ಶಿವಮೊಗ್ಗ : ಕೆಳದಿ ರಾಣಿ ಚೆನ್ನಮ್ಮಾಜಿ ಕನ್ನಡ ನಾಡು ಕಂಡ ಅತ್ಯಂತ ಶ್ರೇಷ್ಟ ರಾಣಿ. ರಾಣಿ ಚೆನ್ನಮ್ಮಾಜಿ ವೃತ್ತದಲ್ಲಿ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ರಾಣಿ ಚೆನ್ನಮ್ಮಾಜಿ ಕಂಚಿನ ಪುತ್ಥಳಿ ಸ್ಥಾಪಿಸಲಾಗುತ್ತಿದೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ರಾಣಿ ಚೆನ್ನಮ್ಮಾಜಿ ವೃತ್ತದಲ್ಲಿ ಶನಿವಾರ ನಗರಸಭೆ ವತಿಯಿಂದ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಬಸ್ ನಿಲ್ದಾಣ ಸೇರಿ ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದಂತ ಅವರು, ರಾಣಿ ಚೆನ್ನಮ್ಮಾಜಿ ವೃತ್ತದಲ್ಲಿ ಪುತ್ಥಳಿ ನಿರ್ಮಿಸಬೇಕು ಎಂದು ಈ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದ್ದು, ಅದನ್ನು ನೆರವೇರಿಸಲಾಗುತ್ತಿದ್ದು, ಶಾಸಕರ ಅನುದಾನದಲ್ಲಿ ಪುತ್ಥಳಿಗೆ 10 ಲಕ್ಷ ರೂ. ಮೀಸಲಿಡಲಾಗಿದೆ. ಇದರ ಜೊತೆಗೆ ಬಸ್ ನಿಲ್ದಾಣ ಮತ್ತು ವೃತ್ತ ನಿರ್ಮಾಣಕ್ಕೆ 40 ಲಕ್ಷ ರೂ. ಶಾಸಕರ ವಿವೇಚನಾ ನಿಧಿಯಿಂಡ ಮೀಸಲಿಡಲಾಗಿದೆ. ಅತಿ ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲು ಸೂಚಿಸಲಾಗಿದೆ ಎಂದು ಹೇಳಿದರು.
ಈಗಾಗಲೆ ಕೆಳದಿ ರಸ್ತೆಯನ್ನು ದ್ವಿಪಥ ರಸ್ತೆಯಾಗಿ ಅಭಿವೃದ್ದಿಪಡಿಸಲಾಗಿದೆ. ನಗರದ ವಿವಿಧ ಭಾಗದಲ್ಲಿ ಮಳೆ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಹೊಂಡಗುoಡಿ ಬಿದ್ದಿರುವ ರಸ್ತೆಯನ್ನು ಅಭಿವೃದ್ದಿಪಡಿಸಲು ಅನುದಾನ ಮೀಸಲಿರಿಸಲಾಗಿದೆ ಸಾಗರ ಪಟ್ಟಣದ ಅಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
ಈ ವೇಳೆ ಸಾಗರ ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್, ಉಪಾಧ್ಯಕ್ಷೆ ಸವಿತಾ ವಾಸು, ಪೌರಾಯುಕ್ತ ಎಚ್.ಕೆ.ನಾಗಪ್ಪ, ನಗರಸಭೆ ಸದಸ್ಯರಾದ ಶ್ರೀನಿವಾಸ್ , ಗಣೇಶ್ ಪ್ರಸಾದ್, ಮಧುಮಾಲತಿ, ಗಣಪತಿ ಮಂಡಗಳಲೆ, ಚಂದ್ರಪ್ಪ, ರವಿಕುಮಾರ್, ಸರೋಜಮ್ಮ ಇನ್ನಿತರರು ಉಪಸ್ಥಿತರಿದ್ದರು.
ಕನ್ನಡ ನಾಡಿನ ಒಂದಿಂಚು ಭೂಮಿ ಅನ್ಯರಾಜ್ಯಗಳಿಗೆ ಬಿಟ್ಟುಕೊಡುವ ಪ್ರಶ್ನೆಯೆ ಇಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು
BREAKING: EPFO ಸೊಸೈಟಿ ವಂಚನೆ ಕೇಸ್: ಸಿಇಒ ಗೋಪಿ, ಅಕೌಟೆಂಟ್ ಜಗದೀಶ್ ವಿರುದ್ಧ FIR ದಾಖಲು








