ಶಿವಮೊಗ್ಗ: ಜಿಲ್ಲೆಯಲ್ಲಿ ಅನ್ಯಕೋಮಿನ ವ್ಯಕ್ತಿಯೊಬ್ಬ ನಾಗರ ವಿಗ್ರಹವನ್ನೇ ಕಿತ್ತು ಚರಂಡಿಗೆ ಎಸೆದು ದುಷ್ಕೃತ್ಯ ಮೆರೆದಿರುವಂತ ಘಟನೆ ನಡೆದಿದೆ.
ಶಿವಮೊಗ್ಗದ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ನಾಗರ ವಿಗ್ರಹವನ್ನು ಕಿತ್ತು ಚರಂಡಿಗೆ ಎಸೆದಿರುವುದು ಅಲ್ಲದೇ, ಗಣೇಶ ಮೂರ್ತಿಗೆ ಒದ್ದು ಅವಮಾನವನ್ನು ದುರುಳ ಮಾಡಿದ್ದಾನೆ.
ನಾಗರ ವಿಗ್ರವನ್ನು ಕಿತ್ತು ಚರಂಡಿಗೆ ಎಸೆದು ಅನ್ಯಕೋಮಿನ ದುಷ್ಕರ್ಮಿ ಪರಾರಿಯಾಗಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಡಿವೈಎಸ್ಪಿ ಸಂಜೀವ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer