ಹುಬ್ಬಳ್ಳಿ: ಸರಳವಾಸ್ತು ಚಂದ್ರಶೇಖರ್ ಗುರೂಜಿ ಹತ್ಯೆಗೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ಈಗಾಗಲೇ ಬಲೆ ಬೀಸಲಾಗಿದೆ ಎಂದು ಪೊಲೀಸ್ ಆಯುಕ್ತ ಲಾಭೂರಾಮ್ ಎಂದು ತಿಳಿಸಿದ್ದಾರೆ.

BIGG NEWS: ವೈದ್ಯರ ನಿರ್ಲಕ್ಷ್ಯದಿಂದ ಎರಡೂವರೆ ವರ್ಷದ ಗಂಡು ಮಗು ಸಾವು

 

ನಗರದಲ್ಲಿ ಮಾತನಾಡಿದ ಅವರು, ಕಳೆದ 5 ದಿನಗಳಿಂದ ಖಾಸಗಿ ಹೊಟೇಲ್‍ನಲ್ಲಿಯೇ ಚಂದ್ರಶೇಖರ್ ಗುರೂಜಿ ತಂಗಿದ್ದರು. ಅವರ ಕಾಲಿಗೆ ನಮಸ್ಕಾರ ಮಾಡುವ ನೆಪದಲ್ಲಿ ಮಧ್ಯಾಹ್ನ ಈ ಕೃತ್ಯ ಎಸಗಿದ್ದಾರೆ. ಇಬ್ಬರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಹಲವಾರು ಬಾರಿ ಚಾಕುವಿನಿಂದ ಇರಿದಿದ್ದಾರೆ ಎಂದಿದ್ದಾರೆ. ಗುರೂಜಿ ಗಂಭೀರ ಗಾಯಗೊಂಡಿದ್ದರು. ಅಸ್ಪತ್ರೆಗೆ ದಾಖಲಿಸಲಾಯಿತ್ತು. ಅದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಈ ಕೇಸ್‍ನ್ನು ತುಂಬಾ ಗಂಭೀರವಾಗಿ ಪರಿಗಣಿಸಲಾಗಿದೆ.

Share.
Exit mobile version