ಬಳ್ಳಾರಿ: ಮೊದಲು ನಾನೂ ಕೂಡ ಗೂಂಡಾಗಿರಿ ಮಾಡುತ್ತಿದ್ದೆ, ತುಂಬಾ ಜಗಳ ಮಾಡುತ್ತಿದ್ದೆ. ಬಡವರಿಗೆ ಯಾರಾದ್ರೂ ತೊಂದರೆ ಕೊಟ್ಟಾಗ ಮಾತ್ರ ಗೂಂಡಾಗಿರಿ ಮಾಡುತ್ತಾ, ಅವರ ಪರವಾಗಿ ನಿಲ್ಲುತ್ತಿದೆ. ಬಡವರ ಪರವಾಗಿ ನಿಂತು ಜಗಳವಾಡಿ 14-15 ಬಾರಿ ಜೈಲಿಗೂ ಹೋಗಿದ್ದೆ ಎಂದು ಸಚಿವ ಶ್ರೀರಾಮುಲು ಎಂದು ಹೇಳಿದ್ದಾರೆ.
BIGG NEWS: ಡಿ.12ರಂದು ಚಾಮರಾಜನಗರಕ್ಕೆ ಸಿಎಂ ಬೊಮ್ಮಾಯಿ ಭೇಟಿ; ವಿವಿಧ ಕಾಮಗಾರಿಗಳಿಗೆ ಚಾಲನೆ
ನಗರದಲ್ಲಿ ಮಾತನಾಡಿದ ಅವರು, ನಾನು ಜೈಲಿಗೆ ಹೋದಾಗ ನಮ್ಮಪ್ಪ ವಕೀಲರ ಬಳಿ ಬೇಲ್ ಕೇಳೋದಕ್ಕೆ ಹೋದಾಗಲೆಲ್ಲಾ ಎಷ್ಟು ಬಾರಿ ಬೇಲ್ ಕೊಡಬೇಕು ಅವನಿಗೆ ಎಂದು ಸಿಡಿಮಿಡಿಗೊಳ್ಳುತ್ತಿದ್ದರು. ಅಲ್ಲದೇ ನಿಮ್ಮಪ್ಪನಿಂದಲೇ ನಾನು ದುಡಿಯೋದಕ್ಕೆ ಹೋಗ್ತಿದ್ದೀನಿ ಅಂತ ವಕೀಲರು ನನ್ನ ಬಳಿ ಹೇಳ್ತಿದ್ದರು. ಇಂತಹ ನೆನಪುಗಳನ್ನು ನಾವು ಮರೆಯಬಾರದು ಎಂದು ಹೇಳಿದ್ದಾರೆ.
BIGG NEWS: ಡಿ.12ರಂದು ಚಾಮರಾಜನಗರಕ್ಕೆ ಸಿಎಂ ಬೊಮ್ಮಾಯಿ ಭೇಟಿ; ವಿವಿಧ ಕಾಮಗಾರಿಗಳಿಗೆ ಚಾಲನೆ
ನಾನು ಜೀನ್ಸ್ಪ್ಯಾಂಟ್ ಹಾಕಿಕೊಂಡು ಹೋದ್ರೆ ಹುಡುಗೀರೆಲ್ಲಾ ನನ್ನನ್ನೇ ನೋಡ್ತಿದ್ರು. ಆದ್ರೆ ನಾನು ಬೇರೆಕಡೆ ಹೋಗಿ ಮಾತನಾಡುತ್ತಿರಲಿಲ್ಲ. ನಮ್ಮೂರಿನಲ್ಲಿ ಮಾತ್ರ ಮಾತನಾಡುತ್ತಿದೆ. ನೀವೇ ಹೇಳಿ ನಾನು ಮಾತನಾಡಿದ್ದು ತಪ್ಪಾ? ಎಂದು ಪ್ರಶ್ನಿಸಿದರು.ನಾನು ಪರೀಕ್ಷೆಯಲ್ಲಿ ಕಾಪಿ ಹೊಡೆದು ಪಾಸಾಗಿದ್ದೇನೆ, ಕಾಪಿ ಹೊಡೆಯುವುದಲ್ಲಿ ಪಿಹೆಚ್ಡಿ ಮಾಡಿದ್ದೇನೆ ಎಂದು ಹೇಳಿದ್ದಾರೆ.