ಬೆಂಗಳೂರು : ರಾಜ್ಯದಲ್ಲಿ ಇನ್ಮುಂದೆ 10 ಕೆಜಿಯ ಅಕ್ಕಿ ಬದಲು 5 ಕೆಜಿ ಅಕ್ಕಿ ಕೊಟ್ಟು, ಇನ್ನುಳಿದ 5 ಕೆಜಿಯ ಲೆಕ್ಕದಲ್ಲಿ ದಿನಸಿ ಪದಾರ್ಥಗಳನ್ನು ವಿತರಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಹಸಿವುಮುಕ್ತ ಕರ್ನಾಟಕ ನಿರ್ಮಾಣವೇ ನಮ್ಮ ಮುಖ್ಯ ಉದ್ದೇಶವಾಗಿರುವುದರಿಂದ ಅನ್ನಭಾಗ್ಯದ ಅಕ್ಕಿಯ ಜೊತೆಗೆ ಇಂದಿರಾ ಕಿಟ್ ವಿತರಿಸಲು ನಮ್ಮ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಅನ್ನಭಾಗ್ಯದ 10 ಕೆಜಿಯ ಅಕ್ಕಿಯ ಬದಲು ಇನ್ಮುಂದೆ 5 ಕೆಜಿ ಅಕ್ಕಿ ಕೊಟ್ಟು, ಇನ್ನುಳಿದ 5 ಕೆಜಿಯ ಲೆಕ್ಕದಲ್ಲಿ ದಿನಸಿ ಪದಾರ್ಥಗಳನ್ನು ವಿತರಿಸಲಿದ್ದೇವೆ. ಯಾರೊಬ್ಬರೂ ಹಸಿವಿನಿಂದ ಇರಬಾರದು ಎಂಬುದೇ ನಮ್ಮ ಸರ್ಕಾರದ ಕಾಳಜಿಯಾಗಿದೆ ಎಂದು ಹೇಳಿದ್ದಾರೆ.
ಇಂದಿರಾ ಆಹಾರದ ಕಿಟ್ ನಲ್ಲಿ ಏನಿರಲಿದೆ?
ತೊಗರಿ ಬೇಳೆ – 1 ಕೆಜಿ
ಹೆಸರುಕಾಳು- 1 ಕೆಜಿ
ಅಡುಗೆ ಎಣ್ಣೆ – 1 ಲೀಟರ್
ಸಕ್ಕರೆ – 1 ಕೆಜಿ
ಉಪ್ಪು- 1 ಕೆಜಿ
ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಹೆಚ್ಚುವರಿ ಅಕ್ಕಿ ನೀಡಲು ಅಯವ್ಯಯದಲ್ಲಿ ಹಂಚಿಕೆ ಮಾಡಿರುವ ರೂ.6,426 ಕೋಟಿ ಅನುದಾನದಲ್ಲಿ ರೂ.6,119.52 ಕೋಟಿ ವೆಚ್ಚದಲ್ಲಿ ಇಂದಿರಾ ಆಹಾರ ಕಿಟ್ ಒದಗಿಸಲು ಬಜೆಟ್ ಮರು ಹಂಚಿಕೆ ಮಾಡಲು ನುಮೋದನೆ ನೀಡಿದೆ.








