ಬೆಂಗಳೂರು: ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಶಕ್ತಿಯೋಜನೆಯು ಪ್ರತಿಷ್ಠಿತ ವಿಶ್ವದಾಖಲೆಗೆ ಗೋಲ್ಡನ್ ಬುಕ್ ಆಫ್ ವಲ್ರ್ಡ್ ರೆಕಾಡ್ರ್ಸ್ನಲ್ಲಿ ಸೇರ್ಪಡೆಯಾಗಿರುವುದನ್ನು ತಿಳಿಸಿ, ದಾಖಲೆಯ ಪ್ರಮಾಣಪತ್ರ ಮತ್ತು ಮೆಡಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೋರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹಳ ಸಂತೋಷ ವ್ಯಕ್ತಪಡಿಸಿ, ಸಾರಿಗೆ ಸಚಿವರಿಗೆ ಹಾಗೂ ಸಾರಿಗೆ ಸಂಸ್ಥೆಗಳ ಸಮಸ್ತ ಅಧಿಕಾರಿ, ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿದರು.
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಹಾಗೂ ಮಹಿಳಾ ಸಬಲೀಕರಣದ ದಿಟ್ಟ ಯೋಜನೆಯಾದ ಶಕ್ತಿಯೋಜನೆಯು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಪಂಚ ಗ್ಯಾರೆಂಟಿ ಯೋಜನೆಗಳ ರಾಜ್ಯಾಧ್ಯಕ್ಷರಾದ ಹೆಚ್.ಎಂ. ರೇವಣ್ಣ, ಗ್ಯಾರೆಂಟಿ ಯೋಜನೆ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ, ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.