ನವದೆಹಲಿ: ಕರ್ನಾಟಕದಲ್ಲಿ ಜಾತಿಗಣತಿ ವರದಿ ಜಾರಿಯ ಬಗ್ಗೆ ದೆಹಲಿಯಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಸಿಎಂ ಸಿದ್ಧರಾಮಯ್ಯ ಚರ್ಚೆ ನಡೆಸಿದರು. ಅಲ್ಲದೇ ಶೀಘ್ರವೇ ಜಾತಿಗಣತಿ ವರದಿ ಜಾರಿಯ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.
ದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿದರು. ರಾಹುಲ್ ಗಾಂಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿವರಣೆ ನೀಡಿದರು.
ಮುಂದಿನ ಸಂಪುಟ ಸಭೆಯಲ್ಲಿ ಜಾರಿ ಬಗ್ಗೆ ಸಿದ್ಧರಾಮಯ್ಯ ಮಾಹಿತಿ ನೀಡಿದರು. ಗಂಭೀರವಾಗಿ ಪರಿಗಣಿಸುವಂತೆ ಸಿಎಂ ಸಿದ್ಧರಾಮಯ್ಯಗೆ ರಾಹುಲ್ ಗಾಂಧಿ ಸೂಚಿಸಿದರು.
ಹೀಗಾಗಿ ಕರ್ನಾಟಕದಲ್ಲಿ ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಜಾರಿಯ ಬಗ್ಗೆ ಚರ್ಚೆ ನಡೆಸಿ, ಮಹತ್ವದ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೈಗೊಳ್ಳಲಿದ್ದಾರೆ.
BREAKING: ಆಸ್ಟ್ರಿಯಾದಲ್ಲಿ ಗುಂಡಿನ ದಾಳಿಗೆ 8 ಮಂದಿ ಸಾವು, ಹಲವರಿಗೆ ಗಾಯ
BIG NEWS : ರಾಯಚೂರಲ್ಲಿ ಓರ್ವ ಬಾಲಕ ಸೇರಿ 15 ಜನರ ಮೇಲೆ ಬೀದಿ ನಾಯಿಗಳ ದಾಳಿ : 8 ಜನ ಆಸ್ಪತ್ರೆಗೆ ದಾಖಲು