ಮಂಡ್ಯ: ರಾಜ್ಯದಲ್ಲಿ ಮತ್ತೆ ನಾವು ಅಧಿಕಾರಕ್ಕೆ ಬಂದರೇ ಉಚಿತವಾಗಿ 10 ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತದೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ( Former CM Siddaramaiah ) ಘೋಷಿಸಿದ್ದಾರೆ.

BIG NEWS: 2022 ಕಾಮನ್ವೆಲ್ತ್ ಪವರ್ಲಿಫ್ಟಿಂಗ್ ಮತ್ತು ಬೆಂಚ್ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ ಪ್ರತಿಕ್ಷಾ ಜಿ ನಾಯಕ್ ಗೆ ಚಿನ್ನದ ಪದಕ

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆಯಲ್ಲಿ ಮಾತನಾಡಿದಂತ ಅವರು, ನಾವು ಮತ್ತೆ ಅಧಿಕಾರಕ್ಕೆ ಬಂದರೇ ಉಚಿತವಾಗಿ 10 ಕೆಜಿ ಅಕ್ಕಿ ನೀಡುತ್ತೇವೆ. ಬಿಜೆಪಿಯವರು ಅನ್ನಭಾಗ್ಯ ಯೋಜನೆ ಅಕ್ಕಿ ಕಡಿತ ಮಾಡಿದ್ದಾರೆ. ನಾವು ಅಧಿಕಾರಕ್ಕೆ ಬಂದ್ರೇ 4 ಕೋಟಿ ಜನರಿಗೆ ತಲಾ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ ಎಂದರು.

ರಾಜ್ಯದ ಜನತೆಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರದಿಂದ ಹೊಸ ರೈಲು ಮಾರ್ಗಕ್ಕೆ ಹಣ ಮಂಜೂರು

ಸಚಿವ ನಾರಾಯಣಗೌಡ ಜೆಡಿಎಸ್ ನಿಂದ ಬಿಜೆಪಿಗೆ ಹೋದ ಗಿರಾಕಿ. ನಾರಾಯಣಗೌಡ ಕೆ ಆರ್ ಪೇಟೆಯಲ್ಲಿ ಒಂದೇ ಒಂದು ಮನೆ ಕೊಟ್ಟನಾ.? ಬಿಜೆಪಿಯವರ ಮನೆ ಹಾಳಾಗ ಒಂದೇ ಒಂದು ಮನೆ ಕಟ್ಟಸಲು ಆಗಿಲ್ಲ ಎಂಬುದಾಗಿ ಕಿಡಿಕಾರಿದರು.

‘ಕೋವಿಡ್ ಲಸಿಕೆ’ಗೆ ಸಂಬಂಧಿಸಿದ ಸಾವಿಗೆ ನಾವು ಜವಾಬ್ದಾರರಲ್ಲ: ‘ಸುಪ್ರೀಂ ಕೋರ್ಟ್’ಗೆ ಕೇಂದ್ರ ಸ್ಪಷ್ಟನೆ

ಕೆ ಆರ್ ಪೇಟೆಯಲ್ಲಿ ಕಾಂಗ್ರೆಸ್ ಗೆದ್ದರೇ ನನಗೆ ಶಕ್ತಿ ಬಂದಂತೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೇ ಮಾತ್ರ ರಾಜ್ಯ ಉಳಿಸಲು ಸಾಧ್ಯವಿದೆ. ಮಂಡ್ಯದಲ್ಲಿನ 7 ಕ್ಷೇತ್ರಗಳಲ್ಲಿ 7 ಕಾಂಗ್ರೆಸ್ ಗೆದ್ದರೇ ನನಗೆ ಶಕ್ತಿ. ನಾನು ಹೇಳಿದವರಿಗೆ ಮಾತ್ರ ಮತ ಹಾಕಿ ಎಂಬುದಾಗಿ ಹೇಳಿದರು.

Share.
Exit mobile version