ನವದೆಹಲಿ : ವೆಸ್ಟ್ ಇಂಡೀಸ್ನಲ್ಲಿ ನಡೆದ ಐಸಿಸಿ ಪುರುಷರ ಟಿ 20 ವಿಶ್ವಕಪ್ 2024 ಪ್ರಶಸ್ತಿಯನ್ನು ಗೆದ್ದ ನಂತರ ರೋಹಿತ್ ಶರ್ಮಾ ನೇತೃತ್ವದ ಭಾರತೀಯ ಪುರುಷರ ಕ್ರಿಕೆಟ್ ತಂಡ ದೆಹಲಿಗೆ ಬಂದಿಳಿದಿದ್ದು, ದೆಹಲಿಯ ಹೋಟೆಲ್‌ ನಲ್ಲಿ ಭರ್ಜರಿಯಾಗಿ ಸಂಭ್ರಮಚಾರಣೆ ನಡೆಸಿದ್ದಾರೆ.

ದೆಹಲಿಯ ಐಟಿಸಿ ಮೌರ್ಯ ಹೋಟೆಲ್‌ ನಲ್ಲಿ ತಂಗಿರುವ ಟೀಂ ಇಂಡಿಯಾ ಆಟಗಾರರು ಕೇಕ್‌ ಕಟ್‌ ಮಾಡಿ ವಿಶ್ವಕಪ್‌ ಗೆದ್ದ ಖುಷಿಯನ್ನು ಸಂಭ್ರಮಿಸಿದ್ದಾರೆ. ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ, ಹಾರ್ದಿಕ್‌ ಪಾಂಡ್ಯ ಕೇಕ್‌ ಕಟ್‌ ಮಾಡುವ ಮೂಲಕ ವಿಶ್ವಕಪ್‌ ಗೆಲುವನ್ನು ಸಂಭ್ರಮಿಸಿದ್ದಾರೆ.

 

 

ಇದಕ್ಕೂ ಮುನ್ನ ಭಾರತೀಯ ತಂಡದ ಸದಸ್ಯರು ಮುಂಜಾನೆ ದೆಹಲಿಯ ಐಜಿಐ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಎರಡನೇ ಟಿ 20 ವಿಶ್ವಕಪ್ ಟ್ರೋಫಿಗಾಗಿ 17 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿದ ನಂತರ ಭಾರತೀಯ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದರು. ದೆಹಲಿಗೆ ಬಂದಿಳಿದ ನಂತರ ಭಾರತ ತಂಡದ ನಾಯಕ ರೋಹಿತ್ ಶರ್ಮಾ ವಿಮಾನ ನಿಲ್ದಾಣದಿಂದ ಹೊರಬಂದು ಅಭಿಮಾನಿಗಳ ಹರ್ಷೋದ್ಗಾರದ ನಡುವೆ ಟಿ 20 ವಿಶ್ವಕಪ್ ಟ್ರೋಫಿಯನ್ನು ಪ್ರದರ್ಶಿಸಿದರು.

Share.
Exit mobile version