Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದಲ್ಲಿ ಒಂದು ಕಪ್ ಚಹಾಕ್ಕಿಂತ ಕಡಿಮೆ ಬೆಲೆಗೆ ‘1GB ಡೇಟಾ’ ಲಭ್ಯವಿದೆ ; ಪ್ರಧಾನಿ ಮೋದಿ

08/10/2025 10:05 PM

BREAKING : ಉತ್ತರ ಪ್ರದೇಶದ ಕಾನ್ಪುರದಲ್ಲಿ 2 ಸ್ಕೂಟಿಗಳು ಸ್ಫೋಟ ; 6 ಜನರಿಗೆ ಗಾಯ

08/10/2025 9:40 PM

ಪ್ರತಿ ಬಾರಿ ಬಾಚಿದಾದ್ಲೂ ‘ಕೂದಲು’ ಉದುರುತ್ತಾ.? ಈ ಸರಳ ಸಲಹೆಯೊಂದಿಗೆ ಸುಲಭವಾಗಿ ಪರಿಶೀಲಿಸಿ!

08/10/2025 9:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ: ‘IAS ಅಧಿಕಾರಿ ವಾಸಂತಿ ಅಮರ್’ ವಿರುದ್ಧ FIR ದಾಖಲು
KARNATAKA

BREAKING: ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ: ‘IAS ಅಧಿಕಾರಿ ವಾಸಂತಿ ಅಮರ್’ ವಿರುದ್ಧ FIR ದಾಖಲು

By kannadanewsnow0916/07/2025 6:21 AM

ಬೆಂಗಳೂರು: ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ ಹೊರಡಿಸಿದ ಹಿನ್ನಲೆಯಲ್ಲಿ ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ಸರ್ಕಾರ ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಈ ಹಿಂದೆ ಶ್ರೀಮತಿ ವಾಸಂತಿ ಅಮರ್ (ಭಾ.ಆ.ಸೇ) ಹಿಂದಿನ ವಿಶೇಷ ಜಿಲ್ಲಾಧಿಕಾರಿ-3 ಬೆಂಗಳೂರು ಉತ್ತರ ಉಪ ವಿಭಾಗ ರವರು ಬೆಂಗಳೂರು ಉತ್ತರ ತಾಲೂಕು, ದಾಸನಪುರ ಹೋಬಳಿ, ಹುಚ್ಚನಪಾಳ್ಯ ಗ್ರಾಮದ ಸರ್ವೇ ನಂ.8 ರಲ್ಲಿ, 10 ಎಕರೆ 20 ಗುಂಟೆ ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ ಹೊರಡಿಸಿರುತ್ತಾರೆ. ಈ ಪ್ರಕರಣ ಕಾನೂನು ಬಾಹೀರವಾಗಿದ್ದು ಇದೀಗ ಅವರ ವಿರುದ್ಧ FIR ದಾಖಲಾಗಿದೆ.

ಇಂದು ಬೆಂಗಳೂರಿನ 48ನೇ ಎಸಿಎಂಎಂ ನ್ಯಾಯಾಲಯದಲ್ಲಿ ದಾಖಲಾಗಿದ್ದಂತ ಎನ್ ಸಿ ಆರ್ ನಂ 112/2025ರ ಅನುಸಾರ ತನಿಖೆ ಕೈಗೊಳ್ಳಲು ಕೋರಿದ್ದು, ಅದರಂತೆ ನ್ಯಾಯಾಲಯವು ತನಿಖೆ ಕೈಗೊಳ್ಳಲು ಆದೇಶಿಸಿದೆ. ಹೀಗಾಗಿ ಕೆಎಎಸ್ ಅಧಿಕಾರಿ ಪ್ರಶಾಂತ್ ಖಾನಗೌಡ ಪಾಟೀಲ್ ಹಲಸೂರು ಗೇಟ್ ಪೊಲೀಸ್ ಠಾಣೆಗೆ ತೆರಳಿ ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಭಾರತೀಯ ನ್ಯಾಯ ಸಂಹಿತೆ 2023ರಡಿ 257 ಸೆಕ್ಷನ್ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.

ದೂರಿನಲ್ಲಿ ಏನಿದೆ.?

ಬೆಂಗಳೂರು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕರಾಗಿರುವಂತ ಕೆ ಎಎಸ್ ಅಧಿಕಾರಿ ಪ್ರಶಾಂತ್ ಖಾನಗೌಡ ಪಾಟೀಲ್ ಅವರು ಠಾಣೆಗೆ ಹಾಜರಾಗಿ ದೂರು ನೀಡಿದ್ದಾರೆ. ಈ ಹಿಂದೆ ಐಎಎಸ್ ಅಧಿಕಾರಿ ವಾಸಂತಿ ಅಮರ್ ಅವರು ವಿಶೇಷ ಜಿಲ್ಲಾಧಿಕಾರಿ-3, ಉತ್ತರ ವಿಭಾಗ, ಬೆಂಗಳೂರು ಉತ್ತರ ತಾಲ್ಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ದಾಸನಪುರ ಹೋಬಳಿ, ಹುಚ್ಚನಪಾಳ್ಯ ಗ್ರಾಮದ ಸರ್ವೆ ನಂ.8ರಲ್ಲಿ 10 ಎಕರೆ 20 ಗುಂಟೆ ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ ಹೊರಡಿಸಿದ್ದಾರೆ. ಇವರ ವಿರುದ್ಧ ದೂರು ದಾಖಲಿಸುವಂತೆ ಸರ್ಕಾರದ ಆದೇಶ, ಕಂದಾಯ ಇಲಾಖೆಯ ಪ್ರಾದೇಶಕ ಆಯುಕ್ತರ ಪತ್ರ ಹಾಗೂ ನೋಟಲ್ ಅಧಿಕಾರಿ,  ಆರ್ಥಿಕ ಅಪರಾಧಗಳ ಇಲಾಖೆಯ ರೀತಿಯಲ್ಲಿ ಪ್ರಕರಣ ದಾಖಲಿಸಲು ಕೋರಿದ್ದಾರೆ.

ಈ ಹಿನ್ನಲೆಯಲ್ಲಿ ವಾಸಂತಿ ಅಮರ್, ಭಾರತೀಯ ಆಡಳಿತ ಸೇವೆ ಅಧಿಕಾರಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023 ಕಲಂ 257ರಡಿಯಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಎನ್ ಸಿ ಆರ್ ನಂ.112/2025 ಅನ್ನು ದಾಖಲಿಸಿಕೊಳ್ಳಲಾಗಿತ್ತು. ನಂತ್ರ 48ನೇ ಎಸಿಎಂಎಂ ಕೋರ್ಟ್ ಮುಂದಿ ಹಾಜರಾಗಿದ್ದು, ಸದರಿ ಎನ್ ಸಿ ಆರ್ ನಲ್ಲಿ ತನಿಖೆ ಕೈಗೊಳ್ಳಲು ಕೋರಿದ್ದು, ಅದರಂತೆ ನ್ಯಾಯಾಧೀಶರು ತನಿಖೆ ಕೈಗೊಳ್ಳಲು ಆದೇಶಿಸಿದ್ದಾರೆ. ಸದರಿ ಆದೇಶ ಆದೇಶ ಪ್ರತಿ ತಂದು ಠಾಣೆಗೆ ಹಾಜರುಪಡಿಸಿದ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಒಟ್ಟಾರೆಯಾಗಿ ಈ ಹಿಂದೆ ವಾಸಂತಿ ಅಮರ್ (ಭಾ.ಆ.ಸೇ) ಹಿಂದಿನ ವಿಶೇಷ ಜಿಲ್ಲಾಧಿಕಾರಿ-3 ಬೆಂಗಳೂರು ಉತ್ತರ ಉಪ ವಿಭಾಗ ರವರು ಬೆಂಗಳೂರು ಉತ್ತರ ತಾಲೂಕು, ದಾಸನಪುರ ಹೋಬಳಿ, ಹುಚ್ಚನಪಾಳ್ಯ ಗ್ರಾಮದ ಸರ್ವೇ ನಂ.8 ರಲ್ಲಿ, 10 ಎಕರೆ 20 ಗುಂಟೆ ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ ಹೊರಡಿಸಿರುತ್ತಾರೆ. ಈ ಪ್ರಕರಣ ಕಾನೂನು ಬಾಹೀರವಾಗಿದ್ದು ಇದೀಗ ಅವರ ವಿರುದ್ಧ FIR ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ಪಿಜಿನೀಟ್-25: ಅರ್ಜಿ ಸಲ್ಲಿಕೆಗೆ ಅ.15ರವರೆಗೆ ದಿನಾಂಕ ವಿಸ್ತರಣೆ- KEA

08/10/2025 8:14 PM1 Min Read

ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆದಿರುವುದು ಮನುವಾದದ ಬೆಂಬಲಿಗರ ಷಡ್ಯಂತ್ರದ ಭಾಗ: MLC ರಮೇಶ್ ಬಾಬು

08/10/2025 8:12 PM2 Mins Read

ಇನ್ಮುಂದೆ GBA ಪಾಲಿಕೆಗಳಲ್ಲಿ ಶೇ.50ರಷ್ಟು ಮಹಿಳಾ ಕಾರ್ಪೊರೇಟರ್ ಇರುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

08/10/2025 7:39 PM8 Mins Read
Recent News

ಭಾರತದಲ್ಲಿ ಒಂದು ಕಪ್ ಚಹಾಕ್ಕಿಂತ ಕಡಿಮೆ ಬೆಲೆಗೆ ‘1GB ಡೇಟಾ’ ಲಭ್ಯವಿದೆ ; ಪ್ರಧಾನಿ ಮೋದಿ

08/10/2025 10:05 PM

BREAKING : ಉತ್ತರ ಪ್ರದೇಶದ ಕಾನ್ಪುರದಲ್ಲಿ 2 ಸ್ಕೂಟಿಗಳು ಸ್ಫೋಟ ; 6 ಜನರಿಗೆ ಗಾಯ

08/10/2025 9:40 PM

ಪ್ರತಿ ಬಾರಿ ಬಾಚಿದಾದ್ಲೂ ‘ಕೂದಲು’ ಉದುರುತ್ತಾ.? ಈ ಸರಳ ಸಲಹೆಯೊಂದಿಗೆ ಸುಲಭವಾಗಿ ಪರಿಶೀಲಿಸಿ!

08/10/2025 9:20 PM

‘ಅಟಲ್ ಪಿಂಚಣಿ ಯೋಜನೆ’ಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ; ಹೊಸ ನಿಯಮ ಹೀಗಿವೆ!

08/10/2025 8:42 PM
State News
KARNATAKA

ಪಿಜಿನೀಟ್-25: ಅರ್ಜಿ ಸಲ್ಲಿಕೆಗೆ ಅ.15ರವರೆಗೆ ದಿನಾಂಕ ವಿಸ್ತರಣೆ- KEA

By kannadanewsnow0908/10/2025 8:14 PM KARNATAKA 1 Min Read

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಪದವಿ / ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸುವ ಕೊನೆ…

ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆದಿರುವುದು ಮನುವಾದದ ಬೆಂಬಲಿಗರ ಷಡ್ಯಂತ್ರದ ಭಾಗ: MLC ರಮೇಶ್ ಬಾಬು

08/10/2025 8:12 PM

ಇನ್ಮುಂದೆ GBA ಪಾಲಿಕೆಗಳಲ್ಲಿ ಶೇ.50ರಷ್ಟು ಮಹಿಳಾ ಕಾರ್ಪೊರೇಟರ್ ಇರುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

08/10/2025 7:39 PM

BREAKING: ಈ ಬಾರಿ ‘ರಾಜ್ಯೋತ್ಸವ ಪ್ರಶಸ್ತಿ’ಗೆ ಆನ್ ಮೂಲಕ ಅರ್ಜಿ ಪ್ರಕ್ರಿಯೆ ಇಲ್ಲ: ಸಚಿವ ಶಿವರಾಜ ತಂಗಡಗಿ

08/10/2025 7:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.