Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ಜಸ್ಟ್ ಈ ರೀತಿ ಮೊಬೈಲ್ ನಲ್ಲೇ ನಿಮ್ಮೂರಿನ `ಕಂದಾಯ ನಕ್ಷೆ’ ನೋಡಬಹುದು.!

12/11/2025 9:42 AM

BIG NEWS : ಧರ್ಮಸ್ಥಳದಲ್ಲಿ ಮದುವೆಯಾಗುವ ಯುವತಿಯರ ಕುರಿತು ಆಕ್ಷೇಪಾರ್ಹ ಹೇಳಿಕೆ: ಗಿರೀಶ್ ಮಟ್ಟಣ್ಣವರ್ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ

12/11/2025 9:37 AM

ALERT : ಕೂದಲಿಗೆ `ಹೇರ್ ಡೈ’ ಹಚ್ಚುವವರೇ ಎಚ್ಚರ : `ಕ್ಯಾನ್ಸರ್’ ಅಪಾಯ ಹೆಚ್ಚು.!

12/11/2025 9:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇನ್ಫೋಸಿಸ್‌ ಕಂಪನಿಯು ಆಂಧ್ರಕ್ಕೆ ಹೋದರೆ ಕರ್ನಾಟಕ ಸರ್ಕಾರದ ಗತಿ ಏನು?: HDK ಪ್ರಶ್ನೆ
KARNATAKA

ಇನ್ಫೋಸಿಸ್‌ ಕಂಪನಿಯು ಆಂಧ್ರಕ್ಕೆ ಹೋದರೆ ಕರ್ನಾಟಕ ಸರ್ಕಾರದ ಗತಿ ಏನು?: HDK ಪ್ರಶ್ನೆ

By kannadanewsnow0919/10/2025 6:09 PM

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಪಾಕಿಸ್ತಾನಕ್ಕೆ ಜೈ ಹಾಕುವವರನ್ನು ಬೆಂಬಲಿಸುತ್ತದೆ. ಭಾರತ್‌ ಮಾತಾ ಕೀ ಜೈ ಎನ್ನುವವರನ್ನು ವಿರೋಧಿಸುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರಕ್ಕೆ ಬಿಜೆಪಿ ವಿರುದ್ಧ ಸಿಟ್ಟಿದ್ದರೆ, ಆ ಸಿಟ್ಟನ್ನು ಬಿಜೆಪಿಯ ಮೇಲೆಯೇ ತೀರಿಸಿಕೊಳ್ಳಲಿ. ಆದರೆ ರಾಷ್ಟ್ರಭಕ್ತಿಯಿಂದ ಕೆಲಸ ಮಾಡುತ್ತಿರುವ ಆರ್‌ಎಸ್‌ಎಸ್‌ ವಿರುದ್ಧ ಕ್ರಮ ಕೈಗೊಳ್ಳಬೇಕಿಲ್ಲ. ಪಾಕಿಸ್ತಾನಕ್ಕೆ ಜೈ ಎನ್ನುವವರಿಗೆ ಸರ್ಕಾರ ಬೆಂಬಲ ನೀಡುತ್ತಿದೆಯೇ ಹೊರತು ಭಾರತ್‌ ಮಾತಾ ಕೀ ಜೈ ಎನ್ನುವವರಿಗೆ ಬೆಂಬಲ ನೀಡಲ್ಲ. ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಹಾಕಿದ್ದು ಸಾಬೀತಾಗಿದೆ. ಆಗ ಅವರು ಹಾಗೆ ಹೇಳಿಯೇ ಇಲ್ಲ ಎಂದು ಸಚಿವರು ಹೇಳಿದ್ದರು. ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಮಾಡುವವರನ್ನು ಬ್ರದರ್‌ ಎಂದಿದ್ದರು. ಎಲ್ಲವೂ ಸಾಬೀತಾದರೂ ಅವರನ್ನೇ ಕಾಂಗ್ರೆಸ್‌ ನಾಯಕರು ಬೆಂಬಲಿಸುತ್ತಾರೆ ಎಂದರು.

ಬೆಂಗಳೂರಿನ ಮಾರುಕಟ್ಟೆಯಲ್ಲಿ ಪ್ರತಿ ಶುಕ್ರವಾರ ನಮಾಜ್‌ ಮಾಡಿ ರಸ್ತೆ ಬಂದ್‌ ಮಾಡುತ್ತಾರೆ. ಬಿಜೆಪಿ ಸರ್ಕಾರವಿದ್ದಾಗ ಅದನ್ನು ಎಂದೂ ನಿಷೇಧಿಸಿರಲಿಲ್ಲ. ಆದರೆ ಆರ್‌ಎಸ್‌ಎಸ್‌ ಪಥ ಸಂಚಲನ ಮಾಡಲು ಹೊರಟರೆ ಅದಕ್ಕೆ ಅವಕಾಶ ನೀಡಲ್ಲ. ಆರ್‌ಎಸ್‌ಎಸ್‌ ಅನುಮತಿ ಪಡೆದೇ ಪಥ ಸಂಚಲನ ಮಾಡುತ್ತಿದೆ. ಎಲ್ಲ ಬಿಜೆಪಿ ನಾಯಕರ ಮಕ್ಕಳು ಆರ್‌ಎಸ್‌ಎಸ್‌ಗೆ ಖಂಡಿತ ಹೋಗುತ್ತಾರೆ. ಹಾಗಾದರೆ ಕಾಂಗ್ರೆಸ್‌ ನಾಯಕರ ಮಕ್ಕಳು ಯಾವುದಾದರೂ ಹೋರಾಟಕ್ಕೆ ಹೋಗಿದ್ದಾರಾ? ಯಾವ ದಲಿತ ಸಂಘಟನೆಯ ಹೋರಾಟಗಳಲ್ಲಿ ನಾಯಕರ ಮಕ್ಕಳು ಭಾಗವಹಿಸಿದ್ದಾರೆ? ಎಂದು ಪ್ರಶ್ನಿಸಿದರು.

ಆರ್‌ಎಸ್‌ಎಸ್‌ ವಿರುದ್ಧ ಕೈಗೊಳ್ಳುವ ಕ್ರಮಗಳು ಮುಂದೆ ಕಾಂಗ್ರೆಸ್‌ಗೆ ತಿರುಗುಬಾಣವಾಗಲಿದೆ. ಪಥ ಸಂಚಲನದ ಅನುಮತಿಗೆ ಸಂಬಂಧಿಸಿದಂತೆ ಕೋರ್ಟ್‌ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಯಾವುದೇ ಸಂಘಟನೆಗಳ ಕಾರ್ಯಕ್ರಮಕ್ಕೆ ನಾವು ಎಂದೂ ಕಡಿವಾಣ ಹಾಕಿಲ್ಲ. ಅದೇ ರೀತಿ ಕಾಂಗ್ರೆಸ್‌ ಕೂಡ ನಡೆದುಕೊಳ್ಳಬೇಕು. ಆರ್‌ಎಸ್‌ಎಸ್‌ನ ಕಾರ್ಯಗಳೇನು ಎಂಬುದನ್ನು ಇವರು ಮೊದಲು ತಿಳಿದುಕೊಳ್ಳಬೇಕು ಎಂದರು.

ಪ್ರತಿ ವರ್ಷ ಬಿಜೆಪಿ ಸರ್ಕಾರ ಬಿಬಿಎಂಪಿಗೆ 7-8 ಸಾವಿರ ರೂ. ನೀಡಿದೆ. ಇದೇ ಅನುದಾನದಲ್ಲಿ ಈಗಲೂ ರಸ್ತೆ ದುರಸ್ತಿ ಮಾಡಲಾಗುತ್ತಿದೆ. ಈಗಿನ ಸರ್ಕಾರದಲ್ಲಿ ಒಂದೇ ಒಂದು ಯೋಜನೆ ನಡೆದಿಲ್ಲ. ಸರ್ಕಾರ ಭಿಕ್ಷೆ ಬೇಡುವ ಪರಿಸ್ಥಿತಿ ಬಂದಿದೆ. ಬೆಂಗಳೂರಿನ ಜನರು ತಮ್ಮ ಮುಂದಿನ ರಸ್ತೆಗಳನ್ನು ಅವರೇ ಡಾಂಬರೀಕರಣ ಮಾಡಿಕೊಳ್ಳಬೇಕಿದೆ. ಗ್ರಂಥಪಾಲಕರು, ನೀರುಗಂಟಿಗಳಿಗೆ ಸಂಬಳ ಇಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಹಿಂದಿನ ಹಾಗೂ ಈಗಿನ ಸರ್ಕಾರ ಎಷ್ಟು ಸಾಲ ಮಾಡಿದೆ, ಈಗ ಹಣ ಎಷ್ಟಿದೆ ಎಂದು ಸಿಎಂ ಸಿದ್ದರಾಮಯ್ಯ ಶ್ವೇತಪತ್ರ ಹೊರಡಿಸಲಿ ಎಂದು ಆಗ್ರಹಿಸಿದರು.

ಹಿಂದಿನ ಕಾಂಗ್ರೆಸ್‌ ಮಾಡಿದ್ದ 15,000 ಕೋಟಿ ರೂ. ಸಾಲವನ್ನು ಬಿಜೆಪಿ ಸರ್ಕಾರ ತೀರಿಸಿದೆ. ಈ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಉತ್ತರಿಸಲಿ. ಗುತ್ತಿಗೆದಾರರಿಗೆ 33 ಸಾವಿರ ಕೋಟಿ ರೂ. ನೀಡಬೇಕಿದ್ದು, ಅಷ್ಟೊಂದು ಹಣ ಕೊಡಬೇಕೆಂದರೂ ಖಜಾನೆಯಲ್ಲಿ ಹಣವೇ ಇಲ್ಲ ಎಂದರು.

ಸುಧಾಮೂರ್ತಿ ಅವರನ್ನು ಸಿಎಂ ಸಿದ್ದರಾಮಯ್ಯ ಬೃಹಸ್ಪತಿಗಳಾ ಎಂದು ಕೇಳುತ್ತಾರೆ. ಇಷ್ಟ ಇದ್ದರೆ ಮಾತ್ರ ಮಾಹಿತಿ ನೀಡಿ ಎಂದು ಹೈಕೋರ್ಟ್‌ ಹೇಳಿದೆ. ಆದರೂ ಅವರನ್ನು ಟೀಕಿಸುವುದು ನ್ಯಾಯಾಂಗ ನಿಂದನೆಯಾಗಿದೆ. ಇನ್ಫೋಸಿಸ್‌ನಿಂದಲೇ ಹೆಚ್ಚು ಆದಾಯ ಬರುತ್ತಿದೆ. ಅವರೂ ಆಂಧ್ರಕ್ಕೆ ಹೋದರೆ ಸರ್ಕಾರದ ಗತಿ ಏನು? ಸಿಎಂ ಸಿದ್ದರಾಮಯ್ಯ ಯಾವ ರೀತಿಯ ಬೃಹಸ್ಪತಿ? ಎಂದು ಪ್ರಶ್ನಿಸಿದರು.

BREAKING: ಮಂಡ್ಯದಲ್ಲಿ ‘KSRTC ಬಸ್ಸು’ಗಳ ನಡುವೆ ಭೀಕರ ಅಪಘಾತ: 30ಕ್ಕೂ ಹೆಚ್ಚು ಜನರಿಗೆ ಗಾಯ

ಗುಂಡಿ ಮುಚ್ಚುವ ಬದಲು ಕಿರಣ್ ಮುಜುಂದಾರ್ ಶಾರನ್ನು ಟೀಕಿಸುವುದು ನಿರರ್ಥಕ: HDK

Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ಜಸ್ಟ್ ಈ ರೀತಿ ಮೊಬೈಲ್ ನಲ್ಲೇ ನಿಮ್ಮೂರಿನ `ಕಂದಾಯ ನಕ್ಷೆ’ ನೋಡಬಹುದು.!

12/11/2025 9:42 AM2 Mins Read

BIG NEWS : ಧರ್ಮಸ್ಥಳದಲ್ಲಿ ಮದುವೆಯಾಗುವ ಯುವತಿಯರ ಕುರಿತು ಆಕ್ಷೇಪಾರ್ಹ ಹೇಳಿಕೆ: ಗಿರೀಶ್ ಮಟ್ಟಣ್ಣವರ್ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ

12/11/2025 9:37 AM1 Min Read

ಗಮನಿಸಿ : ಇದು ನಿಮ್ಮ ದೇಹದ ಎರಡನೇ ಹೃದಯದಂತೆ ಕೆಲಸ ಮಾಡುವ ಭಾಗ.. ಇದನ್ನು ಸರಿಯಾಗಿ ನೋಡಿಕೊಳ್ಳಿ!

12/11/2025 9:22 AM2 Mins Read
Recent News

ಸಾರ್ವಜನಿಕರೇ ಗಮನಿಸಿ : ಜಸ್ಟ್ ಈ ರೀತಿ ಮೊಬೈಲ್ ನಲ್ಲೇ ನಿಮ್ಮೂರಿನ `ಕಂದಾಯ ನಕ್ಷೆ’ ನೋಡಬಹುದು.!

12/11/2025 9:42 AM

BIG NEWS : ಧರ್ಮಸ್ಥಳದಲ್ಲಿ ಮದುವೆಯಾಗುವ ಯುವತಿಯರ ಕುರಿತು ಆಕ್ಷೇಪಾರ್ಹ ಹೇಳಿಕೆ: ಗಿರೀಶ್ ಮಟ್ಟಣ್ಣವರ್ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ

12/11/2025 9:37 AM

ALERT : ಕೂದಲಿಗೆ `ಹೇರ್ ಡೈ’ ಹಚ್ಚುವವರೇ ಎಚ್ಚರ : `ಕ್ಯಾನ್ಸರ್’ ಅಪಾಯ ಹೆಚ್ಚು.!

12/11/2025 9:31 AM

SHOCKING : ದೇಶದಲ್ಲಿ ಮತ್ತೊಂದು `ಅಮಾನವೀಯ ಕೃತ್ಯ’ : ಅಂತರ್ಜಾತಿ ವಿವಾಹವಾದ ದಂಪತಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ | WATCH VIDEO

12/11/2025 9:29 AM
State News
KARNATAKA

ಸಾರ್ವಜನಿಕರೇ ಗಮನಿಸಿ : ಜಸ್ಟ್ ಈ ರೀತಿ ಮೊಬೈಲ್ ನಲ್ಲೇ ನಿಮ್ಮೂರಿನ `ಕಂದಾಯ ನಕ್ಷೆ’ ನೋಡಬಹುದು.!

By kannadanewsnow5712/11/2025 9:42 AM KARNATAKA 2 Mins Read

ಬೆಂಗಳೂರು: ಕಂದಾಯ ಇಲಾಖೆಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಆಯಾ ಊರಿನ ವ್ಯಾಪ್ತಿಯ ನಕ್ಷೆಯನ್ನು ಆನ್ ಲೈನ್ ನಲ್ಲಿ ಡೌನ್ ಲೋಡ್ ಮಾಡಲು…

BIG NEWS : ಧರ್ಮಸ್ಥಳದಲ್ಲಿ ಮದುವೆಯಾಗುವ ಯುವತಿಯರ ಕುರಿತು ಆಕ್ಷೇಪಾರ್ಹ ಹೇಳಿಕೆ: ಗಿರೀಶ್ ಮಟ್ಟಣ್ಣವರ್ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ

12/11/2025 9:37 AM

ಗಮನಿಸಿ : ಇದು ನಿಮ್ಮ ದೇಹದ ಎರಡನೇ ಹೃದಯದಂತೆ ಕೆಲಸ ಮಾಡುವ ಭಾಗ.. ಇದನ್ನು ಸರಿಯಾಗಿ ನೋಡಿಕೊಳ್ಳಿ!

12/11/2025 9:22 AM

BREAKING : ನಟ ಉಪೇಂದ್ರ ದಂಪತಿ ‘ಮೊಬೈಲ್ ಹ್ಯಾಕ್’ ಮಾಡಿದ್ದ ಆರೋಪಿ ಅರೆಸ್ಟ್.!

12/11/2025 9:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.