Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
Morning habits to avoid

ಬೆಳಗೆದ್ದು ಈ ಕೆಲಸ ಮಾಡಿ ದಿನವಿಡೀ ಉತ್ಸಾಹಭರಿತರಾಗಿ ಇರ್ತೀರಾ.! ಈ ಸ್ಮಾರ್ಟ್ ಟಿಪ್ಸ್ ನಿಮ್ಮ ಜೀವನ ಬದಲಿಸುತ್ತೆ

22/08/2025 9:58 PM

BREAKING : ವಾಹನ ಸವಾರರಿಗೆ ಬಿಗ್ ಶಾಕ್ ; 20 ವರ್ಷಕ್ಕಿಂತ ಹಳೆ ವಾಹನಗಳ ‘ನೋಂದಣಿ ಶುಲ್ಕ’ ಹೆಚ್ಚಳ

22/08/2025 9:49 PM

BREAKING : ಸೆಪ್ಟೆಂಬರ್ 3,4ರಂದು ನವದೆಹಲಿಯಲ್ಲಿ ‘GST ಮಂಡಳಿಯ 56ನೇ ಸಭೆ’ ನಿಗದಿ |GST Council Meeting

22/08/2025 9:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ದಲಿತರಿಗೆ ಮೀಸಲಿಟ್ಟ ಅನುದಾನ ಡೈವೋರ್ಟ್ ಆಗಿದ್ದರೆ ಬಿಜೆಪಿ ದಾಖಲೆ ನೀಡಲಿ: ಸಚಿವ ಪ್ರಿಯಾಂಕ್ ಖರ್ಗೆ
KARNATAKA

BIG NEWS: ದಲಿತರಿಗೆ ಮೀಸಲಿಟ್ಟ ಅನುದಾನ ಡೈವೋರ್ಟ್ ಆಗಿದ್ದರೆ ಬಿಜೆಪಿ ದಾಖಲೆ ನೀಡಲಿ: ಸಚಿವ ಪ್ರಿಯಾಂಕ್ ಖರ್ಗೆ

By kannadanewsnow0928/07/2025 2:03 PM

ಕಲಬುರ್ಗಿ: SCCP/ TSP ಅನುದಾನ ಡೈವೋರ್ಟ್ ಆಗಿದ್ದರೆ‌ ಆ ಬಗ್ಗೆ ಬಿಜೆಪಿ ದಾಖಲೆ ನೀಡಲಿ. ಹಾಗೆ ಆಗಿದ್ದರೆ ಕ್ರಮ‌ ಜರುಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು‌ ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.

ಕಲಬುರಗಿಯಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮದವರೊಂದಿಗೆ ಮಾತನಾಡಿದಂತ ಅವರು, ಬಿಜೆಪಿ ನಾಯಕರು ಸುಮ್ಮನೆ ಆರೋಪ ಮಾಡುವುದು ಬಿಟ್ಟು ಜನರಿಗೆ ದಾರಿ ತಪ್ಪಿಸುವುದನ್ನು ಬಿಟ್ಟು ಸರ್ಕಾರಕ್ಕೆ ದಾಖಲೆ ಒದಗಿಸಲಿ. ಬಿಜೆಪಿ ಕಾಲದಲ್ಲಿ ಎಸ್ ಸಿಸಿ ಪಿ / ಟಿಎಸ್ ಪಿ ಅನುದಾನ ಡೈವರ್ಟ್ ಆಗಿತ್ತು. ಅದನ್ನು ಅಂದಿನ‌ ಸಿಎಂ‌ ಬೊಮ್ಮಾಯಿ‌ ಒಪ್ಪಿಕೊಂಡಿದ್ದರು. ಈಗ ಅದೇ ಬಿಜೆಪಿ‌ ನಾಯಕರು ತಪ್ಪು ಮಾಹಿತಿ ಕೊಡುತ್ತಿದ್ದಾರೆ. ಬಿಜೆಪಿಯವರ ಆರೋಪಗಳಿಗೆ ಸದನದಲ್ಲೇ ಉತ್ತರ ನೀಡಲಾಗಿದೆ‌ ಎಂದರು.

ಕೇಂದ್ರದಿಂದ ಅನುದಾನ ತರಲಿ

ದಲಿತರ ಬಗ್ಗೆ ಆದಿವಾಸಿಗಳ ಬಗ್ಗೆ ನಿಜವಾದ ಕಾಳಜಿ‌ ಇದ್ದರೆ ಬಿಜೆಪಿ ನಾಯಕರು ಕೇಂದ್ರದಿಂದ ಅನುದಾನ ತರಿಸಿ‌ಕೊಡಲಿ ಎಂದು‌ ಸವಾಲು ಹಾಕಿದ ಸಚಿವರು ಬಿಜೆಪಿ‌ ಆಡಳಿತವಿರುವ ರಾಜ್ಯದಲ್ಲಾದರೂ ಅನುದಾನ ಒದಗಿಸಲಿ ಎಂದು ಆಗ್ರಹಿಸಿದರು.

ವಿರೋಧ ಪಕ್ಷದ ಶಾಸಕರಿಗೆ ಅನುದಾನ ಕೊರತೆಯಾಗಿದೆ ಎಂದು ಹೇಳಲಾದ ಆರೋಪಕ್ಕೆ ಉತ್ತರಿಸಿದ ಸಚಿವರು, ಎಲ್ಲಾ ಶಾಸಕರು ತಮ್ಮ ಕ್ಷೇತ್ರಕ್ಕೆ‌ ಹೆಚ್ಚಿನ‌ ಅನುದಾನ ನಿರೀಕ್ಷೆ ಮಾಡುವುದು ತಪ್ಪಲ್ಲ. ಅಂದು ಬಿಜೆಪಿ ಸರ್ಕಾರ ಇದ್ದಾಗಲೂ ಕೂಡಾ ನಮಗೆ ಅನುದಾನ ಬಿಡುಗಡೆ ಮಾಡುವಲ್ಲಿ ತಾರತಮ್ಯ ಎಸಗಲಾಗಿತ್ತು. ಈ ಬಗ್ಗೆ ನಾನು ಹಲವಾರು ಬಾರಿ ಹೇಳಿದ್ದೇನೆ ಎಂದರು.

ಕ್ಯಾಬಿನೆಟ್ ನಿರ್ಣಯಗಳ ವರದಿ

ಕಲಬುರಗಿ ಯಲ್ಲಿ ನಡೆದ ಕ್ಯಾಬಿನೆಟ್‌ನಲ್ಲಿ ಕೈಗೊಂಡ ನಿರ್ಣಯಗಳ ಜಾರಿ ಬಗ್ಗೆ ಸಧ್ಯದಲ್ಲೇ ಸಮಗ್ರ ಮಾಹಿತಿ ನೀಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಅವರು ಹೇಳಿದರು.

ಯೂರಿಯಾ ಸರಬರಾಜಿಗೆ ಕೇಂದ್ರಕ್ಕೆ ಮನವಿ

ಯೂರಿಯಾ ಕೊರತೆ ಅಷ್ಟೊಂದು ಕಾಣಿಸುತ್ತಿಲ್ಲ. ಕಳೆದ ಒಂದುವರೆ ತಿಂಗಳ ಹಿಂದೆ ಕೇಂದ್ರ ಕೃಷಿ‌ ಸಚಿವರನ್ನು ಭೇಟಿ ಮಾಡಿ‌ದ ಕೃಷಿ‌ ಸಚಿವ ಚೆಲುವರಾಯಸ್ವಾಮಿ‌ ಯೂರಿಯಾ ಗೊಬ್ಬರ ಸರಬರಾಜಿಗೆ ಆದ್ಯತೆ ನೀಡುವಂತೆ ಮನವಿ‌ ಸಲ್ಲಿಸಿದ್ದರು.

ಈ ಸಲ ನಮಗೆ ಅಗತ್ಯವಿರುವ ಗೊಬ್ಬರ ಸರಬರಾಜು ಮಾಡಿಲ್ಲ. ರಾಜ್ಯದ ಓಪಿನಿಂಗ್ ಬ್ಯಾಲೆನ್ಸ ನ್ನು‌ ಬೇಡಿಕೆಯಲ್ಲಿ ಕಡಿತಗೊಳಿಸಿದ ಕೇಂದ್ರ ಸರ್ಕಾರ ಉಳಿದ ರಸಗೊಬ್ಬರ ಸರಬರಾಜು‌ ಮಾಡಿದೆ. ಈ ಹಿಂದೆ ರಾಜ್ಯದ ಓಪಿನಿಂಗ್ ಬ್ಯಾಲೆನ್ಸ್ ನ್ನು‌ ಪರಿಗಣಿಸುತ್ತಿರಲಿಲ್ಲ ಎಂದರು.

ಕಲಬುರಗಿ ಜಿಲ್ಲೆಯಲ್ಲಿ ಈ ಸಲ 100% ಬಿತ್ತನೆಯಾಗಿದೆ. 500 ಟನ್ ಗೊಬ್ಬರ ಬೇಡಿಕೆ ಇದ್ದು, 200 ಟನ್ ಗೊಬ್ಬರವನ್ನು ಬಾಗಲಕೋಟೆಯಿಂದ ತರಸಲಾಗುತ್ತಿದೆ. ಉಳಿದ 300 ಟನ್ ರಸಗೊಬ್ಬರವನ್ನು ಆದಷ್ಟು ಬೇಗ ತರಿಸಲಾಗುವುದು. ರಸಗೊಬ್ಬರ ವಿಚಾರದಲ್ಲಿ ಇಲ್ಲಿ ಪ್ರತಿಭಟನೆ ಮಾಡುವ ಬದಲು ಬಿಜೆಪಿಗರು ದಿಲ್ಲಿಯಲ್ಲಿ ಪ್ರತಿಭಟನೆ ಮಾಡಿ ರಾಜ್ಯಕ್ಕೆ ಗೊಬ್ಬರ ತರಿಸಿಕೊಡಲಿ ಎಂದು ಸಲಹೆ ನೀಡಿದರು.

ಸಿಎಂ ಗಾದಿ ತಪ್ಪಿದ್ದಕ್ಕೆ ರಿಗ್ರೇಟ್ ಇಲ್ಲ

ರಾಜ್ಯ ಸಭಾ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ತಮಗೆ ಸಿಎಂ ಪದವಿ ಸಿಗದಿರುವ ಬಗ್ಗೆ ಹೇಳಿದ್ದಾರೆ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು ಸಂಪೂರ್ಣ ವಿಡಿಯೋ ನೋಡಿದಾಗ ಮಾತ್ರ ಅವರ ಮಾತಿನ ಅರ್ಥ ಆಗುತ್ತದೆ. ಪಕ್ಷಕ್ಕಾಗಿ ಅವರು ದುಡಿದಿದ್ದಾರೆ. ಇಲ್ಲಿಂದ ದಿಲ್ಲಿಯವರೆಗೆ ಅವರು ಮುಟ್ಟಿದ್ದಾರೆ. ಸಿಎಂ ಪದವಿ ತಪ್ಪಿರುವ ಬಗ್ಗೆ ಅವರಿಗೆ ಯಾವುದೇ ರಿಗ್ರೆಟ್ ಇಲ್ಲ
ಅವರ ಮುಂದಿನ ರಾಜಕೀಯ ಜೀವನದ ನಿರ್ಧಾರಗಳನ್ನು ಅವರು ತೆಗೆದುಕೊಳ್ಳುತ್ತಾರೆ. ಅವರ ನಿರ್ಧಾರವನ್ನು ಸೋನಿಯಾಗಾಂಧಿ, ರಾಹುಲ್ ಗಾಂಧಿ‌ ಹಾಗೂ ಪ್ರಿಯಾಂಕಾ ಗಾಂಧಿ ಕೂಡಾ ಗೌರವಿಸುತ್ತಾರೆ ಎಂದರು.

ಸುರ್ಜೇವಾಲ್ ಬದಲು ಸಂತೋಷ್ ಮೀಟಿಂಗ್ ತಗೋಬೇಕಿತ್ತಾ?

ರಂದೀಪ್ ಸುರ್ಜೆವಾಲ ಅವರು ಸಚಿವರ ಸಭೆ ಕರೆದಿರುವುದಕ್ಕೆ ಬಿ.ಎಲ್. ಸಂತೋಷ ಆಕ್ಷೇಪ ವ್ಯಕ್ತಪಡಿಸಿರುವುದರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಸುರ್ಜೆವಾಲ ಬದಲಿಗೆ ದತ್ತಾತ್ರೇಯ ಹೊಸಬಾಳೆ ಅಥವಾ ಸಂತೋಷ್ ಸಭೆ ತೆಗೆದುಕೊಳ್ಳಬೇಕೇ ? ಎಂದು ಪ್ರಶ್ನಿಸಿದರು.

ಕೊಡುಗೆ ನೀಡಲಿ, ಆಮೇಲೆ ಮಾತನಾಡಲಿ

ಮನ ಕೀ ಬಾಥ್ ಕೇಳಿ ಕೇಳಿ ಸಾಕಾಗಿದೆ. ಏನಾದರೂ ಕೊಡುಗೆ ಕೊಟ್ಟು ಮೋದಿ ಮಾತನಾಡಲಿ. ಈ ಹಿಂದೆ ಕಲಬುರಗಿ ರೊಟ್ಟಿ ಬಗ್ಗೆ ಮಾತನಾಡಿದ್ದರು ಏನಾದರೂ‌ ಕೊಡುಗೆ ಕೊಟ್ಟಿದ್ದಾರೆಯೇ? ಈಗ ಕೋಟೆ ಬಗ್ಗೆ ಮಾತನಾಡಿದ್ದಾರೆ ಮುಂದೆ ದಿನ ಮತ್ತೊಂದು‌ ವಿಷಯದ‌ ಬಗ್ಗೆ ಮಾತನಾಡುತ್ತಾರೆ. ಕೊಡುಗೆ ನೀಡಿ ಆಮೇಲೆ ಮಾತನಾಡಲಿ ಎಂದು ಕುಟುಕಿದರು.

ಕೇಂದ್ರಿಯ ವಿವಿಗಳು ಆರ್ ಎಸ್ ಎಸ್ ಶಾಖೆಗಳಾಗಿವೆ

ಕೇಂದ್ರಿಯ ವಿಶ್ವವಿದ್ಯಾಲಯ ಗಳು ಆರ್ ಎಸ್ ಎಸ್ ಶಾಖೆಗಳಾಂತಾಗಿವೆ ಎಂದು ಆರೋಪಿಸಿದ ಖರ್ಗೆ, ಗ್ರಾಮೀಣಾಭಿವೃದ್ಧಿ ಹಾಗೂ‌ ಪಂಚಾಯತ್ ರಾಜ್ ಇಲಾಖೆಗೆ ಸಂಬಂದಿಸಿದ ಕಾರ್ಯಕ್ರಮ ನಡೆಸಲು ನಮಗೆ ಅನುಮತಿ ನಿರಾಕರಿಸಲಾಗಿದೆ. ಖರ್ಗೆ ಸಾಹೇಬರು ಈ ಭಾಗಕ್ಕೆ ಅನುಕೂಲ ಆಗಲಿ ಎಂದು ಜಿಲ್ಲೆಗೆ ಕೇಂದ್ರೀಯ ವಿವಿ ತಂದರು. ಆದರೆ, ಅದು ಆರ್ ಎಸ್ ಎಸ್ ಶಾಖೆ ಮಾಡಲು ಅನುಕೂಲ ಮಾಡಿಕೊಟ್ಟಂತಾಗಿದೆ ಎಂದು ಟೀಕಿಸಿದರು.

ಬಾಡಿಗೆ ಭಾಷಣಕಾರರ‌ ಬಗ್ಗೆ ಏನು ಹೇಳಲಿ

ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅಯೋಗ್ಯ ಪದ ಬಳಸಿದ್ದಕ್ಕೆ ಚಕ್ರವರ್ತಿ ಸೂಲಿಬೆಲೆ ಅವರ ಮೇಲೆ ದಾಖಲಾದ ಎಫ್ ಐ ಆರ್ ಅನ್ನು ಸುಪ್ರೀಂ ಕೊರ್ಟ್ ರದ್ದು ಮಾಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಾಡಿಗೆ ಭಾಷಣಕಾರರ ಬಗ್ಗೆಯಾಗಲೀ, ಅವರ ಬಾಸ್ ಗಳ ಬಗ್ಗೆಯಾಗಲೀ ನಾನೇನು ಉತ್ತರಿಸಲಿ ?. ನಾನು ಯಾವುದಾದರೂ ಎಫ್ ಐ ಆರ್ ಹಾಕಿದ್ದರೆ ತೋರಿಸಲಿ. ಯಾರೋ ಒಬ್ಬರು ಅಲ್ಲಿನ ಸ್ಥಳೀಯ ನಾಯಕರು ಹಾಕಿದ್ದರೆ ಅದಕ್ಕೆ‌ ನಾನೇನು ಹೇಳಲಿ? ಎಂದು ಮಾರುತ್ತರ ನೀಡಿದರು.

ತಮ್ಮ ಬಗ್ಗೆ ಬಿಜೆಪಿ ನಾಯಕರು ಅವಹೇಳನಕಾರಿ ಟೀಕೆ ಮಾಡಿದ್ದನ್ನು ಪ್ರಸ್ತಾಪಿಸಿದ ಖರ್ಗೆ, ನನ್ನ ಬಗ್ಗೆ ಸದನದಲ್ಲೇ‌ ಬಿಜೆಪಿಯವರು ಅವಹೇಳನ‌ ರೀತಿಯಲ್ಲಿ ಮಾತನಾಡಿದ್ದಾರೆ. ನನ್ನ ಬಗ್ಗೆ ಪ್ರಸ್ತಾಪ ಮಾಡಲಿಲ್ಲ ಅಂದರೆ ಅವರಿಗೆ ಆರ್ ಎಸ್ ಎಸ್ ನಲ್ಲಿ ಬೆಲೆ‌ ಇರುವುದಿಲ್ಲ, ಅವರಿಗೆ ಮುಂಭಡ್ತಿ ಸಿಗುವುದಿಲ್ಲ. ಬಿಜೆಪಿ ನಾಯಕರು ಬಹಿರಂಗ ವೇದಿಕೆಗೆ ಬರಲಿ ನಾನೊಬ್ಬನೇ ಸಾಕು ಅವರು‌ ಏನೇನೂ ಹೇಳಿದ್ದಾರೆ ಎಲ್ಲಾ ವಿವರವಾಗಿ ಹೇಳುತ್ತೇನೆ ಎಂದು ಸವಾಲ್ ಹಾಕಿದರು.

ಇಂದಿರಾ ಮಾಡಿದ ಅರ್ಧ ಕೆಲಸವನ್ನಾದರೂ ಮೋದಿ ಮಾಡಲಿ

ಮೋದಿ ಅವರು ಹೆಚ್ಚಿನ‌ ಅವಧಿಯಲ್ಲಿ ಪ್ರಧಾನಿಯಾಗುವ ಮೂಲಕ ಇಂದಿರಾಗಾಂಧಿ ಅವರ ದಾಖಲೆ‌ ಮುರಿದಿದ್ದಾರೆ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದರ ಸಚಿವರು, ಇಂದಿರಾಗಾಂಧಿ ಮಾಡಿದ ಕೆಲಸದಲ್ಲಿ ಅರ್ಧದಷ್ಟಾದರೂ ಕೆಲಸವನ್ನು ಮೋದಿ ಮಾಡಿ ತೋರಿಸಲಿ. ಇಂದಿರಾಗಾಂಧಿ ಬ್ಯಾಂಕ್ ಗಳ ರಾಷ್ಟ್ರೀಕರಣ, ಭೂಮಿ ಉಳುಮೆಗೆ ತಂದ ಸುಧಾರಣೆ ಹಾಗೂ ಪಾಕಿಸ್ತಾನ ವನ್ನು ಎರಡು ಭಾಗ ಮಾಡಿದ್ದು ಸೇರಿದಂತೆ ಹಲವಾರು‌‌ ಕ್ರಾಂತಿಕಾರಿ ಬದಲಾವಣೆ ಮಾಡಿದ್ದಾರೆ. ಇಂದಿರಾಗಾಂಧಿ‌ ಅವರು 44 ಬಾರಿ ಪತ್ರಿಕಾಗೋಷ್ಠಿ ಮಾಡಿದ್ದಾರೆ ಇವರೇನು ಮಾಡಿದ್ದಾರೆ? ಮೊನ್ನೆ ರಾಹುಲ್ ಗಾಂಧಿ ಹೇಳಿದಂತೆ ಮೋದಿಯವರ ಬಗ್ಗೆ ಕೆಲ ಮೀಡಿಯಾಗಳು ಹೈಪ್ ಮಾಡುತ್ತಿದ್ದಾರೆ ಅಷ್ಟೇ, ಎಂದು ವಾಗ್ದಾಳಿ ನಡೆಸಿದರು.

ಚುನಾವಣೆಯಲ್ಲಿ ಅಕ್ರಮ

ಬಿಜೆಪಿ ಪಕ್ಷ ಚುನಾವಣೆ ಆಯೋಗವನ್ನು ತಮ್ಮ‌‌ ಕೈಗೊಂಬೆಯನ್ನಾಗಿ ಮಾಡಿಕೊಂಡಿದೆ ಎಂದು ಆರೋಪಿಸಿದ ಖರ್ಗೆ, ಕರ್ನಾಟಕದಲ್ಲಿ‌ ಚುನಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ ಹಾಗೆ ಮಹಾರಾಷ್ಟ್ರದ ಲ್ಲಿಯೂ ಆಗಿದೆ. ಈ ಬಗ್ಗೆ ರಾಹುಲ್ ಗಾಂಧಿ ಈಗಾಗಲೇ ಹೇಳಿದ್ದಾರೆ. ಇಂದಿನಿಂದ ಸಿಂದೂರ ಬಗ್ಗೆ ಚರ್ಚೆ ಆಗುತ್ತದೆ. ನಂತರ ಚುನಾವಣೆ ಅಕ್ರಮದ ಬಗ್ಗೆ ಎಲ್ಲವೂ ದಾಖಲೆ ಸಮೇತ ಮಾತನಾಡುತ್ತೇವೆ‌ ಎಂದರು.

ನಕಲಿ ಜನನ ಪ್ರಮಾಣಪತ್ರ ಕೇಸ್: ಶಟ್ಲರ್ ಲಕ್ಷ್ಯ ಸೇನ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ | Lakshya Sen

Share. Facebook Twitter LinkedIn WhatsApp Email

Related Posts

BREAKING NEWS: ಮಗಳು ಇದ್ದದ್ದು ಸುಳ್ಳು. ಸತ್ತದ್ದು ಸುಳ್ಳು. ಎಲ್ಲವೂ ಸುಳ್ಳು ತಪ್ಪು ಒಪ್ಪಿಕೊಂಡ – ಸುಜಾತ ಭಟ್

22/08/2025 9:30 PM1 Min Read

ಮದ್ದೂರು ತಾಲೂಕು ಕಂದಾಯ ಇಲಾಖೆ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ವಿ.ಎ.ಮುರಳೀಧರ

22/08/2025 8:49 PM2 Mins Read

recruitment of Agniveer : ಅಗ್ನಿವೀರ್ ನೇಮಕಾತಿಗೆ ಅರ್ಜಿ ಆಹ್ವಾನ

22/08/2025 8:13 PM1 Min Read
Recent News
Morning habits to avoid

ಬೆಳಗೆದ್ದು ಈ ಕೆಲಸ ಮಾಡಿ ದಿನವಿಡೀ ಉತ್ಸಾಹಭರಿತರಾಗಿ ಇರ್ತೀರಾ.! ಈ ಸ್ಮಾರ್ಟ್ ಟಿಪ್ಸ್ ನಿಮ್ಮ ಜೀವನ ಬದಲಿಸುತ್ತೆ

22/08/2025 9:58 PM

BREAKING : ವಾಹನ ಸವಾರರಿಗೆ ಬಿಗ್ ಶಾಕ್ ; 20 ವರ್ಷಕ್ಕಿಂತ ಹಳೆ ವಾಹನಗಳ ‘ನೋಂದಣಿ ಶುಲ್ಕ’ ಹೆಚ್ಚಳ

22/08/2025 9:49 PM

BREAKING : ಸೆಪ್ಟೆಂಬರ್ 3,4ರಂದು ನವದೆಹಲಿಯಲ್ಲಿ ‘GST ಮಂಡಳಿಯ 56ನೇ ಸಭೆ’ ನಿಗದಿ |GST Council Meeting

22/08/2025 9:36 PM

BREAKING NEWS: ಮಗಳು ಇದ್ದದ್ದು ಸುಳ್ಳು. ಸತ್ತದ್ದು ಸುಳ್ಳು. ಎಲ್ಲವೂ ಸುಳ್ಳು ತಪ್ಪು ಒಪ್ಪಿಕೊಂಡ – ಸುಜಾತ ಭಟ್

22/08/2025 9:30 PM
State News
KARNATAKA

BREAKING NEWS: ಮಗಳು ಇದ್ದದ್ದು ಸುಳ್ಳು. ಸತ್ತದ್ದು ಸುಳ್ಳು. ಎಲ್ಲವೂ ಸುಳ್ಳು ತಪ್ಪು ಒಪ್ಪಿಕೊಂಡ – ಸುಜಾತ ಭಟ್

By kannadanewsnow0722/08/2025 9:30 PM KARNATAKA 1 Min Read

ಬೆಂಗಳೂರು: ಮಗಳು ಇದ್ದದ್ದು ಸುಳ್ಳು. ಸತ್ತದ್ದು ಸುಳ್ಳು. ಎಲ್ಲವೂ ಸುಳ್ಳು ಅಂತ ಕಳೆದ ಒಂದು ತಿಂಗಳಿನಿಂದ ಸುದ್ದಿಯಲ್ಲಿದ್ದ ಸುಜಾತ ಭಟ್…

ಮದ್ದೂರು ತಾಲೂಕು ಕಂದಾಯ ಇಲಾಖೆ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ವಿ.ಎ.ಮುರಳೀಧರ

22/08/2025 8:49 PM

recruitment of Agniveer : ಅಗ್ನಿವೀರ್ ನೇಮಕಾತಿಗೆ ಅರ್ಜಿ ಆಹ್ವಾನ

22/08/2025 8:13 PM

ಬೀದಿ ನಾಯಿ ಪ್ರಕರಣ: ಇಂದಿನ ಸುಪ್ರೀಂ ಕೋರ್ಟ್ ತೀರ್ಪಿನ 10 ಪ್ರಮುಖ ಅಂಶಗಳು ಇಲ್ಲಿವೆ

22/08/2025 8:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.