Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಒಮ್ಮೆ ನೀವು ಹೀಗೆ ಮಾಡಿದ್ರೆ, ನಿಮ್ಮ ಹೊಟ್ಟೆಯಲ್ಲಿರುವ ಎಲ್ಲಾ ಗ್ಯಾಸ್ ಹೊರ ಹೋಗುತ್ತೆ!

28/08/2025 7:06 PM

ಧರ್ಮಸ್ಥಳ ವಿಷಯದಲ್ಲಿ ಷಡ್ಯಂತ್ರ್ಯ, ಪಿತೂರಿ ನಡೆಸಿದವರಿಗೆ ಆ ಮಂಜುನಾಥ ಸ್ವಾಮಿಯೇ ತಕ್ಕ ಶಾಸ್ತಿ: HDK

28/08/2025 7:03 PM

PF ಖಾತೆದಾರರಿಗೆ ಸಿಹಿ ಸುದ್ದಿ ; 3.0 ಆರಂಭ, ಈಗ ಈ ಸೇವೆಗಳು ಸುಲಭ.!

28/08/2025 6:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಧರ್ಮಸ್ಥಳ ವಿಷಯದಲ್ಲಿ ಷಡ್ಯಂತ್ರ್ಯ, ಪಿತೂರಿ ನಡೆಸಿದವರಿಗೆ ಆ ಮಂಜುನಾಥ ಸ್ವಾಮಿಯೇ ತಕ್ಕ ಶಾಸ್ತಿ: HDK
KARNATAKA

ಧರ್ಮಸ್ಥಳ ವಿಷಯದಲ್ಲಿ ಷಡ್ಯಂತ್ರ್ಯ, ಪಿತೂರಿ ನಡೆಸಿದವರಿಗೆ ಆ ಮಂಜುನಾಥ ಸ್ವಾಮಿಯೇ ತಕ್ಕ ಶಾಸ್ತಿ: HDK

By kannadanewsnow0928/08/2025 7:03 PM

ಬೆಂಗಳೂರು: ಧರ್ಮಸ್ಥಳ ವಿಷಯದಲ್ಲಿ ಷಡ್ಯಂತ್ರ್ಯ, ಪಿತೂರಿ ನಡೆಸಿದವರಿಗೆ ಆ ಮಂಜುನಾಥ ಸ್ವಾಮಿಯೇ ತಕ್ಕ ಶಾಸ್ತಿ ಮಾಡುತ್ತಾನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗುಡುಗಿದರು.

ನಗರದಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಸಚಿವರು; ಧರ್ಮಸ್ಥಳ ಪ್ರಕರಣ ಸಂಬಂಧ ಎಸ್ಐಟಿ ರಚನೆ ವಿಚಾರವಾಗಿ ಖಾರವಾಗಿ ಪ್ರತಿಕ್ರಿಯಿಸಿದರಲ್ಲದೆ ಕೆಲವು ಶಕ್ತಿಗಳ ಒತ್ತಡಕ್ಕೆ ಮಣಿದು ಎಸ್ ಐಟಿ ರಚನೆ ಮಾಡಲಾಗಿದೆ ಎಂದು ಕಿಡಿಕಾರಿದರು.

ಧರ್ಮಸ್ಥಳದ ವಿಚಾರದಲ್ಲಿ ಈ ಸರ್ಕಾರ ನಡೆದುಕೊಂಡಿದ್ದು ಸರಿಯಲ್ಲ, ಅದಕ್ಕೆ ಮುಂದಿನ ದಿನಗಳಲ್ಲಿ ಶ್ರೀ ಮಂಜುನಾಥ ಸ್ವಾಮಿ ಶಿಕ್ಷೆ ನೀಡುವುದು ಖಚಿತ. ಆರಂಭಿಕ ಹಂತದಿಂದ ಕೂಡ ಸರ್ಕಾರ ಸರಿಯಾಗಿ ನಡೆದುಕೊಂಡಿಲ್ಲ. ಇಲ್ಲಿ ರಾಜಕೀಯ ಅಥವಾ ಧರ್ಮವನ್ನು ತರುವುದಿಲ್ಲ. ಆದರೆ ಕ್ಷೇತ್ರದ ಬಗ್ಗೆ ಸರ್ಕಾರ ನಡೆದುಕೊಂಡ ರೀತಿ ಮಾತ್ರ ಅಪಮಾನ ಉಂಟು ಮಾಡುವ ರೀತಿಯಲ್ಲಿ ನಡೆದುಕೊಂಡಿದೆ. ಇದು ಅಕ್ಷಮ್ಯ ಎಂದು ಅವರು ಹೇಳಿದರು.

ಆರಂಭದಿಂದಲೂ ತನಿಖೆಯ ನಾಟಕ ನಡೆದಿದೆ. ಸಿ.ಎಸ್. ದ್ವಾರಕಾನಾಥ್ ಎನ್ನುವ ವ್ಯಕ್ತಿ ಮೊದಲು ದೂರು ನೀಡಿರುತ್ತಾರೆ. ಅವರು ದೂರು ನೀಡಿದ ತಕ್ಷಣ ಮುಖ್ಯಮಂತ್ರಿಗಳು ಅತ್ಯಂತ ವೇಗವಾಗಿ ಕ್ರಮ ಕೈಗೊಂಡು ಎಸ್ ಐಟಿ ರಚನೆಗೆ ಆದೇಶ ಮಾಡುತ್ತಾರೆ. ಇದರ ಹಿಂದೆ ಕೆಲ ಎಡಪಂಥೀಯ ಶಕ್ತಿಗಳ ಹುನ್ನಾರದ ಜತೆಗೆ ಕಾಣದ ಶಕ್ತಿಗಳ ಬಹುದೊಡ್ಡ ಕುತಂತ್ರ ಅಡಗಿದೆ ಎಂದು ಅವರು ಆಪಾದಿಸಿದರು.

ಬಾನು ಮುಷ್ತಾಕ್ ವಿವಾದ ವಿಚಾರ

ಲೇಖಕಿ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವುದಕ್ಕೆ ನನ್ನ ತಕರಾರು ಏನೂ ಇಲ್ಲ. ಆದರೆ ಈ ವಿಚಾರದಲ್ಲಿ ಕೆಲವರು ಉದ್ಧಟತನ‌ ತೋರಿಸುತ್ತಿದ್ದಾರೆ. ಅದು ಬೇಡ ಎಂದು ಹೆಚ್.ಡಿ.ಕುಮಾರಸ್ವಾಮಿ ನೇರವಾಗಿ ಹೇಳಿದರು.

ತಾಯಿಯ ಮೆರವಣಿಗೆ ಜವಾಬ್ದಾರಿಯನ್ನು ಕೊಟ್ಟಿದ್ದಾರೆ. ಇದಕ್ಕೆ ನನ್ನ ತಕರಾರು ಏನೂ ಇಲ್ಲ. ಆದರೆ ಕೆಲವರು ಈ ಬಗ್ಗೆ ಬಹಳ ಉದ್ಧಟತನ‌ದಿಂದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದು ಧಾರ್ಮಿಕ ಕ್ಷೇತ್ರದ ವಿಚಾರದಲ್ಲಿ ಬೇಡ, ಬೇಕಾಗಿಯೂ ಇಲ್ಲ. ಬಾನು ಮುಷ್ತಾಕ್ ಅವರಿಂದ ಪೂಜೆ‌ ಮಾಡಿಸುವುದು ಬೇರೆ. ಆದರೆ ಚಾಮುಂಡೇಶ್ವರಿ ದೇಗುಲ ಹಿಂದೂಗಳ ಆಸ್ತಿಯಲ್ಲ ಅಂತಾರೆ. ಹಿಂದೂ ಧಾರ್ಮಿಕ ಕ್ಷೇತ್ರಗಳಿಗೆ ಈ ರೀತಿ ಅಪಚಾರ ಸರಿಯಲ್ಲ. ಇದು ಕಾಂಗ್ರೆಸ್ ಸರ್ಕಾರಕ್ಕೆ ಆಪತ್ತು ತರಲಿದೆ ಎಂಬುದನ್ನು ಮರೆಯಬಾರದು ಎಂದು ಅವರು ಕಟು ಶಬ್ದಗಳಲ್ಲಿ ಹೇಳಿದರು.

ರಾಜ್ಯದ ಡಿಸಿಎಂ ಆರ್ ಎಸ್ ಎಸ್ ಗೀತೆ ಹಾಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು; ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಅವರು ಸದನದಲ್ಲಿ ಆರ್ ಎಸ್ ಎಸ್ ಗೀತೆ ಹಾಡಿದ್ದಾರೆ. ತಮಾಷೆಗೂ ಆ ರೀತಿ ಹೇಳುವುದನ್ನು ಕಾಂಗ್ರೆಸ್ ನಾಯಕರು ಒಪ್ಪಲ್ಲ. ಈಗ ಅವರಿಗೆ ಕ್ಷಮೆ ಕೇಳುವ ಪರಿಸ್ಥಿತಿ ಎದುರಾಗಿದೆ ಎಂದರು ಕೇಂದ್ರ ಸಚಿವರು.

ರಾಜ್ಯದಲ್ಲಿ ವಿಪರೀತ ಮಳೆ ಆಗುತ್ತಿದೆ. ನೆರೆಯಿಂದ, ಬೆಳೆ ಹಾನಿಯಿಂದ ಜನರು ತತ್ತರಿಸುತ್ತಿದ್ದಾರೆ. ಸರ್ಕಾರ ಅವರ ನೆರವಿಗೆ ಧಾವಿಸುವುದು ಬಿಟ್ಟು ಇಂಥ ವಿಷಯಗಳಲ್ಲಿ ಕಾಲಹರಣ ಮಾಡುತ್ತಿದೆ. ಅತ್ಯಂತ ನೋವಿನಿಂದ ನಾನು ಈ ಮಾತು ಹೇಳುತ್ತಿದ್ದೇನೆ ಎಂದು ಅವರು ಹೇಳಿದರು.

ಕುಟುಂಬಗಳಿಗೆ ಮೂರು ಮಕ್ಕಳ ನಿಯಮವನ್ನು RSS ಮುಖ್ಯಸ್ಥ ಮೋಹನ್ ಭಾಗವತ್ ಅನುಮೋದನೆ

ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು / ಭಾಗಶಃ ರದ್ದು / ನಿಯಂತ್ರಣ

Share. Facebook Twitter LinkedIn WhatsApp Email

Related Posts

ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು / ಭಾಗಶಃ ರದ್ದು / ನಿಯಂತ್ರಣ

28/08/2025 6:57 PM2 Mins Read

ಮಂಗಳೂರಲ್ಲಿ ‘KSRTC ಬಸ್’ ಭೀಕರ ಅಪಘಾತ: ಈ ಮಾಹಿತಿ ಹಂಚಿಕೊಂಡ ‘MD ಅಕ್ರಂ ಪಾಷ’

28/08/2025 6:34 PM2 Mins Read

ರಾಜ್ಯದಲ್ಲೊಂದು ಶಾಕಿಂಗ್ ಘಟನೆ: ಶಾಲೆಯ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

28/08/2025 6:22 PM1 Min Read
Recent News

ಒಮ್ಮೆ ನೀವು ಹೀಗೆ ಮಾಡಿದ್ರೆ, ನಿಮ್ಮ ಹೊಟ್ಟೆಯಲ್ಲಿರುವ ಎಲ್ಲಾ ಗ್ಯಾಸ್ ಹೊರ ಹೋಗುತ್ತೆ!

28/08/2025 7:06 PM

ಧರ್ಮಸ್ಥಳ ವಿಷಯದಲ್ಲಿ ಷಡ್ಯಂತ್ರ್ಯ, ಪಿತೂರಿ ನಡೆಸಿದವರಿಗೆ ಆ ಮಂಜುನಾಥ ಸ್ವಾಮಿಯೇ ತಕ್ಕ ಶಾಸ್ತಿ: HDK

28/08/2025 7:03 PM

PF ಖಾತೆದಾರರಿಗೆ ಸಿಹಿ ಸುದ್ದಿ ; 3.0 ಆರಂಭ, ಈಗ ಈ ಸೇವೆಗಳು ಸುಲಭ.!

28/08/2025 6:58 PM

ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು / ಭಾಗಶಃ ರದ್ದು / ನಿಯಂತ್ರಣ

28/08/2025 6:57 PM
State News
KARNATAKA

ಧರ್ಮಸ್ಥಳ ವಿಷಯದಲ್ಲಿ ಷಡ್ಯಂತ್ರ್ಯ, ಪಿತೂರಿ ನಡೆಸಿದವರಿಗೆ ಆ ಮಂಜುನಾಥ ಸ್ವಾಮಿಯೇ ತಕ್ಕ ಶಾಸ್ತಿ: HDK

By kannadanewsnow0928/08/2025 7:03 PM KARNATAKA 2 Mins Read

ಬೆಂಗಳೂರು: ಧರ್ಮಸ್ಥಳ ವಿಷಯದಲ್ಲಿ ಷಡ್ಯಂತ್ರ್ಯ, ಪಿತೂರಿ ನಡೆಸಿದವರಿಗೆ ಆ ಮಂಜುನಾಥ ಸ್ವಾಮಿಯೇ ತಕ್ಕ ಶಾಸ್ತಿ ಮಾಡುತ್ತಾನೆ ಎಂದು ಕೇಂದ್ರ ಸಚಿವ…

ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು / ಭಾಗಶಃ ರದ್ದು / ನಿಯಂತ್ರಣ

28/08/2025 6:57 PM

ಮಂಗಳೂರಲ್ಲಿ ‘KSRTC ಬಸ್’ ಭೀಕರ ಅಪಘಾತ: ಈ ಮಾಹಿತಿ ಹಂಚಿಕೊಂಡ ‘MD ಅಕ್ರಂ ಪಾಷ’

28/08/2025 6:34 PM

ರಾಜ್ಯದಲ್ಲೊಂದು ಶಾಕಿಂಗ್ ಘಟನೆ: ಶಾಲೆಯ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

28/08/2025 6:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.