Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಭಾರಿ ಹಿನ್ನಡೆ: 60 ಎಕರೆ ಅರಣ್ಯ ಭೂಮಿ ತೆರವುಗೊಳಿಸಲು ಕೋರ್ಟ್ ಆದೇಶ

10/04/2026 9:19 PM

ಬ್ಯಾಂಡೇಜ್ ಇದೆ ಎಂದು ಮತದಾನಕ್ಕೆ ನಿರಾಕರಣೆ: ಮಗುವಿನೊಂದಿಗೆ 5 ಗಂಟೆ ಹಸಿದು ಕಾದು ಹಕ್ಕು ಗೆದ್ದ ಕೇರಳದ ಮಹಿಳೆ !

10/04/2026 9:07 PM

ಲೆಬನಾನ್ ರಕ್ತಪಾತಕ್ಕೆ ಭಾರತ ತೀವ್ರ ಕಳವಳ: ‘ಇದು ಅತ್ಯಂತ ಆತಂಕಕಾರಿ ಬೆಳವಣಿಗೆ’ ಎಂದ ಕೇಂದ್ರ ಸರ್ಕಾರ !

10/04/2026 8:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » RSS ನಿಷೇಧಿಸಿದ್ರೇ ರಾಜ್ಯದಲ್ಲಿ ಮತ್ತು ತುರ್ತು ಪರಿಸ್ಥಿತಿ ಬರಲಿದೆ: ಸಂಸದ ಬಸವರಾಜ ಬೊಮ್ಮಾಯಿ
KARNATAKA

RSS ನಿಷೇಧಿಸಿದ್ರೇ ರಾಜ್ಯದಲ್ಲಿ ಮತ್ತು ತುರ್ತು ಪರಿಸ್ಥಿತಿ ಬರಲಿದೆ: ಸಂಸದ ಬಸವರಾಜ ಬೊಮ್ಮಾಯಿ

By kannadanewsnow0917/10/2025 4:07 PM

ಹಾವೇರಿ: ರಾಜ್ಯ ಸರ್ಕಾರದ ಬೇಜವಾಬ್ದಾರಿ ತನದಿಂದ ಪ್ರತಿಷ್ಠಿತ ಗೂಗಲ್ ಕಂಪನಿ ನಮ್ಮ ರಾಜ್ಯಬಿಟ್ಟು ಆಂಧ್ರಪ್ರದೇಶಕ್ಕೆ ಹೋಗುವಂತಾಗಿದೆ. ಸರ್ಕಾರ ಪ್ರಗತಿಪರವಾಗಿದ್ದರೆ ನಮ್ಮ ರಾಜ್ಯ ಬಿಟ್ಟು ಯೋಜನೆಗಳು ಹೋಗುವುದಿಲ್ಲ. ಈಗಿನ ಸರ್ಕಾರ ನೀವು ಹೋಗುವುದಿದ್ದರೆ ಹೋಗಿ ಅಂತ ಬೇಜವಾಬ್ದಾರಿ ತೋರುತ್ತಿರುವುದರಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿಷ್ಠಿತ ಸಂಸ್ಥೆ ಅಮೇರಿಕಾದ ಹೊರಗಡೆ 1.23 ಲಕ್ಷ ಕೋಟಿ ಬಂಡವಾಳ ಹೂಡುವ ಸಂಸ್ಥೆ ರಾಜ್ಯಕ್ಕೆ ಬರಬೇಕಿತ್ತು ಅದು ಬರದಿರುವುದು ದುರ್ದೈವದ ಸಂಗತಿ, ಕಾರಣ ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ, ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಎಲ್ಲದಕ್ಕೂ ದರ ಪಟ್ಟಿ ಸಿದ್ದವಾಗಿದೆ. ಮೂಲ ಸೌಕರ್ಯ ಕುಸಿದು ಬಿದ್ದಿದೆ. ಇಲ್ಲಿ ಸಾಮಾಜಿಕವಾಗಿ ಶಾಂತಿ ಸುವ್ಯವಸ್ಥೆ ಹದಗೆಟ್ಟಿದೆ. ಅಪರಾಧ ಪ್ರಕರಣ ಹೆಚ್ಚಾಗಿದೆ ಹೀಗಾಗಿ ಆಂಧ್ರದಲ್ಲಿ ಅಷ್ಡೊಂದು ಮಾನವ ಸಂಪನ್ಮೂಲ ಅವಕಾಶ ಇಲ್ಲದಿದ್ದರೂ ಆ ಸಂಸ್ಥೆ ಆಂದ್ರಪ್ರದೇಶದ ಕ್ಕೆ ಹೋಯಿತು.

ನಾವಿದ್ದಾಗ ಪಾಸ್ಕಾನ್ ಕಂಪನಿ ಬಂದಾಗ ಆಂಧ್ರ ಪ್ರದೇಶ, ತಮಿಳುನಾಡು ತಮ್ಮ ರಾಜ್ಯಕ್ಕೆ ತೆಗೆದುಕೊಂಡು ಹೋಗಲು ಪ್ರಯತ್ನಿಸಿದ್ದರು. ನಾವು ಎಲ್ಲ ರೀತಿಯ ಸೌಕರ್ಯ ಕೊಟ್ಟು ಅದನ್ನು ಉಳಿಸಿಕೊಂಡಿದ್ದೇವು. ಅದು ಸುಮಾರು ಒಂದು ಲಕ್ಷ ಕೋಟಿ ಬಂಡವಾಳ ಹೂಡಿದೆ‌. ಈಗಾಗಲೇ 30 ಸಾವಿರ ಜನ ಉದ್ಯೋಗ ಪಡೆದಿದ್ದಾರೆ. ಸರ್ಕಾರ ಪ್ರಗತಿಪರವಾಗಿದ್ದರೆ ನಮ್ಮ ರಾಜ್ಯ ಬಿಟ್ಟು ಯೋಜನೆಗಳು ಹೋಗುವುದಿಲ್ಲ. ಈಗಿನ ಸರ್ಕಾರ ನೀವು ಹೋಗೊದಿದ್ದರೆ ಹೋಗಿ ಅಂತ ಬೇಜವಾಬ್ದಾರಿಯಿಂದ ಮಾತನಾಡುವುದು. ಸಿಎಂ ಹಾಗೂ ಸಚಿವರು ಇದರ ಬಗ್ಗೆ ತಲೆ ಕೆಡಸಿಕೊಳ್ಳದಿರುವುದು ದುರ್ದೈವ ಎಂದು ಬೇಸರ ವ್ಯಕ್ತಪಡಿಸಿದರು.

ವೈಫಲ್ಯ ಮುಚ್ಚಿಕೊಳ್ಳಲು ಸಂಘಕ್ಕೆ ಅಂಕುಶ

ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಸರ್ಕಾರ ನಿಷೇಧ ಹೇರಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆರ್ ಎಸ್ ಎಸ್ ನೂರು ವರ್ಷ ಪೂರೈಸಿದ ಸಂದರ್ಭದಲ್ಲಿ ಎಲ್ಲ ನಗರ ಪ್ರದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಸ್ವಯಂ ಸೇವಕರು ಸೇರುತ್ತಿದ್ದಾರೆ. ಇದರಿಂದ ವಿಚಲಿತರಾಗಿದ್ದಾರೆ. ಕಾಂಗ್ರೆಸ್ ಯಾವಾಗಲೂ ಅಲ್ಪ ಸಂಖ್ಯಾತ ಆಧಾರಿತ ರಾಜಕಾರಣ ಮಾಡುತ್ತಿದೆ. ಅಲ್ಲಿ ಪಿಎಫ್ ಐ, ಎಸ್ ಡಿಪಿಐ ಇದೆ. ಅವರು ಕೂಡ ಈ ಥರದ ಚಟುವಟಿಕೆ ಮಾಡಿತ್ತಾರೆ. ಕಾನೂನು ವಿರುದ್ದ ಕೆಲಸ ಮಾಡುತ್ತಾರೆ.

ಕೆಜೆ ಹಳ್ಳಿ ಡಿಜೆ ಹಳ್ಲಿಯಲ್ಲಿ ಪೊಲಿಸ್ ಸ್ಟೇಷನ್ ಮೇಲೆ ದಾಳಿ ಮಾಡಿದಾಗ ನಾವು ಹತೋಟಿಗೆ ತಂದು ಮುನ್ನೂರು ಜನರನ್ನು ಒಳಗೆ ಹಾಕಿದ್ದೇವು. ಆ ಎಲ್ಲ ಸಮಾಜ ಘಾತಕ ಶಕ್ತಿಗಳಿಗೆ ರಕ್ಷಣೆ ಕೊಡಲು ಸರ್ಕಾರ ಈ ಕೆಲಸ ಮಾಡುತ್ತಿದೆ ಅದನ್ನು ಮರೆ ಮಾಚಲು ಆರ್ ಎಸ್ ಎಸ್ ಮೇಲೆ ದಾಳಿ ಮಾಡುತ್ತಿದ್ದಾರೆ ಆರ್ ಎಸ್ ಎಸ್ ಯಾವಾಗಲೂ ಬಗ್ಗಿಲ್ಲ ಇದೆಲ್ಲ ನೋಡಿದರೆ ಮತ್ತೆ ಎಮರ್ಜೆನ್ಸಿ ಬರುತ್ತಿದೆ ಎನಿಸುತ್ತಿದೆ‌. ಸರ್ಕಾರಿ ಶಾಲೆಗಳ ಆಟದ ಮೈದಾನದಲ್ಲಿ ಮಕ್ಕಳು ಆಟವಾಡುತ್ತಾರೆ, ರಕ್ಷಣಾ ವೇದಿಕೆ ಕನ್ನಡ ಸಂಘಟನೆಗಳು ಕಾರ್ಯಕ್ರಮ ಮಾಡುತ್ತಾರೆ. ಅವರೆಲ್ಲ ಅನುಮತಿ ಪಡೆಯಬೇಕಾಗುತ್ತದೆ. ಸಂಘದವರು ಶೇ 70% ರಷ್ಟು ಖಾಸಗಿ ಸ್ಥಳದಲ್ಲಿ ಶಾಖೆ ನಡೆಸುತ್ತಾರೆ. ಶೇ 30% ರಷ್ಟು ಮಾತ್ರ ಸರ್ಕಾರಿ ಜಾಗದಲ್ಲಿ ನಡೆಯುತ್ತದೆ. ಅದನ್ನು ತಡೆಯಲು ಈ ಸರ್ಕಾರ ಮುಂದಾಗಿದೆ.

ಈ ಸರ್ಕಾರ ಬಂದ ಮೇಲೆ ಜಾತಿ ಜಾತಿ ನಡುವೆ ಗದ್ದಲ ಉಂಟುಮಾಡುತ್ತಿದೆ. ಗಣತಿ ಹೆಸರಲ್ಲಿ ಜಾತಿ ಮಾಡುತ್ತಿದೆ‌. ಸಮಾಜವಾದಿ ಎಂದು ಹೇಳುವ ಸಿದ್ದರಾಮಯ್ಯ ಜಾತಿಸ್ಟ್ ಸಿಎಂ ಆಗಿದ್ದಾರೆ. ಕರ್ನಾಟಕದ ಸಾಮರಸ್ಯದ ವಾತಾವರಣ ಹಾಳು ಮಾಡಿದ್ದಾರೆ.. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು, ಸಿಎಂ ಸ್ಥಾನ ಉಳಿಸಿಕೊಳ್ಳು ಈ ರೀತಿ ಮಾಡುತ್ತಿದ್ದಾರೆ. ಇವತ್ತೆ ಚುನಾವಣೆ ನಡೆದರೆ ಕಾಂಗ್ರೆಸ್ 25 ಸ್ಥಾನ ಗೆಲ್ಲುವುದು ಕಷ್ಟ ಎಂದು ವಾಗ್ದಾಳಿ ನಡೆಸಿದರು‌.

ರೇಷನ್ ಕಾರ್ಡ್ ರದ್ದು ಮಾಡುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರದ ಬಳಿ ದುಡ್ಡಿಲ್ಲ ಅನ್ನುವ ಬದಲು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಕಡಿಮೆ ಮಾಡಿ ತಮ್ಮ ಹಣಕಾಸಿನ ದುಸ್ಥಿತಿ ಮುಚ್ಚಿಕೊಳ್ಳಲು ಈ ಕೆಲಸ ಮಾಡುತ್ತಿದ್ದಾರೆ‌ ಎಂದು ಹೇಳಿದರು.

ಹುಲಿ ದಾಳಿಗೆ ತುತ್ತಾದ ಮಹದೇವಗೌಡ ಸಂಪೂರ್ಣ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ: ಸಿಎಂ ಸಿದ್ಧರಾಮಯ್ಯ

Share. Facebook Twitter LinkedIn WhatsApp Email

Related Posts

BREAKING: ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಭಾರಿ ಹಿನ್ನಡೆ: 60 ಎಕರೆ ಅರಣ್ಯ ಭೂಮಿ ತೆರವುಗೊಳಿಸಲು ಕೋರ್ಟ್ ಆದೇಶ

10/04/2026 9:19 PM1 Min Read

BREAKING: ಏ.13ರಿಂದ ಬೆಂಗಳೂರಿನ ಪೀಣ್ಯ ಫ್ಲೈಓವರ್ 4 ದಿನ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

10/04/2026 8:51 PM1 Min Read

ನಾಳೆಯಿಂದ ಬಸವನ ನೆಲದಲ್ಲಿ ಸುದ್ದಿ ಮನೆ ಪತ್ರಕರ್ತರದ್ದೇ ಸಡಗರ: ಸಮ್ಮೇಳನಕ್ಕೆ ಸಜ್ಜಾದ ಬೀದರ ನಗರಿ

10/04/2026 8:38 PM3 Mins Read
Recent News

BREAKING: ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಭಾರಿ ಹಿನ್ನಡೆ: 60 ಎಕರೆ ಅರಣ್ಯ ಭೂಮಿ ತೆರವುಗೊಳಿಸಲು ಕೋರ್ಟ್ ಆದೇಶ

10/04/2026 9:19 PM

ಬ್ಯಾಂಡೇಜ್ ಇದೆ ಎಂದು ಮತದಾನಕ್ಕೆ ನಿರಾಕರಣೆ: ಮಗುವಿನೊಂದಿಗೆ 5 ಗಂಟೆ ಹಸಿದು ಕಾದು ಹಕ್ಕು ಗೆದ್ದ ಕೇರಳದ ಮಹಿಳೆ !

10/04/2026 9:07 PM

ಲೆಬನಾನ್ ರಕ್ತಪಾತಕ್ಕೆ ಭಾರತ ತೀವ್ರ ಕಳವಳ: ‘ಇದು ಅತ್ಯಂತ ಆತಂಕಕಾರಿ ಬೆಳವಣಿಗೆ’ ಎಂದ ಕೇಂದ್ರ ಸರ್ಕಾರ !

10/04/2026 8:52 PM

BREAKING: ಏ.13ರಿಂದ ಬೆಂಗಳೂರಿನ ಪೀಣ್ಯ ಫ್ಲೈಓವರ್ 4 ದಿನ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

10/04/2026 8:51 PM
State News
KARNATAKA

BREAKING: ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಭಾರಿ ಹಿನ್ನಡೆ: 60 ಎಕರೆ ಅರಣ್ಯ ಭೂಮಿ ತೆರವುಗೊಳಿಸಲು ಕೋರ್ಟ್ ಆದೇಶ

By kannadanewsnow0910/04/2026 9:19 PM KARNATAKA 1 Min Read

ಕೋಲಾರ: ಅರಣ್ಯ ಭೂಮಿ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಅವರಿಗೆ ದೊಡ್ಡ…

BREAKING: ಏ.13ರಿಂದ ಬೆಂಗಳೂರಿನ ಪೀಣ್ಯ ಫ್ಲೈಓವರ್ 4 ದಿನ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

10/04/2026 8:51 PM

ನಾಳೆಯಿಂದ ಬಸವನ ನೆಲದಲ್ಲಿ ಸುದ್ದಿ ಮನೆ ಪತ್ರಕರ್ತರದ್ದೇ ಸಡಗರ: ಸಮ್ಮೇಳನಕ್ಕೆ ಸಜ್ಜಾದ ಬೀದರ ನಗರಿ

10/04/2026 8:38 PM

ಶಿವಮೊಗ್ಗ: ಉಳವಿಯ ಚಪ್ಪಲಿ ಅಂಗಡಿ ಮಾಲೀಕ ರಾಮು ಪುತ್ರಿ ಸ್ಪೂರ್ತಿ ಅದ್ಭುತ ಸಾಧನೆ: ಪಿಯು ಪರೀಕ್ಷೆಯಲ್ಲಿ 600ಕ್ಕೆ 541 ಅಂಕ

10/04/2026 8:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.