ಬೆಂಗಳೂರು: ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವಂತ ನಟ ಕಮಲ್ ಹಾಸನ್ ಬಹಿರಂಗವಾಗಿ ಕ್ಷಮೆ ಕೇಳಬೇಕು. ಇಲ್ಲದೇ ಹೋದರೇ ಕರ್ನಾಟಕದಲ್ಲಿ ಅವರ ಅಭಿನಯದ ಥಗ್ ಲೈಫ್ ಸಿನಿಮಾವನ್ನು ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಅಂತ ನಿರ್ಮಾಪಕ ಸಾರಾ ಗೋವಿಂದ್ ಎಚ್ಚರಿಕೆ ನೀಡಿದ್ದಾರೆ.
ಇಂದು ಫಿಲ್ಮಂ ಚೇಂಬರ್ ನಲ್ಲಿ ನಡೆದಂತ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ನಮಗೆ ಯಾರಿಗೂ ಕಮಲ್ ಹಾಸನ್ ಬಗ್ಗೆ ಕನಿಕರವಿಲ್ಲ. ಇಂದು ಅಥವಾ ನಾಳೆಯೊಳಗೆ ನಟ ಕಮನಲ್ ಹಾಸನ್ ಕನ್ನಡಿಗರನ್ನು ಕ್ಷಮೆ ಕೇಳಬೇಕು. ಒಂದು ವೇಳೆ ಬಹಿರಂಗವಾಗಿ ಕ್ಷಮೆ ಕೇಳದೇ ಇದ್ದರೇ ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಅವರ ಥಗ್ ಲೈಫ್ ಸಿನಿಮಾ ರಿಲೀಸ್ ಗೆ ಅವಕಾಶ ನೀಡುವುದಿಲ್ಲ ಎಂದರು.
ಫಿಲ್ಮಂ ಚೇಂಬರ್ ಅಧ್ಯಕ್ಷ ನರಸಿಂಹಲು ಮಾತನಾಡಿ, ನಟ ಕಮಲ್ ಹಾಸನ್ ಹೇಳಿಕೆಯನ್ನು ಕರವೇ, ಹಲವಾರು ಕನ್ನಡಪರ ಸಂಘಟನೆಗಳು ಖಂಡಿಸಿದ್ದಾವೆ. ಅಲ್ಲದೇ ಅವರ ಅಭಿನಯದ ಥಗ್ ಲೈಫ್ ಸಿನಿಮಾ ಕರ್ನಾಟಕದಲ್ಲಿ ನಿಷೇಧಿಸುವಂತೆ ಒತ್ತಾಯಿಸಿದ್ದಾರೆ. ಕಮಲ್ ಹಾಸನ್ ಮಾಡಿರುವ ತಪ್ಪು ಮನವರಿಕೆ ಮಾಡಿಸಿ ಕ್ಷಮೆ ಕೇಳಿಸುವ ಪ್ರಯತ್ನ ಮಾಡ್ತೀವಿ ಅಂತ ಹೇಳಿದ್ದಾರೆ ಎಂದರು.
ಡಿಜಿ, ಗೃಹ ಸಚಿವ, ಸಿಎಂಗೆ ದೂರು ನೀಡಿದರೂ ಕ್ರಮ ಇಲ್ಲ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ
BREAKING : 43 ಕ್ರಿಮಿನಲ್ ಕೇಸ್ ಹಿಂಪಡೆಯುವ ರಾಜ್ಯ ಸರ್ಕಾರದ ಕ್ರಮಕ್ಕೆ ಹಿನ್ನಡೆ: ಹೈಕೋರ್ಟ್ ನಿಂದ ಆದೇಶವೇ ರದ್ದು.!