Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದು ‘ಭೂ ವೀಕ್ಷಣಾ ಉಪಗ್ರಹ’ ಉಡಾವಣೆ ಮಾಡಲಿದೆ ಇಸ್ರೋ | Isro

12/01/2026 6:52 AM

ದಾಖಲೆಗಳ ‘ವಿರಾಟ’ ರೂಪ: 28 ಸಾವಿರ ರನ್ ಪೂರೈಸಿ ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ!

12/01/2026 6:47 AM

ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 650 ಸಿಕ್ಸರ್ ಸಿಡಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರ | Rohit Sharma

12/01/2026 6:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯ ಸರ್ಕಾರದಿಂದ ‘ಅನುಕಂಪದ ಆಧಾರದ ನೇಮಕಾತಿ’ ಕುರಿತು ಮಹತ್ವದ ಆದೇಶ
KARNATAKA

BIG NEWS: ರಾಜ್ಯ ಸರ್ಕಾರದಿಂದ ‘ಅನುಕಂಪದ ಆಧಾರದ ನೇಮಕಾತಿ’ ಕುರಿತು ಮಹತ್ವದ ಆದೇಶ

By kannadanewsnow0917/01/2025 9:20 AM

ಬೆಂಗಳೂರು: ರಾಜ್ಯ ಸರ್ಕಾರದಿದಂ ಅನುಕಂಪದ ಆಧಾರದ ನೇಮಕಾತಿ ನೀಡುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಕ್ರಮವಹಿಸುವ ಕುರಿತು ಮಹತ್ವದ ಆದೇಶ ಹೊರಡಿಸಿದೆ.

ಈ ಸಂಬಂಧ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಸರ್ಕಾರಿ ನೌಕರನು ಸೇವೆಯಲ್ಲಿರುವಾಗಲೇ ಮೃತಪಟ್ಟಲ್ಲಿ ಆತನ ಅವಲಂಬಿತರಲ್ಲಿ ಒಬ್ಬರಿಗೆ ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996 ರನ್ವಯ ಅರ್ಹತೆಯ ಆಧಾರದ ಮೇಲೆ ಅನುಕಂಪದ ಆಧಾರದ ನೇಮಕಾತಿಯನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಸದರಿ ಅನುಕಂಪದ ಆಧಾರದ ನೌಕರಿಯನ್ನು ಸರ್ಕಾರಿ ನೌಕರನು ಸೇವೆಯಲ್ಲಿರುವಾಗಲೇ ಮೃತನಾದಲ್ಲಿ ಆತನ ಕುಟುಂಬಕ್ಕೆ ಉಂಟಾಗುವ ಆರ್ಥಿಕ ಸ್ತೋಭೆಯನ್ನು ತಡೆಯಲು ನೀಡುವಂತಹ ವ್ಯವಸ್ಥೆಯಾಗಿದ್ದರೂ ಇದನ್ನು ಹಕ್ಕೊತ್ತಾಯ ಮಾಡಲು ಅವಕಾಶವಿರುವುದಿಲ್ಲ. ಈ ನಿಯಮಗಳಲ್ಲಿ ಅನುಕಂಪದ ನೇಮಕಾತಿಗಾಗಿ ನಿಗಧಿಪಡಿಸಿರುವ ಎಲ್ಲಾ ಷರತ್ತು ಮತ್ತು ನಿಬಂಧನೆಗಳನ್ನು ಅರ್ಜಿದಾರರು ಪೂರೈಸಿದಲ್ಲಿ ಮಾತ್ರ ಅನುಕಂಪದ ನೇಮಕಾತಿಗಾಗಿ ಪರಿಗಣಿಸಬಹುದಾಗಿದೆ ಎಂದಿದೆ.

ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996 ರ ನಿಯಮ 4(4) ರನ್ವಯ ಅಭ್ಯರ್ಥಿಯ ವಿದ್ಯಾರ್ಹತೆಗನುಗುಣವಾಗಿ ಕರ್ನಾಟಕ ಸರ್ಕಾರ ಸಚಿವಾಲಯದ ಸಹಾಯಕ ಹುದ್ದೆಯ ವೇತನ ಶ್ರೇಣಿಯನ್ನು ಮೀರದಂತಹ ಗರಿಷ್ಠ ಗ್ರೂಪ್ “ಸಿ” ಹುದ್ದೆ ಅಥವಾ ಗ್ರೂಪ್ “ಡಿ” ಹುದ್ದೆಯನ್ನು ನೀಡಬಹುದಾಗಿದೆ. ಅನುಕಂಪದ ಆಧಾರದ ಮೇಲಿನ ನೇಮಕಾತಿ ಅರ್ಜಿಯನ್ನು ಸಲ್ಲಿಸಿದಾಗ ಯಾವ ನಿಯಮ ಚಾಲ್ತಿಯಲ್ಲಿರುತ್ತದೆಯೋ ಆ ಪ್ರಕಾರವಾಗಿ ನಿರ್ಧರಿಸಬೇಕಿರುತ್ತದೆ ಹಾಗೂ ಅನುಕಂಪದ ಆಧಾರದ ನೇಮಕಾತಿಗಾಗಿ ಅರ್ಜಿ ಸಲ್ಲಿಸಲುನಿಗದಿಪಡಿಸಿರುವ ಕಾಲಮಿತಿಯೊಳಗೆ ಅಭ್ಯರ್ಥಿಯು ಹೊಂದಿರುವ
ವಿದ್ಯಾರ್ಹತೆಯನ್ನು ಪರಿಗಣಿಸಿ ನೇಮಕಾತಿ ನೀಡಬೇಕಾಗುತ್ತದೆ ಎಂದು ಹೇಳಿದೆ.

ಆದರೆ, ಕೆಲವು ಇಲಾಖೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅನುಕಂಪದ ಆಧಾರದ ನೇಮಕಾತಿ ನೀಡುವ ಸಂದರ್ಭದಲ್ಲಿ ಅವರುಗಳ ವಿದ್ಯಾರ್ಹತೆಯನ್ನು ಪರಿಗಣಿಸದೇ ಕೆಳಹಂತದ ಹುದ್ದೆಗಳಿಗೆ ನೇಮಕಾತಿ ಮಾಡಿರುವ ಬಗ್ಗೆ ದೂರುಗಳು ಸ್ವೀಕೃತವಾಗಿರುತ್ತವೆ. ಈ ನಡೆಯನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿರುತ್ತದೆ ಎಂದಿದೆ.

ಅನುಕಂಪದ ಆಧಾರದ ಮೇಲಿನ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಿದಾಗ ಯಾವ ನಿಯಮ ಚಾಲ್ತಿಯಲ್ಲಿರುತ್ತದೆಯೋ ಆ ಪ್ರಕಾರವಾಗಿ ಹಾಗೂ ಅನುಕಂಪದ ಆಧಾರದ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕಾಲಮಿತಿಯೊಳಗೆ ಅಭ್ಯರ್ಥಿಯು ಹೊಂದಿರುವ ವಿದ್ಯಾರ್ಹತೆಯನ್ನು ಪರಿಗಣಿಸಿ ನೇಮಕಾತಿ ನೀಡಬೇಕಾಗುತ್ತದೆ. ಇದರಿಂದಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸೇರಿದಂತೆ ಇತರೆ ಜಾತಿ/ಧರ್ಮ/ವರ್ಗದ ಆಧಾರದ ಮೇಲೆ ಅಭ್ಯರ್ಥಿಗಳಿಗೆ ಅನುಕಂಪದ ಆಧಾರದ ನೇಮಕಾತಿ ನೀಡುವ ಸಂದರ್ಭದಲ್ಲಿ ಯಾವುದೇ ತಾರತಮ್ಯ ಮಾಡದಂತೆ ನಿಯಮಾನುಸಾರ ಪರಿಶೀಲಿಸಿ ಕ್ರಮವಹಿಸುವಂತೆ ಹಾಗೂ ಈ ರೀತಿ ನಿಯಮಾನುಸಾರ ಕ್ರಮವಹಿಸದ ಅಧಿಕಾರಿ / ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಎಲ್ಲಾ ಸಕ್ಷಮ / ನೇಮಕಾತಿ ಪ್ರಾಧಿಕಾರಗಳಿಗೆ ಈ ಮೂಲಕ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.

ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ‘ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting

BREAKING: ಸಾಗರದ ‘ಗಣಪತಿ ಬ್ಯಾಂಕ್’ ಅಧ್ಯಕ್ಷರಾಗಿ ಶ್ರೀನಿವಾಸ್ ಮೇಸ್ತ್ರಿ, ಉಪಾಧ್ಯಕ್ಷರಾಗಿ ವಿ.ಶಂಕರ್ ಆಯ್ಕೆ

Share. Facebook Twitter LinkedIn WhatsApp Email

Related Posts

GOOD NEWS: ಯಶಸ್ವಿನಿ ಯೋಜನೆಯಡಿ 5 ಲಕ್ಷ ರೂ.ವರೆಗೆ ಚಿಕಿತ್ಸೆ ಉಚಿತ: ಹೊಸ ಸದಸ್ಯರ ನೋಂದಣಿ ಆಂರಭ

12/01/2026 6:30 AM1 Min Read

SHOCKING : ಅಂಡಮಾನ್ ಪ್ರವಾಸಕ್ಕೆ ತೆರಳಿದಾಗ ದುರಂತ : ಧಾರವಾಡದ KCD ಕಾಲೇಜು ಪ್ರೊಫೆಸರ್ ‘ಹೃದಯಾಘಾತಕ್ಕೆ’ ಬಲಿ!

12/01/2026 6:27 AM1 Min Read

ಸಾರ್ವಜನಿಕರೇ ಗಮನಿಸಿ: `ಸೈಟ್’ ಖರೀದಿಸುವಾಗ ಈ 7 ದಾಖಲೆಗಳು ಸರಿ ಇದೆಯಾ ಒಮ್ಮೆ ಚೆಕ್ ಮಾಡಿಕೊಳ್ಳಿ

12/01/2026 6:20 AM2 Mins Read
Recent News

ಇಂದು ‘ಭೂ ವೀಕ್ಷಣಾ ಉಪಗ್ರಹ’ ಉಡಾವಣೆ ಮಾಡಲಿದೆ ಇಸ್ರೋ | Isro

12/01/2026 6:52 AM

ದಾಖಲೆಗಳ ‘ವಿರಾಟ’ ರೂಪ: 28 ಸಾವಿರ ರನ್ ಪೂರೈಸಿ ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ!

12/01/2026 6:47 AM

ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 650 ಸಿಕ್ಸರ್ ಸಿಡಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರ | Rohit Sharma

12/01/2026 6:41 AM

GOOD NEWS: ಯಶಸ್ವಿನಿ ಯೋಜನೆಯಡಿ 5 ಲಕ್ಷ ರೂ.ವರೆಗೆ ಚಿಕಿತ್ಸೆ ಉಚಿತ: ಹೊಸ ಸದಸ್ಯರ ನೋಂದಣಿ ಆಂರಭ

12/01/2026 6:30 AM
State News
KARNATAKA

GOOD NEWS: ಯಶಸ್ವಿನಿ ಯೋಜನೆಯಡಿ 5 ಲಕ್ಷ ರೂ.ವರೆಗೆ ಚಿಕಿತ್ಸೆ ಉಚಿತ: ಹೊಸ ಸದಸ್ಯರ ನೋಂದಣಿ ಆಂರಭ

By kannadanewsnow5712/01/2026 6:30 AM KARNATAKA 1 Min Read

ಬೆಂಗಳೂರು: 2025-26ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸಲು ಅವಕಾಶ ನೀಡಿ,…

SHOCKING : ಅಂಡಮಾನ್ ಪ್ರವಾಸಕ್ಕೆ ತೆರಳಿದಾಗ ದುರಂತ : ಧಾರವಾಡದ KCD ಕಾಲೇಜು ಪ್ರೊಫೆಸರ್ ‘ಹೃದಯಾಘಾತಕ್ಕೆ’ ಬಲಿ!

12/01/2026 6:27 AM

ಸಾರ್ವಜನಿಕರೇ ಗಮನಿಸಿ: `ಸೈಟ್’ ಖರೀದಿಸುವಾಗ ಈ 7 ದಾಖಲೆಗಳು ಸರಿ ಇದೆಯಾ ಒಮ್ಮೆ ಚೆಕ್ ಮಾಡಿಕೊಳ್ಳಿ

12/01/2026 6:20 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಟ್ರ್ಯಾಕ್ಟರ್, ಟ್ಯಾಕ್ಸಿ, ಆಟೋ ರಿಕ್ಷಾ, ಗುಡ್ಸ್ ವಾಹನ ಖರೀದಿಗೆ ಸರ್ಕಾರದಿಂದ ಸಿಗಲಿದೆ 4 ಲಕ್ಷ ರೂ. ಸಹಾಯಧನ.!

12/01/2026 6:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.