ಮಂಡ್ಯ : ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಇತ್ತೀಚಿಗೆ ನಟ ದರ್ಶನ್ ಅವರು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು. ಈ ವಿಚಾರವಾಗಿ ಸಂಸದೆ ಸುಮಲತಾ ಅಂಬರೀಶ್ ಪ್ರತಿಕ್ರಿಯೆ ನೀಡಿದ್ದು, ಬೇರೆ ಪಕ್ಷದ ಪ್ರಚಾರಕ್ಕೆ ಹೋಗು ಅಥವಾ ಬೇಡ ಎಂದು ಹೇಳಲ್ಲ. ನಾನು ಸ್ಪರ್ಧೆ ಮಾಡಿದರೆ ದರ್ಶನ ನನ್ನ ಪ್ರಚಾರ ಮಾಡುತ್ತಿದ್ದರು ಎಂದು ಉಡುಪಿಯಲ್ಲಿ ಮಂಡ್ಯ ಸಂಸದ ಸುಮಲತಾ ಅಂಬರೀಶ್ ಹೇಳಿಕೆಯನ್ನು ನೀಡಿದರು.

ರಾಜಕೀಯವಾಗಿ ಬೇರೆಯವರ ಬಗ್ಗೆ ನಾವು ನಿತ್ಯ ಚರ್ಚೆಯನ್ನು ಮಾಡುವುದಿಲ್ಲ. ನಿತ್ಯ ಕರೆ ಮಾಡಿ ಯಾರ ಪರ ಪ್ರಚಾರ ಮಾಡುತ್ತೀಯಾ ಅಂತ ಕೇಳಲ್ಲ. ಯಾರ ಪರ ಪ್ರಚಾರ ಮಾಡಬೇಕು ಅನ್ನೋದು ಅವರವರ ಇಚ್ಛೆ. ಪ್ರಚಾರಕ್ಕೆ ಹೋಗು ಅಥವಾ ಹೋಗಬೇಡ ಎನ್ನಲು ನಾನು ಯಾರು? ಎಂದು ಸಂಸದೆ ಸುಮಲತಾ ತಿಳಿಸಿದರು.

ವಿಧಾನಸಭೆ ಚುನಾವಣೆ ವೇಳೆ ಮದ್ದೂರಿನಲ್ಲಿ ಪ್ರಚಾರ ಮಾಡಿದ್ದರು. ಆಗ ಮದ್ದೂರಿನಲ್ಲಿ ಕಾಂಗ್ರೆಸ್ ಪರ ದರ್ಶನ್ ಪ್ರಚಾರ ಮಾಡಿದ್ದರು. ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಪರ ದರ್ಶನ ಪ್ರಚಾರ ಮಾಡಿದ್ದರು. ಪಾಂಡವಪುರದಲ್ಲಿ ದರ್ಶನ್ ಪುಟ್ಟಣ್ಣಯ್ಯ ಪರ ಪ್ರಚಾರ ಮಾಡಿದ್ದರು. ಪಕ್ಷ ಮುಖ್ಯ ಅಲ್ಲ ಆ ವ್ಯಕ್ತಿ ಮುಖ್ಯ ಎಂದು ದರ್ಶನ್ ಹೇಳುತ್ತಾರೆ.ವ್ಯಕ್ತಿ ನನಗೆ ಇಷ್ಟವಾದರೆ ಹೋಗುತ್ತೇನೆ ಅಂತ ದರ್ಶನ್ ಹೇಳಿದ್ದಾರೆ.

ಆ ರೀತಿ ದರ್ಶನ್ ಕಳಿಸುವುದಾದರೆ ನಾನ್ಯಾಕೆ ಬಿಜೆಪಿ ಸೇರಬೇಕು? ನಾನು ಪಕ್ಷೇತರ ಅಥವಾ ನೇರವಾಗಿ ಸಪೋರ್ಟ್ ಮಾಡಬಹುದಲ್ಲವೇ? ನಾನು ನನ್ನ ಇಚ್ಛೆಯಿಂದ ಬಿಜೆಪಿಗೆ ಬಂದಿದ್ದೇನೆ. ಬೇರೆ ಪಕ್ಷಕ್ಕೆ ಸಪೋರ್ಟ್ ಮಾಡು ಅಂತ ಹೇಳುವ ಪ್ರಶ್ನೆ ಬರುವುದಿಲ್ಲ ಎಂದು ಉಡುಪಿಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ತಿಳಿಸಿದರು.

Share.
Exit mobile version