Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಗೊರಕೆ’ ಹೊಡೆಯೋದನ್ನ ಹಗುರವಾಗಿ ತೆಗೆದುಕೊಳ್ತೀರಾ.? ಅಯ್ಯೋ, ನೀವು ಅಪಾಯದಲ್ಲಿದ್ದೀರಿ ಮರೆಯಬೇಡಿ!

03/08/2025 9:14 PM

BIG NEWS: ಬಡ ಮಕ್ಕಳ IAS, IPS ಕನಸು ನನಸಿಗೆ ಸಂಸದೆ ದಿಟ್ಟ ನಿರ್ಧಾರ: ಸಂಕಲ್ಪ ತರಬೇತಿ ಕೇಂದ್ರ ಆರಂಭ

03/08/2025 9:13 PM

BREAKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ನಡು ರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಕೊಲೆ

03/08/2025 9:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚನ್ನಪಟ್ಟಣ – ರಾಮನಗರ ನಡುವೆ ಕೈಗಾರಿಕೆ; ಸ್ಥಳೀಯರಿಗೆ ಉದ್ಯೋಗಕ್ಕೆ ಒತ್ತು: HD ಕುಮಾರಸ್ವಾಮಿ ಭರವಸೆ
KARNATAKA

ಚನ್ನಪಟ್ಟಣ – ರಾಮನಗರ ನಡುವೆ ಕೈಗಾರಿಕೆ; ಸ್ಥಳೀಯರಿಗೆ ಉದ್ಯೋಗಕ್ಕೆ ಒತ್ತು: HD ಕುಮಾರಸ್ವಾಮಿ ಭರವಸೆ

By kannadanewsnow0928/10/2024 6:02 PM

ಚನ್ನಪಟ್ಟಣ/ರಾಮನಗರ: ಕಾಂಗ್ರೆಸ್ ನಾಯಕರು ನನ್ನನ್ನು ನಿಂದನೆ ಮಾಡಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ನಾನು ಅಭಿವೃದ್ದಿ ವಿಚಾರ ಇಟ್ಟುಕೊಂಡು ಪ್ರಚಾರ ಮಾಡುತ್ತಿದ್ದೇನೆ. ಅವರಿಗೂ ನನಗೂ ಇರುವ ವ್ಯತ್ಯಾಸ ಇಷ್ಟೇ ಎಂದು ಕೇಂದ್ರ ಸಚಿವರಾದ HD ಕುಮಾರಸ್ವಾಮಿ ಅವರು ಹೇಳಿದರು.

ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಚನ್ನಪಟ್ಟಣ – ರಾಮನಗರ ನಡುವೆ ಬೃಹತ್ ಕೈಗಾರಿಕೆ ಒಂದನ್ನು ಸ್ಥಾಪನೆ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅವರು ಭರವಸೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಮೇಲೆ ನಂಬಿಕೆ ಇರಿಸಿ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆಗಳನ್ನು ನೀಡಿದ್ದಾರೆ. ಎರಡೂ ಮಹತ್ವದ ಖಾತೆಗಳಾಗಿದ್ದು, ದೇವರ ಅನುಗ್ರಹ ಜನರ ಆಶೀರ್ವಾದದಿಂದ ಸಿಕ್ಕಿರುವ ಈ ಅವಕಾಶದಿಂದ ರಾಮನಗರ ಜಿಲ್ಲೆಯ ಜನರಿಗೆ ಏನಾದರೂ ಒಳ್ಳೆಯದು ಮಾಡುತ್ತೇನೆ ಎಂದು ಅವರು ಒತ್ತಿ ಹೇಳಿದರು.

ನಾವು ಟಿಕೆಟ್ ಕೊಡುತ್ತೇವೆ ಎಂದೆವು. ಬಿಜೆಪಿ ಕೂಡ ಟಿಕೆಟ್ ಕೊಡಲು ಮುಂದಾಗಿತ್ತು. ಬಿಜೆಪಿ ವರಿಷ್ಠ ನಾಯಕರ ಮಾತಿಗೆ ತಲೆಬಾಗಿ ನಾವು ಚನ್ನಪಟ್ಟಣ ಕ್ಷೇತ್ರವನ್ನು ಬಿಟ್ಟುಕೊಡಲು ನಿರ್ಧಾರ ಮಾಡಿದ್ದೆವು. ಆದರೆ, ಎಲ್ಲರ ಮಾತನ್ನು ಧಿಕ್ಕರಿಸಿ, ಕಾಲಿನಲ್ಲಿ ಒದ್ದು ಅವರು ಕಾಂಗ್ರೆಸ್ ಸೇರಿಕೊಂಡರು. ಈಗ ನೋಡಿದರೆ ಹಾದಿಬೀದಿಯಲ್ಲಿ ಸುಳ್ಳು ಪ್ರಚಾರ ಮಾಡಿಕೊಂಡು ಓಡಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರು ದೂರಿದರು.

ನನ್ನ ಬಗ್ಗೆ, ನನ್ನ ತಂದೆಯ ಬಗ್ಗೆ ಬಹಳ ಕೀಳುಮಟ್ಟದ ಭಾಷೆ ಬಳಕೆ ಮಾಡಿಕೊಂಡು ಟೀಕೆ ಮಾಡುತ್ತಿದ್ದಾರೆ. ಅವರ ಪದ ಬಳಕೆಯ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಚನ್ನಪಟ್ಟಣ ಜನರೇ ತೀರ್ಪು ಕೊಡುತ್ತಾರೆ ಎಂದು ಅವರು ಹೇಳಿದರು.

ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣದಲ್ಲಿ ಎಷ್ಟು ಕೆರೆಗಳು ಇವೆ ಎಂಬುದೇ ಗೊತ್ತಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಹೇಳಿದ್ದಾರೆ. ಆದರೆ, ನಾನು ಏನು ಮಾಡಿದ್ದೇನೆ ಎಂಬುದು ಹಳ್ಳಿಗಳಿಗೆ ಹೋಗಿ ನೋಡಿದರೆ ಗೊತ್ತಾಗುತ್ತದೆ ಎಂದು ತಿರುಗೇಟು ನೀಡಿದರು ಕುಮಾರಸ್ವಾಮಿ ಅವರು.

ನಿವೇಶನಗಳನ್ನು ಮಾಡಿಕೊಳ್ಳಬೇಡಿ

ಕೂಡ್ಲೂರು ಗ್ರಾಮದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ನಿಮಗೆ ನೀಡಲಾಗಿರುವ ನಿವೇಶನಗಳನ್ನು ಹಾಗೆಯೇ ಇಟ್ಟುಕೊಳ್ಳಿ. ಉಳಿದ ಗ್ರಾಮಸ್ಥರಿಗೂ ಹಕ್ಕುಪತ್ರ ಕೊಡಿಸಲಾಗುವುದು. ಮನೆಗಳನ್ನು ಕಟ್ಟಿಕೊಳ್ಳಲು ಸರ್ಕಾರದಿಂದ ನೆರವು ಕೊಡಿಸಲಾಗುವುದು ಎಂದು ಕೇಂದ್ರ ಸಚಿವರು ಭರವಸೆ ನೀಡಿದರು.

ಕೇಂದ್ರ ಸಚಿವರ ಜತೆ ಯದುವೀರ್

ಚನ್ನಪಟ್ಟಣದಲ್ಲಿ ನಡೆದ ಪ್ರಚಾರದಲ್ಲಿ ಮೈಸೂರು ಕೊಡಗು ಕ್ಷೇತ್ರದ ಸಂಸದರಾದ ಯದುವೀರ್ ಒಡೆಯರ್ ಅವರು ಸಾಥ್ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು; ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ವೇಗವಾಗಿ ಅಭಿವೃದ್ದಿ ಹೊಂದುತ್ತಿದೆ. ಅವರ ಸಂಪುಟದಲ್ಲಿ ಕುಮಾರಸ್ವಾಮಿ ಅವರು ಅತ್ಯಂತ ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಬರೀ ಭ್ರಷ್ಟಾಚಾರದಲ್ಲಿ ನಿರತವಾಗಿದೆ. ಅಧಿಕಾರಕ್ಕೆ ಬಂದಾಗಿನಿಂದ ಹಗರಣಗಳಲ್ಲಿಯೇ ಮುಳುಗಿದೆ. ಅದರಲ್ಲಿ ಮೂಡಾ ಹಗರಣದ ವಿರುದ್ಧ ಬೆಂಗಳೂರಿನಿಂದ ಮೈಸೂರುವರೆಗೂ ನಡೆದ ಪಾದಯಾತ್ರೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರೂ ಪ್ರಮುಖ ಪಾತ್ರ ವಹಿಸಿದ್ದರು. ಅವರಿಗೆ ಮುಂದೆ ಒಳ್ಳೆಯ ನಾಯಕನಾಗಿ ಬೆಳೆಯುವ ಎಲ್ಲಾ ಅವಕಾಶಗಳು ಇವೆ. ಅಂತಹ ಅವಕಾಶಕ್ಕೆ ಚನ್ನಪಟ್ಟಣದ ಜನರೇ ನಾಂದಿ ಹಾಡಬೇಕು ಎಂದು ಒಡೆಯರ್ ಅವರು ಹೇಳಿದರು.

ಇದಕ್ಕೂ ಮೊದಲು ಕೇಂದ್ರ ಸಚಿವರು ಯದುವೀರ್ ಅವರೊಂದಿಗೆ ಪಕ್ಷದ ಹಿರಿಯ ಮುಖಂಡ ಟಿ.ಪಿ.ಪುಟ್ಟಸಿದ್ದೇಗೌಡ ಅವರ ಮನೆಗೆ ಭೇಟಿ ನೀಡಿದ್ದರು.

ಶಿವಮೊಗ್ಗ: ‘ಸಾಗರ ತಾಲ್ಲೂಕು ಅರಣ್ಯ ಇಲಾಖೆ ಚುನಾವಣೆ’ಯಲ್ಲಿ ‘ಸಂತೋಷ್ ಕುಮಾರ್’ ಭರ್ಜರಿ ಗೆಲುವು

BREAKING : ‘ಮುಡಾ’ ಹಗರಣ : ಬಿಲ್ಡರ್ ಮಂಜುನಾಥ್ ವಿರುದ್ಧ ‘ED’ ಗೆ ಮತ್ತೊಂದು ದೂರು ಸಲ್ಲಿಕೆ!

Share. Facebook Twitter LinkedIn WhatsApp Email

Related Posts

BIG NEWS: ಬಡ ಮಕ್ಕಳ IAS, IPS ಕನಸು ನನಸಿಗೆ ಸಂಸದೆ ದಿಟ್ಟ ನಿರ್ಧಾರ: ಸಂಕಲ್ಪ ತರಬೇತಿ ಕೇಂದ್ರ ಆರಂಭ

03/08/2025 9:13 PM1 Min Read

BREAKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ನಡು ರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಕೊಲೆ

03/08/2025 9:07 PM1 Min Read

ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆಗೆ ಸಂಸದ ಯದುವೀರ್ ಈ ತಿರುಗೇಟು

03/08/2025 9:03 PM1 Min Read
Recent News

‘ಗೊರಕೆ’ ಹೊಡೆಯೋದನ್ನ ಹಗುರವಾಗಿ ತೆಗೆದುಕೊಳ್ತೀರಾ.? ಅಯ್ಯೋ, ನೀವು ಅಪಾಯದಲ್ಲಿದ್ದೀರಿ ಮರೆಯಬೇಡಿ!

03/08/2025 9:14 PM

BIG NEWS: ಬಡ ಮಕ್ಕಳ IAS, IPS ಕನಸು ನನಸಿಗೆ ಸಂಸದೆ ದಿಟ್ಟ ನಿರ್ಧಾರ: ಸಂಕಲ್ಪ ತರಬೇತಿ ಕೇಂದ್ರ ಆರಂಭ

03/08/2025 9:13 PM

BREAKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ನಡು ರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಕೊಲೆ

03/08/2025 9:07 PM

ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆಗೆ ಸಂಸದ ಯದುವೀರ್ ಈ ತಿರುಗೇಟು

03/08/2025 9:03 PM
State News
KARNATAKA

BIG NEWS: ಬಡ ಮಕ್ಕಳ IAS, IPS ಕನಸು ನನಸಿಗೆ ಸಂಸದೆ ದಿಟ್ಟ ನಿರ್ಧಾರ: ಸಂಕಲ್ಪ ತರಬೇತಿ ಕೇಂದ್ರ ಆರಂಭ

By kannadanewsnow0903/08/2025 9:13 PM KARNATAKA 1 Min Read

ದಾವಣಗೆರೆ: ರಾಜ್ಯದ ಬಡ ಮಕ್ಕಳ ಐಎಎಸ್, ಐಪಿಎಸ್ ಕನಸು ನನಸಾಗಿಸುವ ನಿಟ್ಟಿನಲ್ಲಿ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.…

BREAKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ನಡು ರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಕೊಲೆ

03/08/2025 9:07 PM

ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆಗೆ ಸಂಸದ ಯದುವೀರ್ ಈ ತಿರುಗೇಟು

03/08/2025 9:03 PM

‘BPL, APL ಕಾರ್ಡಿ’ಗಾಗಿ ಅರ್ಜಿ ಸಲ್ಲಿಕೆ ಆರಂಭ: ಈ ದಾಖಲೆಯೊಂದಿಗೆ ಸಲ್ಲಿಸೋದು ಮರಿಬೇಡಿ | Ration Card

03/08/2025 8:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.