ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವಡೆ ಭಾರಿ ಮಳೆ ಸುರಿಯುತ್ತಿದ್ದು ಇನ್ನೂ ಹಲವು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಇದೀಗ ಬೆಂಗಳೂರಿನಲ್ಲಿ ನಗರದ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ.
ಬೆಂಗಳೂರು ನಗರದ ಶಾಂತಿನಗರ ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್, ಕೆ ಆರ್ ಮಾರ್ಕೆಟ್, ಮೆಜೆಸ್ಟಿಕ್, ಕಬ್ಬನ್ ಪಾರ್ಕ್ ಹಾಗು ವಿಧಾನಸೌಧ ಸೇರಿದಂತೆ ನಗರದ ಹಲವೆಡೆ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಭಾರಿ ಮಳೆ ಹಿನ್ನೆಲೆ ವಾಹನ ಸವಾರರು ಪರದಾಟ ನಡೆಸಿದರು.