ಕೆಎನ್ಎನ್ ಡಿಜಿಟಲ್ ಡೆಸ್ಕ್ : ಭಾರತದಲ್ಲಿ (India) ಹಠಾತ್ ದಡಾರ ಕಾಯಿಲೆ (Measles Rubella Disease) ಕಾಣಿಸಿಕೊಂಡಿದೆ. ಈಗ 48 ಗಂಟೆಗಳಲ್ಲಿ ಮೂವರು ಮಕ್ಕಳು ಸಾವನ್ನಪ್ಪಿವೆ (Three Children’s Death). ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ, ಎಲ್ಲಾ ಮೂರು ಮಕ್ಕಳು ಒಂದೇ ಕುಟುಂಬದವರು ಆಗಿದ್ದಾರೆ. ಈ ನಿಟ್ಟಿನಲ್ಲಿ ದಡಾರ ಕಾಯಿಲೆ ನಿಯಂತ್ರಣಕ್ಕಾಗಿ ರೋಗದ ಲಕ್ಷಣ, ತಡೆಗಟ್ಟುವಿಕೆ, ಚಿಕಿತ್ಸಾ ವಿಧಾನಗಳೇನು ಅನ್ನೋದರ ಮಾಹಿತಿ ಪಡೆಯುವುದು ಅತ್ಯಗತ್ಯವಾಗಿದೆ. ಇಲ್ಲಿದೆ ಈ ಕುರಿತ ಕಂಪ್ಲೀಟ್ ಮಾಹಿತಿ
ದಡಾರ ಕಾಯಿಲೆಯ ಲಕ್ಷಣಗಳು
ಸಿಡಿಸಿ ಪ್ರಕಾರ, ದಡಾರ ಚಿಕ್ಕ ಮಕ್ಕಳಿಗೆ ತುಂಬಾ ಅಪಾಯಕಾರಿ ಸೋಂಕು ಆಗಿದೆ. ಸೋಂಕು ತಗುಲಿದ ನಂತರ 7 ರಿಂದ 14 ದಿನಗಳಲ್ಲಿ ಪ್ರಮುಖ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಅವುಗಳಲ್ಲಿ 104 ಡಿಗ್ರಿ ವರೆಗೆ ಅಧಿಕ ಜ್ವರ, ಕೆಮ್ಮು, ಸೋರುವ ಮೂಗು, ಕೆಂಪು ಕಣ್ಣು, ಅಥವಾ ನೀರು ತುಂಬಿದ ಕಣ್ಣುಗಳು.
ದಡಾರ ಆರಂಭಿಕ ಲಕ್ಷಣಗಳು ಕಾಣಿಸಿಕೊಂಡ ನಂತರ ಸೋಂಕಿತ ಮಗುವಿನಲ್ಲಿ 2 ರಿಂದ 3 ದಿನಗಳ ನಂತರ, ಬಾಯಿಯೊಳಗೆ ಸಣ್ಣ ಬಿಳಿ ಚುಕ್ಕೆಗಳು ಬೆಳೆಯುತ್ತವೆ ಎಂದು ಸಿಡಿಸಿ ಹೇಳಿದೆ. ಕೆಂಪು-ಫ್ಲಾಟ್ ರಾಶ್ 3 ರಿಂದ 5 ದಿನಗಳಲ್ಲಿ ದೇಹದಲ್ಲಿ ಕಾಣಿಸಿಕೊಳ್ಳುತ್ತವೆ. ಮಗುವಿನ ಮುಖ, ಕುತ್ತಿಗೆ, ತೋಳು, ಕಾಲುಗಳು ಮತ್ತು ಅಡಿಭಾಗದ ಮೇಲೆ ದಡಾರ ರಾಶಸ್ ಉಂಟಾಗುತ್ತದೆ.
ದಡಾರ ತಡೆಗಟ್ಟುವಿಕೆ ಮತ್ತು ಚಿಕಿತ್ಸೆ
ದಡಾರ ಕಾಯಿಲೆ ತಡೆಗಟ್ಟುವ ಏಕೈಕ ಮಾರ್ಗವೆಂದರೆ ಲಸಿಕೆ ಹಾಕುವುದು. ದಡಾರದಿಂದ ಮಕ್ಕಳನ್ನು ರಕ್ಷಿಸಲು, ಅವರಿಗೆ 2 ಬಾರಿ ದಡಾರ ಲಸಿಕೆ ನೀಡಲಾಗುತ್ತದೆ. ಏಕೆಂದರೆ ದಡಾರಕ್ಕೆ ಇನ್ನೂ ಔಷಧಿ ಕಂಡು ಹಿಡಿದಿಲ್ಲ. ಹಾಗಾಗಿ ದಡಾರ ಸಂಭವಿಸಿದ ನಂತರ ಅದರ ರೋಗಲಕ್ಷಣಗಳನ್ನು ನಿಯಂತ್ರಿಸಲು ಮಾತ್ರ ಸಾಧ್ಯ.
ದಡಾರ ಲಸಿಕೆ ಪಡೆದ ನಂತರವೂ ಸೋಂಕು
ಸುಮಾರು 50 ಪ್ರತಿಶತ ಮಕ್ಕಳಿಗೆ ದಡಾರ ಲಸಿಕೆ ನೀಡಲಾಗಿದೆ ಎಂದು ವರದಿ ಹೇಳಿದೆ. ಅದರಲ್ಲಿ ಕೆಲವು ಮಕ್ಕಳು 9 ತಿಂಗಳಿಗಿಂತ ಕಡಿಮೆ ವಯಸ್ಸಿನಲ್ಲೇ ಮೊದಲ ದಡಾರ ಲಸಿಕೆ ಪಡೆದಿವೆ. ಬಿಎಂಸಿ ಕಾರ್ಯನಿರ್ವಾಹಕ ಆರೋಗ್ಯ ಅಧಿಕಾರಿ ಡಾ. ಮಂಗಳಾ ಗೋಮಾರೆ ಮಾತನಾಡಿ, ನಾವು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆ ಜೊತೆ ದಡಾರ ಕಾಯಿಲೆ ಏಕಾಏಕಿ ಹೆಚ್ಚಿರುವ ಬಗ್ಗೆ ಸಂಶೋಧಿಸುತ್ತೇವೆ. ಮತ್ತು ದಡಾರ ವೈರಸ್ ಯಾಕೆ ಏಕಾಏಕಿ ವೈರಲ್ ಆಗುತ್ತಿದೆ ಎಂದು ತನಿಖೆ ಮಾಡಲಾಗುವುದು ಎಂದಿದ್ದಾರೆ.
ದಡಾರ ಬಂದರೆ ಏನು ಮಾಡಬೇಕು?
ಎನ್ ಎಚ್ ಎಸ್ ಪ್ರಕಾರ, ಮಗುವಿಗೆ ದಡಾರ ರೋಗ ನಿರ್ಣಯವಾದ ನಂತರ ವಿಶ್ರಾಂತಿ ನೀಡುವುದು, ಮಗುವನ್ನು ಇತರೆ ಮಕ್ಕಳಿಂದ ಪ್ರತ್ಯೇಕಿಸುವುದು, ಆಗಾಗ ನೀರು ಮತ್ತು ಜ್ಯೂಸ್ ಕುಡಿಸುವುದು, ಒದ್ದೆ ಹತ್ತಿಯಿಂದ ಮಗುವಿ ದೇಹ ಸ್ವಚ್ಛಗೊಳಿಸುವುದು, ವೈದ್ಯರ ಸಲಹೆ ಮೇರೆಗೆ ಜ್ವರದ ಔಷಧ ನೀಡುವುದು, ಶುಚಿತ್ವ ಕಾಪಾಡುವುದು. ಮಗುವನ್ನು ಮುಟ್ಟುವ ಮೊದಲು ಮತ್ತು ನಂತರ ಕೈಗಳನ್ನು ಚೆನ್ನಾಗಿ ತೊಳೆಯುವುದು.ದಡಾರ ಕಾಯಿಲೆ ಇದೊಂದು ವೇಗವಾಗಿ ಹರಡುವ ಸೋಂಕು. ಇದು ಪ್ಯಾರಾಮಿಕ್ಸೊವೈರಸ್ ಕುಟುಂಬದ ವೈರಸ್ ನಿಂದ ಉಂಟಾಗುತ್ತದೆ. ಈ ವೈರಸ್ ಮೊದಲು ಉಸಿರಾಟದ ಪ್ರದೇಶಕ್ಕೆ ಧಕ್ಕೆ ಮಾಡುತ್ತದೆ. ನಂತರ ಕೆಮ್ಮು ಅಥವಾ ಶೀತ ಅಥವಾ ನೇರ ಸ್ಪರ್ಶದಿಂದ ಆರೋಗ್ಯವಂತ ಜನರಿಗೆ ಸೋಂಕು ತಗುಲುತ್ತದೆ.