ಟೆಹ್ರಾನ್: ಅಹ್ಮದಾಬಾದ್ ನಲ್ಲಿ ಗುರುವಾರ ಸಂಭವಿಸಿದ ಭೀಕರ ವಿಮಾನ ಅಪಘಾತಕ್ಕೆ ನೂರಾರು ಜನ ಸತ್ತಿದ್ದು ಇರಾನ್ ಅಧ್ಯಕ್ಷ ಮಸೂದ್ ಪೆಜೆಷ್ಕಿಯಾನ್ ಸಂತಾಪ ಸೂಚಿಸಿದ್ದಾರೆ.
ಏರ್ ಇಂಡಿಯಾದ ಎಐ 171 ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಅಪಘಾತಕ್ಕೀಡಾಗಿದೆ.
ಅಧ್ಯಕ್ಷ ಪೆಜೆಶ್ಕಿಯಾನ್ ಈ ಘಟನೆಯನ್ನು ತೀವ್ರ ದುಃಖಕರ ಎಂದು ಸಂದೇಶದಲ್ಲಿ ಬಣ್ಣಿಸಿದ್ದಾರೆ.ಭಾರತದಲ್ಲಿನ ಇರಾನ್ ರಾಯಭಾರ ಕಚೇರಿ ಎಕ್ಸ್ನಲ್ಲಿ ಪೋಸ್ಟ್ ಮಾಡಿ, “ಮಾರಣಾಂತಿಕ ವಿಮಾನ ಅಪಘಾತದ ಬಗ್ಗೆ ಅಧ್ಯಕ್ಷ ಪೆಜೆಶ್ಕಿಯನ್ ಸಂತಾಪ ಸೂಚಿಸಿದ್ದಾರೆ. ಅಧ್ಯಕ್ಷ ಪೆಜೆಶ್ಕಿಯಾನ್ ಈ ಘಟನೆಯನ್ನು ತೀವ್ರ ದುಃಖಕರ ಎಂದು ಸಂದೇಶದಲ್ಲಿ ಬಣ್ಣಿಸಿದ್ದಾರೆ. ಇರಾನ್ ರಾಷ್ಟ್ರ ಮತ್ತು ಸರ್ಕಾರದ ಪರವಾಗಿ, ಅಧ್ಯಕ್ಷರು ಭಾರತೀಯ ಜನರಿಗೆ, ವಿಶೇಷವಾಗಿ ಬಾಧಿತರ ಕುಟುಂಬಗಳು ಮತ್ತು ಪ್ರೀತಿಪಾತ್ರರಿಗೆ ಸಹಾನುಭೂತಿ ವ್ಯಕ್ತಪಡಿಸಿದರು.
“ಪೆಜೆಶ್ಕಿಯಾನ್ ಸಂತ್ರಸ್ತರಿಗೆ ಕರುಣೆ ಮತ್ತು ಕ್ಷಮೆಗಾಗಿ ಪ್ರಾರ್ಥಿಸಿದರು, ದೈವಿಕ ಸಹಾನುಭೂತಿಗಾಗಿ ಸರ್ವಶಕ್ತ ದೇವರನ್ನು ಪ್ರಾರ್ಥಿಸಿದರು. ಲಂಡನ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಅಹಮದಾಬಾದ್ನಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಅಪಘಾತಕ್ಕೀಡಾಗಿದೆ” ಎಂದು ಪೋಸ್ಟ್ನಲ್ಲಿ ತಿಳಿಸಲಾಗಿದೆ.
ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್, ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಜಪಾನ್ ಪ್ರಧಾನಿ ಶಿಗೆರು ಇಶಿಬಾ, ಪೋರ್ಚುಗೀಸ್ ಪ್ರಧಾನಿ ಲೂಯಿಸ್ ಮೊ ಸೇರಿದಂತೆ ವಿಶ್ವ ನಾಯಕರು ದುರಂತಕ್ಕೆ ಆಘಾತ ವ್ಯಕ್ತಪಡಿಸಿದರು.