Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲದಿದ್ರೆ ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ನೀಡಿ : ರಾಹುಲ್ ಗಾಂಧಿಗೆ ಬಿಜೆಪಿ ಸವಾಲು

09/08/2025 10:06 PM

BREAKING : ಬಾಹ್ಯಾಕಾಶದಲ್ಲಿ 5 ತಿಂಗಳು ನಾಲ್ವರು ಗಗನಯಾತ್ರಿಗಳ ಹೊತ್ತ ‘ನಾಸಾದ ಕ್ರೂ-10 ಮಿಷನ್’ ಪೆಸಿಫಿಕ್’ನಲ್ಲಿ ಯಶಸ್ವಿ ಲ್ಯಾಂಡಿಂಗ್

09/08/2025 9:40 PM

BREAKING: ಮತ್ತೆ ರಷ್ಯಾದಲ್ಲಿ 6.0 ತೀವ್ರತೆಯಲ್ಲಿ ಪ್ರಬಲ ಭೂಕಂಪನ | Earthquake In Russia

09/08/2025 9:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೇಲ್ಮನೆಯಲ್ಲಿ ನೀರಾ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಸ್ತಾಪದಿಂದ ಸ್ವಾರಸ್ಯಕರ ಚರ್ಚೆ
KARNATAKA

ಮೇಲ್ಮನೆಯಲ್ಲಿ ನೀರಾ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಸ್ತಾಪದಿಂದ ಸ್ವಾರಸ್ಯಕರ ಚರ್ಚೆ

By kannadanewsnow0923/02/2024 5:54 PM

ಬೆಂಗಳೂರು : “30-35 ವರ್ಷಗಳ ಹಿಂದೆ ನಾನು ನೀರಾ ಕುಡಿದಿದ್ದೆ. ಅದು ಜ್ಯೂಸ್ ನಂತಿತ್ತು. ನನಗೆ ಯಾವುದೇ ಮತ್ತು ಬರಲಿಲ್ಲ” ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮೆಲ್ಮನೆಯಲ್ಲಿ ಹೇಳಿದ್ದು ಸ್ವಾರಸ್ಯಕರ ಚರ್ಚೆಗೆ ಗ್ರಾಸವಾಯಿತು.

ಪ್ರಶ್ನೋತ್ತರ ಕಲಾಪದ ವೇಳೆ ಬಿ.ಕೆ. ಹರಿಪ್ರಸಾದ್ ಅವರು, ರಾಜ್ಯದಲ್ಲಿ ಸಾರಾಯಿ ನಿಷೇಧದ ನಂತರ ಅನೇಕರು ಬೀದಿಗೆ ಬಂದಿದ್ದು, ಅಬಕಾರಿ ಇಲಾಖೆ ವತಿಯಿಂದ ಇವರಿಗಾಗಿ ಯಾವುದಾದರೂ ಕಾರ್ಯಕ್ರಮ ಹಮ್ಮಿಕೊಂಡಿದೆಯೇ ಎಂದು ಪ್ರಶ್ನೆ ಕೇಳಿದರು.

ಈ ಸಂದರ್ಭದಲ್ಲಿ ಸೇಂದಿ, ಸಾರಾಯಿಯನ್ನು ಉಪಕಸುಬಾಗಿಸಿಕೊಂಡಿದ್ದ ಸಮುದಾಯಕ್ಕೆ ನೀರಾಕ್ಕೆ ಅನುಮತಿ ನೀಡುವ ಮೂಲಕ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಪರಿಷತ್ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನೀರಾ ಸೇವನೆ ವಿಚಾರವಾಗಿ ಮಾಡಿಕೊಂಡ ಲಘು ಮಾತಿನ ವಿನಿಮಯ ಸದನವನ್ನು ನಗೆಗಡಲಲ್ಲಿ ತೇಲಿಸಿತು.

ಕೋಟಾ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ, “ಸಾರ್ವಜನಿಕ ಹಿಸಾಸಕ್ತಿಗಾಗಿ ಮಾಜಿ ಸಿಎಂಗಳಾದ ವಿರೇಂದ್ರ ಪಾಟೀಲ್ ಅವರ ಕಾಲದಲ್ಲಿ ಸೇಂದಿ ಹಾಗೂ ಯಡಿಯೂರಪ್ಪ ಅವರ ಕಾಲದಲ್ಲಿ ಸಾರಾಯಿ ನಿಷೇಧ ಮಾಡಲಾಯಿತು. ಸೇಂದಿ ಬದಲು ನೀರಾ ಬಂದಿದ್ದು, ನೀರಾ ಮಳಿಗೆಗಳ ಸ್ಥಾಪನೆಗೆ ಅನುಮತಿ ನೀಡಬೇಕು. ಈ ಸಮುದಾಯದವರಿಗೆ ನೀರಾ ಮಾರಲು ಎಂಎಸ್ಐಎಲ್ ನಲ್ಲಿ ಅವಕಾಶ ನೀಡಬೇಕು” ಎಂದು ಸರ್ಕಾರಕ್ಕೆ ಸಲಹೆ ಕೊಟ್ಟರು.

ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನೀವು ನೀರಾ ಕುಡಿಯುವ ಪ್ರಯತ್ನ ಮಾಡಿಲ್ಲವೇ ಎಂದು ಪೂಜಾರಿ ಅವರಿಗೆ ಕೇಳಿದರು. ಅದಕ್ಕೆ ಉತ್ತರಿಸಿದ ಪೂಜಾರಿ ಅವರು, “ನಾನು ನೀರಾ ಕುಡಿಯಬೇಕು ಎಂದು ಅಂದುಕೊಂಡೆ. ಆದರೆ, ಅದನ್ನು ಕುಡಿದ ಮೇಲೆ ನಿಂತುಕೊಳ್ಳುವ ಶಕ್ತಿ ನನ್ನಲ್ಲಿರುತ್ತದೆಯೇ ಎಂಬ ಅನುಮಾನ ಮೂಡಿತು. ನಾನು ಡಿ.ಕೆ. ಶಿವಕುಮಾರ್ ಅವರಂತೆ ದಪ್ಪಗಿದ್ದರೆ ಕುಡಿದ ನಂತರವೂ ನಿಲ್ಲುವ ಶಕ್ತಿ ಇರುತ್ತಿತ್ತು” ಎಂದು ಚಟಾಕಿ ಹಾರಿಸಿದಾಗ ಸದನದಲ್ಲಿ ನಗೆಬುಗ್ಗೆ.

ಇದಕ್ಕೆ ಪ್ರತಿಕ್ರಿಯಿಸಿದ ಬಿ.ಕೆ ಹರಿಪ್ರಸಾದ್ ಅವರು, ಪೂಜಾರಿ ಅವರಿಗೆ ಕುಡಿಯುವ ಅಭ್ಯಾಸವಿಲ್ಲ. ಕುಡಿಸುವ ಅಭ್ಯಾಸವಿದೆ ಎಂದರು.

ಆಗ ಡಿ.ಕೆ. ಶಿವಕುಮಾರ್ ಅವರು, “ಪ್ರಕೃತಿ ಮುಂದೆ ಯಾವುದೂ ಇಲ್ಲ. ಸುಮಾರು 30-35 ವರ್ಷಗಳ ಹಿಂದೆ ನಮ್ಮ ಪಕ್ಕದ ಊರಿನಲ್ಲಿ ನಾನು ನೀರಾ ಕುಡಿದಿದ್ದೆ. ಅದರಿಂದ ಮತ್ತು ಬರುವುದಿಲ್ಲ” ಎಂದು ನೀರಾ ಕುಡಿದ ತಮ್ಮ ಅನುಭವವನ್ನು ಮೆಲಕು ಹಾಕಿದರು.

ಆಗ ತೇಜಸ್ವಿನಿಗೌಡ ಅವರು, “ಶಿವಕುಮಾರ್ ಅವರು ನೀರಾ ನೆನಪು ಎಂಬ ಪುಸ್ತಕ ಬರೆಯಬಹುದು” ಎಂದು ಸಲಹೆ ಕೊಟ್ಟರು.

ಮಾತು ಮುಂದುವರಿಸಿದ ಶಿವಕುಮಾರ್ ಅವರು, “ಪೂಜಾರಿ ಹಾಗೂ ರವಿ ಕುಮಾರ್ ಅವರು ಈ ಸಮುದಾಯದ ಜನರ ರಕ್ಷಣೆ ಬಗ್ಗೆ ಆಲೋಚಿಸುತ್ತಿದ್ದಾರೆ. ಈಗ ಬೀದಿ ಬದಿಯ ಎಳನೀರನ್ನು 20 ರೂಪಾಯಿಗೆ ಮಾರುತ್ತಾರೆ. ಆದರೆ ಅದನ್ನೇ ಪ್ಯಾಕೆಟ್ ಅಥವಾ ಬಾಟೆಲ್ ನಲ್ಲಿ ಹಾಕಿ ಮಾರಿದರೆ 100 ರೂ. ಕೊಟ್ಟು ಖರೀದಿ ಮಾಡುವ ಜನರೂ ಇದ್ದಾರೆ. ಅದೇ ರೀತಿ ಬಂಡವಾಳ ಹಾಕಿ ನೀರಾ ಉತ್ಪನ್ನವನ್ನು ಈ ವರ್ಗದ ಜನರಿಗೆ ಎಂಎಸ್ಐಎಲ್ ಮೂಲಕ ಮಾರಾಟಕ್ಕೆ ಅವಕಾಶ ಮಾಡಿಕೊಡಿ ಎಂದು ಕೇಳುತ್ತಿದ್ದಾರೆ. ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಇದೇ ಸದನದಲ್ಲಿ ಎಂ.ಸಿ ನಾಣಯ್ಯ ಅವರು ನೀರಾ ಕುರಿತು ಮಾಡಿದ ಭಾಷಣ ಇಡೀ ರಾಜ್ಯದ ಆರ್ಥಿಕ ವ್ಯವಸ್ಥೆಯನ್ನೇ ಬದಲಿಸಿತು. ಆಗ ಖೋಡೇ, ಮಲ್ಯ, ತಿಮ್ಮೇಗೌಡ, ನಾರಾಯಣಸ್ವಾಮಿ ಸೇರಿದಂತೆ ಅನೇಕರಿಗೆ ವ್ಯಾಪಾರದಲ್ಲಿ ನಷ್ಟ ಉಂಟಾಯಿತು. ಅದೇ ರೀತಿ ಇಂದು ನೀವು ಎತ್ತಿರುವ ವಿಚಾರ ಹಾಗೂ ಇದರಿಂದ ತೆಗೆದುಕೊಳ್ಳುವ ನಿರ್ಧಾರ ಮುಂದೆ ಬದಲಾವಣೆಗೆ ದಾರಿಯಾಗಬಹುದು. ಈ ಬಗ್ಗೆ ಸುದೀರ್ಘ ಚರ್ಚೆ ಆಗಬೇಕಿದೆ” ಎಂದರು.

BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ 2 ದಿನ ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು ಮಾಡಿ ಸರ್ಕಾರ ಆದೇಶ

BREAKING : ಪೇಟಿಎಂ ‘UPI’ ಕಾರ್ಯಾಚರಣೆ ಮುಂದುವರಿಕೆಗೆ ಸಹಾಯ ಮಾಡುವಂತೆ ‘NPCI’ಗೆ ‘RBI’ ಸೂಚನೆ

Share. Facebook Twitter LinkedIn WhatsApp Email

Related Posts

ಯಾರದ್ದೋ ಮಾತು ಕೇಳಿ ಕುಟುಂಬದ ವಿರುದ್ಧ ಮಾತನಾಡಬೇಡಿ: ಫ್ಯಾನ್ಸ್‌ಗೆ ‘ನಟ ಅನಿರುದ್ಧ್’ ಮನವಿ

09/08/2025 9:07 PM1 Min Read

Rain In Karnataka: ಇಂದಿನಿಂದ ಆಗಸ್ಟ್.13ರವರೆಗೆ ಭಾರಿ ಮಳೆ: ಈ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

09/08/2025 8:38 PM1 Min Read

ಬೆಂಗಳೂರಿನ ‘ಲಾಲ್ ಬಾಗ್ ಪ್ಲವರ್ ಶೋ’ಗೆ ಭರ್ಜರಿ ರೆಸ್ಪಾನ್ಸ್: ನಿನ್ನೆ ಒಂದೇ ದಿನ 32,16,720 ಮಂದಿ ಭೇಟಿ

09/08/2025 8:33 PM1 Min Read
Recent News

ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲದಿದ್ರೆ ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ನೀಡಿ : ರಾಹುಲ್ ಗಾಂಧಿಗೆ ಬಿಜೆಪಿ ಸವಾಲು

09/08/2025 10:06 PM

BREAKING : ಬಾಹ್ಯಾಕಾಶದಲ್ಲಿ 5 ತಿಂಗಳು ನಾಲ್ವರು ಗಗನಯಾತ್ರಿಗಳ ಹೊತ್ತ ‘ನಾಸಾದ ಕ್ರೂ-10 ಮಿಷನ್’ ಪೆಸಿಫಿಕ್’ನಲ್ಲಿ ಯಶಸ್ವಿ ಲ್ಯಾಂಡಿಂಗ್

09/08/2025 9:40 PM

BREAKING: ಮತ್ತೆ ರಷ್ಯಾದಲ್ಲಿ 6.0 ತೀವ್ರತೆಯಲ್ಲಿ ಪ್ರಬಲ ಭೂಕಂಪನ | Earthquake In Russia

09/08/2025 9:23 PM

BREAKING: ಕರ್ನಾಟಕದಲ್ಲಿ ರೈತರಿಗೆ ಬೇಕಿರುವಷ್ಟು ರಸಗೊಬ್ಬರ ದಾಸ್ತಾನಿದೆ: ಲೋಕಸಭೆಯಲ್ಲೇ ಸರ್ಕಾರ ಮಾಹಿತಿ

09/08/2025 9:20 PM
State News
KARNATAKA

ಯಾರದ್ದೋ ಮಾತು ಕೇಳಿ ಕುಟುಂಬದ ವಿರುದ್ಧ ಮಾತನಾಡಬೇಡಿ: ಫ್ಯಾನ್ಸ್‌ಗೆ ‘ನಟ ಅನಿರುದ್ಧ್’ ಮನವಿ

By kannadanewsnow0909/08/2025 9:07 PM KARNATAKA 1 Min Read

ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ಸಮಾಧಿ ಸ್ಥಳ ನೆಲಸಮ ಮಾಡಿರೋದು ವಿವಾಧಕ್ಕೆ, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ನಟ…

Rain In Karnataka: ಇಂದಿನಿಂದ ಆಗಸ್ಟ್.13ರವರೆಗೆ ಭಾರಿ ಮಳೆ: ಈ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

09/08/2025 8:38 PM

ಬೆಂಗಳೂರಿನ ‘ಲಾಲ್ ಬಾಗ್ ಪ್ಲವರ್ ಶೋ’ಗೆ ಭರ್ಜರಿ ರೆಸ್ಪಾನ್ಸ್: ನಿನ್ನೆ ಒಂದೇ ದಿನ 32,16,720 ಮಂದಿ ಭೇಟಿ

09/08/2025 8:33 PM

ಬೆಂಗಳೂರು ಜನತೆ ಗಮನಕ್ಕೆ: ಈ ಮಾರ್ಗದಲ್ಲಿ ಹೊಸದಾಗಿ ‘BMTC ಬಸ್ ಸಂಚಾರ’ ಆರಂಭ

09/08/2025 7:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.