ಬೆಂಗಳೂರು: ನಿನಗೆ ಅಗತ್ಯವಿದ್ದಂತ ಅನುದಾನವನ್ನು ಕಾಮಗಾರಿಗಾಗಿ ಬಿಡುಗಡೆ ಮಾಡಲಾಗಿದೆ. ಹೀಗಿದ್ದರೂ ಶೇ.4ರಷ್ಟು ಕಾಮಗಾರಿ ಮಾತ್ರವೇ ಮಾಡಿದ್ದೀಯಲ್ಲ. ನಿನಗೆ ಸಾರ್ವಜನಿಕರಿಗೆ ಆಗ್ತಿರೋ ತೊಂದರೆ ಬಗ್ಗೆ ಪ್ರಜ್ಞೆ ಬೇಡ್ವ? ನಿನ್ನ ಕೈಯಲ್ಲಿ ಆಗದಿದ್ದರೇ ಜಾಗ ಖಾಲಿ ಮಾಡು ಎಂಬುದಾಗಿ ಆಮೆ ಗತಿಯಲ್ಲಿ ಕಾಮಗಾರಿ ನಡೆಸುತ್ತಿದ್ದಂತ ಕಂಪನಿಗೆ ಸಿಎಂ ಸಿದ್ಧರಾಮಯ್ಯ ತರಾಟೆಗೆ ತೆಗೆದುಕೊಂಡರು.
ಇಂದು ಬೆಂಗಳೂರಿನ ಶಾಂತಿನಗರ ವಿಧಾನಸಭಾ ವ್ಯಾಪ್ತಿಯ ಈಜಿಪುರಕ್ಕೆ ಸಿಟಿ ರೌಂಡ್ಸ್ ವೇಳೆಯಲ್ಲಿ, 2.95 ಕಿಲೋಮೀಟರ್ ಉದ್ದದ ಈಜಿಪುರ ಫ್ಲೈ ಓವರ್ ಕಾಮಗಾರಿಯನ್ನು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಕಳೆದ ಆರು ವರ್ಷಗಳಿಂದ ನೆನೆಗುದಿಗೆ ಬಿದ್ದು ಸಾರ್ವಜನಿಕರಿಗೆ ವಿಪರೀತ ಕಿರಿಕಿರಿ ಆಗುತ್ತಿದೆ. 2.95 ಕಿ.ಮೀ. ಉದ್ದದ ಈಜಿಪುರ ಫ್ಲೈ ಓವರ್ ಕಾಮಗಾರಿ ನಡೆಸುತ್ತಿರೋ ಬಗ್ಗೆ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದಂತ ಅವರು, ಈ ಕಾಮಗಾರಿಯನ್ನು ಪೂರ್ಣಗೊಳಿಸಲು ಪ್ರಸಕ್ತ ಸರ್ಕಾರ ಅಧಿಕಾರಕ್ಕೆ ಬಂದನಂತರ ದಿನಾಂಕ 20-11-2023 ರಂದು BSCPL ಎಂಬ ಕಂಪೆನಿಗೆ ಕಾರ್ಯಾದೇಶ ನೀಡಲಾಗಿತ್ತು. ಟೆಂಡರ್ ಷರತ್ತಿನ ಪ್ರಕಾರ 15 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕಾಗಿತ್ತು. ಆದರೆ ಕಳೆದ ಆರು ತಿಂಗಳಲ್ಲಿ ಕೇವಲ ಶೇ. 4 ರಿಂದ 6 ರಷ್ಟು ಪ್ರಗತಿಯಾಗಿದೆ. ಈ ಮಾಹಿತಿ ತಿಳಿದ ಮುಖ್ಯಮಂತ್ರಿಗಳು ಸ್ಥಳದಲ್ಲಿದ್ದ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು. ಗುತ್ತಿಗೆದಾರರಿಗೆ ನಿಯಮಾನುಸಾರ ನೋಟಿಸ್ ನೀಡಿ, ಸ್ಪಂದಿಸದಿದ್ದರೆ ಕಾನೂನು ಪ್ರಕಾರ ಟೆಂಡರ್ ರದ್ದುಪಡಿಸಿ, ಬೇರೆಯವರಿಗೆ ಗುತ್ತಿಗೆ ನೀಡುವಂತೆ ಸೂಚಿಸಿದರು.
ಅಗತ್ಯ ಹಣ ಕೊಟ್ಟಿದ್ದರೂ ಆರು ತಿಂಗಳಲ್ಲಿ ಕೇವಲ 4% ಕಾಮಗಾರಿ ಮಾಡಿದ್ದೀಯಲ್ಲಾ, ಸಾರ್ವಜನಿಕರಿಗೆ ಆಗುವ ತೊಂದರೆ ಬಗ್ಗೆ ಪ್ರಜ್ಞೆ ಬೇಡ್ವಾ, ನಿನ್ನ ಕೈಲಿ ಆಗದಿದ್ದರೆ ಜಾಗ ಖಾಲಿ ಮಾಡಿ ಎಂದು ಕಂಪನಿ ಪ್ರತಿನಿಧಿಗಳಿಗೆ ಸಿಎಂ ಸ್ಪಷ್ಟ ಎಚ್ಚರಿಕೆ ನೀಡಿದರು.
‘ಬೆಂಗಳೂರಿನ ಸೌಂದರ್ಯ’ಕ್ಕೆ ಹೆಚ್ಚು ಆದ್ಯತೆ ನೀಡಿ: ಸಿಟಿ ರೌಂಡ್ಸ್ ವೇಳೆ ‘ಸಿಎಂ ಸಿದ್ಧರಾಮಯ್ಯ’ ಸೂಚನೆ
BIG NEWS: ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಮಾಸ್ ರೇಪ್ ಎಂದ ‘ರಾಹುಲ್ ಗಾಂಧಿ’ ವಿರುದ್ಧ ‘JDS’ ದೂರು