Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗವಾರ್ತೆ : ಕರ್ನಾಟಕ ಸರ್ಕಾರದ 8 ವಿವಿಧ ಇಲಾಖೆಯಲ್ಲಿ ಖಾಲಿ ಇರುವ ‘708’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನ.25 ಲಾಸ್ಟ್ ಡೇಟ್.!

21/11/2025 8:20 AM

ಇರಾನ್ ಜತೆ ತೈಲ ವ್ಯಾಪಾರ ಪ್ರಕರಣ: ಭಾರತ ಸೇರಿದಂತೆ 17 ಸಂಸ್ಥೆಗಳಿಗೆ ಅಮೇರಿಕಾ ನಿರ್ಬಂಧ

21/11/2025 8:14 AM

GOOD NEWS : ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ 4056 ಸರ್ಕಾರಿ ಶಾಲೆಗಳಲ್ಲಿ `LKG, UKG’ ಆರಂಭಕ್ಕೆಶಿಕ್ಷಣ ಇಲಾಖೆ ಆದೇಶ.!

21/11/2025 8:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವೀರಶೈವ ಲಿಂಗಾಯತರು ಕೆಟ್ಟರೆ ರಾಜ್ಯವೇ ಹಾಳಾಗುತ್ತದೆ : ಸಚಿವ ಈಶ್ವರ ಖಂಡ್ರೆ
KARNATAKA

ವೀರಶೈವ ಲಿಂಗಾಯತರು ಕೆಟ್ಟರೆ ರಾಜ್ಯವೇ ಹಾಳಾಗುತ್ತದೆ : ಸಚಿವ ಈಶ್ವರ ಖಂಡ್ರೆ

By kannadanewsnow5706/10/2025 12:35 PM

ಬೆಂಗಳೂರು: ವೀರಶೈವ -ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಇಬ್ಬರೂ ಒಂದೇ ಎಂದು ಪರಮಪೂಜ್ಯ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರೇ ಪ್ರತಿಪಾದಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ವೀರಶೈವ-ಲಿಂಗಾಯತರು ಸುಧಾರಿಸಿದರೆ ರಾಜ್ಯ ಸುಧಾರಿಸುತ್ತದೆ, ವೀರಶೈವ ಲಿಂಗಾಯತರು ಕೆಟ್ಟರೆ ಇಡೀ ರಾಜ್ಯವೇ ಹಾಳಾಗುತ್ತದೆ ಎಂಬ ಜನಜನಿತ ಹೇಳಿಕೆ ಇದೆ. ನಮ್ಮ ಸಮುದಾಯದ ಒಗ್ಗಟ್ಟಿನಲ್ಲಿ ಬಲವಿದೆ. ವಿಘಟನೆಯಲ್ಲಿ ಸೋಲಿದೆ ಎಂದು ಪ್ರತಿಪಾದಿಸಿದರು.

ನಾವೆಲ್ಲರೂ ಭೌಗೋಳಿಕವಾಗಿ ಹಿಂದೂಗಳೇ ಆದರೂ, ನಮ್ಮ ಆಚಾರ-ವಿಚಾರವನ್ನು ಗೌರವಿಸಿ ಸಿಖ್, ಪಾರ್ಸಿ, ಜೈನಿರಿಗೆ ನೀಡಿರುವಂತೆ ಪ್ರತ್ಯೇಕ ಧರ್ಮದ ಮಾನ್ಯತೆಯನ್ನು ವೀರಶೈವ-ಲಿಂಗಾಯತ ಧರ್ಮಕ್ಕೆ ನೀಡಬೇಕು ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಸ್ವಾತಂತ್ರ್ಯಪೂರ್ವದಿಂದ ವಿಶೇಷವಾಗಿ 2000 ಇಸವಿಯಲ್ಲಿ ನಡೆದ ಜನಗಣತಿಯಿಂದಲೂ ಪ್ರತಿಪಾದಿಸುತ್ತಾ ಬಂದಿದೆ. ಜಾತಿಗಣತಿಯಲ್ಲಿ ನಮ್ಮ ಧರ್ಮಕ್ಕೆ ಪ್ರತ್ಯೇಕ ಕಾಲಂ ನೀಡಲು ಒತ್ತಾಯಿಸುತ್ತೇವೆ ಎಂದರು.

ವೀರಶೈವ-ಲಿಂಗಾಯತ ಸಮಾನಾರ್ಥಕ ಪದಗಳು. ಇಷ್ಟಲಿಂಗ ಪೂಜೆ ಮಾಡುವವರು ಮತ್ತು ಅಷ್ಟಾವರ್ಣ ಪಂಚಾಚಾರ ಷಟಸ್ಥಳ ಆಚರಣೆ ಮಾಡುವ ಗುರುಗಳು ಮತ್ತು ವಿರಕ್ತರೂ ಇದ್ದಾರೆ. ಹೀಗಾಗಿ ವೀರಶೈವರು ಮತ್ತು ಲಿಂಗಾಯತರು ಒಟ್ಟಿಗೆ ಇರಬೇಕು ಎಂಬುದು ಸಭಾದ ಸ್ಪಷ್ಟ ನಿಲುವಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
ಪ್ರತ್ಯೇಕ ಧರ್ಮದ ವಿಚಾರಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನ ಸಮುದಾಯದ ನಾಯಕರಾಗಿದ್ದಾರೆ. ಕೆಲವರು ರಾಜಕೀಯ ದುರುದ್ದೇಶದಿಂದ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.

ಬಸವಾದಿ ಶರಣರು ಸಮಸಮಾಜದ ಭವ್ಯ ಕನಸು ಕಂಡಿದ್ದರು. ಅದನ್ನೇ ಮುಖ್ಯಮಂತ್ರಿಗಳು ಪಾಲಿಸುತ್ತಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕೊಡಿಸಲು ಶ್ರಮಿಸುತ್ತಿದ್ದಾರೆ. ಬುದ್ಧ, ಬಸವ, ಅಂಬೇಡ್ಕರ್ ಸಿದ್ಧಾಂವನ್ನು ಅವರು ಗೌರವಿಸುತ್ತಾರೆ. ಬಸವತತ್ವ ಸಾರ್ವಕಾಲಿಕ ಸತ್ಯವಾಗಿದೆ. ಹಿಂದೆ, ಇಂದು ಮತ್ತು ಮುಂದೆಯೂ ಇದು ಜಗತ್ತಿಗೆ ಮಾರ್ಗದರ್ಶನ ಮಾಡುತ್ತದೆ ಎಂದರು.

ನವೆಂಬರ್ ಕ್ರಾಂತಿ ಮಾಧ್ಯಮಗಳ ಚರ್ಚೆಯ ವಸ್ತು ಅಷ್ಟೇ. ಪಕ್ಷದ ಹಂತದಲ್ಲಿ ಈ ಚರ್ಚೆ ನಡೆದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಈಶ್ವರ ಖಂಡ್ರೆ ಉತ್ತರಿಸಿದರು.

If Veerashaiva Lingayats go bad the state will go bad: Minister Eshwar Khandre
Share. Facebook Twitter LinkedIn WhatsApp Email

Related Posts

ಉದ್ಯೋಗವಾರ್ತೆ : ಕರ್ನಾಟಕ ಸರ್ಕಾರದ 8 ವಿವಿಧ ಇಲಾಖೆಯಲ್ಲಿ ಖಾಲಿ ಇರುವ ‘708’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನ.25 ಲಾಸ್ಟ್ ಡೇಟ್.!

21/11/2025 8:20 AM3 Mins Read

GOOD NEWS : ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ 4056 ಸರ್ಕಾರಿ ಶಾಲೆಗಳಲ್ಲಿ `LKG, UKG’ ಆರಂಭಕ್ಕೆಶಿಕ್ಷಣ ಇಲಾಖೆ ಆದೇಶ.!

21/11/2025 8:08 AM1 Min Read

GOOD NEWS : ರಾಜ್ಯದ `ಪಡಿತರ ಚೀಟಿ’ದಾರರಿಗೆ ಗುಡ್ ನ್ಯೂಸ್ : ಫೆಬ್ರವರಿಗೆ ‘ಇಂದಿರಾ ಕಿಟ್’ ಯೋಜನೆ ಜಾರಿ.!

21/11/2025 8:04 AM1 Min Read
Recent News

ಉದ್ಯೋಗವಾರ್ತೆ : ಕರ್ನಾಟಕ ಸರ್ಕಾರದ 8 ವಿವಿಧ ಇಲಾಖೆಯಲ್ಲಿ ಖಾಲಿ ಇರುವ ‘708’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನ.25 ಲಾಸ್ಟ್ ಡೇಟ್.!

21/11/2025 8:20 AM

ಇರಾನ್ ಜತೆ ತೈಲ ವ್ಯಾಪಾರ ಪ್ರಕರಣ: ಭಾರತ ಸೇರಿದಂತೆ 17 ಸಂಸ್ಥೆಗಳಿಗೆ ಅಮೇರಿಕಾ ನಿರ್ಬಂಧ

21/11/2025 8:14 AM

GOOD NEWS : ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ 4056 ಸರ್ಕಾರಿ ಶಾಲೆಗಳಲ್ಲಿ `LKG, UKG’ ಆರಂಭಕ್ಕೆಶಿಕ್ಷಣ ಇಲಾಖೆ ಆದೇಶ.!

21/11/2025 8:08 AM

BREAKING: ಬ್ರೆಜಿಲ್‌ನ COP 30 ಹವಾಮಾನ ಶೃಂಗಸಭೆಯಲ್ಲಿ ಬೆಂಕಿ : 13 ಮಂದಿಗೆ ಗಾಯ | Firebreaks

21/11/2025 8:06 AM
State News
KARNATAKA

ಉದ್ಯೋಗವಾರ್ತೆ : ಕರ್ನಾಟಕ ಸರ್ಕಾರದ 8 ವಿವಿಧ ಇಲಾಖೆಯಲ್ಲಿ ಖಾಲಿ ಇರುವ ‘708’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನ.25 ಲಾಸ್ಟ್ ಡೇಟ್.!

By kannadanewsnow5721/11/2025 8:20 AM KARNATAKA 3 Mins Read

ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಕಾರ್ಖಾನೆ, ರಾಜೀವ್ ಗಾಂಧಿ ಆರೋಗ್ಯ ವಿವಿ ಹೀಗೆ…

GOOD NEWS : ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ 4056 ಸರ್ಕಾರಿ ಶಾಲೆಗಳಲ್ಲಿ `LKG, UKG’ ಆರಂಭಕ್ಕೆಶಿಕ್ಷಣ ಇಲಾಖೆ ಆದೇಶ.!

21/11/2025 8:08 AM

GOOD NEWS : ರಾಜ್ಯದ `ಪಡಿತರ ಚೀಟಿ’ದಾರರಿಗೆ ಗುಡ್ ನ್ಯೂಸ್ : ಫೆಬ್ರವರಿಗೆ ‘ಇಂದಿರಾ ಕಿಟ್’ ಯೋಜನೆ ಜಾರಿ.!

21/11/2025 8:04 AM

BIG NEWS : ಧರ್ಮಸ್ಥಳದ ಬುರುಡೆ ಕೇಸ್ : ಕೋರ್ಟ್ ಗೆ 3923 ಪುಟಗಳ ಚಾರ್ಜ್ ಶೀಟ್, ಸುಳ್ಳು ಸಾಕ್ಷಿ ವರದಿ ಸಲ್ಲಿಸಿದ ‘SIT’

21/11/2025 8:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.