ಬೆಂಗಳೂರು : ಕನ್ನಡ ತಮಿಳುನಿಂದ ಹುಟ್ಟಿದ್ದು ಎಂದು ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆದರೂ ಕೂಡ ಅವರು ನಾನು ತಪ್ಪು ಹೇಳಿಲ್ಲ ಹಾಗಾಗಿ ನಾನು ಯಾಕೆ ಕ್ಷಮೆ ಕೇಳಬೇಕು ಎಂದು ಉದ್ಧಟತನ ತೋರಿದ್ದಾರೆ. ಈ ವಿಚಾರವಾಗಿ ಇಂದು ಬೆಂಗಳೂರಿನ ಚಲನಚಿತ್ರ ವಾಣಿಜ್ಯ ಮಂಡಳಿ ಕಚೇರಿಯಲ್ಲಿ ಸಭೆ ನಡೆಯಿತು. ಈ ಒಂದು ಸಭೆಯಲ್ಲಿ ಕಮಲಹಾಸನ್ ಚಿತ್ರತಂಡ ಸಂಧಾನಕ್ಕೆ ಬಂದರೆ ನಾವು ಸಿದ್ಧರಿದ್ದೇವೆ ಆದರೆ ಕ್ಷಮೆ ಕೇಳಲೇಬೇಕು ಎಂದು ಸಭೆಯಲ್ಲಿ ಆಗ್ರಹಿಸಲಾಯಿತು.
ಈ ಕುರಿತು ಬೆಂಗಳೂರಿನ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆಯಿತು. ಫಿಲ್ಮ ಚೇಂಬರ್ ಅಧ್ಯಕ್ಷ, ಉಪಾಧ್ಯಕ್ಷ ಹಾಗು ಪದಾಧಿಕಾರಿಗಳು ಈ ಒಂದು ಸಭೆಯಲ್ಲಿ ಭಾಗಿಯಾಗಿದ್ದರು. ಕಮಲ್ ಹಾಸನ್ ಹೇಳಿಕೆ ವಿಚಾರವಾಗಿ ಇಂದು ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಈ ಒಂದು ಸಭೆ ನಡೆಯಿತು. ಸಭೆಯಲ್ಲಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಎಲ್ಲಾ ಪದಾಧಿಕಾರಿಗಳು ಕಮಲ್ ಹಾಸನ್ ಕ್ಷಮೆ ಕೇಳಲೇಬೇಕು ಎಂದು ಆಗ್ರಹಿಸಿದ್ದಾರೆ.
ಚಿತ್ರದ ವಿಚಾರ ನ್ಯಾಯಾಲಯದ ಮೆಟ್ಟಿಲೇರಿದೆ. ಈ ಬಗ್ಗೆ ನಾವು ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗುತ್ತಿಲ್ಲ.ಕಮಲ್ ಹಾಸನ ಸಿನಿಮಾ ತಂಡ ಸಂಧಾನಕ್ಕೆ ಬಂದರೆ ನಾವು ಸಿದ್ಧರಿದ್ದೇವೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಸಭೆಯಲ್ಲಿ ಚರ್ಚೆ ನಡೆಯಿತು. ಇನ್ನು ಕರ್ನಾಟಕದಲ್ಲಿ ನಟ ಕಮಲ್ ಹಾಸನ್ ಅವರ ಚಿತ್ರ ಬಿಡುಗಡೆ ಕುರಿತಂತೆ ಇಂದು ಹೈಕೋರ್ಟಲ್ಲಿ ವಿಚಾರಣೆ ನಡೆಯಿತು.
ಕಮಲ್ ಹಾಸನ್ ಪರ ವಕೀಲರು ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆ ಬಿಡುಗಡೆ ಮಾಡಲ್ಲ ಎಂದು ತಿಳಿಸಿದ್ದಾರೆ. ಈ ವೇಳೆ ಹೈಕೋರ್ಟ್ ಜಡ್ಜ್ ಕಮಲ್ ಹಾಸನ್ ಅವರು ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆಯನ್ನು ಜೂನ್ 10 ರಂದು ಮುಂದೂಡಿ ಆದೇಶಿಸಿದರು ಅಲ್ಲದೆ ಈಗಲೂ ಒಂದು ಸಮಯವಿದೆ ಎಂದು ಕಿವಿಮಾತು ಹೇಳಿದರು.