Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೀವು ಬಾತ್ರೂಮ್ ನಲ್ಲೂ `ಮೊಬೈಲ್’ ಬಳಸುತ್ತೀರಾ? ನಿಮಗೊಂದು ಶಾಕಿಂಗ್ ನ್ಯೂಸ್

09/09/2025 9:00 AM

ಇಂಟರ್ ಸರ್ವೀಸಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ನೀರಜ್ ಚೋಪ್ರಾ ಮೀಟ್ ದಾಖಲೆ ಮುರಿದ ಶಿವಂ ಲೋಹಕರೆ

09/09/2025 8:58 AM

ಮನೆಯಲ್ಲಿರುವ ಇಲಿಗಳನ್ನು ಓಡಿಸಲು ಜಸ್ಟ್ ಹೀಗೆ ಮಾಡಿ.!

09/09/2025 8:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » IMA ಪ್ರಕರಣದ ಸಂತ್ರಸ್ತರಿಗೆ ‘ರಂಜಾನ್’ಗೂ ಮುನ್ನ ಪರಿಹಾರ: ಸಚಿವ ಕೃಷ್ಣಬೈರೇಗೌಡ ಘೋಷಣೆ
KARNATAKA

IMA ಪ್ರಕರಣದ ಸಂತ್ರಸ್ತರಿಗೆ ‘ರಂಜಾನ್’ಗೂ ಮುನ್ನ ಪರಿಹಾರ: ಸಚಿವ ಕೃಷ್ಣಬೈರೇಗೌಡ ಘೋಷಣೆ

By kannadanewsnow0925/02/2025 7:21 PM

ಬೆಂಗಳೂರು: ಐಎಂಎ (ಐ- ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಂಡ ಎಲ್ಲ ಠೇವಣಿದಾರರಿಗೂ ರಂಜಾನ್‌ಗೂ ಮೊದಲೇ ನಿಗದಿತ ಪರಿಹಾರದ ಹಣ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.

ಐಎಂಎ (ಐ- ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಂಡ ಎಲ್ಲ ಠೇವಣಿದಾರರಿಗೂ ರಂಜಾನ್‌ಗೂ ಮೊದಲೇ ನಿಗದಿತ ಪರಿಹಾರದ ಹಣ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.@CMofKarnataka @siddaramaiah @krishnabgowda pic.twitter.com/Zo8Ty6ugk7

— DIPR Karnataka (@KarnatakaVarthe) February 25, 2025

ಐಎಂಎ ಹಗರಣದ ಮೊತ್ತ ಎಷ್ಟು? ಈ ವರೆಗೆ ಈ ಸಂಸ್ಥೆಯ ಎಷ್ಟು ಕೋಟಿ ಮೌಲ್ಯದ ಸ್ಥಿರಾಸ್ತಿ/ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ? ಕಳೆದ ಏಳು ವರ್ಷದಲ್ಲಿ ಈ ಕಂಪೆನಿಯಲ್ಲಿ ಹಣ ಹೂಡಿ ಕಳೆದುಕೊಂಡ ಎಷ್ಟು ಜನರಿಗೆ ಎಷ್ಟು ಪ್ರಮಾಣದಲ್ಲಿ ಹಣ ಹಿಂತಿರುಗಿಸಲಾಗಿದೆ ಮತ್ತು ಉಳಿದ ಸಂತ್ರಸ್ತರಿಗೆ ಯಾವಾಗ ಮತ್ತು ಹೇಗೆ ಹಣ ಹಿಂತಿರುಗಿಸಬೇಕು? ಎಂಬ ಕುರಿತು ಸೋಮವಾರ ವಿಕಾಸಸೌಧ ಕಚೇರಿಯಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು.

ಈ ಸಭೆಯಲ್ಲಿ ಸಚಿವರಾದ ಜಮೀರ್ ಅಹ್ಮದ್, ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಜೊತೆಗೆ ಐಎಂಎ ಹಗರಣದಿಂದ ಹಣ ಕಳೆದುಕೊಂಡ ಹಲವರು ಭಾಗಿಯಾಗಿದ್ದರು. ಈ ವೇಳೆ ಸಂತ್ರಸ್ತರಿಗೆ ಭರವಸೆ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ರಂಜಾನ್ ಹಬ್ಬಕ್ಕೂ ಹತ್ತು ದಿನ ಮೊದಲೇ ಐಎಂಎ ನಲ್ಲಿ ಹಣ ಹೂಡಿ ಮೋಸ ಹೋದವರಿಗೆ ಅವರ ಹೂಡಿಕೆಯ ಅನುಪಾತದ ಆಧಾರದಲ್ಲಿ ಪರಿಹಾರ ನೀಡಲು ಕ್ರಮವಹಿಸಲಾಗುವುದು ಎಂದರು.

ಹಣ ಡಬ್ಲಿಂಗ್ ಆಸೆಯಿಂದಾಗಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಠೇವಣಿದಾರರ ಖಾತೆಗಳ ಮೂಲಕ 3213.58 ಕೋಟಿ ರೂ.ಗಳನ್ನು ಐಎಂಎ ಕಂಪೆನಿಯಲ್ಲಿ ಹೂಡಿಕೆ ಮಾಡಿ ಮೋಸ ಹೋಗಿದ್ದಾರೆ. ಕಂಪೆನಿಯ ಒಟ್ಟು ಠೇವಣಿದಾರರ ಸಂಖ್ಯೆ 69069. ಈ ಪೈಕಿ 1400 ಕೋಟಿ ರೂ.ಗಳನ್ನು ಲಾಭಾಂಶದ ಮಾದರಿಯಲ್ಲಿ ಐಎಂಎ ಕಾಲಕಾಲಕ್ಕೆ ಠೇವಣಿದಾರರಿಗೆ ನೀಡುತ್ತಾ ಬಂದಿದೆ. ಹಗರಣ ಬೆಳಕಿಗೆ ಬಂದ ನಂತರ ವಿಶೇಷ ನ್ಯಾಯಾಲಯದ ಆದೇಶದಂತೆ ಕಂಪೆನಿ ಖಾತೆಯಲ್ಲಿದ್ದ 19.12 ಕೋಟಿ ರೂ.ಗಳನ್ನು 50,000 ರೂ.ಗಳಂತೆ 6858 ಜನ ಸಂತ್ರಸ್ತರ ಖಾತೆಗಳಿಗೆ 2022 ಏಪ್ರಿಲ್ನಲ್ಲಿ ಜಮೆ ಮಾಡಲಾಗಿತ್ತು.

66.66 ಕೋಟಿ ರೂ.ಗಳನ್ನು 53,142 ಜನ ಸಂತ್ರಸ್ತರ ಖಾತೆಗಳಿಗೆ 8/11/2023 ರಂದು ಜಮೆ ಮಾಡಲಾಗಿತ್ತು. 1.28 ಕೋಟಿ ರೂ.ಗಳನ್ನು 626 ಸಂತ್ರಸ್ತರ ಖಾತೆಗಳಿಗೆ 23/5/2024 ರಂದು ಜಮೆ ಮಾಡಲಾಗಿತ್ತು. 276 ಜನ ಸಂತ್ರಸ್ತರಿಗೆ 36.14 ಲಕ್ಷ ರೂ.ಗಳನ್ನು 7/11/2024 ರಂದು ಜಮೆ ಮಾಡಲಾಗಿತ್ತು. ಒಟ್ಟಾರೆ ಈವರೆಗೆ 87.43 ಕೋಟಿ ರೂ.ಗಳನ್ನು 60902 ಜನ ಸಂತ್ರಸ್ತರ ಖಾತೆಗಳಿಗೆ ಜಮೆ ಮಾಡಲಾಗಿದೆ ಎಂದು ಸಭೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಯಿತು.

ಐಎಂಎ ಕಂಪೆನಿಗೆ ಸಂಬಂಧಿಸಿದ ಹತ್ತಕ್ಕೂ ಹೆಚ್ಚು ಆಸ್ತಿಗಳನ್ನು ಈಗಾಗಲೇ ಸರ್ಕಾರ ವಶಕ್ಕೆ ಪಡೆದಿದೆ. ಚರಾಸ್ಥಿಗಳ ಮೌಲ್ಯ 106.92 ಕೋಟಿ ಹಾಗೂ ಸ್ಥಿರಾಸ್ತಿಗಳ ಮೌಲ್ಯ 401.92 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದಲ್ಲದೆ, ಕಂಪೆನಿಗೆ ಸಂಬಂಧಿಸಿದ ವಿವಿಧ ಬ್ಯಾಂಕ್ ಖಾತೆಗಳಿಂದ 2.88 ಕೋಟಿ ರೂ., ನಗದು ಹಣ 11.72 ರೂ. ಹೂಡಿಕೆ ಪತ್ರ 11.06 ಕೋಟಿ ರೂ. ಸೇರಿದಂತೆ ಒಟ್ಟಾರೆ 534.5 ಕೋಟಿ ರೂ.ಗಳನ್ನು ಸರ್ಕಾರ ಮುಟ್ಟುಗೋಲು ಈಗಾಗಲೇ ಹಾಕಿದೆ. ನ್ಯಾಯಮೂರ್ತಿ ಜಸ್ಟೀಸ್ ನಾಗಪ್ರಸನ್ನ ಪೀಠದ ಆದೇಶದಂತೆ ಶೀಘ್ರವೇ ಈ ಆಸ್ತಿಗಳನ್ನು ಹರಾಜಿಗೊಳಪಡಿಸಿ ಇದರಿಂದ ಬಂದ ಹಣವನ್ನು ಹೂಡಿಕೆದಾರರಿಗೆ ಹಿಂತಿರುಗಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸಭೆಯಲ್ಲಿ ತಿಳಿಸಿದರು.

ಅರ್ಹ ಸಂತ್ರಸ್ತರಿಗೆ ಹರಿಹಾರ..!

ಐಎಂಎ ಹಗರಣ ಬೆಳಕಿಗೆ ಬಂದಾಗಲೇ ಸರ್ಕಾರ ಸಂತ್ರಸ್ತರನ್ನು ಗುರುತಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶ ನೀಡಿತ್ತು. ಈ ವೇಳೆ ಐಎಂಎ ಜೊತೆ ಆರ್ಥಿಕ ವ್ಯವಹಾರ ಮಾಡಿದ ಬ್ಯಾಂಕ್ ಖಾತೆ ಚಾಲ್ತಿಯಲ್ಲಿದ್ದರೆ ಅದನ್ನೇ ಅಧಿಕೃತ ಎಂದು ಪರಿಗಣಿಸಲಾಯಿತು. ಒಂದು ವೇಳೆ ಖಾತೆ ನಿಷ್ಕ್ರಿಯವಾಗಿದ್ದರೆ ಠೇವಣಿಪತ್ರ, ಷೇರುಪ್ರಮಾಣ ಪತ್ರದಂತಹ ದಾಖಲಾತಿಗಳನ್ನು ಕೋರಿತ್ತು.

ಅರ್ಜಿ ಸಲ್ಲಿಸುವವರ ಮಾಹಿತಿಗಳನ್ನು ಐಎಂಎ ಸಂಸ್ಥೆಯಲ್ಲಿರುವ ದತ್ತಾಂಶಗಳೊಂದಿಗೆ ಹೊಂದಾಣಿಕೆ ಮಾಡಿ ಹಾಗೂ ಆಧಾರ್ ಕಾರ್ಡ್, ಇತರ ಮಾಹಿತಿಗಳನ್ನು ಸಮೀಕರಿಸಿ ಅರ್ಹ ಫಲಾನುಭವಿಗಳನ್ನು ಗುರುತಿಸಲಾಗಿದೆ. ಒಂದು ವೇಳೆ ಫಲಾನುಭವಿಗಳು ಮೃತಪಟ್ಟಿದ್ದರೆ ಠೇವಣಿದಾರರು ಸೂಚಿಸಿರುವ ನಾಮನಿರ್ದೇಶಿತ ವ್ಯಕ್ತಿಗಳಿಗೆ ಆ ಹಣವನ್ನು ನೀಡಲು ಕ್ರಮವಹಿಸಲಾಗಿದೆ.

ರಾಜ್ಯದ ‘ಬಿಳಿ ಜೋಳ ಬೆಳಗಾರ’ರಿಗೆ ಗುಡ್ ನ್ಯೂಸ್: ‘ಕನಿಷ್ಠ ಬೆಂಬಲ ಬೆಲೆ ಯೋಜನೆ’ಯಡಿ ಖರೀದಿ

BIG NEWS: ತೀವ್ರಗೊಂಡ ‘NHM ನೌಕರ’ರ ಪ್ರತಿಭಟನೆ: ನಾಳೆಯಿಂದ ರಾಜ್ಯಾಧ್ಯಂತ ‘ಆರೋಗ್ಯ ಸೇವೆ’ಯಲ್ಲಿ ವ್ಯತ್ಯಯ | NHM Worker Protest

Share. Facebook Twitter LinkedIn WhatsApp Email

Related Posts

ನೀವು ಬಾತ್ರೂಮ್ ನಲ್ಲೂ `ಮೊಬೈಲ್’ ಬಳಸುತ್ತೀರಾ? ನಿಮಗೊಂದು ಶಾಕಿಂಗ್ ನ್ಯೂಸ್

09/09/2025 9:00 AM1 Min Read

ಮನೆಯಲ್ಲಿರುವ ಇಲಿಗಳನ್ನು ಓಡಿಸಲು ಜಸ್ಟ್ ಹೀಗೆ ಮಾಡಿ.!

09/09/2025 8:54 AM2 Mins Read

ನಿನಗಾಗಿ ಪಡುವಣದಲ್ಲಿ ರವಿ ಮೂಡುವನೇ : ಧರ್ಮಾಧಿಕಾರಿ ಬಗ್ಗೆ ಕೋಡಿ ಶ್ರೀ ಭವಿಷ್ಯ

09/09/2025 8:43 AM1 Min Read
Recent News

ನೀವು ಬಾತ್ರೂಮ್ ನಲ್ಲೂ `ಮೊಬೈಲ್’ ಬಳಸುತ್ತೀರಾ? ನಿಮಗೊಂದು ಶಾಕಿಂಗ್ ನ್ಯೂಸ್

09/09/2025 9:00 AM

ಇಂಟರ್ ಸರ್ವೀಸಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ನೀರಜ್ ಚೋಪ್ರಾ ಮೀಟ್ ದಾಖಲೆ ಮುರಿದ ಶಿವಂ ಲೋಹಕರೆ

09/09/2025 8:58 AM

ಮನೆಯಲ್ಲಿರುವ ಇಲಿಗಳನ್ನು ಓಡಿಸಲು ಜಸ್ಟ್ ಹೀಗೆ ಮಾಡಿ.!

09/09/2025 8:54 AM

BREAKING : ಮೆಕ್ಸಿಕೋದಲ್ಲಿ ಭೀಕರ ರಸ್ತೆ ಅಪಘಾತ : ರೈಲು- ಬಸ್ ನಡುವೆ ಡಿಕ್ಕಿಯಾಗಿ 10 ಮಂದಿ ಸ್ಥಳದಲ್ಲೇ ಸಾವು | WATCH VIDEO

09/09/2025 8:50 AM
State News
KARNATAKA

ನೀವು ಬಾತ್ರೂಮ್ ನಲ್ಲೂ `ಮೊಬೈಲ್’ ಬಳಸುತ್ತೀರಾ? ನಿಮಗೊಂದು ಶಾಕಿಂಗ್ ನ್ಯೂಸ್

By kannadanewsnow5709/09/2025 9:00 AM KARNATAKA 1 Min Read

ಇತ್ತೀಚಿನ ದಿನಗಳಲ್ಲಿ ಎಲ್ಲರ ಕೈಯಲ್ಲೂ ಸ್ಮಾರ್ಟ್‌ಫೋನ್ ಇರುತ್ತದೆ. ಸ್ಮಾರ್ಟ್‌ಫೋನ್ ಇಲ್ಲದವರನ್ನು ನೋಡುವುದು ಬಹಳ ಅಪರೂಪವಾಗಿದೆ. ಸ್ಮಾರ್ಟ್‌ಫೋನ್‌ಗಳು ಜನರ ಜೀವನದ ಪ್ರಮುಖ…

ಮನೆಯಲ್ಲಿರುವ ಇಲಿಗಳನ್ನು ಓಡಿಸಲು ಜಸ್ಟ್ ಹೀಗೆ ಮಾಡಿ.!

09/09/2025 8:54 AM

ನಿನಗಾಗಿ ಪಡುವಣದಲ್ಲಿ ರವಿ ಮೂಡುವನೇ : ಧರ್ಮಾಧಿಕಾರಿ ಬಗ್ಗೆ ಕೋಡಿ ಶ್ರೀ ಭವಿಷ್ಯ

09/09/2025 8:43 AM

ಮಕ್ಕಳಿಗೆ `ಚಹಾ’ ಕುಡಿಸುವ ಪೋಷಕರೇ ಇದನ್ನೊಮ್ಮೆ ಓದಿ.!

09/09/2025 8:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.