Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆ ಮನೆ ಮನೆಗೂ ತಲುಪಿಸುವ ಕೆಲಸವಾಗಬೇಕು- ಬಿಆರ್.ಜಯಂತ್

20/05/2025 3:46 PM

BIG NEWS : ಚಿನ್ನಾಭರಣ ವಂಚನೆ ಪ್ರಕರಣ : ಐಶ್ವರ್ಯ ಗೌಡ ಅರ್ಜಿ ವಿಚಾರಣೆ ಮೇ 22ಕ್ಕೆ ಮುಂದೂಡಿದ ಹೈಕೋರ್ಟ್

20/05/2025 3:37 PM

ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

20/05/2025 3:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಿಮ್-2025: ವಿಶ್ವಸಂಸ್ಥೆಯಲ್ಲೂ ಅಸಮಾನತೆ, ತಾರತಮ್ಯ: ಮಾಜಿ ಕೇಂದ್ರ ಸಚಿವ ಶಶಿ ತರೂರ್
KARNATAKA

ಜಿಮ್-2025: ವಿಶ್ವಸಂಸ್ಥೆಯಲ್ಲೂ ಅಸಮಾನತೆ, ತಾರತಮ್ಯ: ಮಾಜಿ ಕೇಂದ್ರ ಸಚಿವ ಶಶಿ ತರೂರ್

By kannadanewsnow0914/02/2025 3:34 PM

ಬೆಂಗಳೂರು: ಬಹುಧ್ರುವೀಕರಣದ ಜಗತ್ತಿನಲ್ಲಿ ವಿಶ್ವಸಂಸ್ಥೆ ಕೂಡಾ ಮೂಲ ಉದ್ದೇಶದೊಂದಿಗೆ ಕಾರ್ಯನಿರ್ವಹಿಸುತ್ತಿಲ್ಲ. ಅಸಮಾನತೆ, ತಾರತಮ್ಯಗಳು ಅಲ್ಲೂ ಇದ್ದು, ಅದನ್ನು ಅರ್ಥ ಮಾಡಿಕೊಂಡರಷ್ಟೇ ಪರ್ಯಾಯ ಜಾಗತಿಕ ವ್ಯವಸ್ಥೆಯ ಬಗ್ಗೆ ಚಿಂತಿಸಬಹುದು ಎಂದು ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಶುಕ್ರವಾರ ಪ್ರತಿಪಾದಿಸಿದರು.

‘ಜಾಗತಿಕ ಹೂಡಿಕೆದಾರರ ಸಮಾವೇಶ’ (ಜಿಮ್-25)’ದಲ್ಲಿ ‘ಪ್ರಕ್ಷುಬ್ಧತೆಯಲ್ಲಿ ಪ್ರವರ್ಧಮಾನ: ರಾಷ್ಟ್ರಗಳು ಹೇಗೆ ಸವಾಲು ಎದುರಿಸಬಹುದು’ ಗೋಷ್ಠಿಯಲ್ಲಿ ವಿಚಾರ ಮಂಡಿಸಿದ ಅವರು, ವಿಶ್ವಸಂಸ್ಥೆ ಕೂಡಾ ನಾವು ಬದುಕುತ್ತಿರುವ ಜಗತ್ತಿನ ಕನ್ನಡಿಯಾಗಿದೆ ಎಂದು ಹೇಳಿದರು.

ಕೋವಿಡ್ ಸಂಕಷ್ಟ ಪರಿಸ್ಥಿತಿ ಜಾಗತಿಕ ಪೂರೈಕೆ ಸರಣಿಯ ಸ್ವರೂಪ ಬದಲಾಗಿದ್ದನ್ನು ಜಗತ್ತಿಗೆ ತೋರಿಸಿಕೊಟ್ಟಿತು. ಕೋವಿಡ್ ನಂತರದ ಜಾಗತಿಕ ನಾಯಕರು ಗಡಿಯಾಚಿನ ವಿಶ್ವದಲ್ಲಿ ಪ್ರಬಲರಾಗುವ ಬದಲಿಗೆ ತಮ್ಮ ಗಡಿರೇಖೆಯೊಳಗೆ ಅಂದರೆ ಆಂತರಿಕವಾಗಿ ಬಲಿಷ್ಠರಾಗಲು ಯತ್ನಿಸುತ್ತಿದ್ದಾರೆ ಎಂದು ತರೂರ್ ವಿವರಿಸಿದರು.

ಪ್ರಜಾತಂತ್ರ ವ್ಯವಸ್ಥೆ ಉತ್ತಮಗೊಳ್ಳುವ ನಿಟ್ಟಿನಲ್ಲಿ ಮತದಾರರು ಸುಶಿಕ್ಷಿತರಾಗುವುದು ಅತಿ ಮುಖ್ಯ. ಜನರಿಗೆ ಉತ್ತಮ ಶಿಕ್ಷಣ ನೀಡಿ, ಸಬಲೀಕರಣಗೊಳಿಸಿದಲ್ಲಿ, ದಕ್ಷ ಸರ್ಕಾರ ರಚನೆ ಖಾತರಿಯಾಗಲಿದೆ. ನಮ್ಮ ಸಮಾಜದ ತಳವರ್ಗದ ಜನರಲ್ಲಿ ಖರೀದಿ ಸಾಮರ್ಥ್ಯ ಅತಿ ಕಡಿಮೆ ಇದೆ. ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 80 ಕೋಟಿ ಜನರಿಗೆ ಉಚಿತ ಆಹಾರಧಾನ್ಯ ಒದಗಿಸುತ್ತಿದೆ. ಅಂದರೆ, ಇದರರ್ಥ ಇಷ್ಟು ಭಾರಿ ಸಂಖ್ಯೆಯ ಜನರಲ್ಲಿ ಖರೀದಿ ಸಾಮರ್ಥ್ಯ ಕಡಿಮೆ ಇದೆ ಎಂದು ಅಭಿಪ್ರಾಯಪಟ್ಟರು.

ಜಗತ್ತಿನಲ್ಲೇ ಭಾರತ ಅತಿಹೆಚ್ಚು ನಿರುದ್ಯೋಗಿಗಳನ್ನು ಹೊಂದಿದ್ದು, ಯುವಜನರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ನಮ್ಮ ಶಿಕ್ಷಣ ವ್ಯವಸ್ಥೆ ಬದಲಾಗಬೇಕಿದೆ. ಏನನ್ನು ಚಿಂತಿಸಬೇಕು ಎಂಬುದರ ಬದಲಿಗೆ ಹೇಗೆ ಚಿಂತಿಸಬೇಕು ಎಂಬುದನ್ನು ವಿದ್ಯಾರ್ಥಿಗಳಲ್ಲಿ ಕಲಿಸಬೇಕಿದೆ. ಯುವಜನರನ್ನು ಕೌಶಲ್ಯಪೂರ್ಣರನ್ನಾಗಿಸಿ, ಉದ್ಯೋಗ ದೊರಕಿಸಬೇಕಿದೆ ಎಂದರು.

ಕೃತಕ ಬುದ್ಧಿಮತ್ತೆ ಸೇರಿದಂತೆ ತಂತ್ರಜ್ಞಾನದ ಬಳಕೆಯಿಂದ ಜಾಗತಿಕ ಉದ್ಯೋಗ ಮಾರುಕಟ್ಟೆಯಲ್ಲಿ ಇನ್ನು ಕೆಲವೇ ವರ್ಷಗಳಲ್ಲಿ ಭಾರಿ ಬದಲಾವಣೆಯಾಗಲಿದ್ದು, ವಿದ್ಯಾರ್ಥಿಗಳು ಮತ್ತು ಯುವಜನರನ್ನು ಭವಿಷ್ಯದ ಬೇಡಿಕೆಗಳಿಗೆ ಅನುಗುಣವಾಗಿ ಸಜ್ಜುಗೊಳಿಸುವ ಅಗತ್ಯವಿದೆ. ಪ್ರಸ್ತುತ ಜಾಗತಿಕ ಉದ್ಯೋಗ ವಲಯದಲ್ಲಿರುವ ಶೇಕಡ 30ರಷ್ಟು ಉದ್ಯೋಗಗಳು ಇನ್ನು ಐದು ವರ್ಷಗಳಲ್ಲಿ ಕಣ್ಮರೆಯಾಗಲಿವೆ ಎಂದು ಹೇಳಿದರು.

ಗ್ರೀಸ್ ಮಾಜಿ ಪ್ರಧಾನಿ ಜಾರ್ಜ್ ಎ. ಪಪಾಂಡ್ರೂ, ಉತ್ತಮ, ಆದರ್ಶ ಪ್ರಜಾಪ್ರಭುತ್ವ ವ್ಯವಸ್ಥೆ ತನ್ನ ನಾಗರಿಕರ ಮೇಲೆ ವಿಶ್ವಾಸ ಇಡಬೇಕು; ಶಿಕ್ಷಣ ಮತ್ತು ಪ್ರಜಾತಂತ್ರ ಜತೆಜತೆಯಾಗಿ ಮುನ್ನಡೆಯಬೇಕು ಎಂದರು.

ಉತ್ತಮ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಉತ್ತರದಾಯತ್ವ ಮತ್ತು ಪಾರದರ್ಶಕತೆ ಅತಿ ಮುಖ್ಯ. ಇವುಗಳ ಕೊರತೆಯಿಂದಾಗಿಯೇ ಗ್ರೀಸ್ ಆರ್ಥಿಕ ಸಂಕಷ್ಟ ಎದುರಿಸಬೇಕಾಯಿತು. ಗ್ರೀಸ್ ನಲ್ಲಿ ಜನರ ಹಣ ಸಾರ್ವಜನಿಕರ ಹಿತಾಸಕ್ತಿಗೆ ವಿನಿಯೋಗವಾಗಲಿಲ್ಲ. ರಾಜಕಾರಣಿಗಳ ಗಮನ ಕೇವಲ ಅಧಿಕಾರ ಹಿಡಿಯುವುದರತ್ತಲೇ ಇತ್ತು. ಹೀಗಾದಾಗ ಸಂಕಷ್ಟ ತಲೆದೋರುವುದು ಸಹಜ ಎಂದರು.

‘ಇಂಕ್ ಟಾಕ್ಸ್’ ಸಂಸ್ಥೆ ಸಿಇಒ ಲಕ್ಷ್ಮಿ ಪ್ರಟೂರಿ ಗೋಷ್ಠಿ ನಿರ್ವಹಿಸಿದರು.

ಶಿವಮೊಗ್ಗ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

KNN Special Story: ಭಾರತದ ಮೊದಲ ‘ವರ್ಟಿಕಲ್ ಲಿಫ್ಟಿಂಗ್ ಸೇತುವೆ’ ಉದ್ಘಾಟನೆಗೆ ಸಿದ್ಧ: ಹೀಗಿದೆ ವಿಶೇಷತೆ

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆ ಮನೆ ಮನೆಗೂ ತಲುಪಿಸುವ ಕೆಲಸವಾಗಬೇಕು- ಬಿಆರ್.ಜಯಂತ್

20/05/2025 3:46 PM2 Mins Read

BIG NEWS : ಚಿನ್ನಾಭರಣ ವಂಚನೆ ಪ್ರಕರಣ : ಐಶ್ವರ್ಯ ಗೌಡ ಅರ್ಜಿ ವಿಚಾರಣೆ ಮೇ 22ಕ್ಕೆ ಮುಂದೂಡಿದ ಹೈಕೋರ್ಟ್

20/05/2025 3:37 PM1 Min Read

ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

20/05/2025 3:31 PM2 Mins Read
Recent News

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆ ಮನೆ ಮನೆಗೂ ತಲುಪಿಸುವ ಕೆಲಸವಾಗಬೇಕು- ಬಿಆರ್.ಜಯಂತ್

20/05/2025 3:46 PM

BIG NEWS : ಚಿನ್ನಾಭರಣ ವಂಚನೆ ಪ್ರಕರಣ : ಐಶ್ವರ್ಯ ಗೌಡ ಅರ್ಜಿ ವಿಚಾರಣೆ ಮೇ 22ಕ್ಕೆ ಮುಂದೂಡಿದ ಹೈಕೋರ್ಟ್

20/05/2025 3:37 PM

ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

20/05/2025 3:31 PM

Rain Alert : ಮುಂದಿನ 7 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

20/05/2025 3:29 PM
State News
KARNATAKA

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆ ಮನೆ ಮನೆಗೂ ತಲುಪಿಸುವ ಕೆಲಸವಾಗಬೇಕು- ಬಿಆರ್.ಜಯಂತ್

By kannadanewsnow0920/05/2025 3:46 PM KARNATAKA 2 Mins Read

ಶಿವಮೊಗ್ಗ : ರಾಜ್ಯ ಸರ್ಕಾರದ ಎರಡು ವರ್ಷದ ಸಾಧನೆಯನ್ನು ಮನೆಮನೆಗೆ ತಲುಪಿಸಬೇಕು. ನಾವು ಮಾಡಿದ್ದನ್ನು ಹೇಳಲು ವಿಫಲವಾದರೇ, ಬಿಜೆಪಿಯವರು ಮಾಡದೆ…

BIG NEWS : ಚಿನ್ನಾಭರಣ ವಂಚನೆ ಪ್ರಕರಣ : ಐಶ್ವರ್ಯ ಗೌಡ ಅರ್ಜಿ ವಿಚಾರಣೆ ಮೇ 22ಕ್ಕೆ ಮುಂದೂಡಿದ ಹೈಕೋರ್ಟ್

20/05/2025 3:37 PM

ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

20/05/2025 3:31 PM

Rain Alert : ಮುಂದಿನ 7 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

20/05/2025 3:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.