Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದಲ್ಲಿ ಈಗ ‘ChatGPT’ ಉಚಿತ ; ಚಂದಾದಾರಿಕೆ ಸಕ್ರಿಯಗೊಳಿಸಲು ಹಂತ-ಹಂತದ ಮಾರ್ಗ ಹೀಗಿದೆ!

04/11/2025 4:45 PM

‘ಸಚಿವ ಸ್ಥಾನ’ಕ್ಕಾಗಿ ಅಗತ್ಯ ಬಿದ್ದರೇ ವರಿಷ್ಟರನ್ನು ಭೇಟಿಯಾಗಲು ದೆಹಲಿಗೆ ತೆರಳುವೆ: ಶಾಸಕ ಗೋಪಾಲಕೃಷ್ಣ ಬೇಳೂರು

04/11/2025 4:42 PM

BIG NEWS : ಬ್ಯಾಂಕ್ ಗಳಿಂದ ಲೆಕ್ಕ ಕೋರಿ ಹೈಕೋರ್ಟಿಗೆ ವಿಜಯಮಲ್ಯ ರಿಟ್ ಅರ್ಜಿ ಸಲ್ಲಿಕೆ : ನ.12ಕ್ಕೆ ವಿಚಾರಣೆ ಮುಂದೂಡಿಕೆ

04/11/2025 4:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸಚಿವ ಸ್ಥಾನ’ಕ್ಕಾಗಿ ಅಗತ್ಯ ಬಿದ್ದರೇ ವರಿಷ್ಟರನ್ನು ಭೇಟಿಯಾಗಲು ದೆಹಲಿಗೆ ತೆರಳುವೆ: ಶಾಸಕ ಗೋಪಾಲಕೃಷ್ಣ ಬೇಳೂರು
KARNATAKA

‘ಸಚಿವ ಸ್ಥಾನ’ಕ್ಕಾಗಿ ಅಗತ್ಯ ಬಿದ್ದರೇ ವರಿಷ್ಟರನ್ನು ಭೇಟಿಯಾಗಲು ದೆಹಲಿಗೆ ತೆರಳುವೆ: ಶಾಸಕ ಗೋಪಾಲಕೃಷ್ಣ ಬೇಳೂರು

By kannadanewsnow0904/11/2025 4:42 PM

ಶಿವಮೊಗ್ಗ : ಅಗತ್ಯ ಬಿದ್ದರೆ ಸಚಿವ ಸ್ಥಾನಕ್ಕಾಗಿ ವರಿಷ್ಟರನ್ನು ಭೇಟಿಯಾಗಲು ದೆಹಲಿಗೆ ತೆರಳುತ್ತೇನೆ. ನಾನು ಮೂರು ಬಾರಿ ಗೆದ್ದಿರುವ ಹಿರಿಯ ಹಾಗೂ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡ ಶಾಸಕನಾಗಿದ್ದು ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿ ಮಂಗಳವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ಹಿಂದುಳಿದ ವರ್ಗಕ್ಕೆ ಸೇರಿದ ನನಗೆ ಸಚಿವ ಸ್ಥಾನ ಕೊಡಿ ಎಂದು ದೆಹಲಿಗೆ ಹೋಗಿದ್ದಾಗ ವರಿಷ್ಟರನ್ನು ಭೇಟಿಯಾಗಿ ಮನವಿ ಮಾಡಿದ್ದೇನೆ. ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳ ಬಳಿ ಕೇಳಿದ್ದೇನೆ. ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ. ನನ್ನ ಹಕ್ಕನ್ನು ಕೇಳಲು ಯಾವುದೇ ಮುಜುಗರ ಇಲ್ಲ. ದೆಹಲಿಗೆ ಹೋಗಲು ಸಹ ಸಿದ್ದನಿದ್ದೇನೆ ಎಂದು ತಿಳಿಸಿದರು.

ನಮ್ಮ ಪಕ್ಷದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ನಾನು ಹಿಂದಿನಿಂದಲೂ ಹೇಳುತ್ತಾ ಬಂದಿದ್ದೇನೆ. ಮುಖ್ಯಮಂತ್ರಿ ಬದಲಾವಣೆ, ಸಚಿವರ ಬದಲಾವಣೆ ಶಾಸಕರ ಕೈನಲ್ಲಿ ಇಲ್ಲ. ಎಲ್ಲವೂ ರಾಷ್ಟ್ರೀಯ ನಾಯಕರು ನೋಡಿ ಕೊಳ್ಳುತ್ತಾರೆ. ರಾಷ್ಟ್ರೀಯ ನಾಯಕರು ಯಾವ ತೀರ್ಮಾನ ಮಾಡುತ್ತಾರೋ ಅದಕ್ಕೆ ನಾವು ಬದ್ದರಾಗಿರುತ್ತೇವೆ. ಸರ್ಕಾರ ಐದು ವರ್ಷ ಸಸೂತ್ರವಾಗಿ ನಡೆಯಬೇಕು ಎನ್ನುವುದು ಎಲ್ಲರ ಆಕಾಂಕ್ಷೆಯಾಗಿದೆ ಎಂದರು.

ಸಾಗರ ಜಿಲ್ಲೆ ಮಾಡಲು ನಡೆಸುತ್ತಿರುವ ಹೋರಾಟಕ್ಕೆ ನನ್ನ ಬೆಂಬಲ ಇದೆ. ಈಗಾಗಲೆ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವ ಜೊತೆಗೆ ಅವರನ್ನು ಭೇಟಿಯಾಗಿ ಜಿಲ್ಲೆ ಮಾಡುವುದಾದರೆ ಉಪವಿಭಾಗೀಯ ಕೇಂದ್ರವಾಗಿರುವ ಸಾಗರವನ್ನು ಜಿಲ್ಲೆ ಎಂದು ಘೋಷಣೆ ಮಾಡಿ ಎಂದು ಮನವಿ ಮಾಡಿದ್ದೇನೆ. ಮುಖ್ಯಮಂತ್ರಿಗಳು ಅಂತಹ ಪ್ರಸ್ತಾಪ ಇಲ್ಲ, ಒಂದೊಮ್ಮೆ ಜಿಲ್ಲೆ ಮಾಡುವುದಾದರೆ ಸಾಗರವನ್ನೇ ಮಾಡುತ್ತೇವೆ ಎಂದು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಶಿಕಾರಿಪುರವನ್ನು ಜಿಲ್ಲೆಯಾಗಿ ಘೋಷಣೆ ಮಾಡಲು ಬಿಡುವುದಿಲ್ಲ. ನಗರಸಭೆಗೆ ಆಡಳಿತಾಧಿಕಾರಿ ನೇಮಕ ಸಂಬಂಧ ಪ್ರಕರಣ ನ್ಯಾಯಾಲಯದಲ್ಲಿದೆ. ಅವಧಿ ಮುಂದುವರೆಸಲು ಕೆಲವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಈ ಸಂಬಂಧ ನ. 11ಕ್ಕೆ ನ್ಯಾಯಾಲಯದಲ್ಲಿದೆ ವಿಚಾರಣೆ ನಡೆಯಲಿದೆ ಎಂದು ಹೇಳಿದರು.

ಈ ವೇಳೆ ಚೇತನರಾಜ್ ಕಣ್ಣೂರು, ಗಣಪತಿ ಮಂಡಗಳಲೆ, ಮಧುಮಾಲತಿ, ರವಿ ಲಿಂಗನಮಕ್ಕಿ, ಕಿರಣ್ ದೊಡ್ಮನೆ, ಚಂದ್ರು ಕಂಬಳಿಕೊಪ್ಪ ಇನ್ನಿತರರು ಹಾಜರಿದ್ದರು.

BIG NEWS: ಕೊಲೆಯಾದವನ ಬರ್ತ್‌ಡೇ ದಿನವೇ ಕೊಲೆಗಾರರಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ: ನ.9ರಂದು ಕಾಗೋಡು ತಿಮ್ಮಪ್ಪಗೆ ಮಲೆನಾಡು ಲೋಹಿಯಾ ಪ್ರಶಸ್ತಿ ಪ್ರದಾನ – ಸಂತೋಷ್ ಸದ್ಗುರು

Share. Facebook Twitter LinkedIn WhatsApp Email

Related Posts

BIG NEWS : ಬ್ಯಾಂಕ್ ಗಳಿಂದ ಲೆಕ್ಕ ಕೋರಿ ಹೈಕೋರ್ಟಿಗೆ ವಿಜಯಮಲ್ಯ ರಿಟ್ ಅರ್ಜಿ ಸಲ್ಲಿಕೆ : ನ.12ಕ್ಕೆ ವಿಚಾರಣೆ ಮುಂದೂಡಿಕೆ

04/11/2025 4:35 PM2 Mins Read

ಶಿವಮೊಗ್ಗ: ನ.9ರಂದು ಕಾಗೋಡು ತಿಮ್ಮಪ್ಪಗೆ ಮಲೆನಾಡು ಲೋಹಿಯಾ ಪ್ರಶಸ್ತಿ ಪ್ರದಾನ – ಸಂತೋಷ್ ಸದ್ಗುರು

04/11/2025 4:24 PM1 Min Read

ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ‘ನಾಯಕತ್ವ ಗುಣ’ ಬೆಳೆಸಿಕೊಳ್ಳಲು ‘NSS’ ಸಹಕಾರಿ: ಶಾಸಕ ಗೋಪಾಲಕೃಷ್ಣ ಬೇಳೂರು

04/11/2025 4:18 PM1 Min Read
Recent News

ಭಾರತದಲ್ಲಿ ಈಗ ‘ChatGPT’ ಉಚಿತ ; ಚಂದಾದಾರಿಕೆ ಸಕ್ರಿಯಗೊಳಿಸಲು ಹಂತ-ಹಂತದ ಮಾರ್ಗ ಹೀಗಿದೆ!

04/11/2025 4:45 PM

‘ಸಚಿವ ಸ್ಥಾನ’ಕ್ಕಾಗಿ ಅಗತ್ಯ ಬಿದ್ದರೇ ವರಿಷ್ಟರನ್ನು ಭೇಟಿಯಾಗಲು ದೆಹಲಿಗೆ ತೆರಳುವೆ: ಶಾಸಕ ಗೋಪಾಲಕೃಷ್ಣ ಬೇಳೂರು

04/11/2025 4:42 PM

BIG NEWS : ಬ್ಯಾಂಕ್ ಗಳಿಂದ ಲೆಕ್ಕ ಕೋರಿ ಹೈಕೋರ್ಟಿಗೆ ವಿಜಯಮಲ್ಯ ರಿಟ್ ಅರ್ಜಿ ಸಲ್ಲಿಕೆ : ನ.12ಕ್ಕೆ ವಿಚಾರಣೆ ಮುಂದೂಡಿಕೆ

04/11/2025 4:35 PM

ಶಿವಮೊಗ್ಗ: ನ.9ರಂದು ಕಾಗೋಡು ತಿಮ್ಮಪ್ಪಗೆ ಮಲೆನಾಡು ಲೋಹಿಯಾ ಪ್ರಶಸ್ತಿ ಪ್ರದಾನ – ಸಂತೋಷ್ ಸದ್ಗುರು

04/11/2025 4:24 PM
State News
KARNATAKA

‘ಸಚಿವ ಸ್ಥಾನ’ಕ್ಕಾಗಿ ಅಗತ್ಯ ಬಿದ್ದರೇ ವರಿಷ್ಟರನ್ನು ಭೇಟಿಯಾಗಲು ದೆಹಲಿಗೆ ತೆರಳುವೆ: ಶಾಸಕ ಗೋಪಾಲಕೃಷ್ಣ ಬೇಳೂರು

By kannadanewsnow0904/11/2025 4:42 PM KARNATAKA 2 Mins Read

ಶಿವಮೊಗ್ಗ : ಅಗತ್ಯ ಬಿದ್ದರೆ ಸಚಿವ ಸ್ಥಾನಕ್ಕಾಗಿ ವರಿಷ್ಟರನ್ನು ಭೇಟಿಯಾಗಲು ದೆಹಲಿಗೆ ತೆರಳುತ್ತೇನೆ. ನಾನು ಮೂರು ಬಾರಿ ಗೆದ್ದಿರುವ ಹಿರಿಯ…

BIG NEWS : ಬ್ಯಾಂಕ್ ಗಳಿಂದ ಲೆಕ್ಕ ಕೋರಿ ಹೈಕೋರ್ಟಿಗೆ ವಿಜಯಮಲ್ಯ ರಿಟ್ ಅರ್ಜಿ ಸಲ್ಲಿಕೆ : ನ.12ಕ್ಕೆ ವಿಚಾರಣೆ ಮುಂದೂಡಿಕೆ

04/11/2025 4:35 PM

ಶಿವಮೊಗ್ಗ: ನ.9ರಂದು ಕಾಗೋಡು ತಿಮ್ಮಪ್ಪಗೆ ಮಲೆನಾಡು ಲೋಹಿಯಾ ಪ್ರಶಸ್ತಿ ಪ್ರದಾನ – ಸಂತೋಷ್ ಸದ್ಗುರು

04/11/2025 4:24 PM

ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ‘ನಾಯಕತ್ವ ಗುಣ’ ಬೆಳೆಸಿಕೊಳ್ಳಲು ‘NSS’ ಸಹಕಾರಿ: ಶಾಸಕ ಗೋಪಾಲಕೃಷ್ಣ ಬೇಳೂರು

04/11/2025 4:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.