ಕಾರ್ಮಿಕರ ರಾಜ್ಯ ವಿಮಾ ನಿಗಮವು (ಇಎಸ್ಐಸಿ) ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿಯನ್ನು ಉತ್ತೇಜಿಸುವ ಯೋಜನೆ 2025 ಎಂಬ ನವೀಕೃತ ಯೋಜನೆ ಅನುಮೋದಿಸಿದ್ದು, ಇಎಸ್ಇ ಅಡಿ ಉದ್ಯೋಗದಾತರು ಮತ್ತು ಉದ್ಯೋಗಿಗಳು ನೋಂದಾಯಿಕೊಳ್ಳಬೇಕು ಎಂದು ಕಲಬುರಗಿ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕ ಯುವರಾಜ ಎಸ್.ವಿ ಅವರು ತಿಳಿಸಿದ್ದಾರೆ.
ಈ ಕುರಿತು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಯುವಜನ ಮತ್ತು ಕ್ರೀಡಾ ಸಚಿವ ಡಾ.ಮಾಂಡವೀಯ ಅವರ ಅಧ್ಯಕ್ಷತೆಯಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆದ ಕಾರ್ಮಿಕರ ರಾಜ್ಯ ವಿಮಾ ನಿಗಮದ 196 ನೇ ಸಭೆಯಲ್ಲಿ ಈ ಯೋಜನೆಯನ್ನು ಅನುಮೋದಿಸಿದೆ.
ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿಯನ್ನು ಉತ್ತೇಜಿಸುವ ಯೋಜನೆ 2025 ಕಾರ್ಮಿಕರ ರಾಜ್ಯ ವಿಮಾ ನಿಗಮವು ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಅನುಮೋದಿಸಿದ ಒಂದು ವಿಶೇಷ ಉಪಕ್ರಮವಾಗಿದ್ದು, 31ನೇ ಡಿಸೆಂಬರ್ 2025 ರವರೆಗೆ ಸಕ್ರಿಯವಾಗಿದೆ. ಹಾಗಾಗಿ ಗುತ್ತಿಗೆ ಹಾಗೂ ತಾತ್ಕಾಲಿಕ ಕಾರ್ಮಿಕರು ಸೇರಿದಂತೆ ಇಎಸ್ಇ ಅಡಿ ಇನ್ನು ನೋಂದಣಿಯಾಗದ ಉದ್ಯೋಗದಾತರು ಮತ್ತು ಉದ್ಯೋಗಿಗಳು ಯಾವುದೇ ಪರಿಶೀಲನೆ ಅಥವಾ ಹಿಂದಿನ ಅವಧಿಯ ಯಾವುದೇ ಬಾಕಿಯ ಬೇಡಿಕೆ ಇಲ್ಲದೇ ನೋಂದಾಯಿಸಿಕೊಳ್ಳಲು ಒಂದು ಬಾರಿಯ ಅವಕಾಶ ನೀಡಿದೆ ಎಂದು ಅವರು ತಿಳಿಸಿದ್ದಾರೆ.
ಈ ಯೋಜನೆಯಡಿ ಉದ್ಯೋಗದಾತರು ತಮ್ಮ ಘಟಕಗಳು ಮತ್ತು ಉದ್ಯೋಗಿಗಳನ್ನು ಇಎಸ್ಐಸಿ ಪೋರ್ಟಲ್, ಶ್ರಮ್ ಸುವಿಧಾ ಮತ್ತು ಎಂಸಿಎ ಪೋರ್ಟಲ್ ಮೂಲಕ ಡಿಜಿಟಲ್ ರೂಪದಲ್ಲಿ ನೋಂದಾಯಿಸಿಕೊಳ್ಳಬಹುದು.
ಉದ್ಯೋಗದಾತರು ತಾವು ಘೋಷಿಸಿದ ದಿನಾಂಕದಿAದ ನೋಂದಣಿಯನ್ನು ಪರಿಗಣಿಸಲಾಗುತ್ತದೆ. ನೋಂದಣಿಯ ಪೂರ್ವ ಅವಧಿಗೆ ಯಾವುದೇ ವಂತಿಗೆ ಮತ್ತು ಸೌಲಭ್ಯ ಅನ್ವಯಿಸುವುದಿಲ್ಲ. ನೋಂದಣಿಯ ಪೂರ್ವ ಅವಧಿಯ ಯಾವುದೇ ದಾಖಲೆಗಳ ಪರಿಶೀಲನೆ ಅಥವಾ ಬೇಡಿಕೆ ಇರುವುದಿಲ್ಲ.
ಈ ಯೋಜನೆಯು ಸ್ವಯಂಪ್ರೇರಿತವಾದ ಅನುಸರಣೆಯನ್ನು ಪ್ರೋತ್ಸಾಹಿಸಿ, ಹಿಂದಿನ ಅವಧಿಗೆ ದಂಡ ಪಾವತಿಸಬೇಕಾದ ಭಯ ಹೋಗಲಾಡಿಸಿ, ನೋಂದಣಿ ಪ್ರಕ್ರಿಯೆಯನ್ನು ಸರಳೀಕರಿಸಲಾಗಿದೆ. ಈ ಯೋಜನೆಯನ್ನು ಅನುಮೋದಿಸುವ ಮೊದಲು ನಿಗಧಿತ ಅವಧಿಯಲ್ಲಿ ನೋಂದಣಿ ಮಾಡದಿದ್ದಲ್ಲಿ ಕಾನೂನು ಕ್ರಮ ಹಾಗೂ ಹಿಂದಿನ ಅವಧಿಯ ಬಾಕಿ ಬೇಡಿಕೆಗೆ ಕಾರಣವಾಗುತ್ತಿತ್ತು. ಈ ಅಡೆತಡೆಗಳನ್ನು ನಿವಾರಿಸಿ ನೋಂದಣಿಯಿAದ ಬಿಟ್ಟುಹೋದ ಘಟಕಗಳು ಮತ್ತು ಕಾರ್ಮಿಕರನ್ನು ಇಎಸ್ಐ ವ್ಯಾಪ್ತಿಯೊಳಗೆ ಸೇರಿಸಿ ಸಾಮಾಜಿಕ ಭದ್ರತೆ ಒದಗಿಸಲಾಗುತ್ತದೆ ಎಂದು ಹೇಳಿದ್ದಾರೆ.
ಈ ಯೋಜನೆಯಿಂದ ಕಾರ್ಮಿಕರ ರಾಜ್ಯ ವಿಮಾ ನಿಗಮದ ಒಂದು ಪ್ರಗತಿಪರ ಹೆಜ್ಜೆಯಾಗಿದ್ದು, ಸರಳ ಮತ್ತು ಹಿಂದಿನ ಅವಧಿಯ ಬಾಕಿಯ ಬೇಡಿಕೆಯಿಲ್ಲದೆ ನೋಂದಣಿಗೆ ಸುಲಭವಾಗಿ ಸಾಮಾಜಿಕ ಭದ್ರತೆಗೆ ಒಳಪಡುವ ಯೋಜನೆಯಾಗಿದೆ.
ಉದ್ಯೋಗದಾತರು ಕೇವಲ ತಮ್ಮ ಕಾರ್ಯಪಡೆಯ ಕ್ರಮಬದ್ಧಗೊಳಿಸುವಿಕೆಯನ್ನು ಪ್ರೋತ್ಸಾಹಿಸುವುದಲ್ಲದೇ, ಇನ್ನೂ ಹೆಚ್ಚಿನ ಕಾರ್ಮಿಕರನ್ನು ವಿಶೇಷವಾಗಿ ಗುತ್ತಿಗೆ ವಲಯದ ಕಾರ್ಮಿಕರು ಇಎಸ್ಐ ಕಾಯ್ದೆಯಡಿ ದೊರೆಯುವ ಅಗತ್ಯ ಆರೋಗ್ಯ ರಕ್ಷಣೆ ಹಾಗೂ ಸಾಮಾಜಿಕ ಸೌಲಭ್ಯಗಳನ್ನು ಪಡೆಯುವುದನ್ನು ಉತ್ತೇಜಿಸುತ್ತದೆ. ಇದರೊಂದಿಗೆ ಇಎಸ್ಐಸಿಯು ಅಗತ್ಯ ಆರೋಗ್ಯ ರಕ್ಷಣೆ ಮತ್ತು ಸಾಮಾಜಿಕ ಭದ್ರತೆಯನ್ನು ತಲುಪಿಸುವ ತನ್ನ ಬದ್ಧತೆಯನ್ನು ಉಳಿಸಿಕೊಂಡು ಭಾರತದ ಕಾರ್ಮಿಕ ಕಲ್ಯಾಣ ಕೇಂದ್ರಿತ ದೃಷ್ಟಿಕೋನಕ್ಕೆ ಅನುಗುಣವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ