ಬೆಂಗಳೂರು : ರಾಹುಲ್ ಗಾಂಧಿ ಸತ್ಯ ದ್ವೇಷ ಹುಟ್ಟಿಸುವ ಮಾತನ್ನು ಹೇಳಿದ್ದಾರೆ. ಹೀಗೆ ಹೇಳುವುದಕ್ಕೆ ಅವರ ಕುಟುಂಬದಲ್ಲಿರುವ ಡಿಎನ್ಎ ಕಾರಣ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ದೇಶದ ವಿಭಜನೆಗೆ ಸಹಿ ಹಾಕಿದ ಪಾರ್ಟಿ ಯಾವುದು? ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆ ಹೆಚ್ಚಲು ಯಾರು ಕಾರಣ? ಖಲಿಸ್ಥಾನ ಸಂಘಟನೆಗೆ ಶಕ್ತಿ ನೀಡಿದಂತಹ ವ್ಯಕ್ತಿ ಪಕ್ಷ ಯಾವುದು? ಭಯೋತ್ಪಾದನೆ ಚಟುವಟಿಕೆಗೆ ಶಕ್ತಿ ತುಂಬಿದ ಪಕ್ಷ ಯಾವುದು? ಸರ್ವಾಧಿಕಾರ ಏರಿದ ಪಕ್ಷ ಕಾಂಗ್ರೆಸ್ ಹಾಗೂ ಇಂದಿರಾಗಾಂಧಿ ಸಿಖ್ಖರ ಮೇಲೆ ದಾಳಿ ಮಾಡಿದ್ದು ಆರ್ ಎಸ್ ಎಸ್ ಅಲ್ಲ ಇಂದಿರಾ ಗಾಂಧಿ ಬೆಂಗಳೂರಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ವಾಗ್ದಾಳಿ ನಡೆಸಿದರು.

ಮುಡಾ ಹಗರಣದ ಬಗ್ಗೆ ಮಾಹಿತಿ ಸಂಗ್ರಹ ಮಾಡುತ್ತಿದ್ದೇವೆ. ಅಗೆದಷ್ಟು, ಬಗೆದಷ್ಟು ಹೊರಗೆ ಬರುತ್ತಿದೆ. ನನ್ನನ್ನೂ ಮಿರಿಸಿದ ಹಗರಣ ಮಾಡುತ್ತಿದ್ದಾರೆ ಎಂದು ಚಾರ್ಲ್ಸ್ ಶೋಭರಾಜ್‌ಗೂ ಅನ್ನಿಸುತ್ತಿದೆಯಂತೆ. ಅಧಿವೇಶನದಲ್ಲಿ ಎಲ್ಲಾ ದಾಖಲೆ ಇಟ್ಟು ಚರ್ಚೆ ಮಾಡುತ್ತೇವೆ. ವಿಧಾನಮಂಡಲ ಅಧಿವೇಶನದಲ್ಲಿ ಎಲ್ಲರ ಜಾತಕ‌ ಬಿಚ್ಚಿಡುತ್ತೇವೆ ಎಂದರು.

Share.
Exit mobile version