ಬೆಂಗಳೂರು : ತಮಿಳು ನಿಂದಲೇ ಕನ್ನಡ ಹುಟ್ಟಿದ್ದು ಎಂದು ನಟ ಕಮಲ್ ಹಾಸನ್ ನೀಡಿರುವ ಹೇಳಿಕೆಗೆ ಇದೀಗ ಕರ್ನಾಟಕದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು ಕನ್ನಡಪರ ಸಂಘಟನೆಗಳು ಕಮಲ್ ಹಾಸನ್ ನಟನೆಯ ಚಲನಚಿತ್ರ ರಾಜ್ಯದಲ್ಲಿ ಬಿಡುಗಡೆ ಮಾಡದಂತೆ ಆಗ್ರಹಿಸುತ್ತಿವೆ. ದೇವಿ ವಿಚಾರವಾಗಿ ಸಚಿವ ಕೃಷ್ಣ ಬೈರೇಗೌಡ ಮಾತನಾಡಿದ್ದು ನಾವು ಇಲ್ಲಿ ಕನ್ನಡ ತಮಿಳು ಅಂತ ಸಮಯ ವ್ಯರ್ಥ ಮಾಡಿದರೆ ಹಿಂದಿ ಹೇರಿಕೆ ಹಾಕುತ್ತಾರೆ ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, ಮುಖ್ಯವಾಗಿ ಇರುವ ಸಮಸ್ಯೆ ಎಂದರೆ ಬಲವಂತವಾಗಿ ಹಿಂದಿ ಹೇರಲಾಗುತ್ತಿದೆ. ಆದರೆ ಎಲ್ಲಾ ಭಾಷೆಗಳು ಸಮನಾಂತರ ಭಾಷೆಗಳು. ಕನ್ನಡ ಭಾಷೆ ಮತ್ತು ಕನ್ನಡ ಸಂಸ್ಕೃತಿ ಅಳಿಸುವಂತಹ ಪ್ರಯತ್ನವಾಗುತ್ತಿದೆ ಎಂದು ಅವರು ಹೇಳಿದರು.
ಕನ್ನಡ ತಮಿಳು ಅಂತ ಸಮಯ ವ್ಯರ್ಥ ಮಾಡಿದರೆ ಹಿಂದಿ ಹೇರುತ್ತಾರೆ. ಕೇಂದ್ರ ಸರ್ಕಾರದ ಮೇಲೆ ಬಲವಂತವಾಗಿ ಹಿಂದಿ ಹೇರುತ್ತಿದೆ. ಸ್ವಯಂ ಆಸಕ್ತಿಯಿಂದ ಹಿಂದಿ ಭಾಷೆ ಕಲಿಯಲು ಗೌರವಿಸುತ್ತೇವೆ. ಕೇಂದ್ರದ ಪರಿಹಾರ ಬಳಸಿಕೊಂಡು ನಮ್ಮ ಮೇಲೆ ಹಿಂದಿ ಹೇರಿಕೆ ನಡೆಯುತ್ತಿದೆ ತಮಿಳುನಾಡಿನಿಂದ ಕರ್ನಾಟಕಕ್ಕೆ ಯಾವುದೇ ಬೆದರಿಕೆ ಇಲ್ಲ ಎಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ ನೀಡಿದರು.