Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 8000 ಕಾನ್ಸ್ ಟೇಬಲ್ ಗಳ ನೇಮಕಾತಿ !

13/03/2026 6:04 AM

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಜನರ ಮೇಲೆ ಕಲ್ಲೆಸೆದ ಎಂದು ದಲಿತ ಯುವಕನ ಬರ್ಬರ ಹತ್ಯೆ !

13/03/2026 5:51 AM

ALERT : ರಾಜ್ಯದ ಜನರೇ ಎಚ್ಚರ : ರಾಜ್ಯಾದ್ಯಂತ 3000 ಮಾದರಿ ಹಾಲಿನಲ್ಲಿ `ಕಲಬೆರಕೆ’ ಪತ್ತೆ !

13/03/2026 5:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕ ‘SSLC, ದ್ವಿತೀಯ PUC ಪರೀಕ್ಷೆ-1’ರ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ
KARNATAKA

ಕರ್ನಾಟಕ ‘SSLC, ದ್ವಿತೀಯ PUC ಪರೀಕ್ಷೆ-1’ರ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

By kannadanewsnow0921/02/2025 5:25 AM

ಬೆಂಗಳೂರು: ಮಾರ್ಚ್.1ರಿಂದ 20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-1 ನಡೆಯಲಿದೆ. ಮಾರ್ಚ್.21ರಿಂದ ಏಪ್ರಿಲ್.4ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ-1 ನಡೆಯಲಿದೆ. ಈ ಪರೀಕ್ಷೆಯ ಕುರಿತಂತೆ ವಿದ್ಯಾರ್ಥಿಗಳಿಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಹತ್ವದ ಮಾಹಿತಿಯನ್ನು ನೀಡಲಾಗಿದೆ. ಅದೇನು ಅಂತ ಮುಂದೆ ಓದಿ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, 2024-25ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ-1 ಅನ್ನು ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ನಡೆಸಲಾಗುತ್ತಿದೆ ಎಂದಿದೆ.

ಈಗಾಗಲೇ ಪರೀಕ್ಷಾ ವೇಳಾಪಟ್ಟಿಯನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಈ ಪರೀಕ್ಷೆಗೆ ಸಂಬಂಧ ಪಟ್ಟಂತೆ ಅಂಕಿ ಅಂಶಗಳನ್ನು ಈ ಕೆಳಕಂಡಂತಿವೆ ಎಂದಿದೆ.

2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 6,61,474 ವಿದ್ಯಾರ್ಥಿಗಳು ಹೊಸಬರು. 34,071 ಪುನರಾವರ್ತಿತ ವಿದ್ಯಾರ್ಥಿಗಳು. 18,317 ಖಾಸಗಿ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದಿದೆ.

ಇನ್ನೂ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ 8,96,447 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಹೊಸಬರು 8,42,817, ಪುನರಾವರ್ತಿತರು 38,091, ಖಾಸಗಿ ಅಭ್ಯರ್ಥಿಗಳು 15,539 ಆಗಿದ್ದಾರೆ ಎಂಬುದಾಗಿ ತಿಳಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆ 5050, ಎಸ್ ಎಸ್ ಎಲ್ ಸಿ ಪರೀಕ್ಷೆಗೆ 15,881 ಶಾಲಾ-ಕಾಲೇಜುಗಳು ನೋಂದಾಯಿಸಿಕೊಂಡಿದ್ದಾವೆ. ದ್ವಿತೀಯ ಪಿಯುಸಿ ಪರೀಕ್ಷೆಯು 1171 ಕೇಂದ್ರಗಳಲ್ಲಿ ನಡೆಯಲಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ 2818 ಕೇಂದ್ರಗಳಲ್ಲಿ ನಡೆಯಲಿದೆ ಎಂದಿದೆ.

ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ದ್ವಿತೀಯ ಪಿಯುಸಿಗಾಗಿ ಸ್ಥಾನಿಕ ಜಾಗೃತ ದಳ 2342 ಮಂದಿಯನ್ನು, ಎಸ್ ಎಸ್ ಎಲ್ ಸಿ ಗೆ 2818 ಮಂದಿಯನ್ನು ನೇಮಿಸಲಾಗಿದೆ. ವಿಚಕ್ಷಣ ಜಾಗೃತ ದಳದ ಸಂಖ್ಯೆ ದ್ವಿತೀಯ ಪಿಯುಸಿಗೆ 504, ಎಸ್ ಎಸ್ ಎಲ್ ಸಿ ಗೆ ಜಿಲ್ಲಾ ಹಂತದಲ್ಲಿ 410, ತಾಲ್ಲೂಕು ಹಂತದಲ್ಲಿ 1662 ಮಂದಿಯನ್ನು ನಿಯೋಜಿಸಿರುವುದಾಗಿ ಹೇಳಿದೆ.

ಪರೀಕ್ಷಾ ಸಂಬಂಧ ಕೈಗೊಂಡಿರುವ ಇತರೆ ಕ್ರಮಗಳು

2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮಧ್ಯವಾರ್ಷಿಕ (ಎಸ್‌-01) ಪರೀಕ್ಷೆಯನ್ನು ದಿನಾಂಕ:24.09.2024 ರಿಂದ 01.10.2024ರವರೆಗೆ ನಡೆಸಲಾಗಿರುತ್ತದೆ.
ಪೂರ್ವ ಸಿದ್ಧತಾ ಪರೀಕ್ಷೆಯನ್ನು ದಿನಾಂಕ:25.02.2025 ರಿಂದ 04.03.2025ರವರೆಗೆ ಜಿಲ್ಲಾ ಉಪನಿರ್ದೇಶಕರು (ಆಡಳಿತ)ರವರ ಹಂತದಲ್ಲಿ ನಡೆಸಲಾಗುತ್ತಿದೆ.

ಸದರಿ ಪರೀಕ್ಷೆ ನಡೆದ ಮರುದಿನ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಮಾಡಿ, ಫಲಿತಾಂಶ ಮತ್ತು ಕಲಿಕೆಯ ಕೊರತೆಯನ್ನು ವಿದ್ಯಾರ್ಥಿ ಮತ್ತು ಪೋಷಕರ ಗಮನಕ್ಕೆ ತರಲಾಗುವುದು. ನಂತರದ ಉಳಿದ ದಿನಗಳಲ್ಲಿ ವಿದ್ಯಾರ್ಥಿಯು ಕಲಿಯದೇ ಇರುವ ಅಂಶಗಳ ಬಗ್ಗೆ ಕಲಿಕೆಯಾಗುವಂತೆ ಅಗತ್ಯ ಕ್ರಮವಹಿಸಲಾಗುವುದು. ಪ್ರಸ್ತುತ ವಾರ್ಷಿಕವಾಗಿ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು ಸದರಿ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಫಲಿತಾಂಶದ ಸುಧಾರಣೆಗೆ ಅಗತ್ಯಕುಮ ಕೈಗೊಳ್ಳಲಾಗಿರುತ್ತದೆ.

ದ್ವಿತೀಯ ಪಿ.ಯು.ಸಿ ಪರೀಕ್ಷೆ-1ರ ಅಂತಿಮ ಪ್ರವೇಶ ಪತ್ರಗಳನ್ನು ದಿನಾಂಕ:18.02.2025ರಂದು ಎಲ್ಲಾ ಪ್ರಾಂಶುಪಾಲರುಗಳಿಗೆ ಲಭ್ಯಗೊಳಿಸಲಾಗಿದೆ. 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿ.ಯು.ಸಿ ಪರೀಕ್ಷೆಗಳ ಫಲಿತಾಂಶ ವೃದ್ಧಿಗಾಗಿ ಪ್ರತಿ ಮಾಹೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಆಯುಕ್ತರು, ಜಿಲ್ಲಾಧಿಕಾರಿಗಳು ಮತ್ತು ಸಿ.ಇ.ಓ ರವರುಗಳೊಂದಿಗೆ ಸಭೆಮಾಡಿ ಫಲಿತಾಂಶ ವೃದ್ಧಿಯ ಕುರಿತು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಲಾಗಿರುತ್ತದೆ.

ಪ್ರತಿ 15 ದಿನಗಳಿಗೊಮ್ಮೆ ಪೋಷಕರ ಸಭೆಯನ್ನು ನಡೆಸಿ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ವರದಿಯನ್ನು ಫೋಷಕರಿಗೆ ತಿಳಿಸಲಾಗುತ್ತಿದೆ.

ಫಲಿತಾಂಶದ ಅಭಿವೃದ್ಧಿಗಾಗಿ 20 ಅಂಶಗಳ ಕಾರ್ಯಕ್ರಮಗಳನ್ನು ರೂಪಿಸಿದ್ದು, ಜಿಲ್ಲಾ ಹಾಗೂ ತಾಲ್ಲೂಕು ಹಂತದಲ್ಲಿ ಜಿಲ್ಲಾ ಉಪನಿರ್ದೇಶಕರು (ಆಡಳಿತ), (ಅಭಿವೃದ್ಧಿ) ಮತ್ತು ಪದವಿ ಪೂರ್ವ ಶಿಕ್ಷಣ ರವರುಗಳು ಎಲ್ಲಾ ಕಾರ್ಯಚಟುವಟಿಕೆಗಳ ಮೇಲುಸ್ತುವಾರಿಯನ್ನು ನಿರ್ವಹಿಸಿರುತ್ತಾರೆ.

ದ್ವಿತೀಯ ಪಿ.ಯು.ಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ಒಟ್ಟು 03 ಸೆಟ್ ಮಾದರಿ ಪ್ರಶ್ನೆಪತ್ರಿಕೆಗಳನ್ನು ಮಂಡಲಿ ಜಾಲತಾಣದಲ್ಲಿ ಲಭ್ಯಗೊಳಿಸಲಾಗಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ಒಟ್ಟು 04 ಸಟ್ ಮಾದರಿ ಪ್ರಶ್ನೆಪತ್ರಿಕೆಗಳನ್ನು ಮಂಡಲಿ ಜಾಲತಾಣದಲ್ಲಿ ಲಭ್ಯಗೊಳಿಸಲಾಗಿದೆ.

ದ್ವಿತೀಯ ಪಿ.ಯು.ಸಿ ಮತ್ತು ಎಸ್.ಎಸ್.ಎಲ್.ಸಿ ಪರೀಕ್ಷೆಗಳಿಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ವೆಬ್‌ಕ್ಯಾಸ್ಟಿಂಗ್ ಮುಖಾಂತರ ವೀಕ್ಷಣೆ ಮಾಡಲಾಗುವುದು.

ಪರೀಕ್ಷಾ ದಿನಗಳಂದು ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಾ 200 ಮೀಟರ್ ಪ್ರದೇಶವನ್ನು ನಿಷೇಧಿತ ವುದೇಶವೆಂದು ಘೋಷಿಸುವುದು ಹಾಗೂ ನಿಷೇಧಿತ ಪ್ರದೇಶದಲ್ಲಿ ಜೆರಾಕ್ಸ್/ಸೈಬರ್/ಕಂಪ್ಯೂಟರ್ ಸೆಂಟರ್‌ಗಳನ್ನು ಮುಚ್ಚಿಸಲು ಕ್ರಮವಹಿಸಲಾಗುವುದು.

ಜಿಲ್ಲೆಯಲ್ಲಿ ಪ್ರಶ್ನೆಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳ ವಿರುದ್ಧ ಶಿಕ್ಷಣ ಕಾಯ್ದೆ ನಿಯಮಗಳಡಿಯಲ್ಲಿ ಅಗತ್ಯವಾದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಪರೀಕ್ಷೆ ನಡೆಸಲು ಬೇಕಾಗಿರುವ ಸೂಕ್ತ ಪೋಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ವರದಿ: ವಸಂತ ಬಿ ಈಶ್ವರಗೆರೆ

Share. Facebook Twitter LinkedIn WhatsApp Email

Related Posts

GOOD NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 8000 ಕಾನ್ಸ್ ಟೇಬಲ್ ಗಳ ನೇಮಕಾತಿ !

13/03/2026 6:04 AM1 Min Read

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಜನರ ಮೇಲೆ ಕಲ್ಲೆಸೆದ ಎಂದು ದಲಿತ ಯುವಕನ ಬರ್ಬರ ಹತ್ಯೆ !

13/03/2026 5:51 AM1 Min Read

ALERT : ರಾಜ್ಯದ ಜನರೇ ಎಚ್ಚರ : ರಾಜ್ಯಾದ್ಯಂತ 3000 ಮಾದರಿ ಹಾಲಿನಲ್ಲಿ `ಕಲಬೆರಕೆ’ ಪತ್ತೆ !

13/03/2026 5:45 AM1 Min Read
Recent News

GOOD NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 8000 ಕಾನ್ಸ್ ಟೇಬಲ್ ಗಳ ನೇಮಕಾತಿ !

13/03/2026 6:04 AM

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಜನರ ಮೇಲೆ ಕಲ್ಲೆಸೆದ ಎಂದು ದಲಿತ ಯುವಕನ ಬರ್ಬರ ಹತ್ಯೆ !

13/03/2026 5:51 AM

ALERT : ರಾಜ್ಯದ ಜನರೇ ಎಚ್ಚರ : ರಾಜ್ಯಾದ್ಯಂತ 3000 ಮಾದರಿ ಹಾಲಿನಲ್ಲಿ `ಕಲಬೆರಕೆ’ ಪತ್ತೆ !

13/03/2026 5:45 AM

ಗರುಡ ಪುರಾಣ : ನರಕದಲ್ಲಿ ಯಾವ ತಪ್ಪು ಮಾಡಿದರೆ ಯಾವ ಶಿಕ್ಷೆ ಇದೆ ಗೊತ್ತಾ? ಇಲ್ಲಿದೆ ಮಾಹಿತಿ

13/03/2026 5:44 AM
State News
KARNATAKA

GOOD NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 8000 ಕಾನ್ಸ್ ಟೇಬಲ್ ಗಳ ನೇಮಕಾತಿ !

By kannadanewsnow5713/03/2026 6:04 AM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯನ್ನು ಬಲಪಡಿಸಲು ಮುಂದಾಗಿದ್ದು, ಹೊಸದಾಗಿ 8,000 ಪೊಲೀಸ್ ಕಾನ್ಸ್ಟೇಬಲ್ಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿದೆ ಎಂದು…

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಜನರ ಮೇಲೆ ಕಲ್ಲೆಸೆದ ಎಂದು ದಲಿತ ಯುವಕನ ಬರ್ಬರ ಹತ್ಯೆ !

13/03/2026 5:51 AM

ALERT : ರಾಜ್ಯದ ಜನರೇ ಎಚ್ಚರ : ರಾಜ್ಯಾದ್ಯಂತ 3000 ಮಾದರಿ ಹಾಲಿನಲ್ಲಿ `ಕಲಬೆರಕೆ’ ಪತ್ತೆ !

13/03/2026 5:45 AM

ಗರುಡ ಪುರಾಣ : ನರಕದಲ್ಲಿ ಯಾವ ತಪ್ಪು ಮಾಡಿದರೆ ಯಾವ ಶಿಕ್ಷೆ ಇದೆ ಗೊತ್ತಾ? ಇಲ್ಲಿದೆ ಮಾಹಿತಿ

13/03/2026 5:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.