ಧಾರವಾಡ: 2025-26 ನೇ ಸಾಲಿನ ಮುಂಗಾರು ಹಂಗಾಮಿಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ (ಖ-WಃಅIS) ಯೋಜನೆಯನ್ನು ಜಿಲ್ಲೆಯ ರೈತರಿಗೆ ಸರ್ಕಾರವು ಘೋಷಿಸಿದೆ. ಹಸಿಮೆಣಸಿನಕಾಯಿ ಬೆಳೆಗೆ ಧಾರವಾಡ, ಅಮ್ಮಿನಬಾವಿ ಗರಗ, ದುಮ್ಮವಾಡ ಹಾಗೂ ಛಬ್ಬಿ ಹೋಬಳಿಗಳ ಆಯ್ದ ಗ್ರಾಮ ಪಂಚಾಯತಗಳು ಹಾಗೂ ಮಾವು ಬೆಳೆಗೆ ಅಮ್ಮಿನಭಾವಿ, ಧಾರವಾಡ, ಗರಗ, ಅಳ್ನಾವರ, ಹುಬ್ಬಳ್ಳಿ, ಛಬ್ಬಿ, ಕಲಘಟಗಿ, ತ.ಹೊನ್ನಳ್ಳಿ, ದುಮ್ಮವಾಡ, ಕುಂದಗೋಳ ಹಾಗೂ ಸಂಶಿ ಹೋಬಳಿಗಳ ಆಯ್ದ ಗ್ರಾಮ ಪಂಚಾಯತಗಳನ್ನು ಈ ವಿಮೆ ಯೋಜನೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ.
ಧಾರವಾಡ ಜಿಲ್ಲೆಗೆ ಅಗ್ರಿಕಲ್ಚರ್ ಇನ್ಸುರೆನ್ಸ್ ಕಂಪನಿಯು ಆಯ್ಕೆಯಾಗಿದ್ದು, ವಿಮೆ ಕಂತಿಗೆ ಸಂಬಂಧಪಟ್ಟಂತೆ ಹಸಿಮೆಣಸಿನಕಾಯಿ ಬೆಳೆಗೆ ರೂ. 6745 ಪ್ರತಿ ಹೆಕ್ಟೇರ್ಗೆ ಹಾಗೂ ಮಾವು ಬೆಳೆಗೆ ರೂ. 4000 ಪ್ರತಿ ಹೆಕ್ಟೇರ್ಗೆ ರೈತರು ತಮ್ಮ ವಿಮೆ ಕಂತಿನ ಮೊತ್ತವನ್ನು ಪಾವತಿಸಬೇಕಾಗಿರುತ್ತದೆ. ಅಗಸ್ಟ್ 31, 2025 ರೊಳಗಾಗಿ ವಿಮಾ ಕಂತು ಪಾವತಿಸಬೇಕು. ಸದರಿ ಯೋಜನೆ ಅಡಿ ನೋಂದಾಯಿಸಿಕೊಳ್ಳಲು ಎಫ್ಐಡಿ ಹೊಂದಿರುವುದು ಕಡ್ಡಾಯ.
ಹೆಚ್ಚಿನ ಮಾಹಿತಿಗಾಗಿ ಧಾರವಾಡ, ಹುಬ್ಬಳ್ಳಿ, ಕಲಘಟಗಿ ಹಾಗೂ ಕುಂದಗೊಳ ತಾಲೂಕುಗಳ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು, ಸ್ಥಳೀಯ ವಾಣಿಜ್ಯ, ಗ್ರಾಮೀಣ ಸಹಕಾರಿ ಬ್ಯಾಂಕ್ ಅಥವಾ ಹತ್ತಿರದ ಬ್ಯಾಂಕುಗಳ ಅಧಿಕಾರಿಗಳನ್ನು ಹಾಗೂ ಅಗ್ರಿಕಲ್ಚರ್ ಇನ್ಸುರೆನ್ಸ್ ಕಂಪನಿ (ಜಿಲ್ಲಾ ಸಂಯೋಜಕರು-ಶ್ರೀನಿವಾಸ ಟಿ 6366684606 ಹಾಗೂ ರಾಮನಗೌಡ ಬಿರಾದಾರ್-6361985987) ಅವರನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಲೆಕ್ಟ್ರಿಕ್ ವಾಹನದ ಬ್ಯಾಟರಿ ಬದಲಾಯಿಸಿಕೊಡದ ಕಂಪನಿಗೆ ವಾಹನದ ಹಣ ಮರಳಿಸಲು ಕೋರ್ಟ್ ಆದೇಶ
ಉದ್ಯೋಗಿಗಳೇ ಗಮನಿಸಿ : ಪ್ರತಿ ತಿಂಗಳು ನಿಮ್ಮ ಸಂಬಳದಿಂದ `PF’ ಕಡಿತಗೊಂಡರೆ ಸಿಗಲಿವೆ ಈ 7 ಪ್ರಯೋಜನಗಳು.!