ತುಮಕೂರು: ಇಂದು ಬೆಳಿಗ್ಗೆಯಷ್ಟೇ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ( Ex PM HD Devegowdha ) ಅವರಿಗೆ ನಾಲ್ಕು ಜನರು ಹೊತ್ತುಕೊಂಡು ಹೋಗುವ ಟೈಂ ಬಂದಿದೆ ಎಂಬುದಾಗಿ ವಿವಾದಾತ್ಮಕ ಹೇಳಿಕೆಯನ್ನು ಕಾಂಗ್ರೆಸ್ ನ ಮಾಜಿ ಶಾಸಕ ಕೆಎನ್ ರಾಜಣ್ಣ ( Ex MLA KN Rajanna ) ಹೇಳಿದ್ದರು. ಅವರ ಈ ಹೇಳಿಕೆಯ ಬಗ್ಗೆ ಹಲವರು ಕಿಡಿಕಾರಿದ್ದರು. ವಾಗ್ದಾಳಿ ನಡೆಸಿದ್ದರು. ಈ ಬೆನ್ನಲ್ಲೇ ಅವರು ತಮ್ಮ ಹೇಳಿಕೆಯ ಬಗ್ಗೆ ವಿಷಾದ ವ್ಯಕ್ತ ಪಡಿಸಿದ್ದಾರೆ.
‘ರೈಲ್ವೆ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ‘ಸೋಲಾಪುರ – ಗದಗ – ಸೋಲಾಪುರ’ ನಡುವೆ ರೈಲುಗಳ ಸೇವೆ ಪುನರಾರಂಭ
ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನ್ನ ಹೇಳಿಕೆಯಿಂದ ಮನಸ್ಸಿಗೆ ನೋವಾಗಿದ್ದರೇ ವಿಷಾದ ವ್ಯಕ್ತ ಪಡಿಸುತ್ತೇನೆ. ಅವರ ಕುಟುಂಬಕ್ಕೆ ಅಭಿಮಾನಿಗಳಿಗೆ ಬೇಸರವಾಗಿದ್ದರೇ ವಿಷಾದಿಸುವೆ ಎಂಬುದಾಗಿ ತಿಳಿಸಿದ್ದಾರೆ.
ನನ್ನ ವಿರುದ್ಧ ರಾಜಕೀಯ ಪಿತೂರಿ ಮಾಡಲಾಗುತ್ತಿದೆ. ತಳ ಸಮುದಾಯದಿಂದ ಬಂದಂತ ನನ್ನನ್ನು ಮುಗಿಸೋ ಷಡ್ಯಂತ್ರ ನಡೆಸಲಾಗುತ್ತಿದೆ. ನನಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಬಗ್ಗೆ ಅಪಾರ ಗೌರವವಿದೆ ಎಂದು ತಿಳಿಸಿದರು.