ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ನಾಗಮಂಗಲದಲ್ಲಿ ಘಟನೆ: ಇದು ಕಾಂಗ್ರೆಸ್ ಪ್ರಾಯೋಜಿತ ಪಿತೂರಿ – HDK

ನಾಗಮಂಗಲ: ಗಣೇಶ ಮೆರವಣಿಗೆ ವೇಳೆ ಪಟ್ಟಣದಲ್ಲಿ ನಡೆದ ಗಲಭೆ ಪೂರ್ವಯೋಜಿತ ಕೃತ್ಯ, ವ್ಯವಸ್ಥಿತ ಪಿತೂರಿ. ಅಷ್ಟೇ ಅಲ್ಲ; ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ನಾಗಮಂಗಲದ ಗಲಭೆ ಪೀಡಿತ ಪ್ರದೇಶಗಳಿಗೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿ ದುಷ್ಕರ್ಮಿಗಳ ದಾಳಿಗೆ ತುತ್ತಾದ ಅಂಗಡಿ, ಮಳಿಗೆಗಳನ್ನು ವೀಕ್ಷಿಸಿದ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು. ವ್ಯವಸ್ಥಿತವಾಗಿ ಗಲಭೆಗಳನ್ನು ಸೃಷ್ಟಿ ಮಾಡುವುದು ಕಾಂಗ್ರೆಸ್ ಗೆ ಕರತಲಾಮಲಕ. ಹಿಂದಿನಿಂದಲೂ ಅದನ್ನು ಮಾಡಿಕೊಂಡು ಬಂದಿದೆ. … Continue reading ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ನಾಗಮಂಗಲದಲ್ಲಿ ಘಟನೆ: ಇದು ಕಾಂಗ್ರೆಸ್ ಪ್ರಾಯೋಜಿತ ಪಿತೂರಿ – HDK