Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಹಳದಿ ಮಾರ್ಗದಲ್ಲಿ ಮೆಟ್ರೋ ಫೀಡರ್ ಬಿಎಂಟಿಸಿ ಬಸ್ ಸಂಚಾರ ಆರಂಭ

12/08/2025 2:49 PM

ಹಳದಿ ಮಾರ್ಗದಲ್ಲಿ ಮೆಟ್ರೋ ಫೀಡರ್ ಬಿಎಂಟಿಸಿ ಬಸ್ ಸಂಚಾರ ಆರಂಭ: ಸಚಿರ ರಾಮಲಿಂಗಾರೆಡ್ಡಿ ಉದ್ಘಾಟನೆ

12/08/2025 2:43 PM

ಧರ್ಮಸ್ಥಳ ಕೇಸ್: 13ನೇ ಪಾಯಿಂಟ್ ನಲ್ಲಿ GPR ಸ್ಕ್ಯಾನ್ ಮುಕ್ತಾಯ, ತಂತ್ರಜ್ಞರಿಂದ ಪೂಟೇಜ್ ಪರಿಶೀಲನೆ

12/08/2025 2:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ದ್ವಿತೀಯ PUC’ ಪರೀಕ್ಷೆ-1 : ಖಾಸಗಿ ಅಭ್ಯರ್ಥಿಗಳ ನೋಂದಣಿ ಕುರಿತು ಇಲ್ಲಿದೆ ಮುಖ್ಯ ಮಾಹಿತಿ | Karnataka Second PUC Exam
KARNATAKA

‘ದ್ವಿತೀಯ PUC’ ಪರೀಕ್ಷೆ-1 : ಖಾಸಗಿ ಅಭ್ಯರ್ಥಿಗಳ ನೋಂದಣಿ ಕುರಿತು ಇಲ್ಲಿದೆ ಮುಖ್ಯ ಮಾಹಿತಿ | Karnataka Second PUC Exam

By kannadanewsnow0901/10/2024 9:28 AM

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1 ಮಾರ್ಚ್.2025ರಲ್ಲಿ ನಡೆಯಲಿದೆ. ಈ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ನಡೆಸುತ್ತಿರುವ ಮಾರ್ಚ್ 2025 ರ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಉಲ್ಲೇಖಿತ ಸರ್ಕಾರದ ಆದೇಶಗಳನ್ವಯ ಪಿಯುಸಿ ಶಿಕ್ಷಣ ಬೋಧಿಸುವ ರಾಜ್ಯದ ಎಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಮಾತ್ರ ಖಾಸಗಿ ಅಭ್ಯರ್ಥಿಯಾಗಿ ನೊಂದಾಯಿಸಿಕೊಂಡು – ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಡಲಾಗಿದೆ. ಅದರಂತೆ ಮಾರ್ಚ್ 2025 ರಲ್ಲಿ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಅರ್ಹ ಅಭ್ಯರ್ಥಿಗಳಿಂದ ದಿನಾಂಕ: 01-10-2024 ರಿಂದ ಖಾಸಗಿ ಅಭ್ಯರ್ಥಿಗಳಾಗಿ ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದಿದೆ.

1. ಖಾಸಗಿ ಅಭ್ಯರ್ಥಿಗಳಾಗಿ ನೊಂದಾಯಿಸಿಕೊಳ್ಳಲು ಕಡ್ಡಾಯವಾಗಿ ಇರಬೇಕಾದ ಅರ್ಹತೆಗಳು ಹಾಗೂ ಸೂಚನೆಗಳು:

1. ದಿನಾಂಕ: 31-03-2025 ಕ್ಕೆ 17 ವರ್ಷಗಳು ತುಂಬಿರಬೇಕು. (31-03-2008 ರಂದು ಅಥವಾ ಅದಕ್ಕಿಂತ ಹಿಂದೆ ಜನಿಸಿರಬೇಕು. (ಉಲ್ಲೇಖ-4ರ ಆದೇಶದಂತೆ)
2. ಕರ್ನಾಟಕದಲ್ಲಿ ಎಸ್.ಎಸ್.ಎಲ್.ಸಿ/ಸಿ.ಬಿ.ಎಸ್.ಇ/ಐ.ಸಿ.ಎಸ್.ಇ/ಎನ್.ಐ.ಓ.ಎಸ್.ಗಳಲ್ಲಿ ವ್ಯಾಸಂಗ ಮಾಡಿ 2024 ರ ಆಗಸ್ಟ್ ಅಥವಾ ಅದಕ್ಕೂ ಹಿಂದಿನ ವರ್ಷಗಳ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. 3. ಇತರೆ ರಾಜ್ಯಗಳ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ/10ನೇ ತರಗತಿ ಪರೀಕ್ಷೆ ತೆಗೆದುಕೊಂಡು, ಪರೀಕ್ಷೆಯಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಅಥವಾ ಕನ್ನಡ ಮಾಧ್ಯಮದಲ್ಲಿ ಅಭ್ಯಾಸ ಮಾಡಿ ತೇರ್ಗಡೆ ಪರೀಕ್ಷೆಗಳಲ್ಲಿ ಹೊಂದಿರಬೇಕು ಹಾಗೂ 20240 ಆಗಸ್ಟ್ ಅಥವಾ ಅದಕ್ಕೂ ಹಿಂದಿನ ಉತ್ತೀರ್ಣರಾಗಿರಬೇಕು.

4. ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ದಾಖಲಾತಿ ಮಾರ್ಗಸೂಚಿ ಪಟ್ಟಿಯಲ್ಲಿರುವ ಸೆಕೆಂಡರಿ ಎಜುಕೇಷನ್‌ ಬೋರ್ಡ್‌ಗಳಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮಾತ್ರ ದ್ವಿತೀಯ ಪಿಯುಸಿಗೆ ಖಾಸಗಿ ಅಭ್ಯರ್ಥಿಯಾಗಿ ನೊಂದಾಯಿಸಿಕೊಳ್ಳಲು ಅರ್ಹರಾಗಿರುತ್ತಾರೆ.
5. ಪ್ರಥಮ PUC ಅನುತ್ತೀರ್ಣರಾದವರು, ಪರೀಕ್ಷೆಗೆ ಹಾಜರಾಗದವರು, ವ್ಯಾಸಂಗವನ್ನು ಮುಂದುವರಿಸದವರು ಖಾಸಗಿ ಅಭ್ಯರ್ಥಿಯಾಗಿ ತಮ್ಮ ಹೆಸರನ್ನು ನೊಂದಾಯಿಸಿ ಕೊಳ್ಳಬಹುದಾಗಿದೆ. ಹೊರ ರಾಜ್ಯದಲ್ಲಿ 10ನೇ ತರಗತಿ ಉತ್ತೀರ್ಣರಾಗಿ ಕರ್ನಾಟಕದಲ್ಲಿ ಪ್ರಥಮ ಪಿಯುಸಿ ದಾಖಾಲಾತಿ ಪಡೆದು ವ್ಯಾಸಂಗ ಮುಂದುವರೆಸದವರು (discontinued) ಖಾಸಗಿ ಅಭ್ಯರ್ಥಿಗಳಾಗಿ ನೊಂದಾಯಿಸಲು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇವರು ನೀಡುವ ಪ್ರಥಮ ಪಿಯುಸಿ ಸ್ಯಾಟ್ಸ್ ನಂಬರ್ ಕಡ್ಡಾಯವಾಗಿ ನೀಡುವುದು.
6. ಕರ್ನಾಟಕ ರಾಜ್ಯದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ಐ.ಟಿ.ಐ, ಜೆಓಸಿ, ಡಿಪ್ಲೊಮೊ ಇತ್ಯಾದಿ ತರಗತಿಗಳಿಗೆ ದಾಖಲಾಗಿ ಅನುತ್ತೀರ್ಣಗೊಂಡು ಅಲ್ಲಿ ವ್ಯಾಸಂಗ ಮುಂದುವರೆಸದವರು ಖಾಸಗಿ ಅಭ್ಯರ್ಥಿಯಾಗಿ ತಮ್ಮ ಹೆಸರನ್ನು ನೊಂದಾಯಿಸಲು ಅರ್ಹರಾಗಿರುತ್ತಾರೆ. ದ್ವಿತೀಯ ಪಿಯಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಅನುತ್ತೀರ್ಣರಾಗಿರುವ ಸಂಯೋಜನೆ ಹೊರತುಪಡಿಸಿ, ಬೇರೆ ಅಂದರೆ ಕಲಾ ಅಥವಾ ವಾಣಿಜ್ಯ ಸಂಯೋಜನೆಯಲ್ಲಿ ಖಾಸಗಿ ಅಭ್ಯರ್ಥಿಯಾಗಿ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಹಾಗೂ ಐಟಿಐ, ಜೆಓಸಿ, ಡಿಪ್ಲೊಮೊ ಇತ್ಯಾದಿ ತರಗತಿಗಳಲ್ಲಿ ಉತ್ತೀರ್ಣರಾದವರೂ ಸಹ ಖಾಸಗಿ ಅಭ್ಯರ್ಥಿಯಾಗಿ ನೊಂದಾಯಿಸಿಕೊಳ್ಳಬಹುದು.
7. ಅಂಧ ವಿದ್ಯಾರ್ಥಿಗಳಿಗೆ ವಾಸಸ್ಥಳ/ಉದ್ಯೋಗ ಸ್ಥಳ/ಅಂಧ ಶಾಲೆ ಇರುವ ಸ್ಥಳದ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಖಾಸಗಿ ಅಭ್ಯರ್ಥಿಯಾಗಿ ನೊಂದಾಯಿಸಲು ಅವಕಾಶ ನೀಡಲಾಗಿದೆ.
8. ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭ್ಯರ್ಥಿಯು ತನ್ನ ವಾಸಸ್ಥಾನಕ್ಕೆ ಹತ್ತಿರವಾಗಿರುವ ಅಥವಾ ಈ ಉದ್ಯೋಗ ಮಾಡುವ ಸ್ಥಳಕ್ಕೆ ಸಮೀಪದಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾತ್ರ ಖಾಸಗಿ ಅಭ್ಯರ್ಥಿಯಾಗಿ ನೊಂದಾಯಿಸಿಕೊಳ್ಳಬಹುದು.
9. ವಾಸಸ್ಥಳದ ಖಾತರಿಗಾಗಿ ವಾಸಸ್ಥಳದ ವಿಳಾಸದ ವಿವರವಿರುವ ಈ ಕೆಳಗಿನ ಯಾವುದಾದರೂ ಒಂದು ದೃಢೀಕರಿಸಿದ ದಾಖಲೆಯನ್ನು ಸಲ್ಲಿಸುವುದು.
• ಮತದಾರರ ಗುರುತಿನ ಚೀಟಿ
• ಪಡಿತರ ಚೀಟಿ
• ಬ್ಯಾಂಕ್‌ ಪಾಸ್ ಬುಕ್‌
• ಡ್ರೈವಿಂಗ್ ಲೈಸೆನ್ಸ್
10. ಖಾಸಗಿ ಅಭ್ಯರ್ಥಿಗಳು ಆಧಾರ್ ಕಾರ್ಡ್‌ ದೃಢೀಕೃತ ಪ್ರತಿಯನ್ನು ಕಡ್ಡಾಯವಾಗಿ ಸಲ್ಲಿಸಲು ಸೂಚಿಸಿದೆ. 11. ದ್ವಿಪ್ರತಿ ವರ್ಗಾವಣೆ ಪತ್ರದ ಆಧಾರದ ಮೇಲೆ ಖಾಸಗಿ ಅಭ್ಯರ್ಥಿಯಾಗಿ ನೊಂದಾಯಿಸಿಕೊಳ್ಳಲು ಬಂದಾಗ ಪ್ರಾಂಶುಪಾಲರು ತಮ್ಮ ಹಂತದಲ್ಲಿಯೇ ಪರಿಶೀಲಿಸಿ 20 ರೂಗಳ ಛಾಪಾ ಕಾಗದದಲ್ಲಿ ಮಂಡಲಿಯಿಂದ ಒದಗಿಸಿರುವ ನಿಗದಿತ ನಮೂನೆಯಲ್ಲಿ ಅಭ್ಯರ್ಥಿಯಿಂದ ದೃಢೀಕರಣ ಪಡೆಯುವುದು ಎಂದಿದೆ.

BREAKING: ಕೇಂದ್ರ ಸಚಿವ ‘HDK’ ಬಗ್ಗೆ ಹಂದಿ ಪದ ಬಳಸಿದ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಜೆಡಿಎಸ್ ‘CS’ಗೆ ದೂರು

ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ಸುರಕ್ಷತೆಗೆ ಮಹತ್ವದ ಹೆಜ್ಜೆ: 10,000 ರೈಲುಗಳಿಗೆ ಕವಚ್ 4.0 ಅಳವಡಿಕೆ

‘ದ್ವಿತೀಯ PUC’ ಪರೀಕ್ಷೆ-1 : ಖಾಸಗಿ ಅಭ್ಯರ್ಥಿಗಳ ನೋಂದಣಿ ಕುರಿತು ಇಲ್ಲಿದೆ ಮುಖ್ಯ ಮಾಹಿತಿ | Karnataka Second PUC Exam
Share. Facebook Twitter LinkedIn WhatsApp Email

Related Posts

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಹಳದಿ ಮಾರ್ಗದಲ್ಲಿ ಮೆಟ್ರೋ ಫೀಡರ್ ಬಿಎಂಟಿಸಿ ಬಸ್ ಸಂಚಾರ ಆರಂಭ

12/08/2025 2:49 PM3 Mins Read

ಹಳದಿ ಮಾರ್ಗದಲ್ಲಿ ಮೆಟ್ರೋ ಫೀಡರ್ ಬಿಎಂಟಿಸಿ ಬಸ್ ಸಂಚಾರ ಆರಂಭ: ಸಚಿರ ರಾಮಲಿಂಗಾರೆಡ್ಡಿ ಉದ್ಘಾಟನೆ

12/08/2025 2:43 PM1 Min Read

ಧರ್ಮಸ್ಥಳ ಕೇಸ್: 13ನೇ ಪಾಯಿಂಟ್ ನಲ್ಲಿ GPR ಸ್ಕ್ಯಾನ್ ಮುಕ್ತಾಯ, ತಂತ್ರಜ್ಞರಿಂದ ಪೂಟೇಜ್ ಪರಿಶೀಲನೆ

12/08/2025 2:28 PM1 Min Read
Recent News

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಹಳದಿ ಮಾರ್ಗದಲ್ಲಿ ಮೆಟ್ರೋ ಫೀಡರ್ ಬಿಎಂಟಿಸಿ ಬಸ್ ಸಂಚಾರ ಆರಂಭ

12/08/2025 2:49 PM

ಹಳದಿ ಮಾರ್ಗದಲ್ಲಿ ಮೆಟ್ರೋ ಫೀಡರ್ ಬಿಎಂಟಿಸಿ ಬಸ್ ಸಂಚಾರ ಆರಂಭ: ಸಚಿರ ರಾಮಲಿಂಗಾರೆಡ್ಡಿ ಉದ್ಘಾಟನೆ

12/08/2025 2:43 PM

ಧರ್ಮಸ್ಥಳ ಕೇಸ್: 13ನೇ ಪಾಯಿಂಟ್ ನಲ್ಲಿ GPR ಸ್ಕ್ಯಾನ್ ಮುಕ್ತಾಯ, ತಂತ್ರಜ್ಞರಿಂದ ಪೂಟೇಜ್ ಪರಿಶೀಲನೆ

12/08/2025 2:28 PM

BREAKING : ಹೈದ್ರಾಬಾದ್ ನಲ್ಲಿ ಹಾಡ ಹಗಲೇ ಜುವೆಲ್ಲರೀ ಶಾಪ್ ಮೇಲೆ ಗುಂಡಿನ ದಾಳಿ ನಡೆಸಿ, ಚಿನ್ನಾಭರಣ ದರೋಡೆ!

12/08/2025 2:12 PM
State News
KARNATAKA

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಹಳದಿ ಮಾರ್ಗದಲ್ಲಿ ಮೆಟ್ರೋ ಫೀಡರ್ ಬಿಎಂಟಿಸಿ ಬಸ್ ಸಂಚಾರ ಆರಂಭ

By kannadanewsnow0912/08/2025 2:49 PM KARNATAKA 3 Mins Read

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಸೇವೆಗಾಗಿ ಮೆಟ್ರೋ ಸಂಪರ್ಕ ಬಲಪಡಿಸುವ ಸಲುವಾಗಿ ಹಳದಿ ಮಾರ್ಗದಲ್ಲಿ ಪರಿಚಯಿಸಲಾಗುತ್ತಿರುವ ಮೆಟ್ರೋ ಫೀಡರ್…

ಹಳದಿ ಮಾರ್ಗದಲ್ಲಿ ಮೆಟ್ರೋ ಫೀಡರ್ ಬಿಎಂಟಿಸಿ ಬಸ್ ಸಂಚಾರ ಆರಂಭ: ಸಚಿರ ರಾಮಲಿಂಗಾರೆಡ್ಡಿ ಉದ್ಘಾಟನೆ

12/08/2025 2:43 PM

ಧರ್ಮಸ್ಥಳ ಕೇಸ್: 13ನೇ ಪಾಯಿಂಟ್ ನಲ್ಲಿ GPR ಸ್ಕ್ಯಾನ್ ಮುಕ್ತಾಯ, ತಂತ್ರಜ್ಞರಿಂದ ಪೂಟೇಜ್ ಪರಿಶೀಲನೆ

12/08/2025 2:28 PM

ಯತ್ನಾಳ್ ತನ್ನ ಪತ್ನಿಯನ್ನು ಮುಸ್ಲಿಂ ವ್ಯಕ್ತಿಯೊಂದಿಗೆ ಮದುವೆ ಮಾಡಿಸಲಿ : ಮುಸ್ಲಿಂ ಮುಖಂಡ ವಿವಾದಾತ್ಮಕ ಹೇಳಿಕೆ!

12/08/2025 1:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.