆ ದಾಳಿ ಮಾಡಿದ ವ್ಯಾಪಾರಿ!

26/04/2026 1:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.