ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಸಂಬಳ ಪ್ಯಾಕೇಜ್ ಎಂದು ತಮ್ಮ ಬ್ಯಾಂಕ್ ಖಾತೆಯನ್ನು ನೋಂದಾಯಿಸಿಕೊಳ್ಳಲು ಹಾಗೂ ಪಿಎಂಇಬಿವೈ ಮತ್ತು ಪಿಎಂಜೆಜೆಬಿವೈ ವಿಮಾ ಯೋಜನೆ ಪಡೆಯಲು ಸೂಚಿಸಲಾಗಿದೆ. ಅದರಂತೆ ಎ ಗುಂಪಿನ ಅಧಿಕಾರಿಗಳಇಗೆ ಹೆಚ್ ಆರ್ ಎಂಎಸ್ ನಲ್ಲಿ ನೋಂದಾಯಿಸಲು ದಿನಾಂಕ 31-08-2025ರವರೆಗೆ ಅವಕಾಶ ನೀಡಲಾಗಿದೆ. ಒಂದು ವೇಳೆ ಈ ಕೊನೆಯ ದಿನಾಂಕದೊಳಗೆ ನೋಂದಾಯಿಸಿಕೊಳ್ಳದಿದ್ದರೇ ವೇತನವನ್ನು ಹೆಚ್ ಆರ್ ಎಂ ಎಸ್ ನಲ್ಲಿ ತಡೆಹಿಡಿಯಲಾಗುವುದು ಎಂಬುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ.
ಈ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಿಗೆ ಪತ್ರ ಬರೆದಿರುವಂತ ಆರ್ಥಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅವರು, ಸರ್ಕಾರದ ಇಲಾಖೆಗಳಲ್ಲಿ ನೇರವಾಗಿ/ಪರೋಕ್ಷವಾಗಿ ಇರುವ ವಿವಿಧ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತಾ ಜಾಲವನ್ನು ಜಾರಿಗೆ ತರಲು ಅಥವಾ ಹೆಚ್ಚಿಸಲು ಉದ್ದೇಶಿಸಿರುವ ಸರ್ಕಾರಿ ಆದೇಶ ಸಂಖ್ಯೆ ಎಫ್ಡಿ-ಸಿಎಎಂ/1/2025, ದಿನಾಂಕ: 21.02.2025 ರ ಬಗ್ಗೆ ತಮ್ಮ ಗಮನವನ್ನು ಸೆಳೆಯಲಾಗಿದೆ.
ಮೇಲಿನ ಸರ್ಕಾರಿ ಆದೇಶದ ಉದ್ದೇಶವೆಂದರೆ ವಿವಿಧ ಬ್ಯಾಂಕುಗಳು ತಮ್ಮ ಸಂಬಳ ಪ್ಯಾಕೇಜುಗಳಲ್ಲಿ ಉಚಿತವಾಗಿ ಅಥವಾ ನಾಮಮಾತ್ರ ವೆಚ್ಚದಲ್ಲಿ ನೀಡುವ ಅಪಘಾತ/ಅವಧಿ ವಿಮಾ ರಕ್ಷಣೆ ಮತ್ತು ಇತರ ಪ್ರಯೋಜನಗಳನ್ನು ಅಧಿಕಾರಿ/ನೌಕರರು ಪಡೆದು, ತಮ್ಮ ಅವಲಂಬಿತ ಕುಟುಂಬಗಳನ್ನು ಸುರಕ್ಷಿತಗೊಳಿಸುವುದು. ಅಲ್ಲದೆ, ಸಂಬಂಧಪಟ್ಟ ಅಧಿಕಾರಿ/ನೌಕರರು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY) ಮತ್ತು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (PMJJBY) ಯೋಜನೆಗಳಡಿ ಹೆಚ್ಚಿನ ವಿಮಾ ರಕ್ಷಣೆಗಾಗಿ ನೋಂದಾವಣಿ ಮಾಡಿಕೊಳ್ಳಲು ಪ್ರೇರೇಪಿಸುವುದು. ಅದಲ್ಲದೆ ಹೆಚ್ಚುವರಿ/ನಾಮಮಾತ್ರ ಪ್ರೀಮಿಯಂ ಪಾವತಿಸುವ ಮೂಲಕ, ಹೆಚ್ಚಿನ ವಿಮಾ ರಕ್ಷಣೆಗಾಗಿ ಬ್ಯಾಂಕುಗಳು ನೀಡುತ್ತಿರುವ ವೈಯಕ್ತಿಕ ಅಪಘಾತ ವಿಮೆಯನ್ನು ಪಡೆಯಲು ಪ್ರೋತ್ಸಾಹಿಸುವುದು.
ಆದ್ದರಿಂದ, ಸರ್ಕಾರಿ ಆದೇಶದ ಹೊರಡಿಸಿದ ಮೂರು ತಿಂಗಳಲ್ಲಿ ಎಲ್ಲಾ ಅಧಿಕಾರಿ/ನೌಕರರು ಮತ್ತು ವಿವಿಧ ನಿಗಮಗಳು/ಮಂಡಳಿಗಳ ಉದ್ಯೋಗಿಗಳು ತಮ್ಮ ಕುಟುಂಬಗಳ ಹಿತದೃಷ್ಟಿಯಿಂದ ತಮ್ಮ ಆಯ್ಕೆಯ ಯಾವುದೇ ಬ್ಯಾಂಕ್ ನೀಡುವ ಸಂಬಳ ಪ್ಯಾಕೇಜ್ಗಳನ್ನು ಸ್ವಯಂಪ್ರೇರಿತವಾಗಿ ಆಯ್ಕೆ ಮಾಡಲು ಹೆಚ್ಚಿನ ಆಸಕ್ತಿಯಿಂದ ಮನವೊಲಿಸುವುದು ಮತ್ತು ಸಂಬಂಧಪಟ್ಟ ಬ್ಯಾಂಕಿಗೆ ಸಂಬಳ ಪ್ಯಾಕೇಜುಗಳಲ್ಲಿ ಸೇರಿಸಲು ಅರ್ಜಿಯನ್ನು ಸಲ್ಲಿಸಲು ತಮ್ಮನ್ನು ಮತ್ತು ಎಲ್ಲಾ ಅಧಿಕಾರಿ/ನೌಕರರನ್ನು ಪ್ರೇರೇಪಿಸಲು ಸೂಕ್ತ ಕ್ರಮ ಕೈಗೊಳ್ಳಲು ಎಲ್ಲಾ ಇಲಾಖಾ ಮುಖ್ಯಸ್ಥರನ್ನು ಕೋರಲಾಗಿತ್ತು.
ಸರ್ಕಾರಿ ಆದೇಶ ಹೊರಡಿಸಿ 42 ತಿಂಗಳಾದರೂ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಂಡ ಅಧಿಕಾರಿಗಳು/ನೌಕರರ ಸಂಖ್ಯೆ 3 ಲಕ್ಷಗಳಿಗೆ ಮಾತ್ರ ತಲುಪಿದೆಯೆಂದು ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY) ಯಡಿ 32,611 ಮತ್ತು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (PMJJBY) ಯಡಿ 25,386 ನೋಂದಣಿಗಳು ಮಾತ್ರ ಹೆಚ್.ಆರ್.ಎಂ.ಎಸ್ ನಲ್ಲಿ ದಾಖಲಾಗಿದ್ದು, ಯೋಜನೆಗಳಡಿ ಹೆಚ್ಚಿನ ಪ್ರಗತಿಯಾಗಿರುವುದಿಲ್ಲವೆಂದು
ತಿಳಿದು ಬಂದಿದೆ.
ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ ಎಲ್ಲಾ ಅರ್ಹ ಅಧಿಕಾರಿ/ನೌಕರರು ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಈ ಕೆಳಗೆ ಸೂಚಿಸಿದಂತೆ ಸಂಬಳ ಪ್ಯಾಕೇಜುಗಳಲ್ಲಿ ನೋಂದಾಯಿಸಿಕೊಳ್ಳದ ಅಧಿಕಾರಿಗಳ ಸಂಬಳದ ವಿತರಣೆಯನ್ನು ತಡೆಹಿಡಿಯಲು ಕ್ರಮ ಕೈಗೊಳ್ಳಲು ಸರ್ಕಾರವು ಯೋಚಿಸಿದೆ ಎಂದಿದೆ.
ಈ ಅವಧಿಯೊಳಗೆ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯ
ಎ ಗುಂಪಿನ ಅಧಿಕಾರಿಗಳು – ದಿನಾಂಕ 31-08-2025ರ ಒಳಗೆ
ಬಿ ಗುಂಪಿನ ಅಧಿಕಾರಿಗಳು – ದಿನಾಂಕ 30-09-2025ರ ಒಳಗೆ
ಸಿ ಗುಂಪಿನ ಅಧಿಕಾರಿಗಳು – ದಿನಾಂಕ 30-11-2025ರ ಒಳಗೆ
ಡಿ ಗುಂಪಿನ ಅಧಿಕಾರಿಗಳು – ದಿನಾಂಕ 31-01-2026ರ ಒಳಗೆ
ಈ ಹಿನ್ನೆಲೆಯಲ್ಲಿ ತಮ್ಮ ಸಂಘ ಮತ್ತು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಸಂಘಗಳ ಸಂಬಂಧಪಟ್ಟ ಅಧಿಕಾರಿ/ನೌಕರ ಸದಸ್ಯರನ್ನು ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಆದ್ಯತೆಯ ಮೇಲೆ ಪ್ರೇರೇಪಿಸಲು ಕೋರಲಾಗಿದೆ.

ಬುರುಡೆ ಚಿನ್ನಯ್ಯ ಆರೋಪ ಸತ್ಯ, ನೂರಾರು ಹೆಣಗಳನ್ನು ಹೂತಿಟ್ಟಿರೋದು ನಿಜ: ಗಿರೀಶ್ ಮಟ್ಟಣ್ಣನವರ್
ರಾಜ್ಯದ ರೈತರಿಗೆ ಗುಡ್ ನ್ಯೂಸ್: ಸೆ.1ರಿಂದ ಪಹಣಿ ತಿದ್ದುಪಡಿ ವಿಶೇಷ ಅಭಿಯಾನ








