ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆಯಲ್ಲಿ ನಾಗರ ಪಂಚಮಿ ಹಬ್ಬದ ದಿನವೇ ಘೋರ ದುರಂತವೊಂದು ಸಂಭವಿಸಿದೆ. ಕಾರು-ಬೈಕ್ ನಡುವೆ ನಡೆದಂತ ಭೀಕರ ಅಪಘಾತದಲ್ಲಿ ಅಣ್ಣ-ತಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕರೆಯಲ್ಲಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ತಳುಕು ಗ್ರಾಮದ ಅಭಿ(28) ಹಾಗೂ ಸಹೋದರಿ ಮಂಜುಳಾ(25) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾರು ಚಾಲಕ ರಾಯಚೂರು ಮೂಲದ ನಾಗಿರೆಡ್ಡಿ ಗಾಯಗೊಂಡಿದ್ದು, ಆತನನ್ನು ಚಳ್ಳಕೆರೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING: ಬೆಂಗಳೂರಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ: ಪೇಪರ್ ಪ್ಲೇಟ್ ಅಂಗಡಿ ಸುಟ್ಟು ಭಸ್ಮ
GOOD NEWS: ರಾಜ್ಯದ ‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್: ‘ಚುನಾವಣಾ ಕರ್ತವ್ಯ’ದಿಂದ ವಿನಾಯಿತಿ